AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಜಿ ಅಲಿ ದರ್ಗಾ ನವೀಕರಣಕ್ಕೆ 1.21 ಕೋಟಿ ರೂಪಾಯಿ ದೇಣಿಗೆ ನೀಡಿದ ಅಕ್ಷಯ್​ ಕುಮಾರ್​

ಆಗಸ್ಟ್​ 9ರಂದು ಅಕ್ಷಯ್​ ಕುಮಾರ್​ ಅಭಿನಯದ ‘ಖೇಲ್​ ಖೇಲ್​ ಮೇ’ ಚಿತ್ರ ತೆರೆಕಾಣಲಿದೆ. ಈ ಹಿನ್ನೆಲೆಯಲ್ಲಿ ಅವರು ಮುಂಬೈನ ಹಾಜಿ ಅಲಿ ದರ್ಗಾಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ದರ್ಗಾದ ನವೀಕರಣ ಕಾರ್ಯ ನಡೆಯುತ್ತಿದೆ. ಹಾಗಾಗಿ ಅಕ್ಷಯ್​ ಕುಮಾರ್​ ಅವರು 1.21 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಹಾಜಿ ಅಲಿ ದರ್ಗಾ ನವೀಕರಣಕ್ಕೆ 1.21 ಕೋಟಿ ರೂಪಾಯಿ ದೇಣಿಗೆ ನೀಡಿದ ಅಕ್ಷಯ್​ ಕುಮಾರ್​
ಹಾಜಿ ಅಲಿ ದರ್ಗಾದಲ್ಲಿ ಅಕ್ಷಯ್​ ಕುಮಾರ್​ ಪ್ರಾರ್ಥನೆ
ಮದನ್​ ಕುಮಾರ್​
|

Updated on: Aug 08, 2024 | 7:39 PM

Share

ನಟ ಅಕ್ಷಯ್​ ಕುಮಾರ್​ ಅವರು ಇಂದು (ಆಗಸ್ಟ್​ 8) ಮುಂಬೈನ ಹಾಜಿ ಅಲಿ ದರ್ಗಾಗೆ ಭೇಟಿ ನೀಡಿದ್ದಾರೆ. ಈ ವಿಚಾರ ಸಖತ್​ ಸುದ್ದಿ ಆಗಿದೆ. ಯಾಕೆಂದರೆ, ಅವರು ಈ ದುರ್ಗಾ ನವೀಕರಣಕ್ಕೆ ಬರೋಬ್ಬರಿ 1.21 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಮೊದಲಿನಿಂದಲೂ ಕೂಡ ಅಕ್ಷಯ್​ ಕುಮಾರ್​ ಅವರು ಸಮಾಜಮುಖಿ ಕಾರ್ಯಗಳಿಗೆ ತಮ್ಮ ಕೈಲಾದ ಸಹಾಯವನ್ನು ಮಾಡುತ್ತಾ ಬಂದಿದ್ದಾರೆ. ಸಿನಿಮಾಗಳು ಸತತವಾಗಿ ಸೋತಿದ್ದರೂ ಕೂಡ ಅವರ ಮನೋಭಾವದಲ್ಲಿ ಬದಲಾವಣೆ ಆಗಿಲ್ಲ. ಹಾಜಿ ಅಲಿ ದರ್ಗಾಗೆ ಕೋಟ್ಯಂತರ ರೂಪಾಯಿ ನೀಡಿದ್ದಕ್ಕೆ ಅನೇಕರು ಭೇಷ್​ ಎಂದಿದ್ದಾರೆ.

ಅಕ್ಷಯ್​ ಕುಮಾರ್​ ಅವರು ನೀಡಿರುವ 1.21 ಕೋಟಿ ರೂಪಾಯಿ ಹಣದ ಸಹಾಯದಿಂದ ಹಾಲಿ ಅರ್ಲಿ ದರ್ಗಾದ ನವೀಕರಣ ಮಾಡಲಾಗುವುದು. ಇಂದು (ಆ.8) ಅಕ್ಷಯ್​ ಕುಮಾರ್​ ಅವರು ತಮ್ಮ ಬ್ಯುಸಿ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ದರ್ಗಾಗೆ ಭೇಟಿ ನೀಡಿದ್ದಾರೆ. ಅಲ್ಲಿ ಅವರು ಪ್ರಾರ್ಥನೆ ಸಲ್ಲಿಸಿದ್ದಾರೆ. ಸ್ವರ್ಗದಲ್ಲಿರುವ ತಮ್ಮ ಪಾಲಕರ ಸಲುವಾಗಿ ಅವರು ದರ್ಗಾದಲ್ಲಿ ಪ್ರಾರ್ಥನೆ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಟಾಕ್ಸಿಕ್​’ ಬಿಟ್ಟುಕೊಡುವ ದಿನಾಂಕದಲ್ಲಿ ರಿಲೀಸ್​ ಆಗತ್ತಾ ಅಕ್ಷಯ್​ ಕುಮಾರ್​ ಸಿನಿಮಾ?

ಸಿನಿಮಾ ವಿಚಾರಕ್ಕೆ ಬರುವುದಾದರೆ, ಅಕ್ಷಯ್​ ಕುಮಾರ್​ ನಟನೆಯ ‘ಖೇಲ್​ ಖೇಲ್​ ಮೇ’ ಸಿನಿಮಾ ಆಗಸ್ಟ್​ 9ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾಗೆ ಮುದಾಸರ್​ ಅಜೀಜ್​ ನಿರ್ದೇಶನ ಮಾಡಿದ್ದಾರೆ. ಅಕ್ಷಯ್​ ಕುಮಾರ್​ ಜೊತೆ ಫರ್ದೀನ್​ ಖಾನ್​, ವಾಣಿ ಕಪೂರ್​, ತಾಪ್ಸಿ ಪನ್ನು, ಪ್ರಗ್ಯಾ ಜೈಸ್ವಾಲ್​ ಮುಂತಾದವರು ನಟಿಸಿದ್ದಾರೆ. ಈ ಚಿತ್ರದ ಜೊತೆ ಶ್ರದ್ಧಾ ಕಪೂರ್​ ನಟನೆಯ ‘ಸ್ತ್ರೀ 2’, ಜಾನ್​ ಅಬ್ರಾಹಂ ನಟನೆಯ ‘ವೇದಾ’ ಸಿನಿಮಾ ಕೂಡ ಪೈಪೋಟಿಗೆ ಇಳಿದಿವೆ. ಹಾಗಾಗಿ ಸ್ಪರ್ಧೆ ಜೋರಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ಸರಿಯಾದ ಗೆಲುವು ಸಿಕ್ಕಿಲ್ಲ. ಸಿನಿಮಾಗಳ ಆಯ್ಕೆಯಲ್ಲಿ ಅವರು ಎಡವುತ್ತಿದ್ದಾರೆ ಎಂಬ ಅಭಿಪ್ರಾಯ ಹಲವರದ್ದು. ಅಲ್ಲದೇ, ಅವಸರದಲ್ಲಿ ಸಿನಿಮಾದ ಕೆಲಸಗಳನ್ನು ಮುಗಿಸುತ್ತಿರುವುದರಿಂದ ಗುಣಮಟ್ಟದ ಕಡೆಗೆ ಗಮನ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಅನೇಕರು ಟೀಕಿಸಿದ್ದಾರೆ. ಈ ಶುಕ್ರವಾರವಾದರೂ (ಆಗಸ್ಟ್​ 9) ಅಕ್ಷಯ್​ ಕುಮಾರ್​ ಅವರಿಗೆ ಗೆಲುವು ಸಿಗುತ್ತಾ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್