AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​ ಬೆಡಗಿಗೆ ಶೀಘ್ರವೇ ಮದುವೆ; ಬಾಯ್​ಫ್ರೆಂಡ್​ ಜತೆ ಇಟಲಿಯಲ್ಲಿ ವಿವಾಹ?

ಮೌನಿ ರಾಯ್​ ಅವರು ದುಬೈ ಮೂಲದ ಉದ್ಯಮಿ ಸೂರಜ್​ ನಂಬಿಯಾರ್​ ಜತೆ ರಿಲೇಶನ್​ಶಿಪ್​ನಲ್ಲಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಾಗಲಿ ಅಥವಾ ಮಾಧ್ಯಮದ ಎದುರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹೇಳಿಕೊಂಡಿಲ್ಲ.

ಕೆಜಿಎಫ್​ ಬೆಡಗಿಗೆ ಶೀಘ್ರವೇ ಮದುವೆ; ಬಾಯ್​ಫ್ರೆಂಡ್​ ಜತೆ ಇಟಲಿಯಲ್ಲಿ ವಿವಾಹ?
ಯಶ್​ ಜತೆ ಮೌನಿ ರಾಯ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 01, 2021 | 1:48 PM

Share

‘ಕೆಜಿಎಫ್​ ಚಾಪ್ಟರ್​ 1’ ಹಿಂದಿ ವರ್ಷನ್​ನಲ್ಲಿ ‘ಗಲಿ ಗಲಿ..’ ಹಾಡಿಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದರು ಮೌನಿ ರಾಯ್​. ಅವರು ಸಾಕಷ್ಟು ಬಾಲಿವುಡ್​ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. ಅವರು ಸೊಂಟ ಬಳುಕಿಸುವ ಪರಿ ಎಲ್ಲರಿಗೂ ಇಷ್ಟವಾಗುತ್ತದೆ. ಅವರು ಕಾಣಿಸಿಕೊಂಡ ವಿಶೇಷ ಸಾಂಗ್​ ಹಿಟ್​ ಆಗೋಕೆ ಇದೂ ಕೂಡ ಒಂದು ಕಾರಣ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ಮಾಹಿತಿ ಎಂದರೆ ಮೌನಿ 2022ರ ಜನವರಿ ತಿಂಗಳಲ್ಲಿ ಬಾಯ್​ಫ್ರೆಂಡ್​ ಜತೆ ಮದುವೆ ಆಗಲಿದ್ದಾರಂತೆ. ಹೀಗೊಂದು ವಿಚಾರ ಬಾಲಿವುಡ್​ ಅಂಗಳದಲ್ಲಿ ಜೋರಾಗಿದೆ.

ಮೌನಿ ರಾಯ್​ ಅವರು ದುಬೈ ಮೂಲದ ಉದ್ಯಮಿ ಸೂರಜ್​ ನಂಬಿಯಾರ್​ ಜತೆ ರಿಲೇಶನ್​ಶಿಪ್​ನಲ್ಲಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಾಗಲಿ ಅಥವಾ ಮಾಧ್ಯಮದ ಎದುರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹೇಳಿಕೊಂಡಿಲ್ಲ. ಆದರೆ, ಅವರ ಪ್ರೇಮ​ ವಿಚಾರ ಸದಾ ಸುದ್ದಿಯಲ್ಲಿರುತ್ತದೆ. ಜನವರಿಯಲ್ಲಿ ಮೌನಿ ಅವರು ವಿವಾಹವಾಗಲಿದ್ದಾರೆ ಎನ್ನುವ ಸುದ್ದಿ ಜೋರಾಗಿದೆ. ಈ ಬಗ್ಗೆ ಮೌನಿ ರಾಯ್​ ಸೋದರ ಸಂಬಂಧಿ​ ವಿದ್ಯುತ್​ ರಾಯ್​ಸರ್ಕಾರ್​ ಸ್ಥಳೀಯ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಅನೇಕ ಸೆಲೆಬ್ರಿಟಿಗಳು ತಮ್ಮ ಮದುವೆಯನ್ನು ವಿದೇಶಗಳಲ್ಲಿ ಮಾಡಿಕೊಂಡಿದ್ದಾರೆ. ಅನುಷ್ಕಾ ಶರ್ಮಾ-ವಿರಾಟ್​ ಕೊಹ್ಲಿ ಇದೇ ರೀತಿ ಮಾಡಿದ್ದರು. ಈಗ ಮೌನಿ ರಾಯ್​ ಕೂಡ ಇದೇ ಆಲೋಚನೆಯಲ್ಲಿದ್ದಾರೆ. ದುಬೈ ಅಥವಾ ಇಟಲಿಯಲ್ಲಿ ಮದುವೆ ಆಗುವ ಆಲೋಚನೆ ನಟಿಯದ್ದು. ನಂತರ ಮೌನಿ ರಾಯ್​ ಊರಾದ ಪಶ್ಚಿಮ ಬಂಗಾಳದ ಕೂಚ್​ ಬೆಹರ್​ನಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲು ಚಿಂತಿಸಲಾಗಿದೆ ಎನ್ನಲಾಗುತ್ತಿದೆ.

ಸೂರಜ್​ ಜತೆ ಮೌನಿ ಡೇಟಿಂಗ್​ ನಡೆಸೋಕೆ ಆರಂಭಿಸಿ ಎರಡು ವರ್ಷ ಕಳೆದಿದೆ. 2019ರಲ್ಲಿ ಮೌನಿ ಮತ್ತು ಸೂರಜ್​ ಮೊಟ್ಟ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಂಡಿದ್ದರು. 2020ರಲ್ಲಿ ಮೌನಿ ದುಬೈಗೆ ತೆರಳಿದ್ದರು. ಈ ವೇಳೆ ಕೆಲ ಸಮಯ ಅಲ್ಲಿಯೇ ಉಳಿದುಕೊಂಡಿದ್ದರು.

‘ಬ್ರಹ್ಮಾಸ್ತ್ರ’ ಸೇರಿ ನಾಲ್ಕು ಸಿನಿಮಾ ಕೆಲಸಗಳಲ್ಲಿ ಮೌನಿ ಬ್ಯುಸಿ ಆಗಿದ್ದಾರೆ. ಈ ಪೈಕಿ ಒಂದು ಸಿನಿಮಾದಲ್ಲಿ ವಿಶೇಷ ಹಾಡಿಗೆ ಅವರು ಸೊಂಟ ಬಳುಕಿಸಲಿದ್ದಾರೆ. ಈ ಸಿನಿಮಾ ಕೆಲಸಗಳನ್ನು ಅವರು ಜನವರಿ ಒಳಗೆ ಪೂರ್ಣಗೊಳಿಸುವ ಆಲೋಚನೆಯಲ್ಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Yash: ಬಿಟೌನ್​ನಲ್ಲಿ ರಾಕಿಂಗ್ ಸ್ಟಾರ್ ಹವಾ; ಯಶ್ ಜೊತೆ ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು

ಸಲ್ಮಾನ್ ಖಾನ್ ಜತೆ ನೃತ್ಯ ಮಾಡುತ್ತೀರಾ ಎಂದು ಕೇಳಿದ್ದಕ್ಕೆ ಇಲ್ಲವೆಂದ ನಟಿ ಮೌನಿ ರಾಯ್​; ವಿಡಿಯೋ ಭರ್ಜರಿ ವೈರಲ್​

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ