AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಸೆ ಸೆರಗು’ ಹಾಡಿಗೆ ಅಶ್ಲೀಲ ನೃತ್ಯ, ನೋರಾ ಫತೇಹಿ ವಿರುದ್ಧ ಫತ್ವಾ

KD Movie song: ಉತ್ತರ ಪ್ರದೇಶದ ಅಲಿಗಢದಲ್ಲಿರುವ ಮುಸ್ಲಿಂ ಪರ್ಸನಲ್ ದಾರುಲ್ ಇಫ್ತಾ ಎಂಬ ಧಾರ್ಮಿಕ ಸಂಸ್ಥೆಯು ಬಾಲಿವುಡ್ ನಟಿ ಮತ್ತು ನೃತ್ಯಗಾರ್ತಿ ನೋರಾ ಫತೇಹಿ ವಿರುದ್ಧ ಫತ್ವಾ ಹೊರಡಿಸಿದೆ. ಕನ್ನಡ ಚಿತ್ರ ‘ಕೆಡಿ: ದಿ ಡೆವಿಲ್’ ಚಿತ್ರದ 'ಸರ್ಕೆ ಚುನರ್ ತೇರಿ' ಹಾಡಿನಲ್ಲಿನ ಅವರ ಅಶ್ಲೀಲ ನೃತ್ಯ ಪ್ರದರ್ಶನಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆಯಂತೆ. ಹಾಡಿನಲ್ಲಿರುವ ನೃತ್ಯದ ಭಂಗಿಗಳು ಮತ್ತು ಸಾಹಿತ್ಯವು ‘ಅಶ್ಲೀಲ’ವಾಗಿದ್ದು, ಇಸ್ಲಾಮಿಕ್ ಬೋಧನೆಗಳು ಮತ್ತು ನೈತಿಕ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಧಾರ್ಮಿಕ ಸಂಸ್ಥೆ ಹೇಳಿದೆ. ಇದು ಸಮಾಜದ ಮೇಲೆ ಕೆಟ್ಟ ಪ್ರಭಾವ ಬೀರುತ್ತದೆ ಎಂದು ಮೌಲಾನಾ ಚೌಧರಿ ಇಫ್ರಾಹೀಮ್ ಹುಸೇನ್ ತಿಳಿಸಿದ್ದಾರೆ.

‘ಸರ್ಸೆ ಸೆರಗು’ ಹಾಡಿಗೆ ಅಶ್ಲೀಲ ನೃತ್ಯ, ನೋರಾ ಫತೇಹಿ ವಿರುದ್ಧ ಫತ್ವಾ
Nora Fatehi Song
ಮಂಜುನಾಥ ಸಿ.
|

Updated on: Mar 20, 2026 | 1:02 PM

Share

ಪ್ರೇಮ್ (Prem) ನಿರ್ದೇಶಿಸಿ, ಧ್ರುವ ಸರ್ಜಾ ನಟಿಸಿರುವ ‘ಕೆಡಿ: ದಿ ಡೆವಿಲ್’ ಸಿನಿಮಾದ ‘ಸರ್ಸೆ ಸೆರಗು’ ಹಾಡು ಭಾರಿ ವಿವಾದ ಹುಟ್ಟುಹಾಕಿದೆ. ಹಾಡಿನ ಹಿಂದಿ ಆವೃತ್ತಿಯಾದ ‘ಸರ್ಕೆ ಚುನರಿ’ ಹಾಡಿನ ವಿರುದ್ಧ ತೀವ್ರ ಟೀಕೆ ಮತ್ತು ವಿರೋಧ ವ್ಯಕ್ತವಾಗಿದ್ದು, ಈಗಾಗಲೇ ಸಿಬಿಎಫ್​​ಸಿ, ಸೈಬರ್ ಪೊಲೀಸರಿಗೆ ದೂರು ದಾಖಲಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗ ಸಹ ಹಾಡಿನ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ನಿರ್ದೇಶಕ ಮತ್ತು ಗೀತರಚನೆಕಾರ ಪ್ರೇಮ್ ಸೇರಿದಂತೆ ನೋರಾ ಫತೇಹಿ, ಸಂಜಯ್ ದತ್ ಇನ್ನೂ ಹಲವರಿಗೆ ನೊಡೀಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಲೋಕಸಭೆ ಅಧಿವೇಶನದಲ್ಲಿಯೂ ಸಹ ಹಾಡಿನ ಕುರಿತು ಚರ್ಚೆ ಆಗಿದೆ. ಇದೀಗ ಉತ್ತರ ಪ್ರದೇಶದ ಮುಸ್ಲಿಂ ಧಾರ್ಮಿಕ ಸಂಸ್ಥೆಯ ಮೌಲ್ವಿ ನೋರಾ ಫತೇಹಿ ವಿರುದ್ಧ ಫತ್ವಾ ಹೊರಡಿಸಿದ್ದಾರೆ.

ಉತ್ತರ ಪ್ರದೇಶದ ಅಲಿಗಢದಲ್ಲಿರುವ ಮುಸ್ಲಿಂ ಪರ್ಸನಲ್ ದಾರುಲ್ ಇಫ್ತಾ ಎಂಬ ಧಾರ್ಮಿಕ ಸಂಸ್ಥೆಯು ಬಾಲಿವುಡ್ ನಟಿ ಮತ್ತು ನೃತ್ಯಗಾರ್ತಿ ನೋರಾ ಫತೇಹಿ ವಿರುದ್ಧ ಫತ್ವಾ ಹೊರಡಿಸಿದೆ. ಕನ್ನಡ ಚಿತ್ರ ‘ಕೆಡಿ: ದಿ ಡೆವಿಲ್’ ಚಿತ್ರದ ‘ಸರ್ಕೆ ಚುನರ್ ತೇರಿ’ ಹಾಡಿನಲ್ಲಿನ ಅವರ ಅಶ್ಲೀಲ ನೃತ್ಯ ಪ್ರದರ್ಶನಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆಯಂತೆ. ಹಾಡಿನಲ್ಲಿರುವ ನೃತ್ಯದ ಭಂಗಿಗಳು ಮತ್ತು ಸಾಹಿತ್ಯವು ‘ಅಶ್ಲೀಲ’ವಾಗಿದ್ದು, ಇಸ್ಲಾಮಿಕ್ ಬೋಧನೆಗಳು ಮತ್ತು ನೈತಿಕ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಧಾರ್ಮಿಕ ಸಂಸ್ಥೆ ಹೇಳಿದೆ. ಇದು ಸಮಾಜದ ಮೇಲೆ ಕೆಟ್ಟ ಪ್ರಭಾವ ಬೀರುತ್ತದೆ ಎಂದು ಮೌಲಾನಾ ಚೌಧರಿ ಇಫ್ರಾಹೀಮ್ ಹುಸೇನ್ ತಿಳಿಸಿದ್ದಾರೆ.

ಹಾಡು ‘ಪ್ರಚೋದನಾತ್ಮಕ ಮತ್ತು ಅಶ್ಲೀಲ’ ದೃಶ್ಯಗಳ ಬಗ್ಗೆ ಸಮಸ್ಯೆ ಇದೆ ಎಂದು ಮುಖ್ಯ ಮುಫ್ತಿ ಮೌಲಾನಾ ಇಬ್ರಾಹಿಂ ಹುಸೇನ್ ಅವರು ಫತ್ವಾ ಹೊರಡಿಸಿದ್ದಾರೆ. ಅಂತಹ ವಿಷಯವು ಹರಾಮ್ ಮತ್ತು ಗುನಾಹ್-ಎ-ಕಬೀರಾ (ಗಂಭೀರ ಪಾಪ) ಎಂದಿದ್ದು ಅಂತಹ ವಿಷಯಗಳಲ್ಲಿ ಭಾಗವಹಿಸುವುದು ಅಥವಾ ಪ್ರಚಾರ ಮಾಡುವುದು ಧಾರ್ಮಿಕ ತತ್ವಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ಫತ್ವಾ ಎನ್ನುವುದು ಇಸ್ಲಾಂನಲ್ಲಿ ಮುಫ್ತಿ ಎಂದು ಕರೆಯಲ್ಪಡುವ ಧಾರ್ಮಿಕ ಕಾನೂನು ತಜ್ಞರು ನಿರ್ದಿಷ್ಟ ವಿಷಯದ ಕುರಿತು ನೀಡುವ ಅಭಿಪ್ರಾಯವಾಗಿದೆ. ಇದಕ್ಕೆ ಕಾನೂನಿನ ಮಾನ್ಯತೆ ಇರುವುದಿಲ್ಲ.

ಇದನ್ನೂ ಓದಿ:ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ

ಈ ಹಾಡಿನ ವಿರುದ್ಧ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಲೋಕಸಭೆಯಲ್ಲಿ ಈ ಹಾಡನ್ನು ಬ್ಯಾನ್ (ನಿಷೇಧ) ಮಾಡಲಾಗಿದೆ ಎಂದು ಲೋಕಸಭೆ ಅಧಿವೇಶನದಲ್ಲಿ ತಿಳಿಸಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವು ಸಾಂಸ್ಕೃತಿಕ ಮೌಲ್ಯಗಳಿಗೆ ಬದ್ಧವಾಗಿರಬೇಕು ಎಂದು ಅವರು ಹೇಳಿದ್ದಾರೆ. ಹಾಡಿನಲ್ಲಿ ಮಹಿಳೆಯರನ್ನು ಅಶ್ಲೀಲವಾಗಿ ಬಿಂಬಿಸಲಾಗಿದೆ ಎಂಬ ದೂರಿನ ಮೇರೆಗೆ ರಾಷ್ಟ್ರೀಯ ಮಹಿಳಾ ಆಯೋಗವು (NCW) ನೋರಾ ಫತೇಹಿ, ಸಂಜಯ್ ದತ್ ಮತ್ತು ಗೀತರಚನೆಕಾರ ರಕೀಬ್ ಆಲಂ ಅವರಿಗೆ ಸಮನ್ಸ್ ನೀಡಿದೆ.

ಈ ವಿವಾದದ ಕುರಿತು ಇನ್ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ನೋರಾ ಫತೇಹಿ, ‘ನಾನು ಈ ಹಾಡನ್ನು ಮೂರು ವರ್ಷಗಳ ಹಿಂದೆ ಕನ್ನಡದಲ್ಲಿ ಚಿತ್ರೀಕರಿಸಿದ್ದೆ. ಆ ಸಮಯದಲ್ಲಿ ಚಿತ್ರತಂಡ ನೀಡಿದ ವಿವರಣೆಯನ್ನು ನಂಬಿದ್ದೆ. ನನಗೆ ಕನ್ನಡ ಭಾಷೆ ತಿಳಿಯದ ಕಾರಣ ಅದರ ಅರ್ಥ ಗೊತ್ತಿರಲಿಲ್ಲ. ಹಿಂದಿ ಆವೃತ್ತಿಯ ಸಾಹಿತ್ಯ ಮತ್ತು ಡಬ್ಬಿಂಗ್ ನನ್ನ ಗಮನಕ್ಕೆ ಬಾರದೆ ನಡೆದಿದೆ’ ಎಂದು ಹೇಳುವ ಮೂಲಕ ವಿವಾದದಿಂದ ದೂರ ಉಳಿಯಲು ಪ್ರಯತ್ನಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು