AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಸಿನಿಮಾ ಫ್ಲಾಪ್ ಆದರೂ ಎರಡೂವರೆ ಕೋಟಿ ರೂಪಾಯಿ ಕಾರು ಖರೀದಿಸಿದ ಖುಷಿ ಕಪೂರ್

ಖುಷಿ ಕಪೂರ್ ಅವರು ಈಗ ಮರ್ಸೀಡಿಸ್ ಬೆಂಜ್ ಜಿ ಕ್ಲಾಸ್ 400 ಖರೀದಿ ಮಾಡಿದ್ದಾರೆ. ಇದರ ಬೆಲೆ ಸುಮಾರು 2.55 ಕೋಟಿ ರೂಪಾಯಿ. ಖುಷಿ ಕಪೂರ್ ಅವರು ಕೆಂಪು ಬಣ್ಣದ ಕಾರಿನಲ್ಲಿ ಬರುತ್ತಿರುವ ವಿಡಿಯೋ ವೈರಲ್ ಆಗಿದೆ. ಅವರಿಗೆ ಶುಭಾಶಯ ಕೋರುತ್ತಿದ್ದಾರೆ.

ಮೊದಲ ಸಿನಿಮಾ ಫ್ಲಾಪ್ ಆದರೂ ಎರಡೂವರೆ ಕೋಟಿ ರೂಪಾಯಿ ಕಾರು ಖರೀದಿಸಿದ ಖುಷಿ ಕಪೂರ್
ಖುಷಿ ಕಪೂರ್
ರಾಜೇಶ್ ದುಗ್ಗುಮನೆ
|

Updated on: Aug 13, 2024 | 10:52 AM

Share

2023ರಲ್ಲಿ ಖುಷಿ ಕಪೂರ್ ನಟನೆಯ ಮೊದಲ ಸಿನಿಮಾ ‘ದಿ ಆರ್ಚೀಸ್’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ಹೇಳಿಕೊಳ್ಳುವಂಥ ಯಶಸ್ಸು ಕಾಣಲಿಲ್ಲ. ಆದಾಗ್ಯೂ ಖುಷಿ ಕಪೂರ್ ಈ ವಿಚಾರದ ಬಗ್ಗೆ ಹೆಚ್ಚು ಬೇಸರ ಮಾಡಿಕೊಂಡಿಲ್ಲ. ಅವರು ಈಗ ಮರ್ಸೀಡಿಸ್ ಬೆಂಜ್ ಜಿ ಕ್ಲಾಸ್ 400 ಖರೀದಿ ಮಾಡಿದ್ದಾರೆ. ಇದರ ಬೆಲೆ ಸುಮಾರು 2.55 ಕೋಟಿ ರೂಪಾಯಿ. ಅವರು ಹೊಸ ಕಾರಿನಲ್ಲಿ ಬರುತ್ತಿರುವ ವಿಡಿಯೋ ವೈರಲ್ ಆಗಿದೆ.

ಖುಷಿ ಕಪೂರ್ ಅವರು ಕೆಂಪು ಬಣ್ಣದ ಕಾರಿನಲ್ಲಿ ಬರುತ್ತಿರುವ ವಿಡಿಯೋ ವೈರಲ್ ಆಗಿದೆ. ಲಕ್ಷುರಿ ಎಸ್​ಯುವಿ ನೋಡಿ ಫ್ಯಾನ್ಸ್ ಖುಷಿ ಪಟ್ಟಿದ್ದಾರೆ. ಈ ಕಾರು ಐದು ಸೀಟರ್​ಗಳನ್ನು ಹೊಂದಿದೆ. ಮಲ್ಟಿ ಫಂಕ್ಷನ್ ಸ್ಟಿಯರಿಂಗ್ ವೀಲ್, ಆಟೋ ಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಎಬಿಎಸ್, ಅಲೋಯ್ ವೀಲ್ಸ್​ ಸೇರಿ ಅನೇಕ ಆಯ್ಕೆಗಳನ್ನು ಈ ಕಾರು ಹೊಂದಿದೆ. ಈ ಕಾರು ಬರೋಬ್ಬರಿ 2925 ಸಿಸಿ ಇಂಜಿನ್​ನ ಹೊಂದಿದೆ. ‘‘

ನಟಿಯ ಕಾರಿನ ಹೊಸ ಫೋಟೋಗಳನ್ನು ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ. ಇಷ್ಟೊಂದು ಹಣವನ್ನು ಅವರಂತೂ ಸಂಪಾದಿಸಿರುವುದಿಲ್ಲ, ಅವರ ತಂದೆಯ ಗಿಫ್ಟ್ ಇರಬಹುದು ಎಂದು ಅನೇಕರು ಭಾವಿಸಿದ್ದಾರೆ. ಅನೇಕರು ನಟಿಗೆ ಶುಭಾಶಯ ತಿಳಿಸುತ್ತಿದ್ದಾರೆ. ಖುಷಿ ಕಪುರ್ ತಾಯಿ ಶ್ರೀದೇವಿಗೆ ಇಂದು (ಆಗಸ್ಟ್ 13) ಜನ್ಮದಿನ. ಈ ಸಂದರ್ಭದಲ್ಲೇ ಅವರು ಕಾರು ಖರೀದಿ ಮಾಡಿದ್ದು ವಿಶೇಷ.

ಇದನ್ನೂ ಓದಿ: ಅಕ್ಕ ಜಾನ್ಹವಿಯಂತೆ ತೆಲುಗಿಗೆ ಕಾಲಿಟ್ಟ ಖುಷಿ ಕಪೂರ್, ನಾಯಕ ಯಾರು?

ಝೋಯಾ ಅಖ್ತರ್ ನಿರ್ದೇಶನದ ‘ದಿ ಆರ್ಚೀಸ್’ ಸಿನಿಮಾದಲ್ಲಿ ಖುಷಿ ಕಪೂರ್ ನಟಿಸಿದ್ದರು. ಈ ಸಿನಿಮಾದಲ್ಲಿ ಸುಹಾನಾ ಖಾನ್, ಅಗಸ್ತ್ಯ ನಂದ ಸೇರಿ ಅನೇಕ ಸೆಲೆಬ್ರಿಟಿಗಳು ನಟಿಸಿದ್ದರು. ಈ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ರಿಲೀಸ್ ಆಗಿದೆ. ಖುಷಿ ಕಪೂರ್ ಅವರು ವೇದಾಂಗ್ ರೈನಾ ಜೊತೆ ರಿಲೇಶನ್​ಶಿಪ್ ಹೊಂದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​