AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕಷ್ಟದಲ್ಲಿರುವ ಆಮಿರ್​ ಖಾನ್​ರನ್ನು ಮತ್ತಷ್ಟು ತಿವಿದ ‘ದಿ ಕಾಶ್ಮೀರ್ ಫೈಲ್ಸ್​’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ

‘ಲಾಲ್ ಸಿಂಗ್ ಚಡ್ಡಾ’ ಬೈಕಾಟ್ ಮಾಡುವ ವಿಚಾರದಲ್ಲಿ ಚಿತ್ರದ ನಾಯಕ ಆಮಿರ್ ಖಾನ್ ಹಾಗೂ ಕರೀನಾ ಕಪೂರ್ ಅಸಮಾಧಾನ ಹೊರಹಾಕಿದ್ದರು. ಈಗ ಆಮಿರ್ ಹಾಗೂ ಕರೀನಾ ಹೇಳಿಕೆಗೆ ವಿವೇಕ್ ತಿರುಗೇಟು ನೀಡಿದ್ದಾರೆ.

ಸಂಕಷ್ಟದಲ್ಲಿರುವ ಆಮಿರ್​ ಖಾನ್​ರನ್ನು ಮತ್ತಷ್ಟು ತಿವಿದ ‘ದಿ ಕಾಶ್ಮೀರ್ ಫೈಲ್ಸ್​’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ
ವಿವೇಕ್​-ಆಮಿರ್
TV9 Web
| Edited By: |

Updated on:Aug 17, 2022 | 5:22 PM

Share

ಆಮಿರ್ ಖಾನ್ (Aamir Khan) ನಟನೆಯ ‘ಲಾಲ್ ಸಿಂಗ್ ಚಡ್ಡಾ’ ಚಿತ್ರದ (Laal Singh Chaddha) ಮೇಲೆ ನಿಷೇಧ ಹೇರಬೇಕು ಎಂಬ ಒತ್ತಾಯ ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿದೆ. ಅವರು ನೀಡಿದ್ದ ಅಸಹಿಷ್ಣುತೆ ಹೇಳಿಕೆಯಿಂದ ಸಿನಿಮಾಗೆ ಹೊಡೆತ ಉಂಟಾಗಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿರುವುದು ಒಂದು ಕಡೆಯಾದರೆ, ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿಲ್ಲ ಎಂಬುದು ಮತ್ತೊಂದು ಕಡೆ. ಎಲ್ಲ ವಿಚಾರಗಳು ಆಮಿರ್ ಖಾನ್ ಅವರನ್ನು ಅಪ್ಸೆಟ್ ಮಾಡಿದೆ. ಈ ಸಂದರ್ಭದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರು ಆಮಿರ್ ಖಾನ್ ಅವರನ್ನು ಮತ್ತಷ್ಟು ತಿವಿದಿದ್ದಾರೆ. ಆಮಿರ್ ವಿರುದ್ಧ ಸದಾ ಧ್ವನಿ ಎತ್ತುತ್ತಾ ಬರುತ್ತಿರುವ ವಿವೇಕ್ ಅವರು ಈಗ ಮತ್ತೊಮ್ಮೆ ಟೀಕೆ ಮಾಡಿದ್ದಾರೆ.

‘ಲಾಲ್ ಸಿಂಗ್ ಚಡ್ಡಾ’ ಬೈಕಾಟ್ ಮಾಡುವ ವಿಚಾರದಲ್ಲಿ ಚಿತ್ರದ ನಾಯಕ ಆಮಿರ್ ಖಾನ್ ಹಾಗೂ ಕರೀನಾ ಕಪೂರ್ ಅಸಮಾಧಾನ ಹೊರಹಾಕಿದ್ದರು. ಸಿನಿಮಾ ಬೈಕಾಟ್ ಮಾಡಿದರೆ ಈ ಚಿತ್ರಕ್ಕಾಗಿ ಕೆಲಸ ಮಾಡಿದ 250 ಮಂದಿಯ ಹಲವು ವರ್ಷಗಳ ಶ್ರಮ ವ್ಯರ್ಥ ಆಗಲಿದೆ ಎಂಬ ಬಗ್ಗೆ ಆತಂಕ ಹೊರಹಾಕಿದ್ದರು. ಕೆಲವರು ಬೈಕಾಟ್ ಟ್ರೆಂಡ್ ವಿರುದ್ಧ ಧ್ವನಿ ಎತ್ತಿದ್ದಾರೆ. ಇನ್ನೂ ಕೆಲವರು ಬೈಕಾಟ್ ಟ್ರೆಂಡ್​ಅನ್ನು ಬೆಂಬಲಿಸಿದ್ದಾರೆ. ಈಗ ಆಮಿರ್ ಹಾಗೂ ಕರೀನಾ ಹೇಳಿಕೆಗೆ ವಿವೇಕ್ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ
Image
ಆಮಿರ್​​ Vs ಅಕ್ಷಯ್​​; ಮೊದಲ ದಿನ ‘ಲಾಲ್​ ಸಿಂಗ್​ ಚಡ್ಡಾ’ ಗಳಿಕೆ 12 ಕೋಟಿ
Image
Laal Singh Chaddha Twitter review: ಲಾಲ್​ ಸಿಂಗ್ ಚಡ್ಡಾ ಟ್ವಿಟರ್​ ವಿಮರ್ಶೆ: ಅಮೀರ್ ಅಭಿನಯಕ್ಕೆ ಸಿನಿಪ್ರಿಯರು ಫಿದಾ
Image
Aamir Khan: ದೇಶದ ಜನರ ಕ್ಷಮೆ ಕೇಳಿದ ಆಮಿರ್ ಖಾನ್​; ‘ಲಾಲ್​ ಸಿಂಗ್ ಚಡ್ಡಾ’ ರಿಲೀಸ್​ ವೇಳೆ ಹೊಸ ಹೇಳಿಕೆ
Image
Aamir Khan: ‘ನನಗೆ ಭಾರತ ಇಷ್ಟವಿಲ್ಲ ಅನ್ನೋದು ಸುಳ್ಳು, ನನ್ನ ಸಿನಿಮಾ ಬಹಿಷ್ಕಾರ ಮಾಡಬೇಡಿ ಪ್ಲೀಸ್​’: ಆಮಿರ್​ ಖಾನ್​

‘ಒಳ್ಳೆಯ ವಿಷಯ ಹೊಂದಿರುವ ಸಣ್ಣ ಸಿನಿಮಾಗಳು ಬಾಲಿವುಡ್​ನ ಡಾನ್​ಗಳಿಂದ ಬೈಕಾಟ್​ಗೆ ಒಳಪಟ್ಟಾಗ, ಮಲ್ಟಿಪ್ಲೆಕ್ಸ್​ಗಳಿಂದ ಸಣ್ಣ ಸಿನಿಮಾಗಳನ್ನು ಕಾಲ್ಕೀಳುವಂತೆ ಮಾಡಿದಾಗ, ವಿಮರ್ಶಕರು ಸಣ್ಣ ಸಿನಿಮಾಗಳ ವಿರುದ್ಧ ಅಪಸ್ವರ ತೆಗೆದಾಗ ಯಾರಿಗೂ ಆ ಸಿನಿಮಾಗಾಗಿ ಕೆಲಸ ಮಾಡಿದ 250 ಮಂದಿ ತಂತ್ರಜ್ಞರ ನೆನಪು ಆಗಲೇ ಇಲ್ಲ’ ಎಂದು ವಿವೇಕ್​ ಟೀಕಿಸಿದ್ದಾರೆ.

ಇದನ್ನೂ ಓದಿ: ಆಮಿರ್ ಖಾನ್ ಜತೆ ತೆರೆ ಹಂಚಿಕೊಂಡ ಈ ನಟಿ ಈಗ ಹೇಗಾಗಿದ್ದಾರೆ ನೋಡಿ

‘ಹೊರಗಿನಿಂದ ಬಂದ ನಿರ್ದೇಶಕರು, ನಟರ ವೃತ್ತಿ ಜೀವನನವನ್ನು ಬಾಲಿವುಡ್​ನ ಕಿಂಗ್​ಗಳು ಹಾಳು ಮಾಡಿದಾಗ ಬಾಲಿವುಡ್​ನ ಯಾರೊಬ್ಬರೂ ಏಕೆ ಧ್ವನಿ ಎತ್ತಿಲ್ಲ?’ ಎಂದು ವಿವೇಕ್ ಅಗ್ನಿಹೋತ್ರಿ ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ಆಮಿರ್ ಹಾಗೂ ಕರೀನಾ ಅವರನ್ನು ತಿವಿದಿದ್ದಾರೆ.

Published On - 5:21 pm, Wed, 17 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು