AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ಧಾರ್ಥ್​ ಮಲ್ಹೋತ್ರಾ ಜತೆ ಲವ್ವಿಡವ್ವಿ? ಎಲ್ಲವನ್ನೂ ಹೇಳಿಕೊಂಡ ನಟಿ ಕಿಯಾರಾ

ಕಿಯಾರಾ ಹಾಗೂ ಸಿದ್ಧಾರ್ಥ್​ ಸಾಕಷ್ಟು ಬಾರಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಇನ್ನು, ಕಿಯಾರಾ ಅವರು ಸಿದ್ಧಾರ್ಥ್​ ಪಾಲಕರನ್ನು ಭೇಟಿ ಮಾಡಿದ್ದರು. ಈ ಭೇಟಿ ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು.

ಸಿದ್ಧಾರ್ಥ್​ ಮಲ್ಹೋತ್ರಾ ಜತೆ ಲವ್ವಿಡವ್ವಿ? ಎಲ್ಲವನ್ನೂ ಹೇಳಿಕೊಂಡ ನಟಿ ಕಿಯಾರಾ
ಸಿದ್ಧಾರ್ಥ್​ ಮಲ್ಹೋತ್ರಾ ಜತೆ ಲವ್ವಿಡವ್ವಿ? ಎಲ್ಲವನ್ನೂ ಹೇಳಿಕೊಂಡ ನಟಿ ಕಿಯಾರಾ
TV9 Web
| Edited By: |

Updated on: Aug 06, 2021 | 7:20 PM

Share

ಕಿಯಾರಾ ಅಡ್ವಾಣಿ ಹಾಗೂ ಸಿದ್ಧಾರ್ಥ್​ ಮಲ್ಹೋತ್ರಾ ರಿಲೇಶನ್​ಶಿಪ್​ನಲ್ಲಿದ್ದಾರೆ ಎನ್ನುವ ಗುಸುಗುಸು ಬಾಲಿವುಡ್​ ಅಂಗಳದಲ್ಲಿ ಹರಿದಾಡಿತ್ತು. ಈ ವದಂತಿಯನ್ನು ನಂಬುವ ರೀತಿಯಲ್ಲಿ ಸಾಕಷ್ಟು ಘಟನೆಗಳು ನಡೆದವು. ಹೀಗಾಗಿ, ಅಭಿಮಾನಿಗಳು ಇಬ್ಬರ ನಡುವೆ ಏನೋ ನಡೆಯುತ್ತಿದೆ ಎಂದು ಭಾವಿಸಿದ್ದರು. ಇದಕ್ಕೆ ಕಿಯಾರಾ ಈಗ ಸ್ಪಷ್ಟನೆ ನೀಡಿದ್ದಾರೆ.

ಕಿಯಾರಾ ಹಾಗೂ ಸಿದ್ಧಾರ್ಥ್​ ಸಾಕಷ್ಟು ಬಾರಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಇನ್ನು, ಕಿಯಾರಾ ಅವರು ಸಿದ್ಧಾರ್ಥ್​ ಪಾಲಕರನ್ನು ಭೇಟಿ ಮಾಡಿದ್ದರು. ಈ ಭೇಟಿ ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಈ ಘಟನೆ ನಂತರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವದಂತಿಗಳು ಹುಟ್ಟಿಕೊಳ್ಳಲು ಆರಂಭಿಸಿದವು. ಆದರೆ, ಈ ಬಗ್ಗೆ ಕಿಯಾರಾ ಉತ್ತರಿಸುವ ಗೋಜಿಗೆ ಹೋಗಿರಲಿಲ್ಲ. ಆದರೆ, ಈಗ ಈ ವಿಚಾರದಲ್ಲಿ ಅವರಿಗೆ ಮೌನ ವಹಿಸೋಕೆ ಸಾಧ್ಯವಾಗಿಲ್ಲ.

ಇತ್ತೀಚೆಗೆ ಕಿಯಾರಾ ಸಂದರ್ಶನವೊಂದರಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅವರಿಗೆ ಈ ವಿಚಾರದ ಬಗ್ಗೆ ಮತ್ತೆ ಪ್ರಶ್ನಿಸಲಾಯಿತು. ಇದಕ್ಕೆ ಕಿಯಾರಾ ಉತ್ತರ ನೀಡಿದ್ದಾರೆ. ನಾವಿಬ್ಬರೂ ಉತ್ತಮ ಗೆಳೆಯರಷ್ಟೇ ಎಂದು ಹೇಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಮದುವೆ ಬಗ್ಗೆ ಕಿಯಾರಾ ತಮ್ಮದೇ ಆದ ಕಲ್ಪನೆ ಇಟ್ಟುಕೊಂಡಿದ್ದಾರೆ. ‘ನಾನು ಅರೇಂಜ್​ ಮ್ಯಾರೇಜ್​ ಆಗುವುದಿಲ್ಲ. ನಾನು ಆಗುವುದಾದರೆ ಅದು ಲವ್​ ಮ್ಯಾರೇಜ್​ ಮಾತ್ರ’ ಎಂದಿದ್ದಾರೆ. ಇದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

ಬಾಲಿವುಡ್​ನ ಬಹುಬೇಡಿಕೆಯ ನಟಿಯರಲ್ಲಿ ಕಿಯಾರಾ ಅಡ್ವಾಣಿ ಕೂಡ ಪ್ರಮುಖರು. ಹಲವು ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಎಂ.ಎಸ್​. ಧೋನಿ: ಅನ್​ಟೋಲ್ಡ್​ ಸ್ಟೋರಿ, ಕಬೀರ್​ ಸಿಂಗ್, ಗುಡ್​ ನ್ಯೂಸ್​, ಲಕ್ಷ್ಮೀ ಮುಂತಾದ ಚಿತ್ರಗಳಿಂದ ಅವರಿಗೆ ಭಾರಿ ಯಶಸ್ಸು ಸಿಕ್ಕಿದೆ. ಲಸ್ಟ್​ ಸ್ಟೋರೀಸ್​ ವೆಬ್​ ಸರಣಿ ಮೂಲಕವೂ ಅವರ ಜನಪ್ರಿಯತೆ ಹೆಚ್ಚಿತು. ಈ ಬಾಲಿವುಡ್​ ಬೆಡಗಿಗೆ ದಕ್ಷಿಣ ಭಾರತದಲ್ಲೂ ಸಖತ್​ ಡಿಮ್ಯಾಂಡ್​ ಇದೆ. ತೆಲುಗಿನ ಸ್ಟಾರ್​ ನಟರ ಜೊತೆ ಅಭಿನಯಿಸಿರುವ ಅವರಿಗೆ ಇತ್ತೀಚೆಗೆ ಬಂಪರ್​ ಆಫರ್​ ಸಿಕ್ಕಿತ್ತು. ನಟ ರಾಮ್​ ಚರಣ್​ ಮತ್ತು ನಿರ್ದೇಶಕ ಶಂಕರ್​ ಕಾಂಬಿನೇಷನ್​ನ ಹೊಸ ಚಿತ್ರಕ್ಕೆ ಕಿಯಾರಾ ನಾಯಕಿಯಾಗಿ ಆಯ್ಕೆ ಆಗಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಬಗ್ಗೆ ಅಪ್ಸೆಟ್​ ಆದ ಕುಟುಂಬದವರು; ಸಂದರ್ಶನದಲ್ಲಿ ಅಳಲು ತೋಡಿಕೊಂಡ ನಟಿ

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ