AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆದಿಪುರುಷ್​’ ಸೋಲಿನ ಬಳಿಕ ರಗಡ್​ ಆಗಿ ಬರ್ತಿದ್ದಾರೆ ಕೃತಿ ಸನೋನ್​; ‘ಗಣಪತ್​’ ಪೋಸ್ಟರ್​ ವೈರಲ್​

ಗೌರಿ ಗಣೇಶ ಹಬ್ಬವನ್ನು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗಿದೆ. ಸಿನಿಮಾ ಮಂದಿಗೂ ಈ ಹಬ್ಬ ಅಂದರೆ ಸ್ಪೆಷಲ್​. ಈ ವಿಶೇಷ ದಿನದಂದು ಅನೇಕ ಸಿನಿಮಾ ತಂಡಗಳು ಹೊಸ ಪೋಸ್ಟರ್​ಗಳನ್ನು ಬಿಡುಗಡೆ ಮಾಡಿವೆ. ‘ಗಣಪತ್​: ಎ ಹೀರೋ ಈಸ್​ ಬಾರ್ನ್​’ ಚಿತ್ರತಂಡ ಕೂಡ ಪೋಸ್ಟರ್​ ರಿಲೀಸ್​ ಮಾಡಿದ್ದು, ಅದರಲ್ಲಿ ಕೃತಿ ಸನೋನ್​ ಅವರು ಮಾಸ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ.

‘ಆದಿಪುರುಷ್​’ ಸೋಲಿನ ಬಳಿಕ ರಗಡ್​ ಆಗಿ ಬರ್ತಿದ್ದಾರೆ ಕೃತಿ ಸನೋನ್​; ‘ಗಣಪತ್​’ ಪೋಸ್ಟರ್​ ವೈರಲ್​
ಕೃತಿ ಸನೋನ್​
ಮದನ್​ ಕುಮಾರ್​
|

Updated on: Sep 19, 2023 | 3:43 PM

Share

ಬಾಲಿವುಡ್​ ಬೆಡಗಿ ಕೃತಿ ಸನೋನ್​ (Kriti Sanon) ಅವರು ಯಾವ ಪಾತ್ರ ಕೊಟ್ಟರೂ ಅದಕ್ಕೆ ನ್ಯಾಯ ಒದಗಿಸುತ್ತಾರೆ. ಪ್ರಭಾಸ್​ ನಟನೆಯ ‘ಆದಿಪುರುಷ್​’ ಸಿನಿಮಾದಲ್ಲಿ ಕೃತಿ ಸನೋನ್​ಗೆ ಸೀತೆಯ ಪಾತ್ರ ನೀಡಲಾಗಿತ್ತು. ಬಹಳ ಸೌಮ್ಯ ಸ್ವಭಾವದ ಆ ಪಾತ್ರಕ್ಕೆ ಅವರು ಜೀವ ತುಂಬಿದ್ದರು. ಆದರೆ ಆ ಸಿನಿಮಾ ಗೆಲ್ಲಲಿಲ್ಲ. ಈಗ ಅದಕ್ಕೆ ತದ್ವಿರುದ್ಧವಾದಂತಹ ಒಂದು ಗೆಟಪ್​ನಲ್ಲಿ ಪ್ರೇಕ್ಷಕರ ಮುಂದೆ ಬರಲು ಕೃತಿ ಸನೋನ್​ ಸಜ್ಜಾಗಿದ್ದಾರೆ. ಹೌದು, ಶೀಘ್ರದಲ್ಲೇ ರಿಲೀಸ್​ ಆಗಲಿರುವ ‘ಗಣಪತ್: ಎ ಹೀರೋ ಈಸ್​ ಬಾರ್ನ್​’ (Ganapath: A Hero Is Born) ಸಿನಿಮಾದಲ್ಲಿ ಅವರು ರಗಡ್​ ಪಾತ್ರ ಮಾಡಿದ್ದಾರೆ. ಅದರ ಝಲಕ್ ತೋರಿಸುವಂತಹ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ನಾಯಕನಾಗಿ ಟೈಗರ್​ ಶ್ರಾಫ್​ (Tiger Shroff) ನಟಿಸುತ್ತಿದ್ದಾರೆ. ಲೆಜೆಂಡರಿ ನಟ ಅಮಿತಾಭ್​ ಬಚ್ಚನ್​ ಅವರಿಗೂ ಒಂದು ಮುಖ್ಯವಾದ ಪಾತ್ರ ಇದೆ.

ಗೌರಿ ಗಣೇಶ ಹಬ್ಬವನ್ನು ಎಲ್ಲ ಕಡೆಗಳಲ್ಲಿ ಬಹಳ ಸಂಭ್ರಮದಿಂದ ಆಚರಿಸಲಾಗಿದೆ. ಸಿನಿಮಾ ಮಂದಿಗೂ ಈ ಹಬ್ಬ ಸಖತ್​ ಸ್ಪೆಷಲ್​. ಈ ವಿಶೇಷ ದಿನದಂದು ಅನೇಕ ಸಿನಿಮಾ ತಂಡಗಳು ಹೊಸ ಪೋಸ್ಟರ್​ಗಳನ್ನು ಬಿಡುಗಡೆ ಮಾಡಿವೆ. ‘ಗಣಪತ್​: ಎ ಹೀರೋ ಈಸ್​ ಬಾರ್ನ್​’ ಚಿತ್ರತಂಡ ಕೂಡ ಪೋಸ್ಟರ್​ ರಿಲೀಸ್​ ಮಾಡಿದ್ದು, ಅದರಲ್ಲಿ ಕೃತಿ ಸನೋನ್​ ಅವರು ಮಾಸ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟರ್​ ವೈರಲ್​ ಆಗುತ್ತಿದೆ. ಆ ಮೂಲಕ ಚಿತ್ರದ ಮೇಲಿನ ನಿರೀಕ್ಷೆ ಜಾಸ್ತಿ ಆಗಿದೆ.

ಇದಕ್ಕೂ ಮುನ್ನ ಟೈಗರ್​ ಶ್ರಾಫ್​ ಅವರ ಪೋಸ್ಟರ್​ ಬಿಡುಗಡೆ ಮಾಡಲಾಗಿತ್ತು. ಅವರು ಕೂಡ ಆ್ಯಕ್ಷನ್​ ಅವತಾರದಲ್ಲಿ ಪೋಸ್​ ನೀಡಿದ್ದಾರೆ. ಬೇಟೆಗೆ ಸಜ್ಜಾಗಿರುವ ಹುಲಿಯಂತೆ ಅವರ ಪೋಸ್ಟರ್​ ಮೂಡಿಬಂದಿದೆ. ಅವರ ಕಟ್ಟುಮಸ್ತಾದ ಬಾಡಿ ಕೂಡ ಗಮನ ಸೆಳೆಯುತ್ತಿದೆ. ಟೈಗರ್​ ಶ್ರಾಫ್​ ನಟನೆಯ ಸಿನಿಮಾ ಎಂದರೆ ಅಭಿಮಾನಿಗಳು ಭರ್ಜರಿ ಸಾಹಸ ದೃಶ್ಯಗಳನ್ನು ಇಷ್ಟಪಡುತ್ತಾರೆ. ‘ಗಣಪತ್​: ಎ ಹೀರೋ ಈಸ್​ ಬಾರ್ನ್​’ ಸಿನಿಮಾದಲ್ಲಿ ಕೂಡ ಮೈನವಿರೇಳಿಸುವಂತಹ ಆ್ಯಕ್ಷನ್​ ದೃಶ್ಯಗಳು ಇರಲಿವೆ ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದ ಅಲ್ಲು ಅರ್ಜುನ್​; ಆಲಿಯಾ ಭಟ್​, ಕೃತಿ ಸನೋನ್​ಗೆ ‘ಅತ್ಯುತ್ತಮ ನಟಿ’ ಅವಾರ್ಡ್​

ಕೃತಿ ಸನೋನ್​, ಅಮಿತಾಭ್​ ಬಚ್ಚನ್​, ಟೈಗರ್​ ಶ್ರಾಫ್​ ಅವರಂತಹ ಘಟಾನುಘಟಿ ಕಲಾವಿದರ ಸಂಗಮ ‘ಗಣಪತ್​: ಎ ಹೀರೋ ಈಸ್​ ಬಾರ್ನ್​’ ಸಿನಿಮಾದಲ್ಲಿ ಆಗಿರುವುದರಿಂದ ಅಭಿಮಾನಿಗಳು ಈ ಚಿತ್ರದ ಬಿಡುಗಡೆಗಾಗಿ ಕಾದಿದ್ದಾರೆ. ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್​ 20ರಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ರಿಲೀಸ್​ ಆಗಲಿದೆ. ಹಿಂದಿ, ಕನ್ನಡ, ಮಲಯಾಳಂ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಈ ಚಿತ್ರ ಪ್ರದರ್ಶನ ಕಾಣಲಿದೆ. ಈ ಸಿನಿಮಾಗೆ ವಿಕಾಸ್​ ಬಹ್ಲ್​ ಅವರು ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು