AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​ ಬೆಡಗಿಗೆ ಶೀಘ್ರವೇ ಮದುವೆ; ಬಾಯ್​ಫ್ರೆಂಡ್​ ಜತೆ ಇಟಲಿಯಲ್ಲಿ ವಿವಾಹ?

ಮೌನಿ ರಾಯ್​ ಅವರು ದುಬೈ ಮೂಲದ ಉದ್ಯಮಿ ಸೂರಜ್​ ನಂಬಿಯಾರ್​ ಜತೆ ರಿಲೇಶನ್​ಶಿಪ್​ನಲ್ಲಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಾಗಲಿ ಅಥವಾ ಮಾಧ್ಯಮದ ಎದುರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹೇಳಿಕೊಂಡಿಲ್ಲ.

ಕೆಜಿಎಫ್​ ಬೆಡಗಿಗೆ ಶೀಘ್ರವೇ ಮದುವೆ; ಬಾಯ್​ಫ್ರೆಂಡ್​ ಜತೆ ಇಟಲಿಯಲ್ಲಿ ವಿವಾಹ?
ಯಶ್​ ಜತೆ ಮೌನಿ ರಾಯ್
TV9 Web
| Edited By: |

Updated on: Oct 01, 2021 | 1:48 PM

Share

‘ಕೆಜಿಎಫ್​ ಚಾಪ್ಟರ್​ 1’ ಹಿಂದಿ ವರ್ಷನ್​ನಲ್ಲಿ ‘ಗಲಿ ಗಲಿ..’ ಹಾಡಿಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದರು ಮೌನಿ ರಾಯ್​. ಅವರು ಸಾಕಷ್ಟು ಬಾಲಿವುಡ್​ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. ಅವರು ಸೊಂಟ ಬಳುಕಿಸುವ ಪರಿ ಎಲ್ಲರಿಗೂ ಇಷ್ಟವಾಗುತ್ತದೆ. ಅವರು ಕಾಣಿಸಿಕೊಂಡ ವಿಶೇಷ ಸಾಂಗ್​ ಹಿಟ್​ ಆಗೋಕೆ ಇದೂ ಕೂಡ ಒಂದು ಕಾರಣ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ಮಾಹಿತಿ ಎಂದರೆ ಮೌನಿ 2022ರ ಜನವರಿ ತಿಂಗಳಲ್ಲಿ ಬಾಯ್​ಫ್ರೆಂಡ್​ ಜತೆ ಮದುವೆ ಆಗಲಿದ್ದಾರಂತೆ. ಹೀಗೊಂದು ವಿಚಾರ ಬಾಲಿವುಡ್​ ಅಂಗಳದಲ್ಲಿ ಜೋರಾಗಿದೆ.

ಮೌನಿ ರಾಯ್​ ಅವರು ದುಬೈ ಮೂಲದ ಉದ್ಯಮಿ ಸೂರಜ್​ ನಂಬಿಯಾರ್​ ಜತೆ ರಿಲೇಶನ್​ಶಿಪ್​ನಲ್ಲಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಾಗಲಿ ಅಥವಾ ಮಾಧ್ಯಮದ ಎದುರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹೇಳಿಕೊಂಡಿಲ್ಲ. ಆದರೆ, ಅವರ ಪ್ರೇಮ​ ವಿಚಾರ ಸದಾ ಸುದ್ದಿಯಲ್ಲಿರುತ್ತದೆ. ಜನವರಿಯಲ್ಲಿ ಮೌನಿ ಅವರು ವಿವಾಹವಾಗಲಿದ್ದಾರೆ ಎನ್ನುವ ಸುದ್ದಿ ಜೋರಾಗಿದೆ. ಈ ಬಗ್ಗೆ ಮೌನಿ ರಾಯ್​ ಸೋದರ ಸಂಬಂಧಿ​ ವಿದ್ಯುತ್​ ರಾಯ್​ಸರ್ಕಾರ್​ ಸ್ಥಳೀಯ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಅನೇಕ ಸೆಲೆಬ್ರಿಟಿಗಳು ತಮ್ಮ ಮದುವೆಯನ್ನು ವಿದೇಶಗಳಲ್ಲಿ ಮಾಡಿಕೊಂಡಿದ್ದಾರೆ. ಅನುಷ್ಕಾ ಶರ್ಮಾ-ವಿರಾಟ್​ ಕೊಹ್ಲಿ ಇದೇ ರೀತಿ ಮಾಡಿದ್ದರು. ಈಗ ಮೌನಿ ರಾಯ್​ ಕೂಡ ಇದೇ ಆಲೋಚನೆಯಲ್ಲಿದ್ದಾರೆ. ದುಬೈ ಅಥವಾ ಇಟಲಿಯಲ್ಲಿ ಮದುವೆ ಆಗುವ ಆಲೋಚನೆ ನಟಿಯದ್ದು. ನಂತರ ಮೌನಿ ರಾಯ್​ ಊರಾದ ಪಶ್ಚಿಮ ಬಂಗಾಳದ ಕೂಚ್​ ಬೆಹರ್​ನಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲು ಚಿಂತಿಸಲಾಗಿದೆ ಎನ್ನಲಾಗುತ್ತಿದೆ.

ಸೂರಜ್​ ಜತೆ ಮೌನಿ ಡೇಟಿಂಗ್​ ನಡೆಸೋಕೆ ಆರಂಭಿಸಿ ಎರಡು ವರ್ಷ ಕಳೆದಿದೆ. 2019ರಲ್ಲಿ ಮೌನಿ ಮತ್ತು ಸೂರಜ್​ ಮೊಟ್ಟ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಂಡಿದ್ದರು. 2020ರಲ್ಲಿ ಮೌನಿ ದುಬೈಗೆ ತೆರಳಿದ್ದರು. ಈ ವೇಳೆ ಕೆಲ ಸಮಯ ಅಲ್ಲಿಯೇ ಉಳಿದುಕೊಂಡಿದ್ದರು.

‘ಬ್ರಹ್ಮಾಸ್ತ್ರ’ ಸೇರಿ ನಾಲ್ಕು ಸಿನಿಮಾ ಕೆಲಸಗಳಲ್ಲಿ ಮೌನಿ ಬ್ಯುಸಿ ಆಗಿದ್ದಾರೆ. ಈ ಪೈಕಿ ಒಂದು ಸಿನಿಮಾದಲ್ಲಿ ವಿಶೇಷ ಹಾಡಿಗೆ ಅವರು ಸೊಂಟ ಬಳುಕಿಸಲಿದ್ದಾರೆ. ಈ ಸಿನಿಮಾ ಕೆಲಸಗಳನ್ನು ಅವರು ಜನವರಿ ಒಳಗೆ ಪೂರ್ಣಗೊಳಿಸುವ ಆಲೋಚನೆಯಲ್ಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Yash: ಬಿಟೌನ್​ನಲ್ಲಿ ರಾಕಿಂಗ್ ಸ್ಟಾರ್ ಹವಾ; ಯಶ್ ಜೊತೆ ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು

ಸಲ್ಮಾನ್ ಖಾನ್ ಜತೆ ನೃತ್ಯ ಮಾಡುತ್ತೀರಾ ಎಂದು ಕೇಳಿದ್ದಕ್ಕೆ ಇಲ್ಲವೆಂದ ನಟಿ ಮೌನಿ ರಾಯ್​; ವಿಡಿಯೋ ಭರ್ಜರಿ ವೈರಲ್​

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್