AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೋಲ್​ಗಳ ಮಧ್ಯೆ ನಿರ್ದೇಶಕ ಓಂ ರಾವತ್ ಪರ ನಿಂತ ‘ಆದಿಪುರುಷ್’ ನಟಿ ಕೃತಿ ಸನೋನ್

ನವರಾತ್ರಿ ಸಂದರ್ಭದಲ್ಲಿ ‘ಆದಿಪುರುಷ್’ ಚಿತ್ರದ ಟೀಸರ್ ರಿಲೀಸ್ ಆಯಿತು. ಈ ಟೀಸರ್​ ಅನ್ನು ಜನರು ಮೆಚ್ಚಿಕೊಳ್ಳುತ್ತಾರೆ ಎಂಬುದು ಚಿತ್ರತಂಡದ ಆಲೋಚನೆ ಆಗಿತ್ತು. ಆದರೆ, ಹಾಗಾಗಿಲ್ಲ.

ಟ್ರೋಲ್​ಗಳ ಮಧ್ಯೆ ನಿರ್ದೇಶಕ ಓಂ ರಾವತ್ ಪರ ನಿಂತ ‘ಆದಿಪುರುಷ್’ ನಟಿ ಕೃತಿ ಸನೋನ್
ಕೃತಿ
TV9 Web
| Edited By: |

Updated on: Nov 19, 2022 | 6:14 PM

Share

ಪ್ರಭಾಸ್ (Prabhas) ಹಾಗೂ ಕೃತಿ ಸನೋನ್ ನಟನೆಯ ‘ಆದಿಪುರುಷ್’ (Adipurush Movie) ಸಿನಿಮಾದ ಟೀಸರ್ ಇತ್ತೀಚೆಗೆ ತೆರೆಗೆ ಬಂತು. ಓಂ ರಾವತ್ ನಿರ್ದೇಶನದ ಈ ಚಿತ್ರದ ಟೀಸರ್ ಸಾಕಷ್ಟು ಟ್ರೋಲ್ ಆಯಿತು. ಈ ಚಿತ್ರದ ಬಗ್ಗೆ ಅನೇಕರು ಟೀಕೆ ಮಾಡಿದ್ದಾರೆ. ಕಳಪೆ ಗ್ರಾಫಿಕ್ಸ್ ಎಂದು ಕೆಲವರು ದೂರಿದರೆ, ಇನ್ನೂ ಕೆಲವರು ರಾವಣನ ಪಾತ್ರದ ಬಗ್ಗೆ ಅಪಸ್ವರ ತೆಗೆದಿದ್ದರು. ಉತ್ತಮ ಗ್ರಾಫಿಕ್ಸ್ ಬಳಕೆ ಮಾಡುವ ಉದ್ದೇಶದಿಂದ ಸಿನಿಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ ಎಂಬ ಮಾತಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ನಟಿ ಕೃತಿ ಸನೋನ್ ಅವರು ಮೌನ ಮುರಿದಿದ್ದಾರೆ. ಅವರು ನಿರ್ದೇಶಕ ಓಂ ರಾವತ್ ಪರ ಬ್ಯಾಟ್ ಬೀಸಿದ್ದಾರೆ.

ನವರಾತ್ರಿ ಸಂದರ್ಭದಲ್ಲಿ ‘ಆದಿಪುರುಷ್’ ಚಿತ್ರದ ಟೀಸರ್ ರಿಲೀಸ್ ಆಯಿತು. ಈ ಟೀಸರ್​ ಅನ್ನು ಜನರು ಮೆಚ್ಚಿಕೊಳ್ಳುತ್ತಾರೆ ಎಂಬುದು ಚಿತ್ರತಂಡದ ಆಲೋಚನೆ ಆಗಿತ್ತು. ಆದರೆ, ಹಾಗಾಗಿಲ್ಲ. ಜನರು ಟೀಸರ್​ ಬಗ್ಗೆ ಕೊಂಕು ತೆಗೆದರು. ರಾವಣನ ಪಾತ್ರ ಅಲ್ಲಾವುದ್ದೀನ್ ಖಿಲ್ಜಿ ರೀತಿ ಕಾಣುತ್ತದೆ ಎಂದು ಕೆಲವರು ಹೇಳಿದರು. ರಾಮ ಸೇತುವೆ ಕಟ್ಟುವ ಸಂದರ್ಭದಲ್ಲಿ ವಾನರ ಸೇನೆ ಜತೆಗೆ ಬೇರೆ ಬೇರೆ ಪ್ರಾಣಿಗಳು ಕಾಣಿಸಿಕೊಂಡಿದ್ದವು. ಇದಕ್ಕೂ ಜನರು ಟೀಕೆ ಮಾಡಿದರು.

‘ಆದಿಪುರುಷ್​’ ಸಿನಿಮಾದಲ್ಲಿ ನಟಿಸಿದ ಬಗ್ಗೆ ನಟಿ ಕೃತಿಗೆ ಹೆಮ್ಮೆ ಇದೆ. ಅವರು ಚಿತ್ರದ ಪರವಾಗಿ ಮಾತನಾಡಿದ್ದಾರೆ. ಸಿನಿಮಾ ಬಗ್ಗೆ ಸಾಕಷ್ಟು ನೀರೀಕ್ಷೆ ಇಟ್ಟುಕೊಂಡಿದ್ದಾರೆ ಅವರು. ‘ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸಿದ್ಧವಾಗಿದೆ. ಇದು ನಮ್ಮ ಇತಿಹಾಸದ ಒಂದು ಭಾಗವಾಗಿದೆ. ಹೀಗಾಗಿ ಎಲ್ಲ ದೃಷ್ಟಿಯಲ್ಲೂ ತುಂಬಾನೇ ಮುಖ್ಯ. ಹೀಗಾಗಿ ಸರಿಯಾದ ರೀತಿಯಲ್ಲಿ ಸಿನಿಮಾ ತೆರೆಮೇಲೆ ತರುವ ಅವಶ್ಯಕತೆ ಇದೆ. ನಮ್ಮ ಕೈಲಾದಷ್ಟು ಒಳ್ಳೆಯ ರೀತಿಯಲ್ಲಿ ಸಿನಿಮಾ ತೆರೆಗೆ ತರುವ ಆಲೋಚನೆ ನಮ್ಮದು’ ಎಂದಿದ್ದಾರೆ ಕೃತಿ ಸನೋನ್.

ಇದನ್ನೂ ಓದಿ:Prabhas: ರಾವಣನ ಪ್ರತಿಕೃತಿ ಸುಡಲು ಮುಂದಾದ ಪ್ರಭಾಸ್​; ಯಾಕೀ ನಿರ್ಧಾರ?

‘ಆದಿಪುರುಷ್’ ಚಿತ್ರಕ್ಕೆ 500 ಕೋಟಿ ರೂಪಾಯಿ ಖರ್ಚಾಗಿದೆ ಎನ್ನಲಾಗಿದೆ. ಈಗ ಸಿನಿಮಾ ಬಗ್ಗೆ ನೆಗೆಟಿವ್ ಟಾಕ್ ಶುರುವಾಗಿರುವುದು ಚಿತ್ರತಂಡಕ್ಕೆ ತಲೆಬಿಸಿ ತಂದಿದೆ. ಈ ಕಾರಣಕ್ಕೆ ವಿಎಫ್​​ಎಕ್ಸ್ ವಿಚಾರದಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳುವ ಆಲೋಚನೆಯಲ್ಲಿ ಚಿತ್ರತಂಡ ಇದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ 2023ರ ಜನವರಿ ತಿಂಗಳಲ್ಲಿ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಚಿತ್ರದ ರಿಲೀಸ್ ದಿನಾಂಕವನ್ನು ಜೂನ್​​ಗೆ ಮುಂದೂಡಲಾಗಿದೆ. ಇದು ಪ್ರಭಾಸ್ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?