AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ರಿನಾ-ವಿಕ್ಕಿ ಮದುವೆ ಕದ್ದು ನೋಡಲು ಡ್ರೋನ್ ಬಳಸಿದರೆ ಕಾದಿದೆ ಶಿಕ್ಷೆ; ಶೂಟ್​ ಮಾಡಲು ನಿರ್ಧಾರ​

Katrina Kaif Marriage: ಕತ್ರಿನಾ-ವಿಕ್ಕಿ ಮದುವೆ ಡಿ.9ರಂದು ರಾಜಸ್ಥಾನದ ಖಾಸಗಿ ಹೋಟೆಲ್​ನಲ್ಲಿ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ. ಮದುವೆಯ ಫೋಟೋ, ವಿಡಿಯೋಗಳು ಲೀಕ್​ ಆಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ.

ಕತ್ರಿನಾ-ವಿಕ್ಕಿ ಮದುವೆ ಕದ್ದು ನೋಡಲು ಡ್ರೋನ್ ಬಳಸಿದರೆ ಕಾದಿದೆ ಶಿಕ್ಷೆ; ಶೂಟ್​ ಮಾಡಲು ನಿರ್ಧಾರ​
ಕತ್ರಿನಾ ಕೈಫ್, ವಿಕ್ಕಿ ಕೌಶಲ್
TV9 Web
| Edited By: |

Updated on: Dec 03, 2021 | 12:08 PM

Share

ಕತ್ರಿನಾ ಕೈಫ್​ (, Katrina Kaif) ಮತ್ತು ವಿಕ್ಕಿ ಕೌಶಲ್​ (Vicky Kaushal) ಶೀಘ್ರವೇ ಹಸೆಮಣೆ ಏರಲಿದ್ದಾರೆ. ಸೆಲೆಬ್ರಿಟಿಗಳ ಮದುವೆ ಎಂದರೆ ಎಲ್ಲರಿಗೂ ಕುತೂಹಲ. ಅದ್ದೂರಿ ವಿವಾಹದ ವಿವರಗಳನ್ನು ತಿಳಿಯಲು ಅಭಿಮಾನಿಗಳು ಪ್ರತಿಕ್ಷಣ ಹಪಹಪಿಸುತ್ತಾರೆ. ಆಮಂತ್ರಣ ಪತ್ರಿಕೆ ಹೇಗಿದೆ? ಮದುವೆಯಲ್ಲಿ ಜೋಡಿಯ ಡ್ರೆಸ್​ ಹೇಗಿರಲಿದೆ? ಮಂಟಪವನ್ನು ಹೇಗೆ ಡೆಕೋರೇಟ್​ ಮಾಡಲಾಗಿದೆ? ಯಾವೆಲ್ಲ ಅಡುಗೆಗಳನ್ನು ಮಾಡಿಸಲಾಗಿದೆ? ಬಂದಿರುವ ಅತಿಥಿಗಳು ಯಾರು? ಯಾವ ಸಂಪ್ರದಾಯದ ಪ್ರಕಾರ ಮದುವೆ ನಡೆಯಲಿದೆ? ಹೀಗೆ ಹತ್ತಾರು ಪ್ರಶ್ನೆಗಳು ಅಭಿಮಾನಿಗಳ ತಲೆಯಲ್ಲಿ ಕೊರೆಯುತ್ತಾ ಇರುತ್ತದೆ. ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಮದುವೆ (Katrina Kaif Vicky Kaushal Wedding) ಬಗ್ಗೆಯೂ ಜನರಿಗೆ ಈ ರೀತಿಯ ಕೌತುಕ ಇದೆ. ಆದರೆ ಯಾವುದೇ ಗುಟ್ಟು ಬಿಟ್ಟುಕೊಡದೇ ಮದುವೆ ನಡೆಸಲು ನಿರ್ಧರಿಸಲಾಗಿದೆ. ಹಾಗಾಗಿ ಕೆಲವರು ಡ್ರೋನ್​ (Drone) ಮೂಲಕ ವಿವಾಹ ಸಂಭ್ರಮವನ್ನು ಕದ್ದು ನೋಡಲು ಸ್ಕೆಚ್​ ಹಾಕಿರಬಹುದು. ಅಂಥವರಿಗೆ ತಕ್ಕ ಶಿಕ್ಷೆ ಆಗಲಿದೆ.

ತಮ್ಮ ಮದುವೆಗೆ ಬರುವ ಅತಿಥಿಗಳು ಮೊಬೈಲ್​ ಫೋನ್​ ತರುವಂತಿಲ್ಲ ಎಂದು ಈಗಾಗಲೇ ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಯಾವುದೇ ಫೋಟೋಗಳು ಲೀಕ್​ ಆಗಬಾರದು ಎಂಬುದು ಈ ಜೋಡಿಯ ಉದ್ದೇಶ. ಅದೇ ರೀತಿ, ಮದುವೆ ನಡೆಯುವ ಹೋಟೆಲ್​ ಸುತ್ತಮುತ್ತ ಯಾವುದೇ ಡ್ರೋನ್​ಗಳು ಹಾರಾಟ ನಡೆಸದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಒಂದು ವೇಳೆ ಡ್ರೋನ್​ ಕಂಡುಬಂದರೆ ಅದನ್ನು ಶೂಟ್​ ಮಾಡಿ ಹೊಡೆದುರುಳಿಸಲು ತೀರ್ಮಾನಿಸಲಾಗಿದೆ ಎಂದು ವರದಿ ಆಗಿದೆ.

ಚಿತ್ರರಂಗದಲ್ಲಿ ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಅವರಿಗೆ ಸಿಕ್ಕಾಪಟ್ಟೆ ಸ್ನೇಹಿತರಿದ್ದಾರೆ. ಅನೇಕರಿಗೆ ಈಗಾಗಲೇ ಆಮಂತ್ರಣ ನೀಡಲಾಗಿದೆ. ಡಿ.9ರಂದು ರಾಜಸ್ಥಾನದ ಖಾಸಗಿ ಹೋಟೆಲ್​ನಲ್ಲಿ ಮದುವೆ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ. ಕರಣ್​ ಜೋಹರ್​, ಅಲಿ ಅಬ್ಬಾಸ್​ ಜಫರ್​, ಕಬೀರ್​ ಖಾನ್​, ರೋಹಿತ್​ ಶೆಟ್ಟಿ, ಸಿದ್ದಾರ್ಥ್​ ಮಲ್ಹೋತ್ರಾ, ಕಿಯಾರಾ ಅಡ್ವಾನಿ, ನತಾಶಾ ದಲಾಲ್, ವರುಣ್​ ಧವನ್​​ ಮುಂತಾದವರು ಮದುವೆಗೆ ಬರುವ ನಿರೀಕ್ಷೆ ಇದೆ.

ದೇಶದಲ್ಲಿ ಈಗ ಒಮಿಕ್ರಾನ್​ ಕಾಟ ಶುರುವಾಗಿದೆ. ಹಾಗಾಗಿ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡುವ ಸಾಧ್ಯತೆ ಇದೆ. ಮದುವೆ, ನಿಶ್ಚಿತಾರ್ಥ ಮುಂತಾದ ಸಮಾರಂಭಗಳಿಗೆ ಬರುವ ಅತಿಥಿಗಳ ಸಂಖ್ಯೆ ಮೇಲೆ ಸರ್ಕಾರ ನಿರ್ಬಂಧ ಹೇರಿದರೆ ಕತ್ರಿನಾ-ವಿಕ್ಕಿ ವಿವಾಹ ಮಂಕಾಗಲಿದೆ. ಆ ಚಿಂತೆಯಲ್ಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮದುವೆ ನಡೆಯುವ ದಿನಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸ್ಥಳೀಯ ಪೊಲೀಸರು ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:

ಕತ್ರಿನಾ ಕೈಫ್​-ವಿಕ್ಕಿ ಮದುವೆಗೆ ವಿಶೇಷ ಮೆಹಂದಿ; ಇದರ ಬೆಲೆ ಕೇಳಿ ಅಚ್ಚರಿಪಟ್ಟ ಫ್ಯಾನ್ಸ್​

ಕತ್ರಿನಾ-ವಿಕ್ಕಿ ವಿವಾಹ: ವೈರಲ್​ ಆಗಿದ್ದ ಸಲ್ಮಾನ್​-ಕತ್ರಿನಾ ಮದುವೆ ವಿಡಿಯೋದ ಅಸಲಿಯತ್ತೇನು?

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್