Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಿಕ್ಷೆ ಕೊಡಲು ಸಿನಿಮಾ ತೋರಿಸಿದರು’; ಇಬ್ರಾಹಿಮ್-ಖುಷಿ ಕಪೂರ್ ಚಿತ್ರಕ್ಕೆ ಇದೆಂಥಾ ಸ್ಥಿತಿ

ಇತ್ತೀಚೆಗೆ ಬಿಡುಗಡೆಯಾದ ‘ನಾದಾನಿಯಾ’ ಸಿನಿಮಾ ಇಬ್ರಾಹಿಂ ಅಲಿ ಖಾನ್ ಮತ್ತು ಖುಷಿ ಕಪೂರ್ ಅವರ ಕಳಪೆ ನಟನೆಗಾಗಿ ತೀವ್ರ ಟೀಕೆಗೆ ಒಳಗಾಗಿದೆ. ನೆಪೋಟಿಸಂ ಹಿನ್ನೆಲೆಯ ಈ ಚಿತ್ರವು ಸ್ಟ್ಯಾಂಡಪ್ ಕಾಮಿಡಿಯನ್ ಪ್ರಣಿತ್ ಮೋರೆ ಅವರಿಂದಲೂ ತೀವ್ರ ಟೀಕೆಗೆ ಒಳಗಾಗಿದೆ. ಖುಷಿ ಕಪೂರ್ ಅವರ ನಟನೆ ವಿಶೇಷವಾಗಿ ಟ್ರೋಲ್ ಆಗುತ್ತಿದ್ದು, ಸಿನಿಮಾ ಒಟ್ಟಾರೆಯಾಗಿ ನಿರಾಶಾದಾಯಕ ಎಂದು ವಿಮರ್ಶಕರು ಅಭಿಪ್ರಾಯಪಟ್ಟಿದ್ದಾರೆ.

‘ಶಿಕ್ಷೆ ಕೊಡಲು ಸಿನಿಮಾ ತೋರಿಸಿದರು’; ಇಬ್ರಾಹಿಮ್-ಖುಷಿ ಕಪೂರ್ ಚಿತ್ರಕ್ಕೆ ಇದೆಂಥಾ ಸ್ಥಿತಿ
ನಾದಾನಿಯಾ
Follow us
ರಾಜೇಶ್ ದುಗ್ಗುಮನೆ
|

Updated on:Mar 20, 2025 | 8:57 AM

ಸೈಫ್ ಅಲಿ ಖಾನ್ ಮಗ ಇಬ್ರಾಹಿಮ್ ಅಲಿ ಖಾನ್ (Ibrahim Ali Khan) ಹಾಗೂ ಶ್ರೀದೇವಿ ಮಗಳು ಖುಷಿ ಕಪೂರ್ ನಟಿಸಿದ ‘ನಾದಾನಿಯಾ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಚಿತ್ರ ಸಾಕಷ್ಟು ಟ್ರೋಲ್ ಆಗುತ್ತಿದೆ. ಇಬ್ಬರೂ ನೆಪೋಟಿಸಂ ಹಿನ್ನೆಲೆ ಹೊಂದಿದ್ದಾರೆ. ಜೊತೆಗೆ ಕಳಪೆ ನಟನೆ ಮಾಡಿದ್ದಾರೆ. ಈ ಕಾರಣಕ್ಕೆ ಸಾಕಷ್ಟು ಟ್ರೋಲ್ ಆಗುತ್ತಿದ್ದಾರೆ. ಈಗ ಸ್ಟ್ಯಾಂಡಪ್​ ಕಾಮಿಡಿಯನ್ ಪ್ರಣಿತ್ ಮೋರೆ ಅವರು ಈ ಚಿತ್ರವನ್ನು ಹಾಗೂ ಯುವ ಕಲಾವಿದರ ನಟನೆಯನ್ನು ತೀವ್ರವಾಗಿ ಟೀಕೆ ಮಾಡಿದ್ದಾರೆ.

ಮಾರ್ಚ್ 7ರಂದು ‘ನಾದಾನಿಯಾ’ ಸಿನಿಮಾ ನೆಟ್​ಫ್ಲಿಕ್ಸ್​ ಮೂಲಕ ಪ್ರಸಾರ ಆರಂಭಿಸಿದೆ. ಖುಷಿ ಕಪೂರ್ ಅವರು ನಟನೆ ಮಾಡೋದನ್ನು ಬಿಟ್ಟು ಕತ್ತನ್ನು ಅಲ್ಲಾಡಿಸಿದ್ದಾರೆ. ಇದನ್ನೇ ಅವರು ನಟನೆ ಎಂದುಕೊಂಡಿದ್ದಾರೆ ಎಂಬ ಟ್ರೋಲ್​ಗಳು ಹರಿದಾಡುತ್ತಿವೆ. ಒಂದೊಮ್ಮೆ ಶ್ರೀದೇವಿ ಇದ್ದಿದ್ದರೆ ಮಗಳ ನಟನೆ ನೋಡಿ ಖಂಡಿತವಾಗಿಯೂ ಆಘಾತ ಆಗುತ್ತಿತ್ತು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ‘ಸೈಫ್ ಅಲಿ ಖಾನ್ ಮೇಲೆ ಅಟ್ಯಾಕ್ ಮಾಡಿದ ವ್ಯಕ್ತಿಗೆ ಶಿಕ್ಷೆಯಾಗಿ ‘ನಾದಾನಿಯಾ’ ಸಿನಿಮಾ ತೋರಿಸಲಾಗಿದೆ ಎಂದು ಪ್ರಣಿತ್ ಟೀಕಿಸಿದ್ದಾರೆ.

ಇದನ್ನೂ ಓದಿ
Image
ಗುರು ಕಿರಣ್ ದುಡ್ಡು ಕೊಟ್ಟರೂ ಸಿನಿಮಾ ಮಾಡಲ್ಲಾ; ಕಾರಣವೇನು?
Image
ಶಾರುಖ್ ಖಾನ್-ಸುಕುಮಾರ್ ಸಿನಿಮಾ ಮಾಡೋ ಸುದ್ದಿ ಶುದ್ಧ ಸುಳ್ಳು
Image
ಪ್ರಶಾಂತ್ ನೀಲ್ ನಿರ್ದೇಶನದ ಹಿಟ್ ಚಿತ್ರ ರೀ-ರಿಲೀಸ್; ದಾಖಲೆ ಗಳಿಕೆ
Image
ತನ್ನದೇ ಹೆಸರನ್ನು ತಪ್ಪಾಗಿ ಕರೆದುಕೊಂಡು ರಣಬೀರ್; ಆಮಿರ್ ರಿಯಾಕ್ಷನ್ ನೋಡಿ

‘ಖುಷಿ ಕಪೂರ್ ಅವರ ಲೆವೆಲ್ ಬೇರೆಯದೇ ಹಂತದಲ್ಲಿ ಇದೆ. ಖುಷಿ ಕಪರೂರ್ ಅವರು ಕೆಟ್ಟದಾಗಿ ನಟಿಸಿದ್ದಾರೆ. ವಿಶೇಷ ಎಂದರೆ ನಿರಂತರವಾಗಿ ಅವರು ಕೆಟ್ಟದಾಗಿ ನಟಿಸಿದ್ದಾರೆ. ಖುಷಿ ಅವರ ಕೊನೆಯ ಸಿನಿಮಾ ಆಮಿರ್ ಖಾನ್ ಮಗ ಜುನೈದ್ ಖಾನ್ ಜೊತೆ ಬಂದಿತ್ತು. ಆ ಸಿನಿಮಾ ಆಮಿರ್ ಖಾನ್ ಇಮೇಜ್​ನ ಹಾಳು ಮಾಡಿತು. ಈಗ ಸೈಫ್ ಅಲಿ ಖಾನ್ ಅವರ ಇಮೇಜ್ ಹಾಳಾಗಿದೆ’ ಎಂದು ಹೇಳಿದ್ದಾರೆ.

‘ಸೈಫ್ ಮಗ ಎಷ್ಟು ಕೆಟ್ಟದಾಗಿ ನಟಿಸಿದ್ದಾನೆ ಎಂದರೆ ನ್ಯಾಯಾಧೀಶರು ಸೈಫ್ ಮೇಲೆ ದಾಳಿ ಮಾಡಿದವನಿಗೆ ‘ನಾನು ನಿಮಗೆ ಶಿಕ್ಷೆ ವಿಧಿಸುವುದಿಲ್ಲ, ನೀವು ನಾದಾನಿಯಾ ಚಿತ್ರವನ್ನು ಎರಡು ಬಾರಿ ನೋಡಬೇಕು’ ಎಂದರು. ಆ ವ್ಯಕ್ತಿ ನನ್ನ ಕತ್ತನ್ನು ಸೀಳಿ ಎಂದು ಕೂಗುತ್ತಿದ್ದಾನೆ’ ಎಂದಿದ್ದಾರೆ ಅವರು.

ಇದನ್ನೂ ಓದಿ:  ಅಕ್ಕನಂತೆ ತಂಗಿ, ಸತತ ಎರಡು ಫ್ಲಾಪ್ ಕೊಟ್ಟ ಖುಷಿ ಕಪೂರ್, ದಕ್ಷಿಣಕ್ಕೆ ಬರಲು ತಯಾರಿ

ಈ ಚಿತ್ರವನ್ನು ಶೌನಾ ಗೌತಮ್ ಅವರು ನಿರ್ದೇಶನ ಮಾಡಿದ್ದಾರೆ. ಇದು ಲವ್ ಸ್ಟೋರಿಯನ್ನು ಹೊಂದಿದೆ. ಈ ಚಿತ್ರದ ಬಗ್ಗೆ ಮಾತನಾಡಿದ್ದ ನಿರ್ಮಾಪಕ ಕರಣ್ ಜೋಹರ್ ಅವರು, ಟ್ರೋಲ್​ಗಳಿಂದ ಏನೂ ಬದಲಾಗುವುದಿಲ್ಲ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:52 am, Thu, 20 March 25

ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ