AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋಗ್ರಾಫ್ ನೀಡಲು ಹೆಲಿಕ್ಯಾಪ್ಟರ್​ನಲ್ಲಿ ಬರುತ್ತಿದ್ದ ಗಾಯಕ ಕುಮಾರ್ ಸಾನು

ನಟಿ ಕೃತಿ ಸನೋನ್ ಹಾಗೂ ಶಾಹಿದ್ ಕಪೂರ್ ಒಟ್ಟಾಗಿ ನಟಿಸಿರುವ ‘ತೇರಿ ಬಾತೋ ಮೆ ಐಸಾ ಉಲ್ಜಾ ಜಿಯಾ’ ಸಿನಿಮಾ ಪ್ರಮೋಷನ್ ಕೆಲಸ ನಡೆಯುತ್ತಿದೆ. ರಿಯಾಲಿಟಿ ಶೋ ಒಂದಕ್ಕೆ ಇವರು ಬಂದಿದ್ದರು. ಈ ಶೋಗೆ ಕುಮಾರ್ ಸಾನು ಜಡ್ಜ್ ಆಗಿದ್ದರು. ಆಗ ಶಾಹಿದ್ ಹಳೆಯ ಘಟನೆ ಬಗ್ಗೆ ಮಾತನಾಡಿದ್ದಾರೆ.

ಆಟೋಗ್ರಾಫ್ ನೀಡಲು ಹೆಲಿಕ್ಯಾಪ್ಟರ್​ನಲ್ಲಿ ಬರುತ್ತಿದ್ದ ಗಾಯಕ ಕುಮಾರ್ ಸಾನು
ಕುಮಾರ್ ಸಾನು
ರಾಜೇಶ್ ದುಗ್ಗುಮನೆ
|

Updated on: Feb 07, 2024 | 2:27 PM

Share

ಕುಮಾರ್ ಸಾನು (Kumar Sanu) ಅವರು ಖ್ಯಾತ ಗಾಯಕ. ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. 80ರ ದಶಕದಲ್ಲೇ ಅವರು ಸಿನಿಮಾಗಳಿಗೆ ಹಾಡೋಕೆ ಪ್ರಾರಂಭಿಸಿದ್ದರು. 2003ರಲ್ಲಿ ‘ಇಷ್ಕ್ ವಿಷ್ಕ್’ ಸಿನಿಮಾ ಮೂಲಕ ಶಾಹಿದ್ ಕಪೂರ್ ಬಣ್ಣದ ಬದುಕು ಆರಂಭಿಸಿದ್ದರು. ಆ ಚಿತ್ರದಲ್ಲಿನ ಕೆಲವು ಹಾಡುಗಳನ್ನು ಕುಮಾರ್ ಸಾನು ಹಾಡಿದ್ದರು. ಅದಕ್ಕೂ ಮೊದಲು ಮ್ಯೂಸಿಕ್ ವಿಡಿಯೋಗಳಲ್ಲಿ ಶಾಹಿದ್ ಹಾಗೂ ಕುಮಾರ್ ಸಾನು ಒಟ್ಟಿಗೆ ಕೆಲಸ ಮಾಡಿದ್ದರು. ಇತ್ತೀಚೆಗೆ ಶಾಹಿದ್ ಅವರು ಅಪರೂಪದ ವಿಚಾರ ಹಂಚಿಕೊಂಡಿದ್ದಾರೆ.

ಶಾಹಿದ್ ಮತ್ತು ಬಾಲಿವುಡ್ ನಟಿ ಕೃತಿ ಸನೋನ್ ‘ತೇರಿ ಬಾತೋ ಮೆ ಐಸಾ ಉಲ್ಜಾ ಜಿಯಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಪ್ರಚಾರದಲ್ಲಿ ಅವರು ಬ್ಯುಸಿ ಆಗಿದ್ದಾರೆ. ನಾನಾ ರಿಯಾಲಿಟಿ ಶೋಗಳಿಗೆ ತೆರಳಿ ಅವರು ಪ್ರಚಾರ ಮಾಡುವ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗೆ ರಿಯಾಲಿಟಿ ಶೋನಲ್ಲಿ ಇವರು ಕಾಣಿಸಿಕೊಂಡರು. ತಮ್ಮ ಸಿನಿಮಾ ಪ್ರಚಾರ ಮಾಡಲು ಇವರು ಆಗಮಿಸಿದ್ದರು.

ಈ ರಿಯಾಲಿಟಿ ಶೋಗೆ ಕುಮಾರ್ ಸಾನು ಜಡ್ಜ್ ಆಗಿದ್ದರು. ಅವರನ್ನು ನೋಡಿ ಶಾಹಿದ್‌ಗೆ ಹಳೆಯ ಘಟನೆ ನೆನಪಾಯಿತು. ರಿಯಾಲಿಟಿ ಶೋ ವೇದಿಕೆಯಲ್ಲಿ ನಿಂತು ನೆನಪಿನ ಬುತ್ತಿ ತೆರೆದಿಟ್ಟರು ಶಾಹಿದ್. ‘ನಾವು ಮ್ಯೂಸಿಕ್ ವಿಡಿಯೋದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ಶೂಟಿಂಗ್ ವೇಳೆ ಕುಮಾರ್ ಸಾನು ಹೆಲಿಕಾಪ್ಟರ್‌ನಲ್ಲಿ ಬಂದು ಆಟೋಗ್ರಾಫ್ ನೀಡಿದ್ದರು. ಆ ಸಮಯದಲ್ಲಿ ಸಾನು ತುಂಬಾ ಬ್ಯುಸಿಯಾಗಿದ್ದರು. ಹೆಲಿಕಾಪ್ಟರ್ ಮೂಲಕವೇ ಎಲ್ಲ ಕಡೆಗಳಲ್ಲಿ ಸಂಚರಿಸುತ್ತಿದ್ದರು. ಹೆಲಿಕಾಪ್ಟರ್​ನಲ್ಲೇ ಹಾಡಿನ ಚಿತ್ರೀಕರಣಕ್ಕೆ ಬಂದಿದ್ದರು. ಮೂರು ಹಾಡುಗಳನ್ನು ಹಾಡಿ, ಹಸ್ತಾಕ್ಷರ ನೀಡಿ ಹಿಂತಿರುಗಿದರು’ ಎಂದಿದ್ದಾರೆ ಶಾಹಿದ್.

ಇದನ್ನೂ ಓದಿ: ಕೃತಿ ಸನೋನ್​-ಶಾಹಿದ್ ಕಪೂರ್​ ನಡುವಿನ ಶೇಕಡ 25ರಷ್ಟು ಹಸಿಬಿಸಿ ದೃಶ್ಯಗಳಿಗೆ ಕತ್ತರಿ

‘ತೇರಿ ಬಾತೋ ಮೆ ಐಸಾ ಉಲ್ಜಾ ಜಿಯಾ’ ಸಿನಿಮಾ ಬಗ್ಗೆ..

‘ತೇರಿ ಬಾತೋ ಮೆ ಐಸಾ ಉಲ್ಜಾ ಜಿಯಾ’ ಸಿನಿಮಾ ಶುಕ್ರವಾರ (ಫೆಬ್ರವರಿ 9) ರಿಲೀಸ್ ಆಗುತ್ತಿದೆ. ಈ ಚಿತ್ರದಲ್ಲಿ ಶಾಹಿದ್ ಕಪೂರ್ ಹಾಗೂ ಕೃತಿ ಒಟ್ಟಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಸೆನ್ಸಾರ್​ ಪ್ರತಿಕ್ರಿಯೆ ಮುಗಿದಿದೆ. ಸಿನಿಮಾದಲ್ಲಿರುವ ಶೇ. 25ರಷ್ಟು ಹಸಿಬಿಸಿ ದೃಶ್ಯಗಳಿಗೆ ಸೆನ್ಸಾರ್ ಮಂಡಳಿ ಕತ್ತರಿ ಹಾಕಿದೆ. ಆರಾಧನಾ ಶಾ ಹಾಗೂ ಅಮಿತ್​ ಜೋಶಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಡಿಂಪಲ್​ ಕಪಾಡಿಯಾ, ಧರ್ಮೇಂದ್ರ, ರಾಜೇಶ್ ಕುಮಾರ್, ರಾಕೇಶ್​ ಬೇಡಿ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು