AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ‘ಆದಿಪುರುಷ್’ ಚಿತ್ರದ ಶೂಟಿಂಗ್ ಮುಗಿಸಿದ ಕೃತಿ; ನಿರ್ದೇಶಕ ಓಂ ರಾವುತ್ ಹೇಳಿದ್ದೇನು?

Prabhas: ಮುಂಬೈನಲ್ಲಿ ಬಹುನಿರೀಕ್ಷಿತ ‘ಆದಿಪುರುಷ್’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ನಡುವೆ ಚಿತ್ರತಂಡದಿಂದ ಮಹತ್ವದ ಅಪ್ಡೇಟ್ ಸಿಕ್ಕಿದೆ.

Kriti Sanon: ‘ಆದಿಪುರುಷ್’ ಚಿತ್ರದ ಶೂಟಿಂಗ್ ಮುಗಿಸಿದ ಕೃತಿ; ನಿರ್ದೇಶಕ ಓಂ ರಾವುತ್ ಹೇಳಿದ್ದೇನು?
ಪ್ರಭಾಸ್, ಕೃತಿ ಸನೋನ್
TV9 Web
| Edited By: |

Updated on: Oct 17, 2021 | 6:38 PM

Share

ಬಾಲಿವುಡ್​ನಲ್ಲಿ ಪ್ರಸ್ತುತ ಸಖತ್ ಬ್ಯುಸಿಯಿರುವ ನಟಿಯರ ಪೈಕಿ ಕೃತಿ ಸನೋನ್ ಕೂಡ ಒಬ್ಬರು. ಅವರು ದಕ್ಷಿಣ ಭಾರತದ ಚಿತ್ರಗಳ ಜೊತೆಗೆ ಬಾಲಿವುಡ್​ನಲ್ಲೂ ಸಖತ್ ಬ್ಯುಸಿಯಿದ್ದಾರೆ. ಇತ್ತೀಚೆಗೆ ಅವರು ಬಿಗ್ ಬಜೆಟ್ ಚಿತ್ರಗಳ ನಾಯಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಪ್ರಭಾಸ್ ನಟಿಸುತ್ತಿರುವ ಬಹುನಿರೀಕ್ಷಿತ ‘ಆದಿಪುರುಷ್’ ಚಿತ್ರದಲ್ಲಿ ನಾಯಕಿಯ ಪಾತ್ರದಲ್ಲಿ ಕೃತಿ ಬಣ್ಣ ಹಚ್ಚುತ್ತಿದ್ದಾರೆ. ರಾಮಾಯಣವನ್ನು ಆಧರಿಸಿದ ‘ಆದಿಪುರುಷ್’ ಈಗಾಗಲೇ ತನ್ನ ಪಾತ್ರವರ್ಗದಿಂದ ಗಮನ ಸೆಳೆದಿದೆ. ಪ್ರಭಾಸ್ ರಾಮನಾಗಿ ಕಾಣಿಸಿಕೊಳ್ಳುತ್ತಿದ್ದು, ಕೃತಿ, ಸೀತೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಚಿತ್ರತಂಡದಿಂದ ಹೊಸ ಅಪ್ಡೇಟ್ ಸಿಕ್ಕಿದೆ.

ಪ್ರಭಾಸ್ ‘ಸಲಾರ್’ ಹಾಗೂ ‘ಆದಿಪುರುಷ್’ ಎರಡೂ ಚಿತ್ರಗಳ ಚಿತ್ರೀಕರಣದಲ್ಲಿ ಬ್ಯುಸಿಯಿದ್ದಾರೆ. ಪ್ರಸ್ತುತ ಮುಂಬೈನಲ್ಲಿ ನಡೆಯುತ್ತಿರುವ ಆದಿಪುರುಷ್ ಚಿತ್ರೀರಣದಲ್ಲಿ ಅವರು ಭಾಗಿಯಾಗಿದ್ದು, ಚಿತ್ರೀಕರಣ ಭರದಿಂದ ಸಾಗುತ್ತಿದೆ. ನಾಯಕಿ ಕೃತಿ ಕೂಡ ಚಿತ್ರತಂಡವನ್ನು ಸೇರಿಕೊಂಡಿದ್ದರು. ಇತ್ತೀಚೆಗೆ ಚಿತ್ರತಂಡದಿಂದ ಬಂದಿರುವ ಮಾಹಿತಿತ ಪ್ರಕಾರ, ಜಾನಕಿಯ ಪಾತ್ರದ ಚಿತ್ರೀಕರಣ ಮುಗಿದಿದೆ. ಅರ್ಥಾತ್ ಕೃತಿ ಸನೋನ್ ಪಾತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಕೇಕ್ ಕಟ್ ಮಾಡಿ ಸಂಭ್ರಮಾಚರಣೆ ನಡೆಸಲಾಗಿದೆ.

ಚಿತ್ರದ ನಿರ್ದೇಶಕ ಓಂ ರಾವುತ್ ಈ ಕುರಿತು ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಓಂ ರಾವುತ್ ಕೃತಿ ಅಭಿನಯವನ್ನೂ ಹಾಡಿ ಹೊಗಳಿದ್ದಾರೆ. ‘ಕೃತಿ, ನೀವು ಜಾನಕಿಯ ಪಾತ್ರವನ್ನು ನಿಭಾಯಿಸುವುದನ್ನು ನೋಡುವುದು ಮಾಯಕದಂತೆ ಭಾಸವಾಗುತ್ತದೆ. ನಿಮ್ಮ ಚಿತ್ರೀಕರಣ ಮುಗಿದಿದೆ ಎನ್ನುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಈ ಪಯಣ ಬಹಳ ಚೆನ್ನಾಗಿತ್ತು’ ಎಂದು ಓಂ ರಾವುತ್ ಬರೆದುಕೊಂಡಿದ್ದಾರೆ. ಇದರೊಂದಿಗೆ ಅವರು ಕೇಕ್ ಕಟ್ ಮಾಡುತ್ತಿರುವ ಚಿತ್ರವನ್ನೂ ಹಂಚಿಕೊಂಡಿದ್ದಾರೆ.

ಓಂ ರಾವುತ್ ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

‘ಆದಿಪುರುಷ್’ ಚಿತ್ರದಲ್ಲಿ ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಟ ಸನ್ನಿ ಸಿಂಗ್ ಲಕ್ಷ್ಮಣನ ಪಾತ್ರದಲ್ಲಿ ಬಣ್ಣಹಚ್ಚುತ್ತಿದ್ದಾರೆ. ಬಿಗ್ ಬಜೆಟ್​ನಲ್ಲಿ ತಯಾರಾಗುತ್ತಿರುವ ಈ ಚಿತ್ರದ ಕುರಿತು ಚಿತ್ರಪ್ರೇಮಿಗಳಲ್ಲಿ ಬಹಳ ದೊಡ್ಡ ನಿರೀಕ್ಷೆ ಇದೆ.

ಇದನ್ನೂ ಓದಿ:

ಪ್ರಶಾಂತ್​ ನೀಲ್​ ಮತ್ತು ರಾಮ ಚರಣ್​ ಭೇಟಿಯ ಅಸಲಿಯತ್ತೇ ಬೇರೆ; ಕೊನೆಗೂ ಹೊರಬಿತ್ತು ಸತ್ಯ

ಕೋಲಾರ: ‘ಸಲಗ’ ಚಿತ್ರ ಯಶಸ್ವಿಯಾದ ಹಿನ್ನೆಲೆ; ಮಂಡಿಯೂರಿ ಮೆಟ್ಟಿಲು ಹತ್ತಿ ಹರಕೆ ತೀರಿಸಿದ ಅಭಿಮಾನಿಗಳು

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?