AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಿಕ್ಷೆ ಕೊಡಲು ಸಿನಿಮಾ ತೋರಿಸಿದರು’; ಇಬ್ರಾಹಿಮ್-ಖುಷಿ ಕಪೂರ್ ಚಿತ್ರಕ್ಕೆ ಇದೆಂಥಾ ಸ್ಥಿತಿ

ಇತ್ತೀಚೆಗೆ ಬಿಡುಗಡೆಯಾದ ‘ನಾದಾನಿಯಾ’ ಸಿನಿಮಾ ಇಬ್ರಾಹಿಂ ಅಲಿ ಖಾನ್ ಮತ್ತು ಖುಷಿ ಕಪೂರ್ ಅವರ ಕಳಪೆ ನಟನೆಗಾಗಿ ತೀವ್ರ ಟೀಕೆಗೆ ಒಳಗಾಗಿದೆ. ನೆಪೋಟಿಸಂ ಹಿನ್ನೆಲೆಯ ಈ ಚಿತ್ರವು ಸ್ಟ್ಯಾಂಡಪ್ ಕಾಮಿಡಿಯನ್ ಪ್ರಣಿತ್ ಮೋರೆ ಅವರಿಂದಲೂ ತೀವ್ರ ಟೀಕೆಗೆ ಒಳಗಾಗಿದೆ. ಖುಷಿ ಕಪೂರ್ ಅವರ ನಟನೆ ವಿಶೇಷವಾಗಿ ಟ್ರೋಲ್ ಆಗುತ್ತಿದ್ದು, ಸಿನಿಮಾ ಒಟ್ಟಾರೆಯಾಗಿ ನಿರಾಶಾದಾಯಕ ಎಂದು ವಿಮರ್ಶಕರು ಅಭಿಪ್ರಾಯಪಟ್ಟಿದ್ದಾರೆ.

‘ಶಿಕ್ಷೆ ಕೊಡಲು ಸಿನಿಮಾ ತೋರಿಸಿದರು’; ಇಬ್ರಾಹಿಮ್-ಖುಷಿ ಕಪೂರ್ ಚಿತ್ರಕ್ಕೆ ಇದೆಂಥಾ ಸ್ಥಿತಿ
ನಾದಾನಿಯಾ
ರಾಜೇಶ್ ದುಗ್ಗುಮನೆ
|

Updated on:Mar 20, 2025 | 8:57 AM

Share

ಸೈಫ್ ಅಲಿ ಖಾನ್ ಮಗ ಇಬ್ರಾಹಿಮ್ ಅಲಿ ಖಾನ್ (Ibrahim Ali Khan) ಹಾಗೂ ಶ್ರೀದೇವಿ ಮಗಳು ಖುಷಿ ಕಪೂರ್ ನಟಿಸಿದ ‘ನಾದಾನಿಯಾ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಚಿತ್ರ ಸಾಕಷ್ಟು ಟ್ರೋಲ್ ಆಗುತ್ತಿದೆ. ಇಬ್ಬರೂ ನೆಪೋಟಿಸಂ ಹಿನ್ನೆಲೆ ಹೊಂದಿದ್ದಾರೆ. ಜೊತೆಗೆ ಕಳಪೆ ನಟನೆ ಮಾಡಿದ್ದಾರೆ. ಈ ಕಾರಣಕ್ಕೆ ಸಾಕಷ್ಟು ಟ್ರೋಲ್ ಆಗುತ್ತಿದ್ದಾರೆ. ಈಗ ಸ್ಟ್ಯಾಂಡಪ್​ ಕಾಮಿಡಿಯನ್ ಪ್ರಣಿತ್ ಮೋರೆ ಅವರು ಈ ಚಿತ್ರವನ್ನು ಹಾಗೂ ಯುವ ಕಲಾವಿದರ ನಟನೆಯನ್ನು ತೀವ್ರವಾಗಿ ಟೀಕೆ ಮಾಡಿದ್ದಾರೆ.

ಮಾರ್ಚ್ 7ರಂದು ‘ನಾದಾನಿಯಾ’ ಸಿನಿಮಾ ನೆಟ್​ಫ್ಲಿಕ್ಸ್​ ಮೂಲಕ ಪ್ರಸಾರ ಆರಂಭಿಸಿದೆ. ಖುಷಿ ಕಪೂರ್ ಅವರು ನಟನೆ ಮಾಡೋದನ್ನು ಬಿಟ್ಟು ಕತ್ತನ್ನು ಅಲ್ಲಾಡಿಸಿದ್ದಾರೆ. ಇದನ್ನೇ ಅವರು ನಟನೆ ಎಂದುಕೊಂಡಿದ್ದಾರೆ ಎಂಬ ಟ್ರೋಲ್​ಗಳು ಹರಿದಾಡುತ್ತಿವೆ. ಒಂದೊಮ್ಮೆ ಶ್ರೀದೇವಿ ಇದ್ದಿದ್ದರೆ ಮಗಳ ನಟನೆ ನೋಡಿ ಖಂಡಿತವಾಗಿಯೂ ಆಘಾತ ಆಗುತ್ತಿತ್ತು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ‘ಸೈಫ್ ಅಲಿ ಖಾನ್ ಮೇಲೆ ಅಟ್ಯಾಕ್ ಮಾಡಿದ ವ್ಯಕ್ತಿಗೆ ಶಿಕ್ಷೆಯಾಗಿ ‘ನಾದಾನಿಯಾ’ ಸಿನಿಮಾ ತೋರಿಸಲಾಗಿದೆ ಎಂದು ಪ್ರಣಿತ್ ಟೀಕಿಸಿದ್ದಾರೆ.

ಇದನ್ನೂ ಓದಿ
Image
ಗುರು ಕಿರಣ್ ದುಡ್ಡು ಕೊಟ್ಟರೂ ಸಿನಿಮಾ ಮಾಡಲ್ಲಾ; ಕಾರಣವೇನು?
Image
ಶಾರುಖ್ ಖಾನ್-ಸುಕುಮಾರ್ ಸಿನಿಮಾ ಮಾಡೋ ಸುದ್ದಿ ಶುದ್ಧ ಸುಳ್ಳು
Image
ಪ್ರಶಾಂತ್ ನೀಲ್ ನಿರ್ದೇಶನದ ಹಿಟ್ ಚಿತ್ರ ರೀ-ರಿಲೀಸ್; ದಾಖಲೆ ಗಳಿಕೆ
Image
ತನ್ನದೇ ಹೆಸರನ್ನು ತಪ್ಪಾಗಿ ಕರೆದುಕೊಂಡು ರಣಬೀರ್; ಆಮಿರ್ ರಿಯಾಕ್ಷನ್ ನೋಡಿ

‘ಖುಷಿ ಕಪೂರ್ ಅವರ ಲೆವೆಲ್ ಬೇರೆಯದೇ ಹಂತದಲ್ಲಿ ಇದೆ. ಖುಷಿ ಕಪರೂರ್ ಅವರು ಕೆಟ್ಟದಾಗಿ ನಟಿಸಿದ್ದಾರೆ. ವಿಶೇಷ ಎಂದರೆ ನಿರಂತರವಾಗಿ ಅವರು ಕೆಟ್ಟದಾಗಿ ನಟಿಸಿದ್ದಾರೆ. ಖುಷಿ ಅವರ ಕೊನೆಯ ಸಿನಿಮಾ ಆಮಿರ್ ಖಾನ್ ಮಗ ಜುನೈದ್ ಖಾನ್ ಜೊತೆ ಬಂದಿತ್ತು. ಆ ಸಿನಿಮಾ ಆಮಿರ್ ಖಾನ್ ಇಮೇಜ್​ನ ಹಾಳು ಮಾಡಿತು. ಈಗ ಸೈಫ್ ಅಲಿ ಖಾನ್ ಅವರ ಇಮೇಜ್ ಹಾಳಾಗಿದೆ’ ಎಂದು ಹೇಳಿದ್ದಾರೆ.

‘ಸೈಫ್ ಮಗ ಎಷ್ಟು ಕೆಟ್ಟದಾಗಿ ನಟಿಸಿದ್ದಾನೆ ಎಂದರೆ ನ್ಯಾಯಾಧೀಶರು ಸೈಫ್ ಮೇಲೆ ದಾಳಿ ಮಾಡಿದವನಿಗೆ ‘ನಾನು ನಿಮಗೆ ಶಿಕ್ಷೆ ವಿಧಿಸುವುದಿಲ್ಲ, ನೀವು ನಾದಾನಿಯಾ ಚಿತ್ರವನ್ನು ಎರಡು ಬಾರಿ ನೋಡಬೇಕು’ ಎಂದರು. ಆ ವ್ಯಕ್ತಿ ನನ್ನ ಕತ್ತನ್ನು ಸೀಳಿ ಎಂದು ಕೂಗುತ್ತಿದ್ದಾನೆ’ ಎಂದಿದ್ದಾರೆ ಅವರು.

ಇದನ್ನೂ ಓದಿ:  ಅಕ್ಕನಂತೆ ತಂಗಿ, ಸತತ ಎರಡು ಫ್ಲಾಪ್ ಕೊಟ್ಟ ಖುಷಿ ಕಪೂರ್, ದಕ್ಷಿಣಕ್ಕೆ ಬರಲು ತಯಾರಿ

ಈ ಚಿತ್ರವನ್ನು ಶೌನಾ ಗೌತಮ್ ಅವರು ನಿರ್ದೇಶನ ಮಾಡಿದ್ದಾರೆ. ಇದು ಲವ್ ಸ್ಟೋರಿಯನ್ನು ಹೊಂದಿದೆ. ಈ ಚಿತ್ರದ ಬಗ್ಗೆ ಮಾತನಾಡಿದ್ದ ನಿರ್ಮಾಪಕ ಕರಣ್ ಜೋಹರ್ ಅವರು, ಟ್ರೋಲ್​ಗಳಿಂದ ಏನೂ ಬದಲಾಗುವುದಿಲ್ಲ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:52 am, Thu, 20 March 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ