Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಯಾರಾ ಜತೆಗಿನ ಬ್ರೇಕಪ್​ ವದಂತಿಗೆ ತುಪ್ಪ ಸುರಿದ ಸಿದ್ದಾರ್ಥ್​ ಮಲ್ಹೋತ್ರಾ; ಫ್ಯಾನ್ಸ್​ ಊಹಿಸಿದ್ದೇನು?

Kiara Advani Sidharth Malhotra Breakup: ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರ ಬ್ರೇಕಪ್​ ಬಗ್ಗೆ ಹಲವು ಅಂತೆ-ಕಂತೆಗಳು ಹರಿದಾಡುತ್ತಿವೆ. ಕಿಯಾರಾ ಅವರಿಂದ ಪ್ರತಿಕ್ರಿಯೆ ಬರಲಿ ಎಂದು ನಿರೀಕ್ಷಿಸಲಾಗುತ್ತಿದೆ.

ಕಿಯಾರಾ ಜತೆಗಿನ ಬ್ರೇಕಪ್​ ವದಂತಿಗೆ ತುಪ್ಪ ಸುರಿದ ಸಿದ್ದಾರ್ಥ್​ ಮಲ್ಹೋತ್ರಾ; ಫ್ಯಾನ್ಸ್​ ಊಹಿಸಿದ್ದೇನು?
ಸಿದ್ದಾರ್ಥ್​ ಮಲ್ಹೋತ್ರ, ಕಿಯಾರಾ ಅಡ್ವಾಣಿ
Follow us
TV9 Web
| Updated By: ಮದನ್​ ಕುಮಾರ್​

Updated on: Apr 24, 2022 | 9:35 AM

ಬಾಲಿವುಡ್​ನ ಬಹುಬೇಡಿಕೆಯ ನಟ ಸಿದ್ದಾರ್ಥ್​ ಮಲ್ಹೋತ್ರಾ (Sidharth Malhotra) ಅವರು ಈಗ ವಿರಹ ವೇದನೆ ಅನುಭವಿಸುತ್ತಿದ್ದಾರಾ? ಹೀಗೊಂದು ಅನುಮಾನ ಬಲವಾಗಿ ಮೂಡಿದೆ. ಈ ಅನುಮಾನ ಬರಲು ಕಾರಣಗಳು ಕೂಡ ಹಲವು. ನಟಿ ಕಿಯಾರಾ ಅಡ್ವಾಣಿ (Kiara Advani) ಜೊತೆ ಸಿದ್ದಾರ್ಥ್​ ಮಲ್ಹೋತ್ರಾ ಡೇಟಿಂಗ್​ ನಡೆಸುತ್ತಿದ್ದ ವಿಚಾರ ಗುಟ್ಟಾಗಿ ಏನೂ ಉಳಿದಿರಲಿಲ್ಲ. ಆದರೆ ಈಗ ಈ ಜೋಡಿ ಬ್ರೇಕಪ್​ ಮಾಡಿಕೊಂಡಿದೆ ಎಂಬುದು ಹೊಸ ಗುಸುಗುಸು. ಆ ಕುರಿತಾಗಿ ಸಿದ್ದಾರ್ಥ್​ ಮಲ್ಹೋತ್ರಾ ಅವರಾಗಲಿ, ಕಿಯಾರಾ ಅಡ್ವಾಣಿ ಅವರಾಗಲಿ ಯಾವುದೇ ಹೇಳಿಕೆ ನೀಡಿಲ್ಲ. ಆದರೂ ಅಭಿಮಾನಿಗಳು ಈ ಬಗ್ಗೆ ಮಾತನಾಡುತ್ತಿದ್ದಾರೆ. ಈ ನಡುವೆ ಸಿದ್ದಾರ್ಥ್​ ಮಲ್ಹೋತ್ರಾ ಅವರು ಸೂಚ್ಯವಾಗಿ ಏನನ್ನೋ ಹೇಳಿದ್ದಾರೆ. ಅವರ ಮಾತುಗಳು ಬ್ರೇಕಪ್​ (Kiara Advani Sidharth Malhotra Breakup) ಕುರಿತಾಗಿಯೇ ಇದೆ ಎಂಬುದು ಅನೇಕರ ಊಹೆ. ಅಷ್ಟಕ್ಕೂ ಅವರು ಹೇಳಿರುವುದು ಏನು? ಇಲ್ಲಿದೆ ವಿವರ..

ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರ ನಡುವಿನ ಬ್ರೇಕಪ್​ ವದಂತಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಇದಕ್ಕೆ ಯಾರಿಂದಲಾದರೂ ಸ್ಪಷ್ಟನೆ ಸಿಗಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಸಂದರ್ಭಕ್ಕೆ ಸರಿಯಾಗಿ ಸಿದ್ದಾರ್ಥ್​ ಮಲ್ಹೋತ್ರಾ ಅವರು ಒಂದು ಫೋಟೋ ಅಪ್​ಲೋಡ್​ ಮಾಡಿಕೊಂಡು ಕೌತುಕ ಮೂಡುವಂತೆ ಮಾಡಿದ್ದಾರೆ. ಆ ಫೋಟೋದಲ್ಲಿ ಅವರು ಸಿಂಗಲ್ ಆಗಿದ್ದಾರೆ. ಅದಕ್ಕೆ ನೀಡಿದ ಕ್ಯಾಪ್ಷನ್​ ಕೂಡ ಏನನ್ನೋ ಸೂಚಿಸುತ್ತಿದೆ.

ಬ್ರೇಕಪ್​ ಆಗಿದೆ ಎಂಬುದನ್ನು ಸಿದ್ದಾರ್ಥ್​ ಮಲ್ಹೋತ್ರಾ ನೇರವಾಗಿ ಹೇಳದೇ ಇರಬಹುದು. ಅವರು ನೀಡಿದ ಕ್ಯಾಪ್ಷನ್​ ನೋಡಿ ಅಭಿಮಾನಿಗಳು ಏನೇನನ್ನೋ ಊಹಿಸುತ್ತಿದ್ದಾರೆ. ‘ಸೂರ್ಯನ ಬೆಳಕು ಇಲ್ಲದ ದಿನ ಹೇಗಿರುತ್ತೆ ಅಂತ ನಿಮಗೆ ಗೊತ್ತು ಅಲ್ಲವೇ?’ ಎಂದು ಸಿದ್ದಾರ್ಥ್​ ಬರೆದುಕೊಂಡಿದ್ದಾರೆ. ಅದಕ್ಕೆ ನೆಟ್ಟಿಗರು ಕಮೆಂಟ್​ ಮಾಡಿದ್ದು, ‘ಹಾಗಾದರೆ ನಿಮ್ಮ ಪಾಲಿಗೆ ಕಿಯಾರಾ ಅಡ್ವಾಣಿ ಅವರೇ ಸೂರ್ಯನ ಬೆಳಕು ಆಗಿದ್ರಾ?’ ಅಂತ ಮರುಪ್ರಶ್ನೆ ಹಾಕಿದ್ದಾರೆ. ಆದರೆ ಅದಕ್ಕೆ ಉತ್ತರ ನೀಡುವ ಗೋಜಿಗೆ ಸಿದ್ದಾರ್ಥ್​ ಮಲ್ಹೋತ್ರಾ ಕೈ ಹಾಕಿಲ್ಲ.

ಸಿದ್ದಾರ್ಥ್ ಹಾಗೂ ಕಿಯಾರಾ ಬಾಲಿವುಡ್​ನ ಕ್ಯೂಟ್​ ಕಪಲ್ ಎನಿಸಿಕೊಂಡಿದ್ದರು. ಹಲವು ಕಡೆಗಳಲ್ಲಿ ಇಬ್ಬರೂ ಒಟ್ಟಾಗಿ ತಿರುಗಾಡಿದ್ದು ಎಲ್ಲರ ಗಮನಕ್ಕೆ ಬಂದಿತ್ತು. ಬಾಲಿವುಡ್ ಪಾರ್ಟಿಗಳನ್ನು ಇವರು ಒಟ್ಟಾಗಿ ಅಟೆಂಡ್ ಮಾಡುತ್ತಿದ್ದರು. ಇಷ್ಟೆಲ್ಲ ಸುತ್ತಾಟ ನಡೆಸಿದರೂ ತಮ್ಮ ಲವ್​ ಕಹಾನಿಯ ವಿಚಾರವನ್ನು ಎಲ್ಲಿಯೂ ಅಧಿಕೃತ ಮಾಡಿರಲಿಲ್ಲ. ಆದರೆ, ಈಗ ಇವರ ಸಂಬಂಧ ಮುರಿದು ಬಿದ್ದಿದೆ ಅಂತ ಮೂಲಗಳು ತಿಳಿಸಿರುವುದಾಗಿ ‘ಬಾಲಿವುಡ್ ಲೈಫ್’ ವರದಿ ಮಾಡಿದೆ.

‘ಕಿಯಾರಾ ಹಾಗೂ ಸಿದ್ದಾರ್ಥ್ ಬೇರೆ ಆಗಿದ್ದಾರೆ. ಇಬ್ಬರೂ ಒಬ್ಬರನ್ನೊಬ್ಬರು ಭೇಟಿ ಮಾಡುವುದನ್ನು ನಿಲ್ಲಿಸಿದ್ದಾರೆ. ರಿಲೇಶನ್​ಶಿಪ್​ ಕೊನೆಯಾಗಲು ಕಾರಣ ಏನು ಎಂಬುದು ತಿಳಿದಿಲ್ಲ. ಇಬ್ಬರ ನಡುವೆ ತುಂಬಾನೇ ಅನ್ಯೋನ್ಯತೆ ಇತ್ತು. ಇಬ್ಬರೂ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಆದರೆ, ಆ ಸೂಚನೆ ಸದ್ಯಕ್ಕಂತೂ ಇಲ್ಲ’ ಎಂದು ವರದಿ ಪ್ರಕಟ ಆಗಿದೆ.

ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾನಿ ಅವರು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. 2021ರಲ್ಲಿ ಬಿಡುಗಡೆ ಆದ ‘ಶೇರ್ಷಾ’ ಸಿನಿಮಾದಿಂದ ಇಬ್ಬರಿಗೂ ದೊಡ್ಡ ಹಿಟ್​ ಸಿಕ್ಕಿತ್ತು. ಸಿದ್ದಾರ್ಥ್​ ನಟನೆಯ ‘ಮಿಷನ್​ ಮಜ್ನು’ ಚಿತ್ರ ರಿಲೀಸ್​ಗೆ ಸಿದ್ಧವಾಗಿದೆ. ಕಿಯಾರಾ ಕೈಯಲ್ಲೂ ಹಲವು ಸಿನಿಮಾಗಳಿವೆ. ‘ಭೂಲ್​ ಭುಲಯ್ಯ 2’, ‘ಗೋವಿಂದ ನಾಮ್ ಮೇರಾ’ ಹಾಗೂ ರಾಮ್ ಚರಣ್ ನಟನೆಯ 15ನೇ ಸಿನಿಮಾಗೂ ಕಿಯಾರಾ ನಾಯಕಿ ಆಗಿದ್ದಾರೆ.

ಇದನ್ನೂ ಓದಿ:

ನಟಿ ಕಿಯಾರಾ ಅಡ್ವಾಣಿಯ ಬಗ್ಗೆ ನಿಮಗೆ ಗೊತ್ತಿಲ್ಲದ 5 ಸಂಗತಿಗಳು..!

ದೇಸಿ ಲುಕ್​ನಲ್ಲಿ ಮಿಂಚಿದ ಕಿಯಾರಾ ಅಡ್ವಾಣಿ; ಸೀರೆ ಧರಿಸಿ ಪೋಸ್​ ನೀಡಿದ ಚೆಲುವೆ

ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ