AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಿಡಿಯನ್ ಸಮಯ್ ರೈನಾ ಬಳಿ ಆಟೋಗ್ರಾಫ್ ಕೇಳಿದ ಅಮಿತಾಭ್; ಇದರ ಹಿಂದಿನ ಕಥೆ ಏನು?

ಸಮಯ್ ರೈನಾ ಅವರು 'ಕೌನ್ ಬನೇಗಾ ಕರೋಡ್ಪತಿ' ಕಾರ್ಯಕ್ರಮದಲ್ಲಿ ಅಮಿತಾಭ್ ಬಚ್ಚನ್ ಅವರಿಗೆ ತಮ್ಮ ಆಟೋಗ್ರಾಫ್ ನೀಡುವ ಮೂಲಕ ಎಲ್ಲರನ್ನೂ ರಂಜಿಸಿದರು. ಅವರ ವಿಚಿತ್ರ ಬೇಡಿಕೆಯನ್ನು ಅಮಿತಾಭ್ ಬಚ್ಚನ್ ಒಪ್ಪಿಕೊಂಡರು. ಈ ಘಟನೆಯು ಸಮಯ್ ರೈನಾ ಅವರ ಹಾಸ್ಯ ಪ್ರತಿಭೆಯನ್ನು ಎತ್ತಿ ತೋರಿಸುತ್ತದೆ ಮತ್ತು ಅವರ ಅಭಿಮಾನಿಗಳನ್ನು ಮತ್ತಷ್ಟು ಹೆಚ್ಚಿಸಿದೆ.

ಕಾಮಿಡಿಯನ್ ಸಮಯ್ ರೈನಾ ಬಳಿ ಆಟೋಗ್ರಾಫ್ ಕೇಳಿದ ಅಮಿತಾಭ್; ಇದರ ಹಿಂದಿನ ಕಥೆ ಏನು?
ಕಾಮಿಡಿಯನ್ ಸಮಯ್ ರೈನಾ ಬಳಿ ಆಟೋಗ್ರಾಫ್ ಕೇಳಿದ ಅಮಿತಾಭ್
ರಾಜೇಶ್ ದುಗ್ಗುಮನೆ
|

Updated on: Feb 01, 2025 | 12:52 PM

Share

ಸಮಯ್ ರೈನಾ ಅವರು ತಮ್ಮ ಕಾಮಿಡಿ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅವರು ‘ಇಂಡಿಯಾ ಗಾಟ್ ಲೇಟೆಂಟ್’ ಶೋ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರು ಇತ್ತೀಚೆಗೆ ‘ಕೌನ್ ಬನೇಗಾ ಕರೋಡ್​ಪತಿ’ ಶೋಗೆ ಆಗಮಿಸಿದ್ದರು. ಈ ವೇಳೆ ಅಮಿತಾಭ್ ಬಚ್ಚನ್ ಅವರು ಸಮಯ್ ರೈನಾ ಬಳಿ ಆಟೋಗ್ರಾಫ್ ಪಡೆದುಕೊಂಡಿದ್ದಾರೆ. ಅದಕ್ಕೆ ಕಾರಣ ಏನು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಟೆಲಿವಿಷನ್ ಶೋ ‘ಕೌನ್ ಬನೇಗಾ ಕರೋಡ್​ಪತಿ’ 25 ವರ್ಷಗಳ ಸಂಭ್ರಮದಲ್ಲಿ ಇದೆ. ಈ ಅಪರೂಪದ ಮೈಲುಗಲ್ಲು ಸ್ಥಾಪಿಸಿದ ಖುಷಿಯಲ್ಲಿ ಸೋನಿ ಟಿವಿ ವಿಶೇಷ ವ್ಯಕ್ತಿಗಳನ್ನು ಆಹ್ವಾನಿಸಿತ್ತು. ಅದರಲ್ಲೂ ವಿಡಿಯೋ ಕಂಟೆಂಟರ್​​ಗಳಾದ ಕಾಮಿಯಾ ಜಾನಿ, ತನ್ಮಯ್ ಭಟ್, ಭುವನ್ ಬಾಮ್ ಹಾಗೂ ಸಮಯ್ ರೈನಾ ಇದರಲ್ಲಿ ಇದ್ದರು.

ಸಮಯ್ ರೈನಾ ಯಾವಾಗಲೂ ಜಾಲಿ ಆಗಿರುತ್ತಾರೆ. ಸದಾ ನಗಿಸುವ ಪ್ರಯತ್ನ ಮಾಡುತ್ತಾರೆ. ಅವರು ಅಮಿತಾಭ್ ಬಚ್ಚನ್ ಬಳಿ ವಿಚಿತ್ರ ಬೇಡಿಕೆ ಇಟ್ಟರು. ‘ನನ್ನ ಆಟೋಗ್ರಾಫ್​ನ ನೀವು ತೆಗೆದುಕೊಳ್ಳಿ. ಆ ಬಳಿಕ ಅದನ್ನು ಕಸದಬುಟ್ಟಿಗೆ ಬೇಕಿದ್ದರೂ ಹಾಕಿ. ಆ ಬಗ್ಗೆ ನಾನು ಚಿಂತಿಸೋದಿಲ್ಲ. ನನ್ನಿಂದ ಅಮಿತಾಭ್ ಆಟೋಗ್ರಾಫ್ ಪಡೆದುಕೊಂಡರು ಎಂದಾಗಬೇಕು’ ಎಂದು ಸಮಯ್ ರೈನಾ ಹೇಳಿದರು.

ಇದಕ್ಕೆ ಅಮಿತಾಭ್ ಬಚ್ಚನ್ ವಿರೋಧ ತೋರಿಸಲಿಲ್ಲ. ಬದಲಿಗೆ ಅವರು ಒಪ್ಪಿದರು. ‘ಟಿಶ್ಯೂ ಪೇಪರ್​ ಇದೆ. ಅದರಲ್ಲಿ ಆಟೋಗ್ರಾಫ್ ಹಾಕಿ ಕೊಡ್ತೀನಿ’ ಎಂದು ಸಮಯ್ ರೈನಾ ಹೇಳಿದರು. ‘ಅದರಲ್ಲಿ ಆಟೋಗ್ರಾಫ್ ಹಾಕೋಕೆ ಬರುತ್ತಾ’ ಎಂದು ಅಮಿತಾಭ್ ಅಚ್ಚರಿಯಿಂದ ಕೇಳಿದರು. ‘ನಾವು ಆಟೋಗ್ರಾಫ್ ಹಾಕೋದು ಇದರಲ್ಲಿಯೇ’ ಎಂದು ಸಮಯ್ ಹೇಳಿದರು.

ಇದನ್ನೂ ಓದಿ: ಸೂಪರ್​ಸ್ಟಾರ್ ಆದರೂ ಪತ್ನಿಯಿಂದ ಹಣ ಪಡೆಯುತ್ತಾರೆ ಅಮಿತಾಭ್ ಬಚ್ಚನ್

ವಿಶೇಷ ಎಂದರೆ ಸಮಯ್ ರೈನಾ ಅವರು ಕೊಟ್ಟ ಆಟೋಗ್ರಾಫ್​ನ ಹಾಗೆಯೇ ಕೂಡಿಟ್ಟುಕೊಳ್ಳೋದಾಗಿ ಅಮಿತಾಭ್ ಬಚ್ಚನ್ ಹೇಳಿದರು. ಈ ವಿಚಾರ ಕೇಳಿ ಸಮಯ್ ರೈನಾ ಖುಷಿಪಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ