AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ಈದ್​ಗೆ ಸಲ್ಮಾನ್​ ಖಾನ್​ ಕಡೆಯಿಂದ ಮನರಂಜನೆಯ ರಸದೌತಣ; ಇಲ್ಲಿದೆ ನೋಡಿ ಸ್ಯಾಂಪಲ್​

Kisi Ka Bhai Kisi Ki Jaan Trailer: ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾದ ಟ್ರೇಲರ್​ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ. ಇದನ್ನು ಕಂಡು ಸಲ್ಮಾನ್​ ಖಾನ್​ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

Salman Khan: ಈದ್​ಗೆ ಸಲ್ಮಾನ್​ ಖಾನ್​ ಕಡೆಯಿಂದ ಮನರಂಜನೆಯ ರಸದೌತಣ; ಇಲ್ಲಿದೆ ನೋಡಿ ಸ್ಯಾಂಪಲ್​
ಸಲ್ಮಾನ್ ಖಾನ್
ಮದನ್​ ಕುಮಾರ್​
|

Updated on:Apr 10, 2023 | 8:57 PM

Share

ಮುಖ್ಯಾಂಶಗಳು

  • ಅದ್ದೂರಿಯಾಗಿ ನಿರ್ಮಾಣ ಆಗಿದೆ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾ
  • ಟ್ರೇಲರ್​ ಮೂಲಕ ಮಸ್ತ್​​ ಮನರಂಜನೆಯ ಝಲಕ್​ ತೋರಿಸಿದ ಸಲ್ಮಾನ್​ ಖಾನ್​
  • ಈದ್​ ಹಬ್ಬದ ಪ್ರಯುಕ್ತ ಏಪ್ರಿಲ್​ 21ರಂದು ರಿಲೀಸ್​ ಆಗಲಿದೆ ಸಲ್ಲು ಹೊಸ ಚಿತ್ರ

ನಟ ಸಲ್ಮಾನ್​ ಖಾನ್​ (Salman Khan) ಅವರು ತಮ್ಮ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಲು ಬರುತ್ತಿದ್ದಾರೆ. ಈ ಬಾರಿಯ ಈದ್​ ಹಬ್ಬದ (Eid 2023) ಪ್ರಯುಕ್ತ ಅವರ ಹೊಸ ಸಿನಿಮಾ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ರಿಲೀಸ್​ ಆಗುತ್ತಿದೆ. ಈ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. ಒಟ್ಟಾರೆ ಸಿನಿಮಾ ಹೇಗಿರಲಿದೆ ಎಂಬುದರ ಸ್ಯಾಂಪಲ್​ ತಿಳಿಸಲು ಈಗ ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ರಿಲೀಸ್​ ಆದ ಕೆಲವೇ ನಿಮಿಷಗಳಲ್ಲಿ ಒಂದು ಮಿಲಿಯನ್​ಗಿಂತಲೂ ಹೆಚ್ಚು ವೀವ್ಸ್​ ಪಡೆದುಕೊಂಡಿದೆ ಈ ಟ್ರೇಲರ್​. ಆ ಮೂಲಕ ಚಿತ್ರದ ಬಗ್ಗೆ ಸಲ್ಮಾನ್​ ಖಾನ್​ ಅಭಿಮಾನಿಗಳಿಗೆ ಎಷ್ಟು ನಿರೀಕ್ಷೆ ಇದೆ ಎಂಬುದು ಗೊತ್ತಾಗಿದೆ. ಈ ಸಿನಿಮಾದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಿದ್ದಾರೆ. ಫರ್ಹಾದ್​ ಸಮ್ಜಿ ಅವರು ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಏಪ್ರಿಲ್​ 21ರಂದು ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ (Kisi Ka Bhai Kisi Ki Jaan) ತೆರೆಕಾಣಲಿದೆ.

ಸಲ್ಮಾನ್​ ಖಾನ್​ ನಟನೆಯ ಸಿನಿಮಾ ಎಂದರೆ ಖಂಡಿತವಾಗಿಯೂ ಮಾಸ್​ ಆಗಿರುತ್ತವೆ. ಅಲ್ಲಿ ಕಾಮಿಡಿ, ಆ್ಯಕ್ಷನ್​ ಇರಲೇಬೇಕು. ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾದಲ್ಲೂ ಈ ಅಂಶಗಳು ಮಿಸ್​ ಆಗುವುದಿಲ್ಲ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಜೊತೆಗೆ ಲವ್​ ಸ್ಟೋರಿ, ಫ್ಯಾಮಿಲಿ ಸೆಂಟಿಮೆಂಟ್​ ಕೂಡ ಗಮನ ಸೆಳೆಯಲಿದೆ. ಟ್ರೇಲರ್​ ನೋಡಿದ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಎಲ್ಲರಿಂದ ಪಾಸಿಟಿವ್​ ಕಮೆಂಟ್​ಗಳು ಬರುತ್ತಿವೆ.

ಇದನ್ನೂ ಓದಿ
Image
ಸೆಟ್​​ನಲ್ಲಿ ಸಲ್ಲುನ ಭೇಟಿ ಮಾಡೋಕೆ ಬಂದ ರಾಮ್​ ಚರಣ್​ಗೆ ಸಿಕ್ತು ಹಿಂದಿ ಸಿನಿಮಾ ಆಫರ್
Image
ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?
Image
ಬಹಿರಂಗ ವೇದಿಕೆಯಲ್ಲಿ ಸಲ್ಲು ಇದೆಂಥಾ ಕೆಲಸ; ಪೂಜಾ ಹೆಗ್ಡೆ ವಿಚಾರದಲ್ಲಿ ಸಿಕ್ಕಾಪಟ್ಟೆ ಮುಜುಗರ
Image
ಸಲ್ಮಾನ್​ ಖಾನ್ ಫಾರ್ಮ್​ಹೌಸ್​ ಬೆಲೆ 80 ಕೋಟಿ ರೂ.! ಸಲ್ಲು ಮೆಚ್ಚಿನ ಈ ಸ್ಥಳದಲ್ಲಿ ಏನೆಲ್ಲ ಇದೆ?

]ಸಲ್ಮಾನ್​ ಖಾನ್​ ಪಂಚೆ ಧರಿಸಿ ಕುಣಿದಿದ್ದಕ್ಕೆ ಎದುರಾಯ್ತು ಕಿರಿಕ್​; ಸಿನಿಮಾ ಬ್ಯಾನ್​ ಮಾಡಲು ಒತ್ತಾಯ

‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾದಲ್ಲಿ ದಕ್ಷಿಣ ಭಾರತದ ಪ್ರೇಕ್ಷಕರನ್ನೂ ಸೆಳೆಯುವ ಪ್ರಯತ್ನ ಕೂಡ ಆಗಿದೆ. ತೆಲುಗಿನ ಸ್ಟಾರ್​ ನಟ ದಗ್ಗುಬಾಟಿ ವೆಂಕಟೇಶ್​ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಜೊತೆಗೆ, ಜಗಪತಿ ಬಾಬು ಅವರು ಖಳನಾಯಕನಾಗಿ ಅಬ್ಬರಿಸಿದ್ದಾರೆ. ತೆಲುಗು ಹುಡುಗಿ ಪಾತ್ರದಲ್ಲಿ ಪೂಜಾ ಹೆಗ್ಡೆ ನಟಿಸಿದ್ದಾರೆ. ‘ಯೆಂಟಮ್ಮಾ..’ ಹಾಡಿನಲ್ಲಿ ರಾಮ್​ ಚರಣ್​ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಈ ಸಿನಿಮಾ ಹೈಪ್​ ಪಡೆದುಕೊಂಡಿದೆ.

ಬೇರೆ ನಟರ ಚಿತ್ರಗಳಲ್ಲಿ ಅತಿಥಿ ಪಾತ್ರ ಮಾಡುವ ಮೂಲಕ ಅಭಿಮಾನಿಗಳಿಗೆ ದೊಡ್ಡ ಪರದೆಯಲ್ಲಿ ದರ್ಶನ ನೀಡಿದ್ದು ಬಿಟ್ಟರೆ 2022ರಲ್ಲಿ ಸಲ್ಮಾನ್​ ಖಾನ್​ ಅವರು ಯಾವುದೇ ಸಿನಿಮಾ ರಿಲೀಸ್​ ಆಗಲಿಲ್ಲ. ಹಾಗಾಗಿ ಬಹುದಿನಗಳ ಬಳಿಕ ಅವರ ಸಿನಿಮಾ ತೆರೆ ಕಾಣುತ್ತಿರುವುದರಿಂದ ಅಭಿಮಾನಿಗಳ ಮನದಲ್ಲಿ ನಿರೀಕ್ಷೆಯ ಮಟ್ಟ ಹೆಚ್ಚಿದೆ. ಈ ಚಿತ್ರದಲ್ಲಿ ಹೀರೋ ಆಗಿ ನಟಿಸುವುದರ ಜೊತೆಗೆ ನಿರ್ಮಾಣವನ್ನೂ ಸಲ್ಮಾನ್​ ಖಾನ್​ ಅವರೇ ಮಾಡಿದ್ದಾರೆ. ಅವರ ಬ್ಯಾನರ್​ನಲ್ಲಿ ಸಖತ್​ ಅದ್ದೂರಿಯಾಗಿ ಈ ಚಿತ್ರ ಮೂಡಿಬಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:57 pm, Mon, 10 April 23

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್