AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಜಿ ಅಲಿ ದರ್ಗಾ ನವೀಕರಣಕ್ಕೆ 1.21 ಕೋಟಿ ರೂಪಾಯಿ ದೇಣಿಗೆ ನೀಡಿದ ಅಕ್ಷಯ್​ ಕುಮಾರ್​

ಆಗಸ್ಟ್​ 9ರಂದು ಅಕ್ಷಯ್​ ಕುಮಾರ್​ ಅಭಿನಯದ ‘ಖೇಲ್​ ಖೇಲ್​ ಮೇ’ ಚಿತ್ರ ತೆರೆಕಾಣಲಿದೆ. ಈ ಹಿನ್ನೆಲೆಯಲ್ಲಿ ಅವರು ಮುಂಬೈನ ಹಾಜಿ ಅಲಿ ದರ್ಗಾಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ದರ್ಗಾದ ನವೀಕರಣ ಕಾರ್ಯ ನಡೆಯುತ್ತಿದೆ. ಹಾಗಾಗಿ ಅಕ್ಷಯ್​ ಕುಮಾರ್​ ಅವರು 1.21 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಹಾಜಿ ಅಲಿ ದರ್ಗಾ ನವೀಕರಣಕ್ಕೆ 1.21 ಕೋಟಿ ರೂಪಾಯಿ ದೇಣಿಗೆ ನೀಡಿದ ಅಕ್ಷಯ್​ ಕುಮಾರ್​
ಹಾಜಿ ಅಲಿ ದರ್ಗಾದಲ್ಲಿ ಅಕ್ಷಯ್​ ಕುಮಾರ್​ ಪ್ರಾರ್ಥನೆ
ಮದನ್​ ಕುಮಾರ್​
|

Updated on: Aug 08, 2024 | 7:39 PM

Share

ನಟ ಅಕ್ಷಯ್​ ಕುಮಾರ್​ ಅವರು ಇಂದು (ಆಗಸ್ಟ್​ 8) ಮುಂಬೈನ ಹಾಜಿ ಅಲಿ ದರ್ಗಾಗೆ ಭೇಟಿ ನೀಡಿದ್ದಾರೆ. ಈ ವಿಚಾರ ಸಖತ್​ ಸುದ್ದಿ ಆಗಿದೆ. ಯಾಕೆಂದರೆ, ಅವರು ಈ ದುರ್ಗಾ ನವೀಕರಣಕ್ಕೆ ಬರೋಬ್ಬರಿ 1.21 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಮೊದಲಿನಿಂದಲೂ ಕೂಡ ಅಕ್ಷಯ್​ ಕುಮಾರ್​ ಅವರು ಸಮಾಜಮುಖಿ ಕಾರ್ಯಗಳಿಗೆ ತಮ್ಮ ಕೈಲಾದ ಸಹಾಯವನ್ನು ಮಾಡುತ್ತಾ ಬಂದಿದ್ದಾರೆ. ಸಿನಿಮಾಗಳು ಸತತವಾಗಿ ಸೋತಿದ್ದರೂ ಕೂಡ ಅವರ ಮನೋಭಾವದಲ್ಲಿ ಬದಲಾವಣೆ ಆಗಿಲ್ಲ. ಹಾಜಿ ಅಲಿ ದರ್ಗಾಗೆ ಕೋಟ್ಯಂತರ ರೂಪಾಯಿ ನೀಡಿದ್ದಕ್ಕೆ ಅನೇಕರು ಭೇಷ್​ ಎಂದಿದ್ದಾರೆ.

ಅಕ್ಷಯ್​ ಕುಮಾರ್​ ಅವರು ನೀಡಿರುವ 1.21 ಕೋಟಿ ರೂಪಾಯಿ ಹಣದ ಸಹಾಯದಿಂದ ಹಾಲಿ ಅರ್ಲಿ ದರ್ಗಾದ ನವೀಕರಣ ಮಾಡಲಾಗುವುದು. ಇಂದು (ಆ.8) ಅಕ್ಷಯ್​ ಕುಮಾರ್​ ಅವರು ತಮ್ಮ ಬ್ಯುಸಿ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ದರ್ಗಾಗೆ ಭೇಟಿ ನೀಡಿದ್ದಾರೆ. ಅಲ್ಲಿ ಅವರು ಪ್ರಾರ್ಥನೆ ಸಲ್ಲಿಸಿದ್ದಾರೆ. ಸ್ವರ್ಗದಲ್ಲಿರುವ ತಮ್ಮ ಪಾಲಕರ ಸಲುವಾಗಿ ಅವರು ದರ್ಗಾದಲ್ಲಿ ಪ್ರಾರ್ಥನೆ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಟಾಕ್ಸಿಕ್​’ ಬಿಟ್ಟುಕೊಡುವ ದಿನಾಂಕದಲ್ಲಿ ರಿಲೀಸ್​ ಆಗತ್ತಾ ಅಕ್ಷಯ್​ ಕುಮಾರ್​ ಸಿನಿಮಾ?

ಸಿನಿಮಾ ವಿಚಾರಕ್ಕೆ ಬರುವುದಾದರೆ, ಅಕ್ಷಯ್​ ಕುಮಾರ್​ ನಟನೆಯ ‘ಖೇಲ್​ ಖೇಲ್​ ಮೇ’ ಸಿನಿಮಾ ಆಗಸ್ಟ್​ 9ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾಗೆ ಮುದಾಸರ್​ ಅಜೀಜ್​ ನಿರ್ದೇಶನ ಮಾಡಿದ್ದಾರೆ. ಅಕ್ಷಯ್​ ಕುಮಾರ್​ ಜೊತೆ ಫರ್ದೀನ್​ ಖಾನ್​, ವಾಣಿ ಕಪೂರ್​, ತಾಪ್ಸಿ ಪನ್ನು, ಪ್ರಗ್ಯಾ ಜೈಸ್ವಾಲ್​ ಮುಂತಾದವರು ನಟಿಸಿದ್ದಾರೆ. ಈ ಚಿತ್ರದ ಜೊತೆ ಶ್ರದ್ಧಾ ಕಪೂರ್​ ನಟನೆಯ ‘ಸ್ತ್ರೀ 2’, ಜಾನ್​ ಅಬ್ರಾಹಂ ನಟನೆಯ ‘ವೇದಾ’ ಸಿನಿಮಾ ಕೂಡ ಪೈಪೋಟಿಗೆ ಇಳಿದಿವೆ. ಹಾಗಾಗಿ ಸ್ಪರ್ಧೆ ಜೋರಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ಸರಿಯಾದ ಗೆಲುವು ಸಿಕ್ಕಿಲ್ಲ. ಸಿನಿಮಾಗಳ ಆಯ್ಕೆಯಲ್ಲಿ ಅವರು ಎಡವುತ್ತಿದ್ದಾರೆ ಎಂಬ ಅಭಿಪ್ರಾಯ ಹಲವರದ್ದು. ಅಲ್ಲದೇ, ಅವಸರದಲ್ಲಿ ಸಿನಿಮಾದ ಕೆಲಸಗಳನ್ನು ಮುಗಿಸುತ್ತಿರುವುದರಿಂದ ಗುಣಮಟ್ಟದ ಕಡೆಗೆ ಗಮನ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಅನೇಕರು ಟೀಕಿಸಿದ್ದಾರೆ. ಈ ಶುಕ್ರವಾರವಾದರೂ (ಆಗಸ್ಟ್​ 9) ಅಕ್ಷಯ್​ ಕುಮಾರ್​ ಅವರಿಗೆ ಗೆಲುವು ಸಿಗುತ್ತಾ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ