AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್​ ಖಾನ್​ ವಿರುದ್ಧ ರವೀನಾ ಟಂಡನ್​ ಸೇಡು; ದಶಕಗಳ ಬಳಿಕ ಬಾಯ್ಬಿಟ್ಟ ‘ಕೆಜಿಎಫ್​ 2’ ನಟಿ

‘ಅಂದಾಜ್​ ಅಪ್ನ ಅಪ್ನ’ ಶೂಟಿಂಗ್​ ಸಮಯದಲ್ಲಿ ಒಂದು ಘಟನೆ ನಡೆಯಿತು. ಆ ಬಳಿಕ ರವೀನಾ ಟಂಡನ್​ ಅವರು ಆಮಿರ್​ ಖಾನ್ ವಿರುದ್ಧ ಸೇಡು ತೀರಿಸಿಕೊಳ್ಳಲು ನಿರ್ಧರಿಸಿದ್ದರು.

ಆಮಿರ್​ ಖಾನ್​ ವಿರುದ್ಧ ರವೀನಾ ಟಂಡನ್​ ಸೇಡು; ದಶಕಗಳ ಬಳಿಕ ಬಾಯ್ಬಿಟ್ಟ ‘ಕೆಜಿಎಫ್​ 2’ ನಟಿ
ಆಮಿರ್​ ಖಾನ್​, ರವೀನಾ ಟಂಡನ್​
TV9 Web
| Edited By: |

Updated on:Feb 06, 2022 | 8:20 AM

Share

ಹಲವು ಸ್ಟಾರ್​ ಕಲಾವಿದರ ಜೊತೆಗೆ ನಟಿಸಿದ ರವೀನಾ ಟಂಡನ್ (Raveena Tandon) ಅವರು ಒಂದು ಕಾಲದಲ್ಲಿ ಬಾಲಿವುಡ್​ನ ಬಹುಬೇಡಿಕೆಯ ಹೀರೋಯಿನ್​ ಆಗಿದ್ದರು. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದರು. ಈಗ ಅವರು ‘ಕೆಜಿಎಫ್​: ಚಾಪ್ಟರ್​ 2’ (KGF 2) ಚಿತ್ರದಲ್ಲಿ ಅಭಿನಯಿಸಿದ್ದು, ಆ ಸಿನಿಮಾದ ಬಿಡುಗಡೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ನಡುವೆ ರವೀನಾ ಟಂಡನ್​ ಅವರು ಹಿಂದಿಯ ‘ಸರಿಗಮಪ’ ರಿಯಾಲಿಟಿ ಶೋಗೆ ಜಡ್ಜ್​ ಆಗಿ ಹೋಗಿದ್ದರು. ಆಗ ಅವರು ಹಳೇ ಘಟನೆಯೊಂದನ್ನು ನೆನಪಿಸಿಕೊಂಡಿದ್ದಾರೆ. ರವೀನಾ ಮತ್ತು ಆಮಿರ್​ ಖಾನ್ (Aamir Khan)​ ನಟನೆಯ ‘ಅಂದಾಜ್​ ಅಪ್ನ ಅಪ್ನ’ ಸಿನಿಮಾದ ಹಾಡನ್ನು ಸ್ಪರ್ಧಿಯೊಬ್ಬರು ಈ ಶೋನಲ್ಲಿ ಹಾಡಿದರು. ಆಗ ರವೀನಾ ಟಂಡನ್​ ಅವರು ನೆನಪಿನ ಪುಟ ತೆರೆದರು. ಆ ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿ ಆಮಿರ್​ ಖಾನ್​ ವಿರುದ್ಧ ರವೀನಾ ಟಂಡನ್​ ಸೇಡು ತೀರಿಸಿಕೊಂಡಿದ್ದರು. ಆದರೆ ಅದು ದ್ವೇಷದ ಸೇಡಲ್ಲ. ಎಲ್ಲವೂ ನಡೆದಿದ್ದು ತಮಾಷೆಗಾಗಿ. ಆ ಘಟನೆಯನ್ನು ಈಗ ರವೀನಾ ಟಂಡನ್​ ನೆನಪು ಮಾಡಿಕೊಂಡಿದ್ದಾರೆ.

‘ಅಂದಾಜ್​ ಅಪ್ನ ಅಪ್ನ’ ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿ ಆಮಿರ್​ ಖಾನ್​ ಅವರು ಪ್ರ್ಯಾಂಕ್​ ಮಾಡುತ್ತಿದ್ದರು. ಒಮ್ಮೆ ರವೀನಾಗೂ ಪ್ರ್ಯಾಂಕ್​ ಮಾಡಲಾಗಿತ್ತು. ‘ಕುದರೆ ಗಾಡಿಯ ಮೇಲೆ ನಾವು ಚಿತ್ರೀಕರಣ ಮಾಡುತ್ತಿದ್ದೆವು. ಆಮಿರ್​ ಖಾನ್​ ಅವರಿ ಇಡೀ ತಂಡದ ಜೊತೆ ಸೇರಿಕೊಂಡು ನನ್ನ ಮೇಲೆ ಪ್ರ್ಯಾಂಕ್​ ಮಾಡಲು ಸಿದ್ಧರಾಗಿದ್ದರು. ಬಿಸಿ ಟೀ ಲೋಟ ನನ್ನ ಮೇಲೆ ಬೀಳುತ್ತಿರುವಂತೆ ಅವರು ನಟಿಸಿದರು. ಆ ಪ್ರ್ಯಾಂಕ್​ನಿಂದ ನಾನು ಹೆದರಿದೆ’ ಎಂದು ತಾವು ಪ್ರ್ಯಾಂಕ್​ಗೆ ಒಳಗಾದ ಘಟನೆನ್ನು ರವೀನಾ ಟಂಡನ್​ ಮೆಲುಕು ಹಾಕಿದ್ದಾರೆ.

ಈ ಘಟನೆ ನಡೆದ ಬಳಿಕ ರವೀನಾ ಟಂಡನ್​ ಅವರು ಆಮಿರ್​ ಖಾನ್ ವಿರುದ್ಧ ಸೇಡು ತೀರಿಸಿಕೊಳ್ಳಲು ನಿರ್ಧರಿಸಿದರು. ‘ಎಲ್ಲರೂ ನನ್ನನ್ನು ನೋಡಿ ನಕ್ಕರು. ಅದೇ ರೀತಿ ನಾನು ಕೂಡ ಆಮಿರ್​ ಖಾನ್​ಗೆ ಪ್ರ್ಯಾಂಕ್​ ಮಾಡಿದೆ. ಆಗ ವ್ಯಾನಿಟಿ ವ್ಯಾನ್​ ಇರುತ್ತಿರಲಿಲ್ಲ. ವಾಶ್​ರೂಮ್​ಗಾಗಿ ಆಮಿರ್​ ಖಾನ್​ ಸ್ವಲ್ಪ ದೂರಕ್ಕೆ ತೆರಳಿದ್ದರು. ಆಗ ವಾತಾವರಣ ಸರಿಯಿಲ್ಲ ಎಂಬ ಕಾರಣಕ್ಕೆ ನಿರ್ದೇಶಕರು ಶೂಟಿಂಗ್​ ಪ್ಯಾಕಪ್​ ಮಾಡಿದರು. ಆದರೆ ಅದು ಆಮಿರ್​​ ಖಾನ್​ಗೆ ಗೊತ್ತಿರಲಿಲ್ಲ. ಅವರಿಗೆ ಕಷ್ಟ ಆಗುವಂತಹ ಒಂದು ಡ್ಯಾನ್ಸ್​ ಸ್ಟೆಪ್​ ಅನ್ನು ಪ್ರಾಕ್ಟೀಸ್​ ಮಾಡಲು ಹೇಳಿ ಎಂದು ನೃತ್ಯನಿರ್ದೇಶಕರ ಬಳಿ ಮನವಿ ಮಾಡಿಕೊಂಡೆ. ಅದಕ್ಕೆ ಕೊರಿಯೋಗ್ರಾಫರ್​ ಒಪ್ಪಿದರು. ಅದನ್ನು ನಿಜ ಎಂದು ತಿಳಿದ ಆಮಿರ್​ ಖಾನ್​ ಸತತ 30 ನಿಮಿಷ ನಿಮಿಷ ಡ್ಯಾನ್ಸ್​ ಪ್ರಾಕ್ಟೀಸ್​ ಮಾಡಿದ್ದರು. ಆ ಘಟನೆ ನೆನಪಿಸಿಕೊಂಡಾಗಲೆಲ್ಲ ನನಗೆ ನಗು ಬರುತ್ತದೆ’ ಎಂದು ರವೀನಾ ಟಂಡನ್​ ಹೇಳಿದ್ದಾರೆ.

ಇದನ್ನೂ ಓದಿ:

21ನೇ ವಯಸ್ಸಿನಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ದತ್ತು ಪಡೆದ ರವೀನಾ ಟಂಡನ್​ ಆ ವಿಚಾರ ಮುಚ್ಚಿಟ್ಟಿದ್ದೇಕೆ?

‘ಕೆಜಿಎಫ್​ 2’ ರಿಲೀಸ್​ಗೂ ಮುನ್ನವೇ ಗುಡ್​ ನ್ಯೂಸ್​; ಮತ್ತೆ ಒಂದಾಗ್ತಾರೆ ಸಂಜಯ್​ ದತ್​-ರವೀನಾ ಟಂಡನ್

Published On - 8:11 am, Sun, 6 February 22

Follow Us
ಮೈಸೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ರೋಡ್ ಶೋ
ಮೈಸೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ರೋಡ್ ಶೋ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ