Kiara Advani: ಬದಲಾಗಿ ಹೋಯಿತು ಕಿಯಾರಾ ಅಡ್ವಾಣಿ ವೃತ್ತಿ ಬದುಕು; ದಕ್ಷಿಣದ ಸ್ಟಾರ್​ ಹೀರೋಗೆ ನಾಯಕಿ

‘ಬ್ರಹ್ಮಾಸ್ತ್ರ’ ಮೂಲಕ ಫೇಮಸ್ ಆದ ಅಯಾನ್​ ಮುಖರ್ಜಿ ಅವರು ‘ವಾರ್ 2’ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಈಗ ಚಿತ್ರಕ್ಕೆ ನಾಯಕಿ ಫೈನಲ್ ಆಗಿದ್ದಾರೆ.

Kiara Advani: ಬದಲಾಗಿ ಹೋಯಿತು ಕಿಯಾರಾ ಅಡ್ವಾಣಿ ವೃತ್ತಿ ಬದುಕು; ದಕ್ಷಿಣದ ಸ್ಟಾರ್​ ಹೀರೋಗೆ ನಾಯಕಿ
ಕಿಯಾರಾ
Follow us
|

Updated on: Jun 17, 2023 | 7:11 AM

ನಟಿ ಕಿಯಾರಾ ಅಡ್ವಾಣಿ (Kiara Advani) ಅವರು ದಕ್ಷಿಣ ಭಾರತದ ಚಿತ್ರರಂಗ ಹಾಗೂ ಬಾಲಿವುಡ್ ಎರಡೂ ಕಡೆಗಳಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಅವರ ಕಾಲ್​ಶೀಟ್​ಗಾಗಿ ನಿರ್ಮಾಪಕರು ಕಾದು ನಿಲ್ಲುತ್ತಾರೆ. ಆದರೆ, ಅಷ್ಟು ಸುಲಭಕ್ಕೆ ಅವರು ಡೇಟ್ಸ್​ ಕೊಡುವುದಿಲ್ಲ. ಅಳೆದು ತೂಗಿ ಸಿನಿಮಾ ಒಪ್ಪಿಕೊಳ್ಳುತ್ತಾರೆ. ಈಗ ಕಿಯಾರಾಗೆ ಬಂಪರ್ ಆಫರ್ ಸಿಕ್ಕಿದೆ ಎನ್ನಲಾಗುತ್ತಿದೆ. ಜೂ.ಎನ್​ಟಿಆರ್ (JR.Ntr) ಹಾಗೂ ಹೃತಿಕ್ ರೋಷನ್ ನಟಿಸುತ್ತಿರುವ ‘ವಾರ್ 2’ ಚಿತ್ರಕ್ಕೆ ಕಿಯಾರಾ ನಾಯಕಿ ಆಗಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ಸಿದ್ದಾರ್ಥ್ ಆನಂದ್ ನಟನೆಯ ‘ವಾರ್​’ ಸಿನಿಮಾ ಸೂಪರ್ ಹಿಟ್ ಆಯಿತು. ಹೃತಿಕ್ ರೋಷನ್ ಹಾಗೂ ಟೈಗರ್ ಶ್ರಾಫ್ ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದರು. ಯಶ್ ರಾಜ್ ಫಿಲ್ಮ್ಸ್​ನ ಸ್ಪೈ ಯೂನಿವರ್ಸ್​ ಅಡಿಯಲ್ಲಿ ಈ ಸಿನಿಮಾ ಮೂಡಿಬಂದಿತ್ತು. ಈಗ ಈ ಚಿತ್ರಕ್ಕೆ ಸೀಕ್ವೆಲ್ ಬರುತ್ತಿದೆ. ‘ಬ್ರಹ್ಮಾಸ್ತ್ರ’ ಮೂಲಕ ಫೇಮಸ್ ಆದ ಅಯಾನ್​ ಮುಖರ್ಜಿ ಅವರು ‘ವಾರ್ 2’ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಈಗ ಚಿತ್ರಕ್ಕೆ ನಾಯಕಿ ಫೈನಲ್ ಆಗಿದ್ದಾರೆ.

ಸಾಮಾನ್ಯವಾಗಿ ಮಲ್ಟಿ ಸ್ಟಾರರ್ ಸಿನಿಮಾ ಆದಾಗ ಒಂದಕ್ಕಿಂತ ಹೆಚ್ಚು ಹೀರೋಯಿನ್​ಗಳು ಸಿನಿಮಾ ತಂಡ ಸೇರಿಕೊಳ್ಳುತ್ತಾರೆ. ಹೀಗಾಗಿ, ಕಿಯಾರಾ ಜೊತೆ ಮತ್ತೋರ್ವ ನಾಯಕಿ ಸಿನಿಮಾ ತಂಡ ಸೇರಿಕೊಳ್ಳಬಹುದು ಎಂಬುದು ಕೆಲವರ ಊಹೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ.

ಕಿಯಾರಾ ಅಡ್ವಾಣಿಗೆ ಇತ್ತೀಚಿನ ವರ್ಷಗಳಲ್ಲಿ ಅದೃಷ್ಟ ಕೈ ಹಿಡಿದಿದೆ. ಬ್ಯಾಕ್​ ಟು ಬ್ಯಾಕ್ ಯಶಸ್ಸು ಕಾಣುತ್ತಿದ್ದಾರೆ. 2021ರ ‘ಶೇರ್ಷಾ’, ನಂತರ ರಿಲೀಸ್ ಆದ ‘ಭೂಲ್​ ಭುಲಯ್ಯ 2’, ‘ಜುಗ್​ಜುಗ್ ಜಿಯೋ’ ಸಿನಿಮಾಗಳು ಯಶಸ್ಸು ಕಂಡವು. ಕಾರ್ತಿಕ್ ಆರ್ಯನ್ ನಟನೆಯ ‘ಸತ್ಯಪ್ರೇಮ್​ ಕಿ ಕಥಾ’ ಹಾಗೂ ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾಗಳಲ್ಲಿ ಕಿಯಾರಾ ನಟಿಸುತ್ತಿದ್ದಾರೆ. ಈ ಚಿತ್ರಗಳು ಯಶಸ್ಸು ಕಾಣಲಿ ಎಂಬುದು ಫ್ಯಾನ್ಸ್ ಬಯಕೆ.

ಇದನ್ನೂ ಓದಿ: ಮದುವೆ ಬಳಿಕ ಐಷಾರಾಮಿ ಕಾರು ಖರೀದಿಸಿದ ನಟಿ ಕಿಯಾರಾ ಅಡ್ವಾಣಿ; ಇದರ ಬೆಲೆ ಇಷ್ಟೊಂದಾ?

‘ವಾರ್ 2’ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಆಗಿದೆ. ‘ಬ್ರಹ್ಮಾಸ್ತ್ರ 2’ ಶೂಟಿಂಗ್​ಗೂ ಮೊದಲು ಅಯಾನ್ ಅವರು ‘ವಾರ್ 2’ ಚಿತ್ರ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರದಲ್ಲಿ ನಿರ್ಮಾಪಕ ಕರಣ್ ಜೋಹರ್ ಹಾಗೂ ಅಯಾನ್ ಮಧ್ಯೆ ಮನಸ್ತಾಪ ಉಂಟಾಗಿತ್ತು ಎನ್ನುವ ಮಾತು ಕೇಳಿ ಬಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ