AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಾರುಖ್​ ಮಗನ ಸಮಸ್ಯೆಗೆ ನಾನೇನು ಮಾಡಲಿ?’: ಮುಖಕ್ಕೆ ಹೊಡೆದಂತೆ ಮಾತಾಡಿದ್ರಾ ಅಜಯ್​ ದೇವಗನ್​?

ಅಜಯ್​ ದೇವಗನ್​ ಮತ್ತು ಶಾರುಖ್​ ಖಾನ್​ ಅವರು ಪಾನ್​ ಮಸಾಲಾ ಜಾಹೀರಾತಿನಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಜಾಹೀರಾತಿನ ಹೊಸ ಆವೃತ್ತಿಯ ಶೂಟಿಂಗ್​ಗೆ ಶಾರುಖ್​ ಚಕ್ಕರ್​ ಹಾಕಿದ್ದಾರೆ. ಅದಕ್ಕೆ ಅಜಯ್​ ದೇವಗನ್​ ಖಡಕ್​ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗಿದೆ.

‘ಶಾರುಖ್​ ಮಗನ ಸಮಸ್ಯೆಗೆ ನಾನೇನು ಮಾಡಲಿ?’: ಮುಖಕ್ಕೆ ಹೊಡೆದಂತೆ ಮಾತಾಡಿದ್ರಾ ಅಜಯ್​ ದೇವಗನ್​?
ಅಜಯ್​ ದೇವಗನ್​, ಶಾರುಖ್​ ಖಾನ್​
TV9 Web
| Edited By: |

Updated on:Oct 21, 2021 | 9:03 AM

Share

ನಟ ಶಾರುಖ್​ ಖಾನ್​ ಅವರು ಈಗ ಸಂಕಷ್ಟದಲ್ಲಿದ್ದಾರೆ. ಪುತ್ರ ಆರ್ಯನ್ ಖಾನ್​ ಅರೆಸ್ಟ್​ ಆದ ದಿನದಿಂದಲೂ ಅವರ ದಿನಚರಿ ಬದಲಾಗಿದೆ. ಯಾವುದೇ ಸಿನಿಮಾ ಶೂಟಿಂಗ್​ನಲ್ಲಿ ಶಾರುಖ್​ ಭಾಗಿ ಆಗುತ್ತಿಲ್ಲ. ಇದರಿಂದಾಗಿ ನಿರ್ಮಾಪಕರ ಲೆಕ್ಕಾಚಾರ ತಲೆಕೆಳಗಾಗುತ್ತಿದೆ. ಸಿನಿಮಾ ಮಾತ್ರವಲ್ಲದೇ ಹಲವು ಜಾಹೀರಾತುಗಳಲ್ಲೂ ಶಾರುಖ್​ ನಟಿಸಬೇಕಿದೆ. ಅವುಗಳ ಶೂಟಿಂಗ್​ ಕೂಡ ಸ್ಥಗಿತಗೊಂಡಿವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಟ ಅಜಯ್​ ದೇವಗನ್​ ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ನಟ ಕಮಾಲ್​ ಆರ್​. ಖಾನ್​ ಮಾಡಿರುವ ಟ್ವೀಟ್​ ವೈರಲ್​ ಆಗುತ್ತಿದೆ.

ಎಲ್ಲರಿಗೂ ತಿಳಿದಿರುವಂತೆ ಅಜಯ್​ ದೇವಗನ್​ ಮತ್ತು ಶಾರುಖ್​ ಖಾನ್​ ಅವರು ಪಾನ್​ ಮಸಾಲಾ ಜಾಹೀರಾತಿನಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಾರೆ. ಈ ಜಾಹೀರಾತಿನ ಹೊಸ ಆವೃತ್ತಿಯ ಶೂಟಿಂಗ್​ಗೆ ಶಾರುಖ್​ ಚಕ್ಕರ್​ ಹಾಕಿದ್ದಾರೆ. ಆದರೆ ಅಜಯ್​ ದೇವಗನ್​ ಆ ರೀತಿ ಮಾಡಿಲ್ಲ. ಅಲ್ಲದೇ, ತಮ್ಮ ಪಾಲಿನ ಶೂಟಿಂಗ್​ ದಿನಾಂಕವನ್ನು ಮುಂದಕ್ಕೆ ಹಾಕಲು ಸಹ ಅವರು ಒಪ್ಪಿಕೊಂಡಿಲ್ಲವಂತೆ.

‘ಶಾರುಖ್​ ಮಗನ ಸಮಸ್ಯೆಗೂ ನನಗೂ ಯಾವುದೇ ಸಂಬಂಧ ಇಲ್ಲ. ಅದು ಶಾರುಖ್​ ಖಾನ್​ ಅವರ ಪರ್ಸನಲ್​ ಸಮಸ್ಯೆ. ಆ ಕಾರಣದಿಂದ ನಾನು ನನ್ನ ಶೂಟಿಂಗ್​ ಕ್ಯಾನ್ಸಲ್​ ಮಾಡಿಕೊಂಡು ಬೇರೆ ಡೇಟ್ಸ್​ ನೀಡಲು ಸಾಧ್ಯವಿಲ್ಲ’ ಎಂದು ನಿರ್ಮಾಪಕರಿಗೆ ಅಜಯ್​ ದೇವಗನ್​ ಖಡಕ್​ ಆಗಿ ಹೇಳಿದ್ದಾರೆ ಅಂತ ಕಮಾಲ್​ ಆರ್​. ಖಾನ್​ ಟ್ವೀಟ್​​ ಮಾಡಿದ್ದಾರೆ. ಬಾಲಿವುಡ್​ ಮಂದಿಯ ಒಗ್ಗಟ್ಟು ಹೀಗಿದೆ ಎಂದು ಅವರು ವ್ಯಂಗ್ಯ ಮಾಡಿದ್ದಾರೆ.

ತಮ್ಮ ಬಗ್ಗೆ ಕೇಳಿಬಂದ ಈ ಸುದ್ದಿ ಬಗ್ಗೆ ಅಜಯ್​ ದೇವಗನ್​ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅನೇಕ ಕಲಾವಿದರು ಈ ಪರಿಸ್ಥಿತಿಯಲ್ಲಿ ಶಾರುಖ್​ ಖಾನ್​ ಪರವಾಗಿ ಮಾತನಾಡುತ್ತಿದ್ದಾರೆ. ಶೇಖರ್​ ಸುಮನ್​, ವಿಶಾಲ್​ ದದ್ಲಾನಿ, ಹೃತಿಕ್​ ರೋಷನ್​, ಸ್ವರಾ ಭಾಸ್ಕರ್​, ಹನ್ಸಲ್​ ಮೆಹ್ತಾ, ಫರ್ಹಾ ಖಾನ್, ಸಲ್ಮಾನ್​ ಖಾನ್​​ ಸೇರಿದಂತೆ ಅನೇಕರು ಶಾರುಖ್​ ಪರವಾಗಿ ನಿಂತಿದ್ದಾರೆ. ಯಾರು ಎಷ್ಟೇ ಬೆಂಬಲ ತೋರಿದರೂ ಶಾರುಖ್​ ಪುತ್ರನಿಗೆ ಜಾಮೀನು ಸಿಗುವುದು ಮರೀಚಿಕೆ ಆಗಿದೆ. ವಿಶೇಷ ಎನ್​ಡಿಪಿಎಸ್​ ಕೋರ್ಟ್​ನಲ್ಲಿ ಅವರ ಜಾಮೀನು ಅರ್ಜಿ ರಿಜೆಕ್ಟ್​ ಆಗಿದೆ. ಹಾಗಾಗಿ ಆರ್ಯನ್​ ಪರ ವಕೀಲರು ಜಾಮೀನಿಗಾಗಿ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.​

ಇದನ್ನೂ ಓದಿ:

ಇಲ್ಲೊಬ್ಬ ಬಡಪಾಯಿ, ನಕಲಿ ಶಾರುಖ್​ ಖಾನ್​ಗೆ ಮಕ್ಕಳ ಶಾಲೆ ಫೀಸ್​ ಕಟ್ಟಲು ದುಡ್ಡಿಲ್ಲ; ಯಾರಿದು?

Aryan Khan: ಜೈಲಿನಲ್ಲಿ ಸ್ನಾನ ಮಾಡುತ್ತಿಲ್ಲ ಆರ್ಯನ್​ ಖಾನ್​; ಅಧಿಕಾರಿಗಳಿಗೆ ತಲೆಬಿಸಿ ತಂದ ಶಾರುಖ್​ ಮಗನ ವರ್ತನೆ

Published On - 8:54 am, Thu, 21 October 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್