Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋಗ್ರಾಫ್ ನೀಡಲು ಹೆಲಿಕ್ಯಾಪ್ಟರ್​ನಲ್ಲಿ ಬರುತ್ತಿದ್ದ ಗಾಯಕ ಕುಮಾರ್ ಸಾನು

ನಟಿ ಕೃತಿ ಸನೋನ್ ಹಾಗೂ ಶಾಹಿದ್ ಕಪೂರ್ ಒಟ್ಟಾಗಿ ನಟಿಸಿರುವ ‘ತೇರಿ ಬಾತೋ ಮೆ ಐಸಾ ಉಲ್ಜಾ ಜಿಯಾ’ ಸಿನಿಮಾ ಪ್ರಮೋಷನ್ ಕೆಲಸ ನಡೆಯುತ್ತಿದೆ. ರಿಯಾಲಿಟಿ ಶೋ ಒಂದಕ್ಕೆ ಇವರು ಬಂದಿದ್ದರು. ಈ ಶೋಗೆ ಕುಮಾರ್ ಸಾನು ಜಡ್ಜ್ ಆಗಿದ್ದರು. ಆಗ ಶಾಹಿದ್ ಹಳೆಯ ಘಟನೆ ಬಗ್ಗೆ ಮಾತನಾಡಿದ್ದಾರೆ.

ಆಟೋಗ್ರಾಫ್ ನೀಡಲು ಹೆಲಿಕ್ಯಾಪ್ಟರ್​ನಲ್ಲಿ ಬರುತ್ತಿದ್ದ ಗಾಯಕ ಕುಮಾರ್ ಸಾನು
ಕುಮಾರ್ ಸಾನು
Follow us
ರಾಜೇಶ್ ದುಗ್ಗುಮನೆ
|

Updated on: Feb 07, 2024 | 2:27 PM

ಕುಮಾರ್ ಸಾನು (Kumar Sanu) ಅವರು ಖ್ಯಾತ ಗಾಯಕ. ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. 80ರ ದಶಕದಲ್ಲೇ ಅವರು ಸಿನಿಮಾಗಳಿಗೆ ಹಾಡೋಕೆ ಪ್ರಾರಂಭಿಸಿದ್ದರು. 2003ರಲ್ಲಿ ‘ಇಷ್ಕ್ ವಿಷ್ಕ್’ ಸಿನಿಮಾ ಮೂಲಕ ಶಾಹಿದ್ ಕಪೂರ್ ಬಣ್ಣದ ಬದುಕು ಆರಂಭಿಸಿದ್ದರು. ಆ ಚಿತ್ರದಲ್ಲಿನ ಕೆಲವು ಹಾಡುಗಳನ್ನು ಕುಮಾರ್ ಸಾನು ಹಾಡಿದ್ದರು. ಅದಕ್ಕೂ ಮೊದಲು ಮ್ಯೂಸಿಕ್ ವಿಡಿಯೋಗಳಲ್ಲಿ ಶಾಹಿದ್ ಹಾಗೂ ಕುಮಾರ್ ಸಾನು ಒಟ್ಟಿಗೆ ಕೆಲಸ ಮಾಡಿದ್ದರು. ಇತ್ತೀಚೆಗೆ ಶಾಹಿದ್ ಅವರು ಅಪರೂಪದ ವಿಚಾರ ಹಂಚಿಕೊಂಡಿದ್ದಾರೆ.

ಶಾಹಿದ್ ಮತ್ತು ಬಾಲಿವುಡ್ ನಟಿ ಕೃತಿ ಸನೋನ್ ‘ತೇರಿ ಬಾತೋ ಮೆ ಐಸಾ ಉಲ್ಜಾ ಜಿಯಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಪ್ರಚಾರದಲ್ಲಿ ಅವರು ಬ್ಯುಸಿ ಆಗಿದ್ದಾರೆ. ನಾನಾ ರಿಯಾಲಿಟಿ ಶೋಗಳಿಗೆ ತೆರಳಿ ಅವರು ಪ್ರಚಾರ ಮಾಡುವ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗೆ ರಿಯಾಲಿಟಿ ಶೋನಲ್ಲಿ ಇವರು ಕಾಣಿಸಿಕೊಂಡರು. ತಮ್ಮ ಸಿನಿಮಾ ಪ್ರಚಾರ ಮಾಡಲು ಇವರು ಆಗಮಿಸಿದ್ದರು.

ಈ ರಿಯಾಲಿಟಿ ಶೋಗೆ ಕುಮಾರ್ ಸಾನು ಜಡ್ಜ್ ಆಗಿದ್ದರು. ಅವರನ್ನು ನೋಡಿ ಶಾಹಿದ್‌ಗೆ ಹಳೆಯ ಘಟನೆ ನೆನಪಾಯಿತು. ರಿಯಾಲಿಟಿ ಶೋ ವೇದಿಕೆಯಲ್ಲಿ ನಿಂತು ನೆನಪಿನ ಬುತ್ತಿ ತೆರೆದಿಟ್ಟರು ಶಾಹಿದ್. ‘ನಾವು ಮ್ಯೂಸಿಕ್ ವಿಡಿಯೋದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ಶೂಟಿಂಗ್ ವೇಳೆ ಕುಮಾರ್ ಸಾನು ಹೆಲಿಕಾಪ್ಟರ್‌ನಲ್ಲಿ ಬಂದು ಆಟೋಗ್ರಾಫ್ ನೀಡಿದ್ದರು. ಆ ಸಮಯದಲ್ಲಿ ಸಾನು ತುಂಬಾ ಬ್ಯುಸಿಯಾಗಿದ್ದರು. ಹೆಲಿಕಾಪ್ಟರ್ ಮೂಲಕವೇ ಎಲ್ಲ ಕಡೆಗಳಲ್ಲಿ ಸಂಚರಿಸುತ್ತಿದ್ದರು. ಹೆಲಿಕಾಪ್ಟರ್​ನಲ್ಲೇ ಹಾಡಿನ ಚಿತ್ರೀಕರಣಕ್ಕೆ ಬಂದಿದ್ದರು. ಮೂರು ಹಾಡುಗಳನ್ನು ಹಾಡಿ, ಹಸ್ತಾಕ್ಷರ ನೀಡಿ ಹಿಂತಿರುಗಿದರು’ ಎಂದಿದ್ದಾರೆ ಶಾಹಿದ್.

ಇದನ್ನೂ ಓದಿ: ಕೃತಿ ಸನೋನ್​-ಶಾಹಿದ್ ಕಪೂರ್​ ನಡುವಿನ ಶೇಕಡ 25ರಷ್ಟು ಹಸಿಬಿಸಿ ದೃಶ್ಯಗಳಿಗೆ ಕತ್ತರಿ

‘ತೇರಿ ಬಾತೋ ಮೆ ಐಸಾ ಉಲ್ಜಾ ಜಿಯಾ’ ಸಿನಿಮಾ ಬಗ್ಗೆ..

‘ತೇರಿ ಬಾತೋ ಮೆ ಐಸಾ ಉಲ್ಜಾ ಜಿಯಾ’ ಸಿನಿಮಾ ಶುಕ್ರವಾರ (ಫೆಬ್ರವರಿ 9) ರಿಲೀಸ್ ಆಗುತ್ತಿದೆ. ಈ ಚಿತ್ರದಲ್ಲಿ ಶಾಹಿದ್ ಕಪೂರ್ ಹಾಗೂ ಕೃತಿ ಒಟ್ಟಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಸೆನ್ಸಾರ್​ ಪ್ರತಿಕ್ರಿಯೆ ಮುಗಿದಿದೆ. ಸಿನಿಮಾದಲ್ಲಿರುವ ಶೇ. 25ರಷ್ಟು ಹಸಿಬಿಸಿ ದೃಶ್ಯಗಳಿಗೆ ಸೆನ್ಸಾರ್ ಮಂಡಳಿ ಕತ್ತರಿ ಹಾಕಿದೆ. ಆರಾಧನಾ ಶಾ ಹಾಗೂ ಅಮಿತ್​ ಜೋಶಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಡಿಂಪಲ್​ ಕಪಾಡಿಯಾ, ಧರ್ಮೇಂದ್ರ, ರಾಜೇಶ್ ಕುಮಾರ್, ರಾಕೇಶ್​ ಬೇಡಿ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ