AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಿಡಿಯನ್ ಸಮಯ್ ರೈನಾ ಬಳಿ ಆಟೋಗ್ರಾಫ್ ಕೇಳಿದ ಅಮಿತಾಭ್; ಇದರ ಹಿಂದಿನ ಕಥೆ ಏನು?

ಸಮಯ್ ರೈನಾ ಅವರು 'ಕೌನ್ ಬನೇಗಾ ಕರೋಡ್ಪತಿ' ಕಾರ್ಯಕ್ರಮದಲ್ಲಿ ಅಮಿತಾಭ್ ಬಚ್ಚನ್ ಅವರಿಗೆ ತಮ್ಮ ಆಟೋಗ್ರಾಫ್ ನೀಡುವ ಮೂಲಕ ಎಲ್ಲರನ್ನೂ ರಂಜಿಸಿದರು. ಅವರ ವಿಚಿತ್ರ ಬೇಡಿಕೆಯನ್ನು ಅಮಿತಾಭ್ ಬಚ್ಚನ್ ಒಪ್ಪಿಕೊಂಡರು. ಈ ಘಟನೆಯು ಸಮಯ್ ರೈನಾ ಅವರ ಹಾಸ್ಯ ಪ್ರತಿಭೆಯನ್ನು ಎತ್ತಿ ತೋರಿಸುತ್ತದೆ ಮತ್ತು ಅವರ ಅಭಿಮಾನಿಗಳನ್ನು ಮತ್ತಷ್ಟು ಹೆಚ್ಚಿಸಿದೆ.

ಕಾಮಿಡಿಯನ್ ಸಮಯ್ ರೈನಾ ಬಳಿ ಆಟೋಗ್ರಾಫ್ ಕೇಳಿದ ಅಮಿತಾಭ್; ಇದರ ಹಿಂದಿನ ಕಥೆ ಏನು?
ಕಾಮಿಡಿಯನ್ ಸಮಯ್ ರೈನಾ ಬಳಿ ಆಟೋಗ್ರಾಫ್ ಕೇಳಿದ ಅಮಿತಾಭ್
ರಾಜೇಶ್ ದುಗ್ಗುಮನೆ
|

Updated on: Feb 01, 2025 | 12:52 PM

Share

ಸಮಯ್ ರೈನಾ ಅವರು ತಮ್ಮ ಕಾಮಿಡಿ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅವರು ‘ಇಂಡಿಯಾ ಗಾಟ್ ಲೇಟೆಂಟ್’ ಶೋ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರು ಇತ್ತೀಚೆಗೆ ‘ಕೌನ್ ಬನೇಗಾ ಕರೋಡ್​ಪತಿ’ ಶೋಗೆ ಆಗಮಿಸಿದ್ದರು. ಈ ವೇಳೆ ಅಮಿತಾಭ್ ಬಚ್ಚನ್ ಅವರು ಸಮಯ್ ರೈನಾ ಬಳಿ ಆಟೋಗ್ರಾಫ್ ಪಡೆದುಕೊಂಡಿದ್ದಾರೆ. ಅದಕ್ಕೆ ಕಾರಣ ಏನು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಟೆಲಿವಿಷನ್ ಶೋ ‘ಕೌನ್ ಬನೇಗಾ ಕರೋಡ್​ಪತಿ’ 25 ವರ್ಷಗಳ ಸಂಭ್ರಮದಲ್ಲಿ ಇದೆ. ಈ ಅಪರೂಪದ ಮೈಲುಗಲ್ಲು ಸ್ಥಾಪಿಸಿದ ಖುಷಿಯಲ್ಲಿ ಸೋನಿ ಟಿವಿ ವಿಶೇಷ ವ್ಯಕ್ತಿಗಳನ್ನು ಆಹ್ವಾನಿಸಿತ್ತು. ಅದರಲ್ಲೂ ವಿಡಿಯೋ ಕಂಟೆಂಟರ್​​ಗಳಾದ ಕಾಮಿಯಾ ಜಾನಿ, ತನ್ಮಯ್ ಭಟ್, ಭುವನ್ ಬಾಮ್ ಹಾಗೂ ಸಮಯ್ ರೈನಾ ಇದರಲ್ಲಿ ಇದ್ದರು.

ಸಮಯ್ ರೈನಾ ಯಾವಾಗಲೂ ಜಾಲಿ ಆಗಿರುತ್ತಾರೆ. ಸದಾ ನಗಿಸುವ ಪ್ರಯತ್ನ ಮಾಡುತ್ತಾರೆ. ಅವರು ಅಮಿತಾಭ್ ಬಚ್ಚನ್ ಬಳಿ ವಿಚಿತ್ರ ಬೇಡಿಕೆ ಇಟ್ಟರು. ‘ನನ್ನ ಆಟೋಗ್ರಾಫ್​ನ ನೀವು ತೆಗೆದುಕೊಳ್ಳಿ. ಆ ಬಳಿಕ ಅದನ್ನು ಕಸದಬುಟ್ಟಿಗೆ ಬೇಕಿದ್ದರೂ ಹಾಕಿ. ಆ ಬಗ್ಗೆ ನಾನು ಚಿಂತಿಸೋದಿಲ್ಲ. ನನ್ನಿಂದ ಅಮಿತಾಭ್ ಆಟೋಗ್ರಾಫ್ ಪಡೆದುಕೊಂಡರು ಎಂದಾಗಬೇಕು’ ಎಂದು ಸಮಯ್ ರೈನಾ ಹೇಳಿದರು.

ಇದಕ್ಕೆ ಅಮಿತಾಭ್ ಬಚ್ಚನ್ ವಿರೋಧ ತೋರಿಸಲಿಲ್ಲ. ಬದಲಿಗೆ ಅವರು ಒಪ್ಪಿದರು. ‘ಟಿಶ್ಯೂ ಪೇಪರ್​ ಇದೆ. ಅದರಲ್ಲಿ ಆಟೋಗ್ರಾಫ್ ಹಾಕಿ ಕೊಡ್ತೀನಿ’ ಎಂದು ಸಮಯ್ ರೈನಾ ಹೇಳಿದರು. ‘ಅದರಲ್ಲಿ ಆಟೋಗ್ರಾಫ್ ಹಾಕೋಕೆ ಬರುತ್ತಾ’ ಎಂದು ಅಮಿತಾಭ್ ಅಚ್ಚರಿಯಿಂದ ಕೇಳಿದರು. ‘ನಾವು ಆಟೋಗ್ರಾಫ್ ಹಾಕೋದು ಇದರಲ್ಲಿಯೇ’ ಎಂದು ಸಮಯ್ ಹೇಳಿದರು.

ಇದನ್ನೂ ಓದಿ: ಸೂಪರ್​ಸ್ಟಾರ್ ಆದರೂ ಪತ್ನಿಯಿಂದ ಹಣ ಪಡೆಯುತ್ತಾರೆ ಅಮಿತಾಭ್ ಬಚ್ಚನ್

ವಿಶೇಷ ಎಂದರೆ ಸಮಯ್ ರೈನಾ ಅವರು ಕೊಟ್ಟ ಆಟೋಗ್ರಾಫ್​ನ ಹಾಗೆಯೇ ಕೂಡಿಟ್ಟುಕೊಳ್ಳೋದಾಗಿ ಅಮಿತಾಭ್ ಬಚ್ಚನ್ ಹೇಳಿದರು. ಈ ವಿಚಾರ ಕೇಳಿ ಸಮಯ್ ರೈನಾ ಖುಷಿಪಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ