AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಸಿಂಗ್ ಫೆಸ್ಟಿವಲ್ ಫಿನಾಲೆಯಲ್ಲಿ ಕಿಚ್ಚ ಸುದೀಪ್ ಟೀಂ; ಇದ್ದಾರೆ ಇನ್ನೂ ಹಲವು ಸೆಲೆಬ್ರಿಟಿಗಳು

ಕಿಚ್ಚ ಸುದೀಪ್ ಅವರು ತಮ್ಮ ಕಿಚ್ಚಾಸ್ ಕಿಂಗ್ಸ್ ತಂಡದೊಂದಿಗೆ ಮುಂಬೈನಲ್ಲಿ ನಡೆಯುವ ಇಂಡಿಯನ್ ರೇಸಿಂಗ್ ಫೆಸ್ಟಿವಲ್ (IRF) ಗ್ರ್ಯಾಂಡ್ ಫೈನಲ್‌ನಲ್ಲಿ ಭಾಗವಹಿಸುತ್ತಿದ್ದಾರೆ. ಇದು ಮುಂಬೈನ ಮೊದಲ FIA-ಗ್ರೇಡ್ ಸ್ಟ್ರೀಟ್ ಸರ್ಕ್ಯೂಟ್ ಆಗಿದ್ದು, ಜಾನ್ ಅಬ್ರಹಾಂ, ಅರ್ಜುನ್ ಕಪೂರ್, ಸೌರವ್ ಗಾಂಗುಲಿ ಮುಂತಾದ ಸೆಲೆಬ್ರಿಟಿಗಳ ತಂಡಗಳು ಸಹ ಈ ರೇಸ್‌ನಲ್ಲಿ ಸ್ಪರ್ಧಿಸುತ್ತಿವೆ.

ರೇಸಿಂಗ್ ಫೆಸ್ಟಿವಲ್ ಫಿನಾಲೆಯಲ್ಲಿ ಕಿಚ್ಚ ಸುದೀಪ್ ಟೀಂ; ಇದ್ದಾರೆ ಇನ್ನೂ ಹಲವು ಸೆಲೆಬ್ರಿಟಿಗಳು
ನಾಗ ಚೈತನ್ಯ-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Sep 20, 2025 | 11:36 AM

Share

ನಟ ಕಿಚ್ಚ ಸುದೀಪ್ (Kichcha Sudeep) ಅವರು ನಟನೆಯ ಜೊತೆಗೆ ಕ್ರೀಡೆಯಲ್ಲೂ ಆಸಕ್ತಿ ಹೊಂದಿದ್ದಾರೆ. ಕ್ರಿಕೆಟ್ ಎಂದರೆ ಅವರಿಗೆ ಬಲು ಇಷ್ಟ. ಇದರ ಜೊತೆಗೆ ಇತ್ತೀಚೆಗೆ ಅವರು ಕಾರ್ ರೇಸ್ ತಂಡದ ಮಾಲೀಕರಾಗಿದ್ದಾರೆ. ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡದ ಮಾಲೀಕತ್ವ ಪಡೆದುಕೊಂಡಿದ್ದಾರೆ. ಈಗ ಸುದೀಪ್ ತಂಡ ಇಂಡಿಯನ್ ರೇಸಿಂಗ್ ಫೆಸ್ಟಿವಲ್ (IRF) ಗ್ರ್ಯಾಂಡ್ ಫೈನಲ್​ನಲ್ಲಿ ಸ್ಪರ್ಧಿಸುತ್ತಿದೆ. ಇನ್ನೂ ಕೆಲವು ಸೆಲೆಬ್ರಿಟಿಗಳ ಟೀಂ ಈ ರೇಸ್​ನಲ್ಲಿ ಇದೆ.

ರೇಸ್ ಬಗ್ಗೆ ವಿವರ..

ಡಿಸೆಂಬರ್ ತಿಂಗಳಲ್ಲಿ ಮುಂಬೈನಲ್ಲಿ ಇಂಡಿಯನ್ ರೇಸಿಂಗ್ ಫೆಸ್ಟಿವಲ್ (IRF) ನಡೆಯಲಿದೆ. ಇದರ ಮೂಲಕ ಮುಂಬೈ ತನ್ನ ಮೊದಲ FIA-ಗ್ರೇಡ್ ಸ್ಟ್ರೀಟ್ ಸರ್ಕ್ಯೂಟ್‌ಗೆ ಆತಿಥ್ಯ ವಹಿಸಲಿದೆ. ಮುಂಬೈ ರಸ್ತೆಗಳು ಇದೇ ಮೊದಲ ಬಾರಿಗೆ ರೇಸ್​ಗೆ ಸಿದ್ಧವಾಗಿದೆ. ನವಿ ಮುಂಬೈನಲ್ಲಿ 3.753 ಕಿಮೀ ಉದ್ದದ ರಸ್ತೆ ರೇಸ್​​ಗೆ ಬಳಕೆ ಆಗುತ್ತಿದ್ದು, ಒಟ್ಟೂ, 14 ತಿರುವುಗಳಿವೆ. ಈ ರೇಸ್ ಐಕಾನಿಕ್ ಪಾಮ್ ಬೀಚ್ ರಸ್ತೆಯಿಂದ ಆರಂಭ ಆಗಲಿದೆ.  ಭಾರತ ಹಾಗೂ ಅಂತರರಾಷ್ಟ್ರೀಯ ರೇಸರ್‌ಗಳು ಇಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಲಿದ್ದಾರೆ.

ಖುಷಿ ವ್ಯಕ್ತಪಡಿಸಿದ ಸಿಎಂ ದೇವೇಂದ್ರ ಫಡ್ನವೀಸ್

ಈ ಬಗ್ಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಖುಷಿ ವ್ಯಕ್ತಪಡಿಸಿದ್ದಾರೆ. ‘ನವೀ ಮುಂಬೈಗೆ ನಾವು ಭಾರತೀಯ ರೇಸಿಂಗ್ ಫೆಸ್ಟಿವಲ್ ತರಲು ಹೆಮ್ಮೆ ಇದೆ. ಇದು ಮಹಾರಾಷ್ಟ್ರದ ಮೋಟಾರ್ಸ್‌ಪೋರ್ಟ್ ಪಯಣದಲ್ಲಿ ಹೊಸ ಮೈಲಿಗಲ್ಲು. ಇದು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತದೆ. ಈ ರೇಸ್ ಯುವ ರೇಸರ್‌ಗಳಿಗೆ ಮಾತ್ರವಲ್ಲ, ಇಂಜಿನಿಯರಿಂಗ್, ತಂತ್ರಜ್ಞಾನ ಮತ್ತು ಈವೆಂಟ್ ಮ್ಯಾನೇಜ್‌ಮೆಂಟ್ ಕ್ಷೇತ್ರದ ಪ್ರತಿಭೆಗಳಿಗೆ ಸಹ ವೇದಿಕೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಬಾಲಿವುಡ್ ಮಾಫಿಯಾ ಬಗ್ಗೆ ಮಾತನಾಡಿದ ತನುಶ್ರೀ ದತ್ತಾ
Image
ಪುನೀತ್ ಜೊತೆ ನಟಿಸಿದ ಅದಾ ಶರ್ಮಾ ನಿಜವಾದ ಹೆಸರೇನು ಗೊತ್ತಾ?
Image
ಬದಲಾಗೋದೇ ಇಲ್ಲ ಅಕ್ಷಯ್ ಅದೃಷ್ಟ; ಹೊಸ ಚಿತ್ರ, ಮತ್ತದೇ ಹೀನಾಯ ಕಲೆಕ್ಷನ್
Image
‘ಕಲ್ಕಿ’ ಚಿತ್ರದಿಂದ ಹೊರಬಂದು ಶಾರುಖ್ ಹೇಳಿಕೊಟ್ಟ ಪಾಠ ನೆನೆದ ದೀಪಿಕಾ

ಇದನ್ನೂ ಓದಿ: ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಹುಟ್ಟುಹಬ್ಬದ ದಿನ ಅಭಿಮಾನಿಗಳ ಮಾತು

ಹಲವು ಸೆಲೆಬ್ರಿಟಿಗಳ ಟೀಂ ಭಾಗಿ

RPPL ಈ ಮೊದಲು ಹೈದರಾಬಾದ್ ಮತ್ತು ಚೆನ್ನೈನಲ್ಲಿ ಯಶಸ್ವಿ ಸ್ಟ್ರೀಟ್ ರೇಸ್‌ಗಳನ್ನು ಆಯೋಜಿಸಿತ್ತು. ಈಗ ಮುಂಬೈನಲ್ಲಿ ವಿಶ್ವಮಟ್ಟದ ಸ್ಪರ್ಧೆ ಆಯೋಜನೆ ಮಾಡುತ್ತಿದೆ. ಕಿಚ್ಚ ಸುದೀಪ್ ಜೊತೆ ಇನ್ನೂ ಕೆಲವು ಸೆಲೆಬ್ರಿಟಿಗಳ ತಂಡ ಇದರಲ್ಲಿ ಭಾಗಿ ಆಗಲಿದೆ. ಜಾನ್ ಅಬ್ರಹಾಂ ಒಡೆತನದ ‘ಗೋವಾ ಏಸಸ್ JA ರೇಸಿಂಗ್’, ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೀಮನ್ಸ್ ದೆಹಲಿ’, ಸೌರವ್ ಗಾಂಗೂಲಿ ಒಡೆತನದ ‘ಕೊಲ್ಕತಾ ರಾಯಲ್ ಟೈಗರ್ಸ್’, ನಾಗ ಚೈತನ್ಯ  ಅವರ ‘ಹೈದರಾಬಾದ್ ಬ್ಲಾಕ್‌ಬರ್ಡ್ಸ್’ ಹಾಗೂ ಡಾ. ಶ್ವೇತಾ ಸುಂದೀಪ್ ಆನಂದ್ ಅವರ ‘ಚೆನ್ನೈ ಟರ್ಬೋ ರೈಡರ್ಸ್’ ತಂಡಗಳು ಈ ರೇಸ್​​ನಲ್ಲಿ ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ