Kriti Sanon: ಟ್ರೋಲ್​ಗಳ ನಡುವೆಯೂ ಶಾಲೆ ಮಕ್ಕಳಿಗೆ ಉಚಿತವಾಗಿ ‘ಆದಿಪುರುಷ್​’ ಚಿತ್ರ ತೋರಿಸಲು ಮುಂದಾದ ಕೃತಿ ಸನೋನ್​

Adipurush Controversy: ‘ಆದಿಪುರುಷ್​’ ಸಿನಿಮಾವನ್ನು ಮಕ್ಕಳು ಸಖತ್​ ಎಂಜಾಯ್​ ಮಾಡುತ್ತಾರೆ ಎಂಬುದು ಕೃತಿ ಸನೋನ್​ ನಂಬಿಕೆ. ಹಾಗಾಗಿ ತಾವು ಓದಿದ ಶಾಲೆಯ ಮಕ್ಕಳಿಗೆ ಈ ಚಿತ್ರವನ್ನು ತೋರಿಸಲು ಅವರು ಮುಂದಾಗಿದ್ದಾರೆ.

Kriti Sanon: ಟ್ರೋಲ್​ಗಳ ನಡುವೆಯೂ ಶಾಲೆ ಮಕ್ಕಳಿಗೆ ಉಚಿತವಾಗಿ ‘ಆದಿಪುರುಷ್​’ ಚಿತ್ರ ತೋರಿಸಲು ಮುಂದಾದ ಕೃತಿ ಸನೋನ್​
ಕೃತಿ ಸನೋನ್
Follow us
|

Updated on: Jun 21, 2023 | 4:17 PM

ನಟಿ ಕೃತಿ ಸನೋನ್​ (Kriti Sanon) ಅವರ ಅಭಿಮಾನಿಗಳು ‘ಆದಿಪುರುಷ್​’ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಅಂದುಕೊಂಡ ರೀತಿಯಲ್ಲಿ ಸಿನಿಮಾ ಮೂಡಿಬಂದಿಲ್ಲ ಎಂಬ ಕಾರಣಕ್ಕೆ ಈ ಚಿತ್ರವನ್ನು ಎಲ್ಲರೂ ಟ್ರೋಲ್​ ಮಾಡುತ್ತಿದ್ದಾರೆ. ರಾಮಾಯಣದ (Ramayana) ಕಥೆಯನ್ನು ಆಧರಿಸಿದ ಈ ಸಿನಿಮಾದಲ್ಲಿ ಕೃತಿ ಸನೋನ್​ ಅವರು ಸೀತೆಯ ಪಾತ್ರ ಮಾಡಿದ್ದಾರೆ. ಯಾರು ಎಷ್ಟೇ ಟೀಕಿಸಿದರೂ ಕೃತಿ ಸನೋನ್ ಅವರಿಗೆ ತಮ್ಮ ಸಿನಿಮಾ ಮೇಲಿನ ಹೆಮ್ಮೆಯ ಭಾವನೆ ಕುಗ್ಗಿಲ್ಲ. ‘ಆದಿಪುರುಷ್​’ (Adipurush Movie) ಚಿತ್ರವನ್ನು ಶಾಲೆಯ ಮಕ್ಕಳಿಗೆ ತೋರಿಸಲು ಅವರು ನಿರ್ಧರಿಸಿದ್ದಾರೆ. ಕೃತಿ ಸನೋನ್​ ಅವರು ಓದಿದ್ದು ದೆಹಲಿ ಪಬ್ಲಿಕ್​ ಸ್ಕೂಲ್​ನಲ್ಲಿ. ಆ ಶಾಲೆಯ ಮಕ್ಕಳಿಗಾಗಿ ಅವರು ದೆಹಲಿಯ ಮಲ್ಟಿಪ್ಲೆಕ್ಸ್​ನಲ್ಲಿ ಒಂದು ಪೂರ್ತಿ ಶೋನ ಟಿಕೆಟ್​ ಬುಕ್​ ಮಾಡಿದ್ದಾರೆ ಎಂದು ವರದಿ ಆಗಿದೆ.

‘ಆದಿಪುರುಷ್​’ ಸಿನಿಮಾವನ್ನು ಮಕ್ಕಳು ಸಖತ್​ ಎಂಜಾಯ್​ ಮಾಡುತ್ತಾರೆ ಎಂಬುದು ಕೃತಿ ಸನೋನ್​ ನಂಬಿಕೆ. ಹಾಗಾಗಿ ತಾವು ಓದಿದ ಶಾಲೆಯ ಮಕ್ಕಳಿಗೆ ಈ ಚಿತ್ರವನ್ನು ತೋರಿಸಲು ಅವರು ಮುಂದಾಗಿದ್ದಾರೆ. ಈ ವೇಳೆ ಅವರು ಕೂಡ ಮಕ್ಕಳ ಜೊತೆ ಕುಳಿತು ಸಿನಿಮಾ ವೀಕ್ಷಿಸಲಿದ್ದಾರೆ. ಆ ಬಳಿಕ ಅಲ್ಲಿಯೇ ಸಂವಾದ ಕೂಡ ನಡೆಸಲಿದ್ದಾರೆ. ಅದಕ್ಕಾಗಿ ಮಲ್ಟಿಪ್ಲೆಕ್ಸ್​ನಲ್ಲಿ ಸಕಲ ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾಗೆ ಓಂ ರಾವತ್​ ಅವರು ನಿರ್ದೇಶನ ಮಾಡಿದ್ದಾರೆ. ರಾಮನ ಪಾತ್ರವನ್ನು ಪ್ರಭಾಸ್​ ಮಾಡಿದ್ದಾರೆ.

ಇದನ್ನೂ ಓದಿ: Kriti Sanon: ಸೀತೆ ಪಾತ್ರದಲ್ಲಿ ಗಮನ ಸೆಳೆದ ಕೃತಿ ಸನೋನ್​; ಆದರೂ ಆಭಿಮಾನಿಗಳಿಗೆ ಒಂದು ಬೇಸರ

ರಾಮಾಯಣವನ್ನು ಸರಿಯಾಗಿ ತೋರಿಸಿಲ್ಲ ಎಂಬ ಕಾರಣಕ್ಕೆ ‘ಆದಿಪುರುಷ್​’ ಸಿನಿಮಾವನ್ನು ಜನರು ಟ್ರೋಲ್​ ಮಾಡುತ್ತಿದ್ದಾರೆ. ಪ್ರತಿ ಪಾತ್ರದಲ್ಲೂ ತಪ್ಪು ಹುಡುಕಲಾಗುತ್ತಿದೆ. ಸಂಭಾಷಣೆ ಕೂಡ ಕಳಪೆ ಆಗಿದೆ ಎಂದು ಪ್ರೇಕ್ಷಕರು ಆರೋಪಿಸಿದ್ದಾರೆ. ಈ ಸಿನಿಮಾವನ್ನು ಬ್ಯಾನ್​ ಮಾಡಬೇಕು ಎಂದು ಸಹ ಕೆಲವರು ಒತ್ತಾಯಿಸಿದ್ದಾರೆ. ಇಷ್ಟೆಲ್ಲ ಟೀಕೆ ಎದುರಾದರೂ ಕೂಡ ಅವುಗಳ ಬಗ್ಗೆ ಕೃತಿ ಸನೋನ್​ ತಲೆ ಕೆಡಿಸಿಕೊಡಿಲ್ಲ. ಅವರು ಕೇವಲ ಪಾಸಿಟಿವ್​ ಪ್ರತಿಕ್ರಿಯೆಗಳ ಬಗ್ಗೆ ಮಾತ್ರ ಗಮನ ಹರಿಸುತ್ತಿದ್ದಾರೆ. ಜನರು ಚಿತ್ರಮಂದಿರದಲ್ಲಿ ಈ ಸಿನಿಮಾ ನೋಡಿ ಖುಷಿಪಡುತ್ತಿರುವ ಕೆಲವು ವಿಡಿಯೋ ತುಣುಕುಗಳನ್ನು ಕೃತಿ ಸನೋನ್​ ಅವರು ಇತ್ತೀಚೆಗೆ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ: ದೇವಸ್ಥಾನದಲ್ಲೇ ಕೃತಿ ಸನೋನ್​ಗೆ ಕಿಸ್ ಮಾಡಿದ ನಿರ್ದೇಶಕ; ವ್ಯಕ್ತವಾಯಿತು ಟೀಕೆ

ಬಾಲಿವುಡ್​ನಲ್ಲಿ ಬಹುಬೇಡಿಕೆಯ ಹೀರೋಯಿನ್​ ಆಗಿ ಕೃತಿ ಸನೋನ್​ ಗುರುತಿಸಿಕೊಂಡಿದ್ದಾರೆ. ಅನೇಕ ಬಗೆಯ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ‘ಆದಿಪುರುಷ್​’ ಚಿತ್ರದಲ್ಲಿ ಅವರಿಗೆ ಪೌರಾಣಿಕ ಪಾತ್ರಕ್ಕೆ ಬಣ್ಣ ಹಚ್ಚುವ ಅವಕಾಶ ಸಿಕ್ಕಿತು. ಜನರ ನಿರೀಕ್ಷೆಯಂತೆ ಸಿನಿಮಾ ಮೂಡಿಬಂದಿದ್ದರೆ ಕೃತಿ ಅವರ ಖ್ಯಾತಿ ಹೆಚ್ಚುತ್ತಿತ್ತು. ಆದರೆ ನಿರ್ದೇಶಕರು ಆಧುನಿಕ ಶೈಲಿಯಲ್ಲಿ ರಾಮಾಯಣದ ಕಥೆ ಹೇಳಲು ಪ್ರಯತ್ನಿಸಿರುವುದನ್ನು ಪ್ರೇಕ್ಷಕರು ವಿರೋಧಿಸುತ್ತಿದ್ದಾರೆ. ಕೃತಿ ಸನೋನ್​ ಅವರಿಗೆ ಈ ಚಿತ್ರದಲ್ಲಿ ಹೆಚ್ಚಿನ ಸ್ಕ್ರೀನ್​ ಸ್ಪೇಸ್ ಸಿಕ್ಕಿಲ್ಲ. ದಿನದಿಂದ ದಿನಕ್ಕೆ ‘ಆದಿಪುರುಷ್​’ ಕಲೆಕ್ಷನ್​ ತಗ್ಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!