AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆದಿಪುರುಷ್​’ ಸೋಲಿನ ಬಳಿಕ ರಗಡ್​ ಆಗಿ ಬರ್ತಿದ್ದಾರೆ ಕೃತಿ ಸನೋನ್​; ‘ಗಣಪತ್​’ ಪೋಸ್ಟರ್​ ವೈರಲ್​

ಗೌರಿ ಗಣೇಶ ಹಬ್ಬವನ್ನು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗಿದೆ. ಸಿನಿಮಾ ಮಂದಿಗೂ ಈ ಹಬ್ಬ ಅಂದರೆ ಸ್ಪೆಷಲ್​. ಈ ವಿಶೇಷ ದಿನದಂದು ಅನೇಕ ಸಿನಿಮಾ ತಂಡಗಳು ಹೊಸ ಪೋಸ್ಟರ್​ಗಳನ್ನು ಬಿಡುಗಡೆ ಮಾಡಿವೆ. ‘ಗಣಪತ್​: ಎ ಹೀರೋ ಈಸ್​ ಬಾರ್ನ್​’ ಚಿತ್ರತಂಡ ಕೂಡ ಪೋಸ್ಟರ್​ ರಿಲೀಸ್​ ಮಾಡಿದ್ದು, ಅದರಲ್ಲಿ ಕೃತಿ ಸನೋನ್​ ಅವರು ಮಾಸ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ.

‘ಆದಿಪುರುಷ್​’ ಸೋಲಿನ ಬಳಿಕ ರಗಡ್​ ಆಗಿ ಬರ್ತಿದ್ದಾರೆ ಕೃತಿ ಸನೋನ್​; ‘ಗಣಪತ್​’ ಪೋಸ್ಟರ್​ ವೈರಲ್​
ಕೃತಿ ಸನೋನ್​
ಮದನ್​ ಕುಮಾರ್​
|

Updated on: Sep 19, 2023 | 3:43 PM

Share

ಬಾಲಿವುಡ್​ ಬೆಡಗಿ ಕೃತಿ ಸನೋನ್​ (Kriti Sanon) ಅವರು ಯಾವ ಪಾತ್ರ ಕೊಟ್ಟರೂ ಅದಕ್ಕೆ ನ್ಯಾಯ ಒದಗಿಸುತ್ತಾರೆ. ಪ್ರಭಾಸ್​ ನಟನೆಯ ‘ಆದಿಪುರುಷ್​’ ಸಿನಿಮಾದಲ್ಲಿ ಕೃತಿ ಸನೋನ್​ಗೆ ಸೀತೆಯ ಪಾತ್ರ ನೀಡಲಾಗಿತ್ತು. ಬಹಳ ಸೌಮ್ಯ ಸ್ವಭಾವದ ಆ ಪಾತ್ರಕ್ಕೆ ಅವರು ಜೀವ ತುಂಬಿದ್ದರು. ಆದರೆ ಆ ಸಿನಿಮಾ ಗೆಲ್ಲಲಿಲ್ಲ. ಈಗ ಅದಕ್ಕೆ ತದ್ವಿರುದ್ಧವಾದಂತಹ ಒಂದು ಗೆಟಪ್​ನಲ್ಲಿ ಪ್ರೇಕ್ಷಕರ ಮುಂದೆ ಬರಲು ಕೃತಿ ಸನೋನ್​ ಸಜ್ಜಾಗಿದ್ದಾರೆ. ಹೌದು, ಶೀಘ್ರದಲ್ಲೇ ರಿಲೀಸ್​ ಆಗಲಿರುವ ‘ಗಣಪತ್: ಎ ಹೀರೋ ಈಸ್​ ಬಾರ್ನ್​’ (Ganapath: A Hero Is Born) ಸಿನಿಮಾದಲ್ಲಿ ಅವರು ರಗಡ್​ ಪಾತ್ರ ಮಾಡಿದ್ದಾರೆ. ಅದರ ಝಲಕ್ ತೋರಿಸುವಂತಹ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ನಾಯಕನಾಗಿ ಟೈಗರ್​ ಶ್ರಾಫ್​ (Tiger Shroff) ನಟಿಸುತ್ತಿದ್ದಾರೆ. ಲೆಜೆಂಡರಿ ನಟ ಅಮಿತಾಭ್​ ಬಚ್ಚನ್​ ಅವರಿಗೂ ಒಂದು ಮುಖ್ಯವಾದ ಪಾತ್ರ ಇದೆ.

ಗೌರಿ ಗಣೇಶ ಹಬ್ಬವನ್ನು ಎಲ್ಲ ಕಡೆಗಳಲ್ಲಿ ಬಹಳ ಸಂಭ್ರಮದಿಂದ ಆಚರಿಸಲಾಗಿದೆ. ಸಿನಿಮಾ ಮಂದಿಗೂ ಈ ಹಬ್ಬ ಸಖತ್​ ಸ್ಪೆಷಲ್​. ಈ ವಿಶೇಷ ದಿನದಂದು ಅನೇಕ ಸಿನಿಮಾ ತಂಡಗಳು ಹೊಸ ಪೋಸ್ಟರ್​ಗಳನ್ನು ಬಿಡುಗಡೆ ಮಾಡಿವೆ. ‘ಗಣಪತ್​: ಎ ಹೀರೋ ಈಸ್​ ಬಾರ್ನ್​’ ಚಿತ್ರತಂಡ ಕೂಡ ಪೋಸ್ಟರ್​ ರಿಲೀಸ್​ ಮಾಡಿದ್ದು, ಅದರಲ್ಲಿ ಕೃತಿ ಸನೋನ್​ ಅವರು ಮಾಸ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟರ್​ ವೈರಲ್​ ಆಗುತ್ತಿದೆ. ಆ ಮೂಲಕ ಚಿತ್ರದ ಮೇಲಿನ ನಿರೀಕ್ಷೆ ಜಾಸ್ತಿ ಆಗಿದೆ.

ಇದಕ್ಕೂ ಮುನ್ನ ಟೈಗರ್​ ಶ್ರಾಫ್​ ಅವರ ಪೋಸ್ಟರ್​ ಬಿಡುಗಡೆ ಮಾಡಲಾಗಿತ್ತು. ಅವರು ಕೂಡ ಆ್ಯಕ್ಷನ್​ ಅವತಾರದಲ್ಲಿ ಪೋಸ್​ ನೀಡಿದ್ದಾರೆ. ಬೇಟೆಗೆ ಸಜ್ಜಾಗಿರುವ ಹುಲಿಯಂತೆ ಅವರ ಪೋಸ್ಟರ್​ ಮೂಡಿಬಂದಿದೆ. ಅವರ ಕಟ್ಟುಮಸ್ತಾದ ಬಾಡಿ ಕೂಡ ಗಮನ ಸೆಳೆಯುತ್ತಿದೆ. ಟೈಗರ್​ ಶ್ರಾಫ್​ ನಟನೆಯ ಸಿನಿಮಾ ಎಂದರೆ ಅಭಿಮಾನಿಗಳು ಭರ್ಜರಿ ಸಾಹಸ ದೃಶ್ಯಗಳನ್ನು ಇಷ್ಟಪಡುತ್ತಾರೆ. ‘ಗಣಪತ್​: ಎ ಹೀರೋ ಈಸ್​ ಬಾರ್ನ್​’ ಸಿನಿಮಾದಲ್ಲಿ ಕೂಡ ಮೈನವಿರೇಳಿಸುವಂತಹ ಆ್ಯಕ್ಷನ್​ ದೃಶ್ಯಗಳು ಇರಲಿವೆ ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದ ಅಲ್ಲು ಅರ್ಜುನ್​; ಆಲಿಯಾ ಭಟ್​, ಕೃತಿ ಸನೋನ್​ಗೆ ‘ಅತ್ಯುತ್ತಮ ನಟಿ’ ಅವಾರ್ಡ್​

ಕೃತಿ ಸನೋನ್​, ಅಮಿತಾಭ್​ ಬಚ್ಚನ್​, ಟೈಗರ್​ ಶ್ರಾಫ್​ ಅವರಂತಹ ಘಟಾನುಘಟಿ ಕಲಾವಿದರ ಸಂಗಮ ‘ಗಣಪತ್​: ಎ ಹೀರೋ ಈಸ್​ ಬಾರ್ನ್​’ ಸಿನಿಮಾದಲ್ಲಿ ಆಗಿರುವುದರಿಂದ ಅಭಿಮಾನಿಗಳು ಈ ಚಿತ್ರದ ಬಿಡುಗಡೆಗಾಗಿ ಕಾದಿದ್ದಾರೆ. ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್​ 20ರಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ರಿಲೀಸ್​ ಆಗಲಿದೆ. ಹಿಂದಿ, ಕನ್ನಡ, ಮಲಯಾಳಂ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಈ ಚಿತ್ರ ಪ್ರದರ್ಶನ ಕಾಣಲಿದೆ. ಈ ಸಿನಿಮಾಗೆ ವಿಕಾಸ್​ ಬಹ್ಲ್​ ಅವರು ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?