AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋರಾಗಿದೆ ಕತ್ರಿನಾ-ವಿಕ್ಕಿ ಮದುವೆ ತಯಾರಿ; ಇತರೆ ಸೆಲೆಬ್ರಿಟಿಗಳಿಗೆ ಕಿರಿಕಿರಿ: ಕಾರಣ ಏನು?

Katrina Kaif | Vicky Kaushal: ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಅವರಿಗೆ ಸಾಕಷ್ಟು ಸ್ನೇಹಿತರಿದ್ದಾರೆ. ಅವರೆಲ್ಲರನ್ನೂ ಮದುವೆಗೆ ಆಹ್ವಾನಿಸಲಾಗುತ್ತಿದೆ. ಮುಂಬೈ, ದೆಹಲಿ ಮುಂತಾದ ನಗರಗಳಿಂದ ಸ್ನೇಹಿತರು ಜೈಪುರಕ್ಕೆ ಆಗಮಿಸಲಿದ್ದಾರೆ.

ಜೋರಾಗಿದೆ ಕತ್ರಿನಾ-ವಿಕ್ಕಿ ಮದುವೆ ತಯಾರಿ; ಇತರೆ ಸೆಲೆಬ್ರಿಟಿಗಳಿಗೆ ಕಿರಿಕಿರಿ: ಕಾರಣ ಏನು?
ವಿಕ್ಕಿ ಕೌಶಲ್​, ಕತ್ರಿನಾ ಕೈಫ್
TV9 Web
| Edited By: |

Updated on: Nov 15, 2021 | 8:35 AM

Share

ಬಾಲಿವುಡ್​ನಲ್ಲೀಗ ಮದುವೆ ಸೀಸನ್​ ಶುರು ಆಗಿದೆ. ಕತ್ರಿನಾ ಕೈಫ್​ (Katrina Kaif) ಮತ್ತು ವಿಕ್ಕಿ ಕೌಶಲ್ (Vicky Kaushal)​ ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈ ಬಗ್ಗೆ ಅವರ ಕುಟುಂಬದವರಿಂದ ಅಧಿಕೃತವಾಗಿ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಆದರೆ ಮೂಲಗಳಿಂದ ಈ ಸುದ್ದಿ ಖಚಿತಗೊಂಡಿದೆ. ವಿಕ್ಕಿ-ಕತ್ರಿನಾ ಮದುವೆ (Katrina Kaif Vicky Kaushal marriage) ರಾಜಸ್ಥಾನದ ಐಷಾರಾಮಿ ಹೋಟೆಲ್​ನಲ್ಲಿ ನಡೆಯಲಿದೆ. ಡಿಸೆಂಬರ್​ 7ರಿಂದ 9ರವರೆಗೆ ನಡೆಯಲಿರುವ ಈ ಅದ್ದೂರಿ ಮದುವೆ ಸಮಾರಂಭಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಲಿದ್ದಾರೆ. ಹಾಗಾಗಿ ತಯಾರಿ ಈಗಲೇ ಜೋರಾಗಿದೆ. ಮದುವೆ ಹೇಗೆ ನಡೆಯಬೇಕು ಎಂದು ಈ ಸ್ಟಾರ್​ ಜೋಡಿ ನಿರ್ಧರಿಸಿದೆ. ಅದೇನೋ ಸರಿ, ಆದರೆ ಇವರ ಮದುವೆಯಿಂದಾಗಿ ಬೇರೆ ಸೆಲೆಬ್ರಿಟಿಗಳಿಗೆ ತೊಂದರೆ ಆಗುತ್ತಿದೆ. ಮದುವೆ ಮುಗಿಯುವವರೆಗೂ ಜೈಪುರದಲ್ಲಿ ಬಾಡಿಗೆ ಕಾರುಗಳ ಅಭಾವ ಉಂಟಾಗಲಿದೆ!

ಹೌದು, ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಅವರಿಗೆ ಸಾಕಷ್ಟು ಸ್ನೇಹಿತರಿದ್ದಾರೆ. ಅವರೆಲ್ಲರನ್ನೂ ಮದುವೆ ಆಹ್ವಾನಿಸಲಾಗುತ್ತಿದೆ. ಮುಂಬೈ, ದೆಹಲಿ ಮುಂತಾದ ನಗರಗಳಿಂದ ಸ್ನೇಹಿತರು ಜೈಪುರಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಅವರ ಓಡಾಟಕ್ಕಾಗಿ ಜೈಪುರದಲ್ಲಿ ಇರುವ ಎಲ್ಲ ಐಷಾರಾಮಿ ಬಾಡಿಗೆ ಕಾರುಗಳನ್ನು ಈಗಲೇ ಬುಕ್​ ಮಾಡಲಾಗಿದೆ. ಮದುವೆ ನಡೆಯುವ ದಿನಾಂಕಗಳು ಮಾತ್ರವಲ್ಲದೇ ಅದರ ಆಸುಪಾಸಿನ ದಿನಗಳಿಗೂ ಸೇರಿ ಕಾರುಗಳನ್ನು ಮುಂಗಡವಾಗಿ ಬುಕ್​ ಮಾಡಿಕೊಳ್ಳಲಾಗಿದೆ. ಇದರಿಂದಾಗಿ ಜೈಪುರ ಸುತ್ತಮುತ್ತ ಶೂಟಿಂಗ್​ ಮಾಡುತ್ತಿರುವ ಇತರೆ ಟಿವಿ ಮತ್ತು ಸಿನಿಮಾ ಸೆಲೆಬ್ರಿಟಿಗಳಿಗೆ ಕಾರಿನ ಅಭಾವ ಕಾಡಲಿದೆ ಎಂದು ವರದಿ ಆಗಿದೆ.

ವಿಕ್ಕಿ ಹಾಗೂ ಕತ್ರಿನಾ ಮದುವೆಗೆ ಬಾಲಿವುಡ್ ತಾರೆಯರಾದ ಕಬೀರ್ ಖಾನ್, ರೋಹಿತ್ ಶೆಟ್ಟಿ, ವರುಣ್ ಧವನ್, ನತಾಶಾ ದಲಾಲ್, ಕರಣ್ ಜೋಹರ್ ಮೊದಲಾದವರಿಗೆ ಈಗಾಗಲೇ ಆಹ್ವಾನ ಹೋಗಿದೆಯಂತೆ. ಕತ್ರಿನಾರ ಮಾಜಿ ಗೆಳೆಯ ರಣಬೀರ್​ಗೂ ಆಹ್ವಾನ ಹೋಗಿದ್ದು, ಆಲಿಯಾ ಭಟ್​ರೊಂದಿಗೆ ಅವರೂ ಮದುವೆಗೆ ಹಾಜರಿರಲಿದ್ದಾರೆ. ನಟ ಸಿದ್ಧಾರ್ಥ್ ಮಲ್ಹೋತ್ರಾರಿಗೂ ಆಹ್ವಾನ ಹೋಗಿದ್ದು, ಅವರ ಗೆಳತಿಯೆಂದು ಹೇಳಲಾಗುವ ಕಿಯಾರಾ ಅಡ್ವಾನಿಯೊಂದಿಗೆ ಭಾಗಿಯಾಗಲಿದ್ದಾರೆ. ಈಗಾಗಲೇ ಕುಟುಂಬದವರು ರಾಜಸ್ಥಾನ ತಲುಪಿದ್ದು, ತಯಾರಿ ನಡೆಸುತ್ತಿದ್ದಾರೆ. ದೀಪಾವಳಿಯ ಸಮಯದಲ್ಲಿ ಕತ್ರಿನಾ ಹಾಗೂ ವಿಕ್ಕಿ ಕೌಶಲ್ ಎಂಗೇಜ್​ಮೆಂಟ್ ಆಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:

ಕತ್ರಿನಾ ಮದುವೆಯಾಗುತ್ತಿರುವ ಹೋಟೆಲ್​ನಲ್ಲಿ ಒಂದು ರಾತ್ರಿ ಕಳೆಯಲು ಐದು ಲಕ್ಷ ಪಾವತಿಸಬೇಕು

2 ಬಾರಿ ಅಕ್ಷಯ್​ ಕುಮಾರ್​ ಕೆನ್ನೆಗೆ ಬಾರಿಸಿದ ಕತ್ರಿನಾ ಕೈಫ್​; ಇದನ್ನೆಲ್ಲ ಅಕ್ಕಿ ಸಹಿಸಿಕೊಂಡಿದ್ದೇಕೆ?

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ