AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಿಡಿಯನ್ ಸಮಯ್ ರೈನಾ ಬಳಿ ಆಟೋಗ್ರಾಫ್ ಕೇಳಿದ ಅಮಿತಾಭ್; ಇದರ ಹಿಂದಿನ ಕಥೆ ಏನು?

ಸಮಯ್ ರೈನಾ ಅವರು 'ಕೌನ್ ಬನೇಗಾ ಕರೋಡ್ಪತಿ' ಕಾರ್ಯಕ್ರಮದಲ್ಲಿ ಅಮಿತಾಭ್ ಬಚ್ಚನ್ ಅವರಿಗೆ ತಮ್ಮ ಆಟೋಗ್ರಾಫ್ ನೀಡುವ ಮೂಲಕ ಎಲ್ಲರನ್ನೂ ರಂಜಿಸಿದರು. ಅವರ ವಿಚಿತ್ರ ಬೇಡಿಕೆಯನ್ನು ಅಮಿತಾಭ್ ಬಚ್ಚನ್ ಒಪ್ಪಿಕೊಂಡರು. ಈ ಘಟನೆಯು ಸಮಯ್ ರೈನಾ ಅವರ ಹಾಸ್ಯ ಪ್ರತಿಭೆಯನ್ನು ಎತ್ತಿ ತೋರಿಸುತ್ತದೆ ಮತ್ತು ಅವರ ಅಭಿಮಾನಿಗಳನ್ನು ಮತ್ತಷ್ಟು ಹೆಚ್ಚಿಸಿದೆ.

ಕಾಮಿಡಿಯನ್ ಸಮಯ್ ರೈನಾ ಬಳಿ ಆಟೋಗ್ರಾಫ್ ಕೇಳಿದ ಅಮಿತಾಭ್; ಇದರ ಹಿಂದಿನ ಕಥೆ ಏನು?
ಕಾಮಿಡಿಯನ್ ಸಮಯ್ ರೈನಾ ಬಳಿ ಆಟೋಗ್ರಾಫ್ ಕೇಳಿದ ಅಮಿತಾಭ್
ರಾಜೇಶ್ ದುಗ್ಗುಮನೆ
|

Updated on: Feb 01, 2025 | 12:52 PM

Share

ಸಮಯ್ ರೈನಾ ಅವರು ತಮ್ಮ ಕಾಮಿಡಿ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅವರು ‘ಇಂಡಿಯಾ ಗಾಟ್ ಲೇಟೆಂಟ್’ ಶೋ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರು ಇತ್ತೀಚೆಗೆ ‘ಕೌನ್ ಬನೇಗಾ ಕರೋಡ್​ಪತಿ’ ಶೋಗೆ ಆಗಮಿಸಿದ್ದರು. ಈ ವೇಳೆ ಅಮಿತಾಭ್ ಬಚ್ಚನ್ ಅವರು ಸಮಯ್ ರೈನಾ ಬಳಿ ಆಟೋಗ್ರಾಫ್ ಪಡೆದುಕೊಂಡಿದ್ದಾರೆ. ಅದಕ್ಕೆ ಕಾರಣ ಏನು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಟೆಲಿವಿಷನ್ ಶೋ ‘ಕೌನ್ ಬನೇಗಾ ಕರೋಡ್​ಪತಿ’ 25 ವರ್ಷಗಳ ಸಂಭ್ರಮದಲ್ಲಿ ಇದೆ. ಈ ಅಪರೂಪದ ಮೈಲುಗಲ್ಲು ಸ್ಥಾಪಿಸಿದ ಖುಷಿಯಲ್ಲಿ ಸೋನಿ ಟಿವಿ ವಿಶೇಷ ವ್ಯಕ್ತಿಗಳನ್ನು ಆಹ್ವಾನಿಸಿತ್ತು. ಅದರಲ್ಲೂ ವಿಡಿಯೋ ಕಂಟೆಂಟರ್​​ಗಳಾದ ಕಾಮಿಯಾ ಜಾನಿ, ತನ್ಮಯ್ ಭಟ್, ಭುವನ್ ಬಾಮ್ ಹಾಗೂ ಸಮಯ್ ರೈನಾ ಇದರಲ್ಲಿ ಇದ್ದರು.

ಸಮಯ್ ರೈನಾ ಯಾವಾಗಲೂ ಜಾಲಿ ಆಗಿರುತ್ತಾರೆ. ಸದಾ ನಗಿಸುವ ಪ್ರಯತ್ನ ಮಾಡುತ್ತಾರೆ. ಅವರು ಅಮಿತಾಭ್ ಬಚ್ಚನ್ ಬಳಿ ವಿಚಿತ್ರ ಬೇಡಿಕೆ ಇಟ್ಟರು. ‘ನನ್ನ ಆಟೋಗ್ರಾಫ್​ನ ನೀವು ತೆಗೆದುಕೊಳ್ಳಿ. ಆ ಬಳಿಕ ಅದನ್ನು ಕಸದಬುಟ್ಟಿಗೆ ಬೇಕಿದ್ದರೂ ಹಾಕಿ. ಆ ಬಗ್ಗೆ ನಾನು ಚಿಂತಿಸೋದಿಲ್ಲ. ನನ್ನಿಂದ ಅಮಿತಾಭ್ ಆಟೋಗ್ರಾಫ್ ಪಡೆದುಕೊಂಡರು ಎಂದಾಗಬೇಕು’ ಎಂದು ಸಮಯ್ ರೈನಾ ಹೇಳಿದರು.

ಇದಕ್ಕೆ ಅಮಿತಾಭ್ ಬಚ್ಚನ್ ವಿರೋಧ ತೋರಿಸಲಿಲ್ಲ. ಬದಲಿಗೆ ಅವರು ಒಪ್ಪಿದರು. ‘ಟಿಶ್ಯೂ ಪೇಪರ್​ ಇದೆ. ಅದರಲ್ಲಿ ಆಟೋಗ್ರಾಫ್ ಹಾಕಿ ಕೊಡ್ತೀನಿ’ ಎಂದು ಸಮಯ್ ರೈನಾ ಹೇಳಿದರು. ‘ಅದರಲ್ಲಿ ಆಟೋಗ್ರಾಫ್ ಹಾಕೋಕೆ ಬರುತ್ತಾ’ ಎಂದು ಅಮಿತಾಭ್ ಅಚ್ಚರಿಯಿಂದ ಕೇಳಿದರು. ‘ನಾವು ಆಟೋಗ್ರಾಫ್ ಹಾಕೋದು ಇದರಲ್ಲಿಯೇ’ ಎಂದು ಸಮಯ್ ಹೇಳಿದರು.

ಇದನ್ನೂ ಓದಿ: ಸೂಪರ್​ಸ್ಟಾರ್ ಆದರೂ ಪತ್ನಿಯಿಂದ ಹಣ ಪಡೆಯುತ್ತಾರೆ ಅಮಿತಾಭ್ ಬಚ್ಚನ್

ವಿಶೇಷ ಎಂದರೆ ಸಮಯ್ ರೈನಾ ಅವರು ಕೊಟ್ಟ ಆಟೋಗ್ರಾಫ್​ನ ಹಾಗೆಯೇ ಕೂಡಿಟ್ಟುಕೊಳ್ಳೋದಾಗಿ ಅಮಿತಾಭ್ ಬಚ್ಚನ್ ಹೇಳಿದರು. ಈ ವಿಚಾರ ಕೇಳಿ ಸಮಯ್ ರೈನಾ ಖುಷಿಪಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!