AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ, ಚಿರಂಜೀವಿಗೆ ‘ಲಾಲ್ ಸಿಂಗ್ ಚಡ್ಡಾ’ ಸ್ಪೆಷಲ್ ಶೋ; ಸ್ಟಾರ್​ಗಳ ಪ್ರತಿಕ್ರಿಯೆ ನೋಡಿ ಕಣ್ಣೀರಿಟ್ಟ ಆಮಿರ್ ಖಾನ್

ನಾಗ ಚೈತನ್ಯ, ನಾಗಾರ್ಜುನ, ನಿರ್ದೇಶಕ ಎಸ್​.ಎಸ್.​ ರಾಜಮೌಳಿ, ಚಿರಂಜೀವಿ, ‘ಪುಷ್ಪ’ ನಿರ್ದೇಶಕ ಸುಕುಮಾರ್ ಅವರು ಈ ಸ್ಪೆಷಲ್ ಶೋನಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಆಮಿರ್ ಖಾನ್ ಸಂತೋಷದಿಂದ ಕಣ್ಣೀರು ಹಾಕಿದ್ದಾರೆ.

ರಾಜಮೌಳಿ, ಚಿರಂಜೀವಿಗೆ ‘ಲಾಲ್ ಸಿಂಗ್ ಚಡ್ಡಾ’ ಸ್ಪೆಷಲ್ ಶೋ; ಸ್ಟಾರ್​ಗಳ ಪ್ರತಿಕ್ರಿಯೆ ನೋಡಿ ಕಣ್ಣೀರಿಟ್ಟ ಆಮಿರ್ ಖಾನ್
ಆಮಿರ್ ಖಾನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 16, 2022 | 3:08 PM

Share

ನಟ ಆಮಿರ್ ಖಾನ್ (Aamir Khan) ಅವರು ಬಾಲಿವುಡ್​ನಲ್ಲಿ ಭಿನ್ನವಾಗಿ ಗುರುತಿಸಿಕೊಳ್ಳುತ್ತಾರೆ. ಅವರು ಸಿನಿಮಾದಿಂದ ಸಿನಿಮಾಗೆ ಭಿನ್ನ ಪಾತ್ರಗಳ ಆಯ್ಕೆ ಮಾಡಿಕೊಳ್ಳುತ್ತಾರೆ. ಪ್ರತಿ ಚಿತ್ರಕ್ಕೆ ಸಾಕಷ್ಟು ಶ್ರಮ ಹಾಕುತ್ತಾರೆ. ಈಗ ಅವರ ನಟನೆಯ ‘ಲಾಲ್​ ಸಿಂಗ್ ಚಡ್ಡಾ’ ಸಿನಿಮಾ ತೆರೆಗೆ ಬರಲು ರೆಡಿ ಇದೆ. ಹಾಲಿವುಡ್​ನ ‘ಫಾರೆಸ್ಟ್ ಗಂಪ್’  (Forrest Gump) ಚಿತ್ರದ ರಿಮೇಕ್ ಇದಾಗಿದೆ. ತುಂಬಾನೇ ಇಷ್ಟಪಟ್ಟು ಆಮಿರ್ ಖಾನ್ ಅವರು ಈ ಚಿತ್ರವನ್ನು ರಿಮೇಕ್ ಮಾಡಿದ್ದಾರೆ. ಈಗ ಈ ಚಿತ್ರ ತೆರೆಗೆ ಬರುವುದಕ್ಕೂ ಮೊದಲು ಸೆಲೆಬ್ರಿಟಿಗಳಿಗೋಸ್ಕರ ವಿಶೇಷ ಶೋ ಆಯೋಜನೆ ಮಾಡಲಾಗಿತ್ತು. ಸ್ಟಾರ್​ಗಳು ನೀಡಿದ ಪ್ರತಿಕ್ರಿಯೆ ನೋಡಿ ಆಮಿರ್ ಖಾನ್ ಅತ್ತಿದ್ದಾರೆ.

‘ಲಾಲ್ ಸಿಂಗ್ ಚಡ್ಡಾ’ ಸಿನಿಮಾದಲ್ಲಿ ಟಾಲಿವುಡ್ ನಟ ನಾಗ ಚೈತನ್ಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಆಮಿರ್ ಖಾನ್​ಗೂ ದಕ್ಷಿಣದ ಚಿತ್ರರಂಗಕ್ಕೂ ಇರುವ ನಂಟು ಮತ್ತಷ್ಟು ಗಟ್ಟಿ ಆಗಿದೆ. ನಾಗ ಚೈತನ್ಯ ಅವರ ‘ಲವ್ ಸ್ಟೋರಿ’ ಸಿನಿಮಾ ರಿಲೀಸ್​ಗೂ ಮೊದಲು ಆಯೋಜಿಸಿದ ಪ್ರೀ-ರಿಲೀಸ್ ಇವೆಂಟ್​ಗೆ ಆಮಿರ್ ಖಾನ್ ಮುಖ್ಯ ಅತಿಥಿ ಆಗಿ ಆಗಮಿಸಿದ್ದರು. ಈಗ ದಕ್ಷಿಣದ ಸ್ಟಾರ್​ಗಳಿಗೆ ಆಮಿರ್ ಖಾನ್ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಪ್ರದರ್ಶನ ಮಾಡಿದ್ದಾರೆ.

ಇದನ್ನೂ ಓದಿ
Image
ಆಮಿರ್​ ಖಾನ್​ರನ್ನು ‘ಟೈಟಾನಿಕ್’​ ನಿರ್ದೇಶಕನಿಗೆ ಹೋಲಿಸಿದ ಹಾಲಿವುಡ್​ ದಿಗ್ಗಜ; ಇಲ್ಲಿದೆ ಅಚ್ಚರಿ ವಿಚಾರ
Image
ಬಾಯ್​ಫ್ರೆಂಡ್​ ಜತೆ ಇರಾ ಖಾನ್​ ಬರ್ತ್​​ಡೇ ಆಚರಣೆ​; ಮತ್ತಷ್ಟು ಫೋಟೋ ಹಂಚಿಕೊಂಡ ಆಮಿರ್ ಮಗಳು  
Image
ನಟನೆಗೆ ವಿದಾಯ ಹೇಳಲು ಆಮಿರ್​ ಖಾನ್​ ನಿರ್ಧಾರ ಮಾಡಿದ್ದ ಸಂಗತಿ ಬಯಲು; ಮಾಜಿ ಪತ್ನಿ ಏನು ಹೇಳಿದ್ರು?
Image
‘ಡಿವೋರ್ಸ್​ ಆಗಿರಬಹುದು, ಆದ್ರೆ ಜೊತೆಗಿದ್ದೇವೆ’; ಇಬ್ಬರು ಮಾಜಿ ಪತ್ನಿಯರ ಬಗ್ಗೆ ಮಾತಾಡಿದ ಆಮಿರ್​ ಖಾನ್​

ನಾಗ ಚೈತನ್ಯ, ನಾಗಾರ್ಜುನ, ನಿರ್ದೇಶಕ ಎಸ್​.ಎಸ್.​ ರಾಜಮೌಳಿ, ಚಿರಂಜೀವಿ, ‘ಪುಷ್ಪ’ ನಿರ್ದೇಶಕ ಸುಕುಮಾರ್ ಅವರು ಈ ಸ್ಪೆಷಲ್ ಶೋನಲ್ಲಿ ಪಾಲ್ಗೊಂಡಿದ್ದರು. ಈ ಸಿನಿಮಾ ನೋಡಿದ ನಂತರದಲ್ಲಿ ಚಿರಂಜೀವಿ ಅವರು ಆಮಿರ್ ಖಾನ್ ಅವರನ್ನು ತಬ್ಬಿಕೊಂಡಿದ್ದಾರೆ. ಈ ವೇಳೆ ಆಮಿರ್ ಖಾನ್ ಸಂತೋಷದಿಂದ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಆಮಿರ್ ಖಾನ್ ಮಗಳಿ​ಗೆ ನಿರಂತರವಾಗಿ ಕಾಡುತ್ತಿದೆ ಈ ಸಮಸ್ಯೆ; ಹೊರ ಬರಲು ದಾರಿ ಕಾಣದೆ ಒದ್ದಾಡುತ್ತಿದ್ದಾರೆ ಇರಾ

‘ಲಾಲ್ ಸಿಂಗ್ ಚಡ್ಡಾ’ ಸಿನಿಮಾದ ಕೆಲಸ ಆರಂಭಗೊಂಡು ಹಲವು ವರ್ಷಗಳೇ ಕಳೆದಿವೆ. ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್ ದಿನಾಂಕ ಸಾಕಷ್ಟು ಬಾರಿ ಮುಂದೂಡಲ್ಪಟ್ಟಿದೆ. ಈಗ ಆಗಸ್ಟ್​ 11ರಂದು ಈ ಚಿತ್ರ ಬಿಡುಗಡೆ ಆಗುತ್ತಿದೆ. ಕರೀನಾ ಕಪೂರ್ ಅವರು ಈ ಚಿತ್ರಕ್ಕೆ ನಾಯಕಿ. ಇದೇ ದಿನ ಅಕ್ಷಯ್ ಕುಮಾರ್ ನಟನೆಯ ‘ರಕ್ಷಾ ಬಂಧನ್’ ಸಿನಿಮಾ ತೆರೆಗೆ ಬರುತ್ತಿದೆ. ಹೀಗಾಗಿ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಕ್ಲ್ಯಾಶ್ ಏರ್ಪಡುತ್ತಿದೆ.

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ