AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ರಿಲೀಸ್​ಗೂ ಮುನ್ನವೇ ಗುಡ್​ ನ್ಯೂಸ್​; ಮತ್ತೆ ಒಂದಾಗ್ತಾರೆ ಸಂಜಯ್​ ದತ್​-ರವೀನಾ ಟಂಡನ್

Sanjay Dutt | Raveena Tandon: ರವೀನಾ ಟಂಡನ್​ ಮತ್ತು ಸಂಜಯ್​ ದತ್​ ಅವರು ಒಪ್ಪಂದಕ್ಕೆ ಸಹಿ ಹಾಕುವುದು ಬಾಕಿ ಇದೆ. ಅಷ್ಟರಲ್ಲಿ ಕಥೆಯ ಫೈನಲ್​ ಡ್ರಾಫ್ಟ್​ ಸಿದ್ಧವಾಗಬೇಕಿದೆ.

‘ಕೆಜಿಎಫ್​ 2’ ರಿಲೀಸ್​ಗೂ ಮುನ್ನವೇ ಗುಡ್​ ನ್ಯೂಸ್​; ಮತ್ತೆ ಒಂದಾಗ್ತಾರೆ ಸಂಜಯ್​ ದತ್​-ರವೀನಾ ಟಂಡನ್
ರವೀನಾ ಟಂಡನ್, ಸಂಜಯ್ ದತ್
TV9 Web
| Edited By: |

Updated on: Jan 19, 2022 | 12:13 PM

Share

1990ರ ದಶಕದಲ್ಲಿ ನಟಿ ರವೀನಾ ಟಂಡನ್​ (Raveena Tandon) ಅವರು ಭಾರಿ ಜನಪ್ರಿಯತೆ ಪಡೆದುಕೊಂಡಿದ್ದರು. ಬಹುಬೇಡಿಕೆಯ ನಟಿಯಾಗಿ ಅವರು ಗುರುತಿಸಿಕೊಂಡಿದ್ದರು. ಅದೇ ರೀತಿ ಸಂಜಯ್​ ದತ್​ ಕೂಡ ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಮಾಡುತ್ತಿದ್ದರು. ಈಗ ಇವರಿಬ್ಬರು ನಟಿಸಿರುವ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಕೊವಿಡ್​ ಕಾರಣದಿಂದ ಈ ಚಿತ್ರದ ರಿಲೀಸ್​ ತಡವಾಗಿದೆ. ಈ ಬಾಲಿವುಡ್​ ಕಲಾವಿದರ ಎಂಟ್ರಿಯಿಂದಾಗಿ ‘ಕೆಜಿಎಫ್​ 2’ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಿದೆ. ರವೀನಾ ಟಂಡನ್​ ನಿಭಾಯಿಸಿರುವ ರಮಿಕಾ ಸೇನ್​ ಪಾತ್ರ ಹಾಗೂ ಸಂಜಯ್​ ದತ್​ (Sanjay Dutt) ಅಭಿನಯಿಸಿರುವ ಅಧೀರ ಪಾತ್ರದಿಂದಾಗಿ ಬೆಟ್ಟದಷ್ಟು ಹೈಪ್​ ಸೃಷ್ಟಿ ಆಗಿದೆ. ವಿಶೇಷ ಏನೆಂದರೆ, ಈ ಸಿನಿಮಾ ರಿಲೀಸ್​ ಆಗುವುದಕ್ಕೂ ಮುನ್ನವೇ ಇನ್ನೊಂದು ಗುಡ್​ ನ್ಯೂಸ್​ ಕೇಳಿಬಂದಿದೆ. ಸಂಜಯ್​ ದತ್​ ಮತ್ತು ರವೀನಾ ಟಂಡನ್​ ಅವರು ಇನ್ನೊಂದು ಸಿನಿಮಾದಲ್ಲಿ ಜೊತೆಯಾಗಿ ನಟಿಸುತ್ತಾರೆ ಎಂಬ ಮಾಹಿತಿ ಹೊರಬಿದ್ದಿದೆ. ಆ ಚಿತ್ರದಲ್ಲಿ ಕಾಮಿಡಿ ಡ್ರಾಮಾ ಕಥೆ ಇರಲಿದೆ.

‘ಮಿಡ್​ ಡೇ’ ಪ್ರಕಟಿಸಿರುವ ವರದಿ ಪ್ರಕಾರ ಸಂಜಯ್​ ದತ್​ ಮತ್ತು ರವೀನಾ ಟಂಡನ್​ ನಟಿಸಲಿರುವ ಈ ಸಿನಿಮಾಗೆ ಹೊಸ ನಿರ್ದೇಶಕರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಖ್ಯಾತ ನಿರ್ಮಾಣ ಸಂಸ್ಥೆಯೊಂದು ಬಂಡವಾಳ ಹೂಡಲಿದೆ. ಸಂಜಯ್​ ದತ್​ ಮತ್ತು ರವೀನಾ ಟಂಡನ್ ಜೊತೆಗೆ ನಿರ್ಮಾಪಕರು ಈಗಾಗಲೇ ಮಾತುಕತೆ ನಡೆದಿದೆ. ಇಬ್ಬರಿಂದಲೂ ಗ್ರೀನ್​ ಸಿಗ್ನಲ್​ ಸಿಕ್ಕಿದೆ ಎನ್ನಲಾಗಿದೆ.

ರವೀನಾ ಟಂಡನ್​ ಮತ್ತು ಸಂಜಯ್​ ದತ್​ ಅವರು ಒಪ್ಪಂದಕ್ಕೆ ಸಹಿ ಹಾಕುವುದು ಬಾಕಿ ಇದೆ. ಅಷ್ಟರಲ್ಲಿ ಕಥೆಯ ಫೈನಲ್​ ಡ್ರಾಫ್ಟ್​ ಸಿದ್ಧವಾಗಬೇಕಿದೆ. ಫೆಬ್ರವರಿ ವೇಳೆಗೆ ಈ ಸಿನಿಮಾ ಅಧಿಕೃತವಾಗಿ ಘೋಷಣೆ ಆಗುವ ನಿರೀಕ್ಷೆ ಇದೆ. ಈ ಹಿಂದೆ ಹಲವು ಸಿನಿಮಾಗಳಲ್ಲಿ ರವೀನಾ ಟಂಡನ್​ ಮತ್ತು ಸಂಜಯ್​ ದತ್​ ಜತೆಯಾಗಿ ನಟಿಸಿದ್ದರು. ಈ ಜೋಡಿ ತೆರೆಹಂಚಿಕೊಂಡಿದ್ದ ‘ಕ್ಷತ್ರಿಯಾ’ (1993), ‘ಆತಿಶ್​’ (1994) ಸಿನಿಮಾಗಳು ಹಿಟ್​ ಆಗಿದ್ದವು. 1996ರಲ್ಲಿ ತೆರೆಕಂಡ ‘ವಿಜೇತ’ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಸೋಲುಂಡಿತು.

ರವೀನಾ ಟಂಡನ್​ ಅವರು ಕನ್ನಡ ಸಿನಿಪ್ರಿಯರಿಗೆ ಪರಿಚಯಗೊಂಡಿದ್ದು ‘ಉಪೇಂದ್ರ’ ಸಿನಿಮಾ ಮೂಲಕ. 1999ರಲ್ಲಿ ಬಿಡುಗಡೆಯಾದ ಆ ಚಿತ್ರ ಸೂಪರ್​ ಹಿಟ್​ ಆಗಿತ್ತು. ಬಹುವರ್ಷಗಳ ಬಳಿಕ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮೂಲಕ ಮತ್ತೆ ಕನ್ನಡದ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಸಂಜಯ್​ ದತ್​ ಅವರು ‘ಕೆಜಿಎಫ್​ 2’ ಮೂಲಕ ಇದೇ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ.

ಇದನ್ನೂ ಓದಿ:

‘ಕೆಜಿಎಫ್​ 2’ ರಿಲೀಸ್​ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಂಜಯ್​ ದತ್​

‘ಈ ಪರಿಸ್ಥಿತಿ ಬರಲಿದೆ ಎಂಬುದನ್ನು ಮೊದಲೇ ನಿರೀಕ್ಷಿಸಿದ್ದೆವು; ‘ಕೆಜಿಎಫ್​ 2’ ರಿಲೀಸ್​ ಬಗ್ಗೆ ಯಶ್ ಮಾತು

Follow Us
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!