AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರವೇರಿತು ಗಾಯಕ ಕೆಕೆ ಅಂತ್ಯಸಂಸ್ಕಾರ; ತಂದೆಗೆ ಗುಡ್ ​ಬೈ ಹೇಳಿದ ಪುತ್ರಿ ತಮಾರಾ

ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವುದರೊಳಗೆ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಇದು ನಿಜಕ್ಕೂ ಶಾಕಿಂಗ್ ಬೆಳವಣಿಗೆ ಆಗಿತ್ತು. ಇಂದು ಅವರ ಅಂತ್ಯಕ್ರಿಯೆ ನಡೆದಿದೆ. 

ನೆರವೇರಿತು ಗಾಯಕ ಕೆಕೆ ಅಂತ್ಯಸಂಸ್ಕಾರ; ತಂದೆಗೆ ಗುಡ್ ​ಬೈ ಹೇಳಿದ ಪುತ್ರಿ ತಮಾರಾ
ತಮಾರಾ-ಕೆಕೆ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jun 02, 2022 | 4:32 PM

Share

ಗಾಯಕ ಕೆಕೆ (ಕೃಷ್ಣಕುಮಾರ್ ಕುನ್ನತ್) ಅವರು ಮಂಗಳವಾರ (ಜೂನ್​ 31) ರಾತ್ರಿ ನಿಧನ ಹೊಂದಿದರು. ಅನೇಕ ಸೆಲೆಬ್ರಿಟಿಗಳು ಅವರ ಅಂತಿಮ ದರ್ಶನ ಪಡೆದಿದ್ದಾರೆ. ಕೆಕೆ ಅವರನ್ನು ಕಳೆದುಕೊಂಡಿರುವುದು ಚಿತ್ರರಂಗಕ್ಕೆ ಹಾಗೂ ಸಂಗೀತ ಲೋಕಕ್ಕೆ ನಿಜಕ್ಕೂ ದೊಡ್ಡ ನಷ್ಟ. ಅವರ ಅಂತ್ಯಕ್ರಿಯೆ ಮುಂಬೈನಲ್ಲಿ ನಡೆದಿದೆ. ಸಿನಿಮಾ ರಂಗದವರು, ಕುಟುಂಬದವರು ಹಾಗೂ ಗೆಳೆಯರ ಸಮ್ಮುಖದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆ ನಡೆಯುವುದಕ್ಕೂ ಮೊದಲು ಕೆಕೆ (Singer KK) ಮಗಳು ತಮಾರಾ (Taamara) ತಂದೆಗೆ ಗುಡ್ ​ಬೈ ಹೇಳಿದ್ದಾರೆ.

ಹಲವಾರು ಸೂಪರ್​ ಹಿಟ್​ ಗೀತೆಗಳಿಗೆ ಧ್ವನಿ ನೀಡಿದ ಖ್ಯಾತಿ ಕೆಕೆಗೆ ಇದೆ. ಮೇ 31ರಂದು ಕೋಲ್ಕತ್ತಾದಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಿದ್ದಾಗ ಕೆಕೆ ಅವರ ಆರೋಗ್ಯದಲ್ಲಿ ಸಮಸ್ಯೆ ಉಂಟಾಯಿತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವುದರೊಳಗೆ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಇದು ನಿಜಕ್ಕೂ ಶಾಕಿಂಗ್ ಬೆಳವಣಿಗೆ ಆಗಿತ್ತು. ಅವರ ಅಭಿಮಾನಿಗಳಿಗೆ ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಇಂದು ಅವರ ಅಂತ್ಯಕ್ರಿಯೆ ನಡೆದಿದೆ.

ಇದಕ್ಕೂ ಮೊದಲು ತಮಾರಾ ಅವರು ತಂದೆಯ ಅಂತಿಮ ಸಂಸ್ಕಾರದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಈ ವೇಳೆ ಅವರು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ತಂದೆಗೆ ಗುಡ್​ ಬೈ ಹೇಳಿದ್ದಾರೆ. ಇದನ್ನು ಕೆಕೆ ಫ್ಯಾನ್ಸ್ ಹಂಚಿಕೊಂಡು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
KK Death Case: ಸಿಂಗರ್​ ಕೆಕೆ ಸಾವಿನಲ್ಲಿ ಮೂಡಿದೆ ಅನುಮಾನ; ಮುಖ, ತಲೆಯಲ್ಲಿ ಗಾಯದ ಗುರುತು? ಕೇಸ್​ ದಾಖಲು
Image
KK Death News: ಗಾಯಕ ಕೆಕೆ ನಿಧನ; 1 ಕೋಟಿ ರೂ. ಕೊಟ್ಟರೂ ಅಂಥ ಸ್ಥಳದಲ್ಲಿ ಹಾಡುವುದಿಲ್ಲ ಎಂದಿದ್ದ ಸಿಂಗರ್​
Image
Singer KK Death: ಕೋಲ್ಕತ್ತಾದಲ್ಲಿ ಸಂಗೀತ ಕಾರ್ಯಕ್ರಮ ನೀಡಿದ ನಂತರ 53 ವರ್ಷದ ಗಾಯಕ ಕೆಕೆ ಕುಸಿದು ಬಿದ್ದು ಸಾವು
Image
Edava Basheer Death: ಹಾಡುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಆರ್ಕೆಸ್ಟ್ರಾ ಗಾಯಕ ಎಡವ ಬಶೀರ್​ ನಿಧನ; ವಿಡಿಯೋ ವೈರಲ್​

ಇದನ್ನೂ ಓದಿ: KK Death: ಸಾವಿಗಿಂತ ಕೆಲವೇ ನಿಮಿಷಗಳ ಮುನ್ನ ವೇದಿಕೆ ತೊರೆದಿದ್ದ ಗಾಯಕ ಕೆಕೆ; ಇಲ್ಲಿದೆ ವೈರಲ್​ ವಿಡಿಯೋ

ಗಾಯಕನ ಸಾವಿನ ಸುತ್ತ ಅನುಮಾನ  

ಗಾಯಕ ಕೆಕೆ ಅವರ ಸಾವಿನ ಸುತ್ತ ಈಗ ಅನುಮಾನಗಳು ಹುಟ್ಟಿಕೊಂಡಿವೆ. ಇಂದು (ಜೂನ್​ 1) ಕೋಲ್ಕತ್ತಾದ ಎಸ್​ಎಸ್​ಕೆಎಮ್​ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ಕೆಕೆ ಅವರು ಉಳಿದುಕೊಂಡಿದ್ದ ಖಾಸಗಿ ಹೋಟೆಲ್​ನ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಸಾವಿಗೆ ಅಸಲಿ ಕಾರಣ ಏನು ಎಂಬುದನ್ನು ತಿಳಿಯಲು ತನಿಖೆ ಆರಂಭ ಆಗಿದೆ. ಕಾರ್ಯಕ್ರಮದ ಆಯೋಜಕರು ಮತ್ತು ಹೋಟೆಲ್​ ಸಿಬ್ಬಂದಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಲಿದ್ದಾರೆ.

ಸಂಗೀತ ಕಾರ್ಯಕ್ರಮದ ವೇದಿಕೆಯಲ್ಲಿ ಹಾಡುತ್ತಿದ್ದ ಕೆಕೆ ಅವರಿಗೆ ನಿಜಕ್ಕೂ ಆರೋಗ್ಯ ಸಮಸ್ಯೆ ಆಗಿತ್ತಾ? ಹೋಟೆಲ್​ನಲ್ಲಿ ಅವರ ಮೇಲೆ ಹಲ್ಲೆ ನಡೆಯಿತೇ? ಮುಖ ಮತ್ತು ತಲೆಯಲ್ಲಿ ಗಾಯದ ಗುರುತುಗಳು ಮೂಡಿದ್ದು ಯಾಕೆ? ಇಂಥ ಹಲವಾರು ಪ್ರಶ್ನೆಗಳು ಜನರ ಮನದಲ್ಲಿ ಮೂಡಿವೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಕೆಕೆ ನಿಧನಕ್ಕೆ ಸಂಪಾತ ಸೂಚಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೋಟ್ಯಂತರ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಕೆಕೆ ಅವರಿಗೆ 53 ವರ್ಷ ವಯಸ್ಸಾಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ