AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಾರುಖ್​ ಮಗನ ಸಮಸ್ಯೆಗೆ ನಾನೇನು ಮಾಡಲಿ?’: ಮುಖಕ್ಕೆ ಹೊಡೆದಂತೆ ಮಾತಾಡಿದ್ರಾ ಅಜಯ್​ ದೇವಗನ್​?

ಅಜಯ್​ ದೇವಗನ್​ ಮತ್ತು ಶಾರುಖ್​ ಖಾನ್​ ಅವರು ಪಾನ್​ ಮಸಾಲಾ ಜಾಹೀರಾತಿನಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಜಾಹೀರಾತಿನ ಹೊಸ ಆವೃತ್ತಿಯ ಶೂಟಿಂಗ್​ಗೆ ಶಾರುಖ್​ ಚಕ್ಕರ್​ ಹಾಕಿದ್ದಾರೆ. ಅದಕ್ಕೆ ಅಜಯ್​ ದೇವಗನ್​ ಖಡಕ್​ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗಿದೆ.

‘ಶಾರುಖ್​ ಮಗನ ಸಮಸ್ಯೆಗೆ ನಾನೇನು ಮಾಡಲಿ?’: ಮುಖಕ್ಕೆ ಹೊಡೆದಂತೆ ಮಾತಾಡಿದ್ರಾ ಅಜಯ್​ ದೇವಗನ್​?
ಅಜಯ್​ ದೇವಗನ್​, ಶಾರುಖ್​ ಖಾನ್​
TV9 Web
| Edited By: |

Updated on:Oct 21, 2021 | 9:03 AM

Share

ನಟ ಶಾರುಖ್​ ಖಾನ್​ ಅವರು ಈಗ ಸಂಕಷ್ಟದಲ್ಲಿದ್ದಾರೆ. ಪುತ್ರ ಆರ್ಯನ್ ಖಾನ್​ ಅರೆಸ್ಟ್​ ಆದ ದಿನದಿಂದಲೂ ಅವರ ದಿನಚರಿ ಬದಲಾಗಿದೆ. ಯಾವುದೇ ಸಿನಿಮಾ ಶೂಟಿಂಗ್​ನಲ್ಲಿ ಶಾರುಖ್​ ಭಾಗಿ ಆಗುತ್ತಿಲ್ಲ. ಇದರಿಂದಾಗಿ ನಿರ್ಮಾಪಕರ ಲೆಕ್ಕಾಚಾರ ತಲೆಕೆಳಗಾಗುತ್ತಿದೆ. ಸಿನಿಮಾ ಮಾತ್ರವಲ್ಲದೇ ಹಲವು ಜಾಹೀರಾತುಗಳಲ್ಲೂ ಶಾರುಖ್​ ನಟಿಸಬೇಕಿದೆ. ಅವುಗಳ ಶೂಟಿಂಗ್​ ಕೂಡ ಸ್ಥಗಿತಗೊಂಡಿವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಟ ಅಜಯ್​ ದೇವಗನ್​ ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ನಟ ಕಮಾಲ್​ ಆರ್​. ಖಾನ್​ ಮಾಡಿರುವ ಟ್ವೀಟ್​ ವೈರಲ್​ ಆಗುತ್ತಿದೆ.

ಎಲ್ಲರಿಗೂ ತಿಳಿದಿರುವಂತೆ ಅಜಯ್​ ದೇವಗನ್​ ಮತ್ತು ಶಾರುಖ್​ ಖಾನ್​ ಅವರು ಪಾನ್​ ಮಸಾಲಾ ಜಾಹೀರಾತಿನಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಾರೆ. ಈ ಜಾಹೀರಾತಿನ ಹೊಸ ಆವೃತ್ತಿಯ ಶೂಟಿಂಗ್​ಗೆ ಶಾರುಖ್​ ಚಕ್ಕರ್​ ಹಾಕಿದ್ದಾರೆ. ಆದರೆ ಅಜಯ್​ ದೇವಗನ್​ ಆ ರೀತಿ ಮಾಡಿಲ್ಲ. ಅಲ್ಲದೇ, ತಮ್ಮ ಪಾಲಿನ ಶೂಟಿಂಗ್​ ದಿನಾಂಕವನ್ನು ಮುಂದಕ್ಕೆ ಹಾಕಲು ಸಹ ಅವರು ಒಪ್ಪಿಕೊಂಡಿಲ್ಲವಂತೆ.

‘ಶಾರುಖ್​ ಮಗನ ಸಮಸ್ಯೆಗೂ ನನಗೂ ಯಾವುದೇ ಸಂಬಂಧ ಇಲ್ಲ. ಅದು ಶಾರುಖ್​ ಖಾನ್​ ಅವರ ಪರ್ಸನಲ್​ ಸಮಸ್ಯೆ. ಆ ಕಾರಣದಿಂದ ನಾನು ನನ್ನ ಶೂಟಿಂಗ್​ ಕ್ಯಾನ್ಸಲ್​ ಮಾಡಿಕೊಂಡು ಬೇರೆ ಡೇಟ್ಸ್​ ನೀಡಲು ಸಾಧ್ಯವಿಲ್ಲ’ ಎಂದು ನಿರ್ಮಾಪಕರಿಗೆ ಅಜಯ್​ ದೇವಗನ್​ ಖಡಕ್​ ಆಗಿ ಹೇಳಿದ್ದಾರೆ ಅಂತ ಕಮಾಲ್​ ಆರ್​. ಖಾನ್​ ಟ್ವೀಟ್​​ ಮಾಡಿದ್ದಾರೆ. ಬಾಲಿವುಡ್​ ಮಂದಿಯ ಒಗ್ಗಟ್ಟು ಹೀಗಿದೆ ಎಂದು ಅವರು ವ್ಯಂಗ್ಯ ಮಾಡಿದ್ದಾರೆ.

ತಮ್ಮ ಬಗ್ಗೆ ಕೇಳಿಬಂದ ಈ ಸುದ್ದಿ ಬಗ್ಗೆ ಅಜಯ್​ ದೇವಗನ್​ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅನೇಕ ಕಲಾವಿದರು ಈ ಪರಿಸ್ಥಿತಿಯಲ್ಲಿ ಶಾರುಖ್​ ಖಾನ್​ ಪರವಾಗಿ ಮಾತನಾಡುತ್ತಿದ್ದಾರೆ. ಶೇಖರ್​ ಸುಮನ್​, ವಿಶಾಲ್​ ದದ್ಲಾನಿ, ಹೃತಿಕ್​ ರೋಷನ್​, ಸ್ವರಾ ಭಾಸ್ಕರ್​, ಹನ್ಸಲ್​ ಮೆಹ್ತಾ, ಫರ್ಹಾ ಖಾನ್, ಸಲ್ಮಾನ್​ ಖಾನ್​​ ಸೇರಿದಂತೆ ಅನೇಕರು ಶಾರುಖ್​ ಪರವಾಗಿ ನಿಂತಿದ್ದಾರೆ. ಯಾರು ಎಷ್ಟೇ ಬೆಂಬಲ ತೋರಿದರೂ ಶಾರುಖ್​ ಪುತ್ರನಿಗೆ ಜಾಮೀನು ಸಿಗುವುದು ಮರೀಚಿಕೆ ಆಗಿದೆ. ವಿಶೇಷ ಎನ್​ಡಿಪಿಎಸ್​ ಕೋರ್ಟ್​ನಲ್ಲಿ ಅವರ ಜಾಮೀನು ಅರ್ಜಿ ರಿಜೆಕ್ಟ್​ ಆಗಿದೆ. ಹಾಗಾಗಿ ಆರ್ಯನ್​ ಪರ ವಕೀಲರು ಜಾಮೀನಿಗಾಗಿ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.​

ಇದನ್ನೂ ಓದಿ:

ಇಲ್ಲೊಬ್ಬ ಬಡಪಾಯಿ, ನಕಲಿ ಶಾರುಖ್​ ಖಾನ್​ಗೆ ಮಕ್ಕಳ ಶಾಲೆ ಫೀಸ್​ ಕಟ್ಟಲು ದುಡ್ಡಿಲ್ಲ; ಯಾರಿದು?

Aryan Khan: ಜೈಲಿನಲ್ಲಿ ಸ್ನಾನ ಮಾಡುತ್ತಿಲ್ಲ ಆರ್ಯನ್​ ಖಾನ್​; ಅಧಿಕಾರಿಗಳಿಗೆ ತಲೆಬಿಸಿ ತಂದ ಶಾರುಖ್​ ಮಗನ ವರ್ತನೆ

Published On - 8:54 am, Thu, 21 October 21

Follow Us
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!