AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಮತ್ತು ಹುಡುಗಿ ವಿಷಯದಲ್ಲಿ ಸಂಜಯ್​ ದತ್​ ತಿಳಿದುಕೊಂಡಿದ್ದೇ ಬೇರೆ: ಎಲ್ಲವನ್ನೂ ಬಾಯ್ಬಿಟ್ಟ ಅಧೀರ

ಸಂಜಯ್​ ದತ್​ ಬದುಕಿನ ಕಹಿ ಸತ್ಯಗಳು ರಹಸ್ಯವಾಗಿ ಉಳಿದಿಲ್ಲ. ಡ್ರಗ್ಸ್​ ಬಗ್ಗೆ ತಮಗೆ ಇದ್ದ ಭಾವನೆ ಹೇಗಿತ್ತು ಎಂಬುದನ್ನು ಅವರು ಈಗ ವಿವರಿಸಿದ್ದಾರೆ.

ಡ್ರಗ್ಸ್​ ಮತ್ತು ಹುಡುಗಿ ವಿಷಯದಲ್ಲಿ ಸಂಜಯ್​ ದತ್​ ತಿಳಿದುಕೊಂಡಿದ್ದೇ ಬೇರೆ: ಎಲ್ಲವನ್ನೂ ಬಾಯ್ಬಿಟ್ಟ ಅಧೀರ
ಸಂಜಯ್ ದತ್
Follow us
TV9 Web
| Updated By: ಮದನ್​ ಕುಮಾರ್​

Updated on: Apr 17, 2022 | 9:14 AM

ಕಳೆದ 40 ವರ್ಷಗಳಿಂದಲೂ ನಟ ಸಂಜಯ್​ ದತ್​ (Sanjay Dutt) ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಈ ಸುದೀರ್ಘ ಪಯಣದಲ್ಲಿ ಅವರು ಹಲವು ಏಳು-ಬೀಳುಗಳನ್ನು ಕಂಡಿದ್ದಾರೆ. ನೋವು, ಅವಮಾನಗಳನ್ನೂ ಅನುಭವಿಸಿದ್ದಾರೆ. ಹದಿಹರೆಯದಲ್ಲೇ ಅವರು ಮಾದಕ ವ್ಯಸನಿ (Drug Addict) ಆಗಿದ್ದರು ಎಂಬುದು ಲೋಕಕ್ಕೇ ತಿಳಿದ ವಿಚಾರ. ಆದರೆ ನಂತರದ ದಿನಗಳಲ್ಲಿ ಅವರು ಆ ದುಶ್ಚಟದಿಂದ ಹೊರಬಂದರು. ಹೊಸ ಮನುಷ್ಯನಾಗಿ ಬಾಳುವುದು ಅಷ್ಟು ಸುಲಭ ಆಗಿರಲಿಲ್ಲ. ಬದುಕಿನುದ್ದಕ್ಕೂ ಹತ್ತಾರು ಕಷ್ಟಗಳನ್ನು ಎದುರಿಸಿರುವ ಸಂಜಯ್​ ದತ್​ ಅವರು ಈಗ ಅದೆಲ್ಲವನ್ನೂ ಮೆಲುಕು ಹಾಕುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ (KGF 2) ಸಿನಿಮಾದಲ್ಲಿ ಅಧೀರ ಎಂಬ ಪಾತ್ರವನ್ನು ಮಾಡಿರುವ ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ. ಈ ಸಿನಿಮಾದ ಪ್ರಚಾರದ ಸಲುವಾಗಿ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿರುವ ಅವರು ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ತಾವು ಡ್ರಗ್ಸ್​ ಸೇವಿಸುತ್ತಿದ್ದ ದಿನಗಳನ್ನು ಕೂಡ ಮತ್ತೆ ನೆನಪಿಸಿಕೊಂಡಿದ್ದಾರೆ. ಸಂಜಯ್​ ದತ್​ ಅವರ ಜೀವನದ ಕುರಿತು ‘ಸಂಜು’ ಸಿನಿಮಾ ಮೂಡಿಬಂದಿತ್ತು. ಅದರಲ್ಲಿ ಕೂಡ ಅನೇಕ ಸಂಗತಿಗಳ ಬಗ್ಗೆ ಹೇಳಲಾಗಿತ್ತು.

ಸಂಜಯ್ ದತ್​ ಅವರಿಗೆ ನೂರಾರು ಗರ್ಲ್​ಫ್ರೆಂಡ್ಸ್​ ಇದ್ದರು. ಆದರೆ ಆರಂಭದ ದಿನಗಳಲ್ಲಿ ಸಂಜಯ್​ ದತ್​ ತುಂಬ ನಾಚಿಕೆ ಪಟ್ಟುಕೊಳ್ಳುತ್ತಿದ್ದರು. ಒಂದು ವೇಳೆ ಡ್ರಗ್ಸ್​ ಸೇವಿಸಿದರೆ ನಾಚಿಕೆ ಮಾಯವಾಗಿ ಕೂಲ್​ ಆಗಿ ಕಾಣುಬಹುದು ಮತ್ತು ಹುಡುಗಿಯರ ಜೊತೆ ಮಾತನಾಡಬಹುದು ಎಂಬ ತಪ್ಪು ಕಲ್ಪನೆ ಅವರಲ್ಲಿ ಮೂಡಿತ್ತು. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಂಜಯ್​ ದತ್​ ಅವರು ಇದನ್ನು ಬಾಯಿ ಬಿಟ್ಟಿದ್ದಾರೆ.

ಡ್ರಗ್ಸ್​ ಚಟವನ್ನು ಬಿಟ್ಟು ಬಿಡಲು ಸಂಜಯ್​ ದತ್​ ಪಟ್ಟಿದ್ದ ಕಷ್ಟ ಕೂಡ ಅಷ್ಟಿಷ್ಟಲ್ಲ. ಅದಕ್ಕಾಗಿ ಅವರು ವಿದೇಶದಲ್ಲಿ ರಿಹ್ಯಾಬ್​ ಸೆಂಟರ್​ ಸೇರಿಕೊಂಡಿದ್ದರು. ಅಲ್ಲಿಂದ ಮರಳಿದ ಬಳಿಕವೂ ಜನರು ಅವರನ್ನು ‘ಮಾದಕ ವ್ಯಸನಿ’ ಎಂದು ಕರೆಯುವುದು ನಿಲ್ಲಿಸಿರಲಿಲ್ಲ. ಅದು ಅವರಿಗೆ ಬೇಸರ ಮೂಡಿಸಿತ್ತು. ಏನಾದರೂ ಮಾಡಿ ಬದಲಾಗಲೇ ಬೇಕು ಎಂದು ಸಂಜಯ್ ದತ್​ ನಿರ್ಧಾರ ಮಾಡಿದರು. ಬಳಿಕ ಬಾಡಿ ಬಿಲ್ಡಿಂಗ್​ ಕಡೆಗೆ ಅವರು ಗಮನ ಹರಿಸಿದರು. ಕಟ್ಟುಮಸ್ತಾಗಿ ಬಾಡಿ ಬೆಳೆಸಿಕೊಂಡರು. ‘ಮಾದಕ ವ್ಯಸನಿ’ ಎಂಬ ಹಣೆ ಪಟ್ಟಿ ಕಳಚಿಕೊಳ್ಳಲು ಅವರು ಇಷ್ಟೆಲ್ಲ ಕಷ್ಟಪಡಬೇಕಾಯಿತು.

2020ರ ಆಗಸ್ಟ್​ನಲ್ಲಿ ಸಂಜಯ್​ ದತ್​ ಅವರಿಗೆ ಶ್ವಾಸಕೋಶದ ಕ್ಯಾನ್ಸರ್​ ಇರುವುದು ತಿಳಿದುಬಂತು. ವಿಷಯ ಗೊತ್ತಾದಾಗ ಆರಂಭದಲ್ಲಿ ಅವರು ತೀವ್ರ ಆಘಾತಕ್ಕೆ ಒಳಗಾಗಿದ್ದರು. ಆ ಕುರಿತಾಗಿಯೂ ಇತ್ತೀಚೆಗಿನ ಸಂದರ್ಶನದಲ್ಲಿ ಅವರು ಹೇಳಿಕೊಂಡಿದ್ದಾರೆ. ಪರೀಕ್ಷೆ ಮಾಡಿದ ಬಳಿಕ ಇದು ಕ್ಯಾನ್ಸರ್ ಅಲ್ಲ ಎಂದು ವೈದ್ಯರು ಹೇಳಲಿ ಅಂತ ಸಂಜಯ್ ದತ್ ಅಂದುಕೊಳ್ಳುತ್ತಿದ್ದರು. ಆಗಲೇ ವೈದ್ಯರು ಕ್ಯಾನ್ಸರ್ ಇದೆ ಎಂಬುದನ್ನು ದೃಢಪಡಿಸಿದ್ದರು. ‘ನಾನು ಎರಡು-ಮೂರು ಗಂಟೆಗಳ ಕಾಲ ಅಳುತ್ತಿದ್ದೆ. ನನಗೆ ನನ್ನ ಮಕ್ಕಳು ಹಾಗೂ ಹೆಂಡತಿಯ ಬಗ್ಗೆ ಚಿಂತೆ ಕಾಡುತ್ತಿತ್ತು. ನಾನು ವೀಕ್ ಆಗುವುದಿಲ್ಲ ಎಂದೆ. ನಾನು ಅಮೇರಿಕಾದಲ್ಲಿ ಚಿಕಿತ್ಸೆ ಪಡೆಯಲು ನಿರ್ಧರಿಸಿದೆ. ಆದರೆ ಅವರಿಗೆ ವೀಸಾ ಸಿಗಲಿಲ್ಲ (ಆ ಸಂದರ್ಭದಲ್ಲಿ ಕೊವಿಡ್ ಹೆಚ್ಚಿದ್ದ ಕಾರಣ ಅಮೆರಿಕ ತನ್ನ ದೇಶಕ್ಕೆ ಬರುವವರ ಮೇಲೆ ನಿರ್ಬಂಧ ಹೇರಿತ್ತು). ನನಗೆ ಹೃತಿಕ್ ತಂದೆ ರಾಕೇಶ್ ರೋಷನ್ ಅವರು​ ವೈದ್ಯರನ್ನೊಬ್ಬರನ್ನು ರೆಫರ್​ ಮಾಡಿದರು’ ಎಂದಿದ್ದಾರೆ ಸಂಜಯ್ ದತ್.

ಇದನ್ನೂ ಓದಿ:

ಬಾಯ್​ಫ್ರೆಂಡ್​ ಕಳೆದುಕೊಂಡಿದ್ದ ಸಂಜಯ್​ ದತ್​ ಪುತ್ರಿಗೆ ಅಭಿಮಾನಿಯ ಪ್ರಪೋಸ್​; ಒಪ್ಪಿಕೊಂಡ್ರಾ ತ್ರಿಶಾಲಾ?

ಅಬ್ಬಬ್ಬಾ.. ಎಷ್ಟೊಂದು ಭಯಾನಕ ಅಧೀರನ ಲುಕ್; ಇಲ್ಲಿವೆ​‘ಕೆಜಿಎಫ್​ 2’ ನಟ ಸಂಜಯ್ ದತ್​ ಫೋಟೋಗಳು

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!