AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣನ ಪಾತ್ರ ಮಾಡಿ ಫೇಮಸ್ ಆದ ಸುಮೇಧ್​ ಮೂಗಿಗೆ ಪೆಟ್ಟು; ನಡೆಯಿತು ಸರ್ಜರಿ

ಸುಮೇಧ್ ಅವರು ಆ್ಯಕ್ಷನ್ ದೃಶ್ಯವನ್ನು ಮಾಡುತ್ತಿದ್ದರು. ಈ ವೇಳೆ ನಟನ ಮೂಗಿಗೆ ಗಾಯವಾಯಿತು. ಇದರಿಂದ ಸುಮೇಧ್ ಆಪರೇಷನ್ ಕೂಡ ಮಾಡಲಾಗಿದೆ. ‘ಚಿಂತಿಸಬೇಡಿ, ನನ್ನ ಸ್ಥಿತಿ ಈಗ ಸ್ಥಿರವಾಗಿದೆ. ಚಿಂತಿಸುವ ಅಗತ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.

ಕೃಷ್ಣನ ಪಾತ್ರ ಮಾಡಿ ಫೇಮಸ್ ಆದ ಸುಮೇಧ್​ ಮೂಗಿಗೆ ಪೆಟ್ಟು; ನಡೆಯಿತು ಸರ್ಜರಿ
ಸುಮೇಧ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 05, 2024 | 7:43 AM

Share

ಪ್ರಸಿದ್ಧ ಪೌರಾಣಿಕ ಸರಣಿ ‘ರಾಧಾ ಕೃಷ್ಣ’ ಧಾರಾವಾಹಿಯಲ್ಲಿ ಶ್ರೀಕೃಷ್ಣನ ಪಾತ್ರದ ಮೂಲಕ ಮನೆಮಾತಾಗಿರುವ ನಟ ಸುಮೇಧ್ ಮುದ್ಗಲ್ಕರ್ ಅವರ ಅಭಿಮಾನಿಗಳಿಗೆ ಆಘಾತಕಾರಿ ಸುದ್ದಿ ಇದೆ. ಸೆಟ್‌ನಲ್ಲಿ ಸುಮೇದ್ ಅಪಘಾತಕ್ಕೀಡಾಗಿದ್ದಾರೆ. ಅಪಘಾತದ ನಂತರ, ನಟ ತಮ್ಮ ಪೋಸ್ಟ್ ಮತ್ತು ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ಏನಾಯಿತು ಎನ್ನುವ ಬಗ್ಗೆ ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ. ನಟನ ಫೋಟೋ ನೋಡಿದ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಸುಮೇಧ್ ಅವರ ಪೋಸ್ಟ್ ಎಲ್ಲೆಡೆ ಚರ್ಚೆಯಾಗುತ್ತಿದೆ.

ಸುಮೇಧ್ ಅವರು ಆ್ಯಕ್ಷನ್ ದೃಶ್ಯವನ್ನು ಮಾಡುತ್ತಿದ್ದರು. ಈ ವೇಳೆ ನಟನ ಮೂಗಿಗೆ ಗಾಯವಾಯಿತು. ಇದರಿಂದ ಸುಮೇಧ್ ಆಪರೇಷನ್ ಕೂಡ ಮಾಡಲಾಗಿದೆ. ‘ಚಿಂತಿಸಬೇಡಿ, ನನ್ನ ಸ್ಥಿತಿ ಈಗ ಸ್ಥಿರವಾಗಿದೆ. ಚಿಂತಿಸುವ ಅಗತ್ಯವಿಲ್ಲ. ಗಾಯವು ತುಂಬಾ ದೊಡ್ಡದಲ್ಲ. ಸಂಪೂರ್ಣವಾಗಿ ಗುಣವಾಗಲು ಕೆಲವು ವಾರಗಳು ಬೇಕಾಗುತ್ತದೆ ಎಂದು ನಾನು ಭಾವಿಸುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ. ಅವರು ಸದ್ಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

‘ಇಂತಹ ಘಟನೆಗಳ ಬಗ್ಗೆ ಪೋಸ್ಟ್ ಮಾಡದಿರುವುದು ನಿಮ್ಮೆಲ್ಲರಲ್ಲಿ ಆತಂಕವನ್ನು ಉಂಟುಮಾಡಬಹುದು ಎಂದು ನನಗೆ ತಿಳಿದಿತ್ತು. ಹಾಗಾಗಿ ನಾನೇ ಇದನ್ನು ತಿಳಿಸಲು ಬಯಸಿದೆ. ನಿಮ್ಮ ಪ್ರೀತಿಯನ್ನು ಮರುಪಾವತಿಸಲು ನಾನು ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ’ ಎಂದು ಸುಮೇಧ್ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ.

ಸದ್ಯ ಸುಮೇಧ್ ಅವರ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಭಿಮಾನಿಗಳು ಕಾಮೆಂಟ್ ಮಾಡುವ ಮೂಲಕ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಸುಮೇಧ್ ಅವರ ಸಿನಿಮಾ ಬಗ್ಗೆ ಮಾತನಾಡುತ್ತಾ, ನಟ ಶೀಘ್ರದಲ್ಲೇ ಮರಾಠಿ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸುಮೇಧ್ ತಮ್ಮ ವೃತ್ತಿಜೀವನವನ್ನು ‘ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಸೀಸನ್ 4′ ಮೂಲಕ ಪ್ರಾರಂಭಿಸಿದರು. ಅದರ ನಂತರ ನಟ ಹಿಂತಿರುಗಿ ನೋಡಲಿಲ್ಲ. ‘ರಾಧಾ ಕೃಷ್ಣ’ ಧಾರಾವಾಹಿಯಿಂದ ಸುಮೇಧ್ ಅವರ ಜನಪ್ರಿಯತೆ ಮತ್ತು ಖ್ಯಾತಿ ಹೆಚ್ಚು ಹೆಚ್ಚಾಯಿತು.

ಇದನ್ನೂ ಓದಿ: ಧರ್ಮ ಜೊತೆ ಇರುವ ಸಂಬಂಧ ಎಂಥದ್ದು? ಮೌನ ಮುರಿದ ಅನುಷಾ ರೈ

ಸುಮೇಧ್ ಕೂಡ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಸುಮೇಧ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಪಾರ ಅಭಿಮಾನಿಗಳಿದ್ದಾರೆ. ತಮ್ಮ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರಲು ಸುಮೇಧ್​ ಯಾವಾಗಲೂ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡುತ್ತಾರೆ. ನಟರ ಪ್ರತಿ ಪೋಸ್ಟ್‌ಗೆ ಅಭಿಮಾನಿಗಳು ಲೈಕ್‌ಗಳು ಮತ್ತು ಕಾಮೆಂಟ್‌ಗಳ ಸುರಿಮಳೆ ಸುರಿಸುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ