AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀದೇವಿ 2ನೇ ಮಗಳು ಚಿತ್ರರಂಗಕ್ಕೆ ಎಂಟ್ರಿ; ಖುಷಿ ಸಿನಿಮಾ ಬಗ್ಗೆ ಮಾಹಿತಿ ನೀಡಿದ ತಂದೆ ಬೋನಿ ಕಪೂರ್​

ಅಗಸ್ತ್ಯ ನಂದಾ, ಸುಹಾನಾ ಖಾನ್​ ಮತ್ತು ಖುಷಿ ಕಪೂರ್​ ಜೊತೆಯಾಗಿ ನಟಿಸುವ ಬಗ್ಗೆ ಮಾಹಿತಿ ಹರಿದಾಡುತ್ತಿದೆ. ನಿರ್ದೇಶಕಿ ಜೋಯಾ ಅಖ್ತರ್​ ಅವರ ಗರಡಿಯಲ್ಲಿ ಈ ಸ್ಟಾರ್​ ಕಿಡ್​ಗಳು ಪಳಗಲಿದ್ದಾರೆ ಎಂಬ ಸೂಚನೆ ಸಿಕ್ಕಿದೆ.

ಶ್ರೀದೇವಿ 2ನೇ ಮಗಳು ಚಿತ್ರರಂಗಕ್ಕೆ ಎಂಟ್ರಿ; ಖುಷಿ ಸಿನಿಮಾ ಬಗ್ಗೆ ಮಾಹಿತಿ ನೀಡಿದ ತಂದೆ ಬೋನಿ ಕಪೂರ್​
ಬೋನಿ ಕಪೂರ್, ಖುಷಿ ಕಪೂರ್
TV9 Web
| Edited By: |

Updated on: Feb 26, 2022 | 9:00 AM

Share

ಚಿತ್ರರಂಗದಲ್ಲಿ ನಟಿ ಶ್ರೀದೇವಿ (Sridevi) ಮಾಡಿದ ಸಾಧನೆಗೆ ಸರಿಸಾಟಿ ಇಲ್ಲ. ಹಲವು ದಶಕಗಳ ಕಾಲ ಸ್ಟಾರ್​ ನಟಿಯಾಗಿ ಮೆರೆದ ಅವರನ್ನು ಚಿತ್ರರಂಗ ಸದಾ ಮಿಸ್​ ಮಾಡಿಕೊಳ್ಳುತ್ತದೆ. ಈಗ ಶ್ರೀದೇವಿಯ ಪುತ್ರಿ ಜಾನ್ವಿ ಕಪೂರ್​ ಅವರು ಬಾಲಿವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ಎರಡನೇ ಮಗಳು ಖುಷಿ ಕಪೂರ್​ (Kushi Kapoor) ಕೂಡ ಚಿತ್ರರಂಗಕ್ಕೆ ಎಂಟ್ರಿ ನೀಡಲು ಕಾಯುತ್ತಿದ್ದಾರೆ. ಸ್ಟಾರ್​ ನಟ-ನಟಿಯರ ಮಕ್ಕಳ ಸಿನಿಮಾ ಎಂಟ್ರಿ ಬಗ್ಗೆ ಗಾಸಿಪ್​ಗಳು ಹರಡುವುದು ಸಹಜ. ಆದರೆ ಖುಷಿ ಕಪೂರ್​ ವಿಚಾರದಲ್ಲಿ ಕೇಳಿಬಂದಿರುವುದು ಗಾಸಿಪ್​ ಅಲ್ಲ. ಅವರ ತಂದೆ ಬೋನಿ ಕಪೂರ್​ (Boney Kapoor) ಅವರೇ ಖಚಿತ ಮಾಹಿತಿ ಹಂಚಿಕೊಂಡಿದ್ದಾರೆ. ಆದರೆ ಇನ್ನೊಂದು ಬಿಸಿಬಿಸಿ ಸುದ್ದಿ ಕೂಡ ಕೇಳಿಬಂದಿದೆ. ಖುಷಿ ಕಪೂರ್​ ಅಭಿನಯಿಸಲಿರುವ ಸಿನಿಮಾದಲ್ಲಿ ಶಾರುಖ್​ ಖಾನ್​ ಮಗಳು ಸುಹಾನಾ ಖಾನ್​ ಹಾಗೂ ಅಮಿತಾಭ್​ ಬಚ್ಚನ್​ ಮೊಮ್ಮಗ ಅಗಸ್ತ್ಯ ನಂದಾ ಕೂಡ ನಟಿಸುತ್ತಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕಿ ಜೋಯಾ ಅಖ್ತರ್​ ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಶಾರುಖ್​ ಖಾನ್​ ಅಥವಾ ಅಮಿತಾಭ್​ ಬಚ್ಚನ್​ ಕಡೆಯಿಂದ ಪ್ರತಿಕ್ರಿಯೆ ಇನ್ನೂ ಸಿಕ್ಕಿಲ್ಲ.

‘ಜಿಂದಗಿ ನಾ ಮಿಲೇಗಿ ದೋಬಾರ’, ‘ಗಲ್ಲಿ ಬಾಯ್​’ ಮುಂತಾದ ಸೂಪರ್​ ಹಿಟ್​ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಜೋಯಾ ಅಖ್ತರ್​ ಅವರ ಗರಡಿಯಲ್ಲಿ ಸ್ಟಾರ್​ ಕಿಡ್​ಗಳು ಪಳಗಲಿದ್ದಾರೆ ಎಂಬ ಸೂಚನೆ ಸಿಕ್ಕಿದೆ. ಜೋಯಾ ಅಖ್ತರ್ ಅವರ ಕಚೇರಿಯಲ್ಲಿ ಅಗಸ್ತಾ ನಂದಾ ಮತ್ತು ಸುಹಾನಾ ಖಾನ್​ ಅವರು ಇತ್ತೀಚೆಗೆ ಕಾಣಿಸಿಕೊಂಡಿದ್ದರು. ಹಾಗಾಗಿ ಅವರು ಜೊತೆಯಾಗಿ ಸಿನಿಮಾ ಮಾಡಬಹುದು ಎಂಬ ಅನುಮಾನ ಹುಟ್ಟಿಕೊಂಡಿದೆ.

ಅಗಸ್ತ್ಯ ನಂದಾ ಮತ್ತು ಸುಹಾನಾ ಖಾನ್ ಕುರಿತು ಯಾವುದೇ ಖಚಿತತೆ ಇಲ್ಲ. ಆದರೆ ಖುಷಿ ಕಪೂರ್​ ನಟಿಸುವುದು ಪಕ್ಕಾ ಎಂದು ಬೋನಿ ಕಪೂರ್​ ಹೇಳಿದ್ದಾರೆ. ಏಪ್ರಿಲ್​ನಿಂದ ಅವರು ಶೂಟಿಂಗ್​ನಲ್ಲಿ ಭಾಗಿ ಆಗಲಿದ್ದಾರೆ. ಈ ಚಿತ್ರ ನೇರವಾಗಿ ನೆಟ್​ಫ್ಲಿಕ್ಸ್​ನಲ್ಲಿ ರಿಲೀಸ್​ ಆಗಲಿದೆ ಎಂದು ಕೂಡ ಹೇಳಲಾಗುತ್ತಿದೆ.

ಬಾಲಿವುಡ್​ನಲ್ಲಿ ಯಶಸ್ವಿ ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಬೋನಿ ಕಪೂರ್ ಅವರು ಮಕ್ಕಳ ಸಿನಿಮಾಗೆ ಬೆಂಬಲವಾಗಿ ನಿಂತಿದ್ದಾರೆ. ಹಿರಿಯ ಮಗ ಅರ್ಜುನ್ ಕಪೂರ್​, ಪುತ್ರಿ ಜಾನ್ವಿ ಕಪೂರ್​ ಈಗಾಗಲೇ ಸ್ಟಾರ್​ ಆಗಿದ್ದಾರೆ. ಈಗ ಕಿರಿಯ ಪುತ್ರಿಗಾಗಿ ಅವರು ಯೋಚನೆ ಹಾಕಿಕೊಡುತ್ತಿದ್ದಾರೆ. ‘ನಿರ್ಮಾಪಕನಾಗಿ ನಾನು ನನ್ನ ಅನುಭವಗಳ ಆಧಾರದಲ್ಲಿ ಅವರಿಗೆ ಸಲಹೆ ನೀಡುತ್ತೇನೆ. ಕಮರ್ಷಿಯಲ್​ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತೇನೆ. ಆದರೆ ಅಂತಿಮ ನಿರ್ಧಾರ ಅವರದ್ದೇ ಆಗಿರಲಿದೆ’ ಎಂದು ಮಕ್ಕಳ ಸಿನಿಮಾ ಜರ್ನಿ ಬಗ್ಗೆ ಬೋನಿ ಕಪೂರ್​ ಮಾತನಾಡಿದ್ದಾರೆ.

ಇನ್ನು, ಶಾರುಖ್​ ಖಾನ್​ ಪುತ್ರಿ ಸುಹಾನಾ ಖಾನ್​ ಅವರಿಗೆ ನಟನೆಯಲ್ಲಿ ಆಸಕ್ತಿ ಇದೆ. ಅಮೆರಿಕಾ ಮತ್ತು ಇಂಗ್ಲೆಂಡ್​ನಲ್ಲಿ ಅವರು ವಿದ್ಯಾಭ್ಯಾಸ ಮುಗಿಸಿ ಭಾರತಕ್ಕೆ ಬಂದಿದ್ದಾರೆ. ಕೆಲವು ಕಿರುಚಿತ್ರಗಳಲ್ಲಿ ನಟಿಸುವ ಮೂಲಕ ಅವರು ಅಭಿನಯದ ಪಾಠಗಳನ್ನು ಕಲಿತಿದ್ದಾರೆ. ಪ್ರತಿಷ್ಠಿತ ಮ್ಯಾಗಜಿನ್​ ಮುಖಪುಟಗಳಿಗೆ ಪೋಸ್​ ನೀಡುವ ಮೂಲಕವೂ ಅವರು ಗಮನ ಸೆಳೆದಿದ್ದಾರೆ. ಪುತ್ರಿಯ ನಟನಾ ಭವಿಷ್ಯಕ್ಕೆ ತಾಯಿ ಗೌರಿ ಖಾನ್​ ಅವರು ಸೂಕ್ತವಾಗಿ ಪ್ಲ್ಯಾನ್​ ಮಾಡುತ್ತಿದ್ದಾರೆ.

ಇದನ್ನೂ ಓದಿ:

ನಿರ್ಮಾಪಕನ ಕಾರಿಗೆ ಮೊಸರಿನ ಅಭಿಷೇಕ; ಅಜಿತ್ ಫ್ಯಾನ್ಸ್​ ಮೇಲೆ ಪೆಟ್ರೋಲ್​ ಬಾಂಬ್​​ ಎಸೆತ

ಆರ್ಯನ್​ ಖಾನ್​ ಕೇಸ್​ ಮರೆತು ಸಾರ್ವಜನಿಕವಾಗಿ ಕಾಣಿಸಿಕೊಂಡ ಶಾರುಖ್ ಪತ್ನಿ ಗೌರಿ ಖಾನ್​, ಪುತ್ರಿ ಸುಹಾನಾ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್