AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivek Agnihotri: ‘ಪಠಾಣ್​ ಚಿತ್ರದ ವಿವಾದದಿಂದ ವಿವೇಕ್​ ಅಗ್ನಿಹೋತ್ರಿ ಪ್ರಚಾರ ಪಡೆಯುತ್ತಿದ್ದಾರೆ’: ಕೆಆರ್​ಕೆ ಆರೋಪ

KRK | Pathaan Movie: ವಿವೇಕ್​ ಅಗ್ನಿಹೋತ್ರಿ ಅವರು ಇತ್ತೀಚೆಗೆ ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಸ್ಕ್ರೀನ್​ ಶಾಟ್​ಗಳನ್ನು ಶೇರ್​ ಮಾಡಿಕೊಂಡಿದ್ದರು. ಅದರ ಕುರಿತು ಈಗ ಕಮಾಲ್​ ಆರ್​. ಖಾನ್​ ಟ್ವೀಟ್​ ಮಾಡಿದ್ದಾರೆ.

Vivek Agnihotri: ‘ಪಠಾಣ್​ ಚಿತ್ರದ ವಿವಾದದಿಂದ ವಿವೇಕ್​ ಅಗ್ನಿಹೋತ್ರಿ ಪ್ರಚಾರ ಪಡೆಯುತ್ತಿದ್ದಾರೆ’: ಕೆಆರ್​ಕೆ ಆರೋಪ
ಕಮಾಲ್ ಆರ್. ಖಾನ್, ವಿವೇಕ್ ಅಗ್ನಿಹೋತ್ರಿ
TV9 Web
| Edited By: |

Updated on:Jan 03, 2023 | 7:26 PM

Share

ಬಾಲಿವುಡ್​ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಸಾಕಷ್ಟು ಸುದ್ದಿ ಆಗುತ್ತಿದ್ದಾರೆ. ಬಾಲಿವುಡ್​ನಲ್ಲಿ ಅವರು ಕೆಲವರನ್ನು ಎದುರು ಹಾಕಿಕೊಂಡಿದ್ದಾರೆ. ಸಿದ್ಧಾಂತದ ಕಾರಣದಿಂದ ಒಂದು ವರ್ಗದ ನೆಟ್ಟಿಗರು ಅವರನ್ನು ವಿರೋಧಿಸುತ್ತಾರೆ. ಬಲಪಂಥೀಯ ವಿಚಾರಗಳನ್ನು ಅವರು ಹೆಚ್ಚು ಪ್ರತಿಪಾದಿಸುತ್ತಾರೆ ಎಂಬುದು ಹಲವರು ಅಭಿಪ್ರಾಯ. ಇದರ ನಡುವೆ ಕಾಂಟ್ರವರ್ಸಿ ನಿರ್ದೇಶಕ ಕಮ್​ ಸ್ವಯಂ ಘೋಷಿತ ವಿಮರ್ಶಕ ಕಮಾಲ್​ ಆರ್​. ಖಾನ್​ ಅವರು ಹೊಸ ಹೇಳಿಕೆ ನೀಡಿದ್ದಾರೆ. ಶಾರುಖ್​ ಖಾನ್​ ಅಭಿನಯದ ‘ಪಠಾಣ್​’ (Pathaan Movie) ಚಿತ್ರದ ವಿವಾದದಿಂದ ವಿವೇಕ್​ ಅಗ್ನಿಹೋತ್ರಿ ಅವರು ಪ್ರಚಾರ ಪಡೆಯುತ್ತಿದ್ದಾರೆ ಎಂದು ಕಮಾಲ್​ ಆರ್​. ಖಾನ್​ (Kamaal R Khan) ಆರೋಪಿಸಿದ್ದಾರೆ. ಈ ಬಗ್ಗೆ ವಿವೇಕ್​ ಅಗ್ನಿಹೋತ್ರಿ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ವಿವೇಕ್​ ಅಗ್ನಿಹೋತ್ರಿ ಅವರ ಜನಪ್ರಿಯತೆ ಹೆಚ್ಚಿತು. ಈಗ ಅವರು ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಆ ಚಿತ್ರದ ಶೂಟಿಂಗ್​ ಇತ್ತೀಚೆಗಷ್ಟೇ ಶುರುವಾಗಿದೆ. ಆ ಸಿನಿಮಾದ ಕೆಲಸಗಳ ಜೊತೆಗೆ ಕೆಲವು ವಿವಾದಗಳ ಬಗ್ಗೆಯೂ ತಮ್ಮ ಅನಿಸಿಕೆ ಹಂಚಿಕೊಳ್ಳಲು ವಿವೇಕ್​ ಅಗ್ನಿಹೋತ್ರಿ ಸಮಯ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ
Image
RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ
Image
‘ಭಕ್ತರ ಭಕ್ತ ಮಹಾಭಕ್ತ’, ‘ಕಾಶ್ಮೀರದ ಶರ್ಮಾ’: ಖಾನ್​ ಚಿತ್ರಕ್ಕೆ ಹೊಸ ಹೆಸರು ಸೂಚಿಸಿದ ಇನ್ನೊಬ್ಬ ಖಾನ್​
Image
‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
Image
ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

ಇದನ್ನೂ ಓದಿ: KRK: ಲೈಂಗಿಕ ಕಿರುಕುಳ ಆರೋಪದಲ್ಲಿ ಕಮಾಲ್​ ಆರ್​. ಖಾನ್​ ಅರೆಸ್ಟ್​; ಒಂದೇ ವಾರದಲ್ಲಿ ಡಬಲ್​ ಸಂಕಟ

ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಸಿನಿಮಾದ ‘ಬೇಷರಂ ರಂಗ್​..’ ಹಾಡು ಅಶ್ಲೀಲವಾಗಿದೆ ಎಂದು ಕೆಲವರು ಆಕ್ಷೇಪ ಎತ್ತಿದ್ದಾರೆ. ಈ ಬಗ್ಗೆ ಕೆಲವು ದಿನಗಳ ಹಿಂದೆ ವಿವೇಕ್​ ಅಗ್ನಿಹೋತ್ರಿ ಕೂಡ ಟ್ವೀಟ್​ ಮಾಡಿದ್ದರು. ಹಾಗಾಗಿ ಅವರ ವಿರುದ್ಧ ಶಾರುಖ್​ ಖಾನ್​ ಫ್ಯಾನ್ಸ್​ ಗರಂ ಆಗಿದ್ದಾರೆ. ಕೆಲವರಂತೂ ಜೀವ ಬೆದರಿಕೆ ಹಾಕಿದ್ದಾರೆ ಮತ್ತು ಅಶ್ಲೀಲ ಸಂದೇಶಗಳನ್ನು ಕಳಿಸಿದ್ದಾರೆ. ಅವರ ಸ್ಕ್ರೀನ್​ ಶಾಟ್​ಗಳನ್ನು ವಿವೇಕ್​ ಅಗ್ನಿಹೋತ್ರಿ ಅವರು ಇತ್ತೀಚೆಗೆ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದರು. ಅದರ ಕುರಿತು ಈಗ ಕಮಾಲ್​ ಆರ್​. ಖಾನ್​ ಟ್ವೀಟ್​ ಮಾಡಿದ್ದಾರೆ.

‘ನನ್ನ ಸ್ನೇಹಿತ ವಿವೇಕ್​ ಅಗ್ನಿಹೋತ್ರಿ ಅವರು ಪಠಾಣ್​ ಚಿತ್ರದ ವಿವಾದದಿಂದ ಪ್ರಚಾರ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಕೆಲವರ ಮೆಸೇಜ್​ಗಳನ್ನು ಅವರು ಶೇರ್​ ಮಾಡುತ್ತಿದ್ದಾರೆ. ನನಗೂ ಪ್ರತಿದಿನ ಬೆದರಿಕೆ ಸಂದೇಶಗಳು ಬರುತ್ತವೆ. ಆದರೆ ನಾನು ಅದನ್ನು ಶೇರ್​ ಮಾಡಲ್ಲ. ಟ್ವಿಟರ್​ನಲ್ಲಿ ಮೆಸೇಜ್​ ಮಾಡಲು ವಿವೇಕ್​ ಯಾಕೆ ಅವಕಾಶ ನೀಡಬೇಕು’ ಎಂದು ಕಮಾಲ್​ ಆರ್​. ಖಾನ್​ ಟ್ವಿಟರ್​ನಲ್ಲಿ ಪ್ರಶ್ನಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:26 pm, Tue, 3 January 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?