AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌತ್​ ಚಿತ್ರಗಳ ಎದುರು ಬಾಲಿವುಡ್​ ಎಡವಿದ್ದು ಎಲ್ಲಿ? ಉತ್ತರ ಹುಡುಕಿದ ‘ಕೆಜಿಎಫ್​ 2’ ಅಧೀರ ಸಂಜಯ್​ ದತ್​

KGF Chapter 2 | Sanjay Dutt: ದಕ್ಷಿಣ ಭಾರತದ ಚಿತ್ರರಂಗ ಹಾಗೂ ಬಾಲಿವುಡ್​ ನಡುವೆ ಏನು ವ್ಯತ್ಯಾಸ ಇದೆ ಎಂಬುದನ್ನು ಸಂಜಯ್​ ದತ್​ ವಿವರಿಸಿದ್ದಾರೆ. ಹಿಂದಿ ಚಿತ್ರಗಳ ಸೋಲಿಗೆ ಅವರು ಕಾರಣ ಹುಡುಕಿದ್ದಾರೆ.

ಸೌತ್​ ಚಿತ್ರಗಳ ಎದುರು ಬಾಲಿವುಡ್​ ಎಡವಿದ್ದು ಎಲ್ಲಿ? ಉತ್ತರ ಹುಡುಕಿದ ‘ಕೆಜಿಎಫ್​ 2’ ಅಧೀರ ಸಂಜಯ್​ ದತ್​
ಸಂಜಯ್ ದತ್
TV9 Web
| Updated By: ಮದನ್​ ಕುಮಾರ್​|

Updated on: Apr 19, 2022 | 9:09 AM

Share

ದಕ್ಷಿಣ ಭಾರತದ ಸಿನಿಮಾಗಳ ಅಬ್ಬರ ಕಂಡು ಬಾಲಿವುಡ್​ (Bollywood) ಅಕ್ಷರಶಃ ಬೆರಗಾಗಿದೆ. ಕನ್ನಡ, ತಮಿಳು, ತೆಲುಗು ಸಿನಿಮಾಗಳು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗಿ, ನೂರಾರು ಕೋಟಿ ರೂಪಾಯಿ ಕಮಾಯಿ ಮಾಡುತ್ತಿವೆ. ಇತ್ತೀಚೆಗೆ ಬಿಡುಗಡೆ ಆದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ನಿರೀಕ್ಷೆಗೂ ಮೀರಿ ಕಲೆಕ್ಷನ್​ ಮಾಡುತ್ತಿದೆ. ನಟ ಯಶ್​ ಮತ್ತು ನಿರ್ದೇಶಕ ಪ್ರಶಾಂತ್​ ನೀಲ್​ ಅವರನ್ನು ಪರಭಾಷೆ ಮಂದಿ ಕೂಡ ಶ್ಲಾಘಿಸುತ್ತಿದ್ದಾರೆ. ‘ಕೆಜಿಎಫ್​ 2’, ‘ಪುಷ್ಪ’, ‘ಆರ್​ಆರ್​ಆರ್​’ ಮುಂತಾದ ಸಿನಿಮಾಗಳ ಆರ್ಭಟದ ಎದುರು ಹಿಂದಿ ಚಿತ್ರರಂಗ ಮಂಕಾಗಿದೆ. ಇದನ್ನು ಬೇರೆ ಬೇರೆ ನಟರು ಬೇರೆ ಬೇರೆ ರೀತಿಯಲ್ಲಿ ಅರ್ಥೈಸುತ್ತಿದ್ದಾರೆ. ಬಾಲಿವುಡ್​ ಸ್ಟಾರ್​ ಕಲಾವಿದ ಸಂಜಯ್​ ದತ್​ (Sanjay Dutt) ಅವರು ಕೂಡ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸೌತ್​ ಸಿನಿಮಾಗಳ ಎದುರು ಬಾಲಿವುಡ್​ ಎಡವಲು ಕಾರಣ ಏನು ಎಂಬುದನ್ನು ಅವರು ವಿಶ್ಲೇಷಿಸಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾದಲ್ಲಿ ಮಾಡಿರುವ ಅಧೀರ ಎಂಬ ಪಾತ್ರದಿಂದ ಸಂಜಯ್​ ದತ್​ ಅವರಿಗೆ ಭರ್ಜರಿ ಗೆಲುವು ಸಿಕ್ಕಿದೆ. ಅನೇಕ ಮಾಧ್ಯಮಗಳಿಗೆ ಅವರು ಸಂದರ್ಶನ ನೀಡುತ್ತಿದ್ದಾರೆ.

ದಕ್ಷಿಣ ಭಾರತದ ಚಿತ್ರರಂಗ ಮತ್ತು ಬಾಲಿವುಡ್​ ಇಂಡಸ್ಟ್ರೀ ನಡುವೆ ಏನು ವ್ಯತ್ಯಾಸ ಇದೆ ಎಂಬುದನ್ನು ಸಂಜಯ್​ ದತ್​ ವಿವರಿಸಿದ್ದಾರೆ. ಹಿಂದಿ ಸಿನಿಮಾಗಳ ನಿರ್ಮಾಣದ ಪದ್ದತಿಯಲ್ಲೇ ಸಮಸ್ಯೆ ಇದೆ ಎಂದು ಅವರು ಹೇಳಿದ್ದಾರೆ. ‘ಟೈಮ್ಸ್​ ಆಫ್​ ಇಂಡಿಯಾ’ಗೆ ನೀಡಿದ ಸಂದರ್ಶನದಲ್ಲಿ ಅವರು ಈ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

‘ನಿಜಜೀವನಕ್ಕಿಂತಲೂ ದೊಡ್ಡದಾದ ಹೀರೋಯಿಸಂ ಅನ್ನು ಬಾಲಿವುಡ್​ ಮರೆತಿದೆ ಎಂದು ನನಗೆ ಅನಿಸುತ್ತಿದೆ. ದಕ್ಷಿಣ ಭಾರತದ ಸಿನಿಮಾರಂಗ ಅದನ್ನು ಮರೆತಿಲ್ಲ. ಹಾಗಂತ ರೊಮ್ಯಾಂಟಿಕ್​ ಕಾಮಿಡಿ ಶೈಲಿಯ ಸಿನಿಮಾಗಳು ಕೆಟ್ಟದ್ದು ಅಂತ ನಾನು ಹೇಳುತ್ತಿಲ್ಲ. ಉತ್ತರ ಪ್ರದೇಶ, ಬಿಹಾರ, ಝಾರ್ಖಂಡ್​, ರಾಜಸ್ತಾನ​ ಮುಂತಾದ ಕಡೆ ಇರುವ ದೊಡ್ಡ ವರ್ಗದ ಪ್ರೇಕ್ಷಕರನ್ನು ನಾವು ಯಾಕೆ ಮರೆತೆವು? ಹಿಂದಿ ಚಿತ್ರರಂಗದಲ್ಲಿ ಹಳೇ ಟ್ರೆಂಡ್​ ಮರಳಲಿದೆ ಎಂಬ ಭರವಸೆ ನನಗಿದೆ. ಮೊದಲೆಲ್ಲ ಪ್ರತ್ಯೇಕ ನಿರ್ಮಾಪಕರು ಇರುತ್ತಿದ್ದರು. ನಂತರ ಸಿನಿಮಾ ನಿರ್ಮಾಣದಲ್ಲಿ ಕಾರ್ಪೊರೇಟ್​ ಪದ್ದತಿ ಬಂತು. ಹಾಗೆ ಆಗಿದ್ದು ಒಳ್ಳೆಯದೇ. ಆದರೆ ಕಾರ್ಪೊರೇಟ್​ ಪದ್ದತಿ ಎಂಬುದು ನಮ್ಮ ಸಿನಿಮಾಗಳ ಅಭಿರುಚಿಯಲ್ಲಿ ಮಧ್ಯಪ್ರವೇಶ ಮಾಡಬಾರದು’ ಎಂದು ಸಂಜಯ್​ ದತ್​ ಹೇಳಿದ್ದಾರೆ.

‘ಉದಾಹರಣೆಗೆ ಹೇಳುವುದಾದರೆ.. ತಮ್ಮ ಮೇಲೆ ನಂಬಿಕೆ ಇರುವ ನಿರ್ಮಾಪಕರು ರಾಜಮೌಳಿ ಆಯ್ಕೆ ಮಾಡಿಕೊಳ್ಳುತ್ತಾರೆ. ಈ ಮೊದಲು ನಮ್ಮಲ್ಲೂ ಕೂಡ ಅಂಥ ನಿರ್ಮಾಪಕರು ಇದ್ದರು. ಯಶ್​ ಚೋಪ್ರಾ, ಗುಲ್ಷನ್​ ರೈ, ಸುಭಾಷ್​ ಘಾಯ್​, ಯಶ್​ ಜೋಹರ್​ ಮುಂತಾದವರು ನಿರ್ಮಿಸಿದ ಸಿನಿಮಾಗಳನ್ನು ಗಮನಿಸಬಹುದು. ದಕ್ಷಿಣದವರು ಪೇಪರ್​ನಲ್ಲಿ ಸ್ಕ್ರಿಪ್ಟ್​ ನೋಡುತ್ತಾರೆ, ನಾವು ಲಾಭದ ಲೆಕ್ಕಾಚಾರ ನೋಡುತ್ತೇವೆ’ ಎಂದು ಸಂಜಯ್​ ದತ್​ ಹೇಳಿದ್ದಾರೆ.

ಇದನ್ನೂ ಓದಿ:

ಡ್ರಗ್ಸ್​ ಮತ್ತು ಹುಡುಗಿ ವಿಷಯದಲ್ಲಿ ಸಂಜಯ್​ ದತ್​ ತಿಳಿದುಕೊಂಡಿದ್ದೇ ಬೇರೆ: ಎಲ್ಲವನ್ನೂ ಬಾಯ್ಬಿಟ್ಟ ಅಧೀರ

ಶೂಟಿಂಗ್​ ಸೆಟ್​ನಲ್ಲಿ ಊಟ ಮಾಡಿ ಬೈಯಿಸಿಕೊಂಡಿದ್ದ ಸಂಜಯ್​ ದತ್​; ‘ಕೆಜಿಎಫ್​’ ಅಧೀರನ ಕಷ್ಟದ ಹಾದಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ