AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ, ಚಿರಂಜೀವಿಗೆ ‘ಲಾಲ್ ಸಿಂಗ್ ಚಡ್ಡಾ’ ಸ್ಪೆಷಲ್ ಶೋ; ಸ್ಟಾರ್​ಗಳ ಪ್ರತಿಕ್ರಿಯೆ ನೋಡಿ ಕಣ್ಣೀರಿಟ್ಟ ಆಮಿರ್ ಖಾನ್

ನಾಗ ಚೈತನ್ಯ, ನಾಗಾರ್ಜುನ, ನಿರ್ದೇಶಕ ಎಸ್​.ಎಸ್.​ ರಾಜಮೌಳಿ, ಚಿರಂಜೀವಿ, ‘ಪುಷ್ಪ’ ನಿರ್ದೇಶಕ ಸುಕುಮಾರ್ ಅವರು ಈ ಸ್ಪೆಷಲ್ ಶೋನಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಆಮಿರ್ ಖಾನ್ ಸಂತೋಷದಿಂದ ಕಣ್ಣೀರು ಹಾಕಿದ್ದಾರೆ.

ರಾಜಮೌಳಿ, ಚಿರಂಜೀವಿಗೆ ‘ಲಾಲ್ ಸಿಂಗ್ ಚಡ್ಡಾ’ ಸ್ಪೆಷಲ್ ಶೋ; ಸ್ಟಾರ್​ಗಳ ಪ್ರತಿಕ್ರಿಯೆ ನೋಡಿ ಕಣ್ಣೀರಿಟ್ಟ ಆಮಿರ್ ಖಾನ್
ಆಮಿರ್ ಖಾನ್
TV9 Web
| Edited By: |

Updated on: Jul 16, 2022 | 3:08 PM

Share

ನಟ ಆಮಿರ್ ಖಾನ್ (Aamir Khan) ಅವರು ಬಾಲಿವುಡ್​ನಲ್ಲಿ ಭಿನ್ನವಾಗಿ ಗುರುತಿಸಿಕೊಳ್ಳುತ್ತಾರೆ. ಅವರು ಸಿನಿಮಾದಿಂದ ಸಿನಿಮಾಗೆ ಭಿನ್ನ ಪಾತ್ರಗಳ ಆಯ್ಕೆ ಮಾಡಿಕೊಳ್ಳುತ್ತಾರೆ. ಪ್ರತಿ ಚಿತ್ರಕ್ಕೆ ಸಾಕಷ್ಟು ಶ್ರಮ ಹಾಕುತ್ತಾರೆ. ಈಗ ಅವರ ನಟನೆಯ ‘ಲಾಲ್​ ಸಿಂಗ್ ಚಡ್ಡಾ’ ಸಿನಿಮಾ ತೆರೆಗೆ ಬರಲು ರೆಡಿ ಇದೆ. ಹಾಲಿವುಡ್​ನ ‘ಫಾರೆಸ್ಟ್ ಗಂಪ್’  (Forrest Gump) ಚಿತ್ರದ ರಿಮೇಕ್ ಇದಾಗಿದೆ. ತುಂಬಾನೇ ಇಷ್ಟಪಟ್ಟು ಆಮಿರ್ ಖಾನ್ ಅವರು ಈ ಚಿತ್ರವನ್ನು ರಿಮೇಕ್ ಮಾಡಿದ್ದಾರೆ. ಈಗ ಈ ಚಿತ್ರ ತೆರೆಗೆ ಬರುವುದಕ್ಕೂ ಮೊದಲು ಸೆಲೆಬ್ರಿಟಿಗಳಿಗೋಸ್ಕರ ವಿಶೇಷ ಶೋ ಆಯೋಜನೆ ಮಾಡಲಾಗಿತ್ತು. ಸ್ಟಾರ್​ಗಳು ನೀಡಿದ ಪ್ರತಿಕ್ರಿಯೆ ನೋಡಿ ಆಮಿರ್ ಖಾನ್ ಅತ್ತಿದ್ದಾರೆ.

‘ಲಾಲ್ ಸಿಂಗ್ ಚಡ್ಡಾ’ ಸಿನಿಮಾದಲ್ಲಿ ಟಾಲಿವುಡ್ ನಟ ನಾಗ ಚೈತನ್ಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಆಮಿರ್ ಖಾನ್​ಗೂ ದಕ್ಷಿಣದ ಚಿತ್ರರಂಗಕ್ಕೂ ಇರುವ ನಂಟು ಮತ್ತಷ್ಟು ಗಟ್ಟಿ ಆಗಿದೆ. ನಾಗ ಚೈತನ್ಯ ಅವರ ‘ಲವ್ ಸ್ಟೋರಿ’ ಸಿನಿಮಾ ರಿಲೀಸ್​ಗೂ ಮೊದಲು ಆಯೋಜಿಸಿದ ಪ್ರೀ-ರಿಲೀಸ್ ಇವೆಂಟ್​ಗೆ ಆಮಿರ್ ಖಾನ್ ಮುಖ್ಯ ಅತಿಥಿ ಆಗಿ ಆಗಮಿಸಿದ್ದರು. ಈಗ ದಕ್ಷಿಣದ ಸ್ಟಾರ್​ಗಳಿಗೆ ಆಮಿರ್ ಖಾನ್ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಪ್ರದರ್ಶನ ಮಾಡಿದ್ದಾರೆ.

ಇದನ್ನೂ ಓದಿ
Image
ಆಮಿರ್​ ಖಾನ್​ರನ್ನು ‘ಟೈಟಾನಿಕ್’​ ನಿರ್ದೇಶಕನಿಗೆ ಹೋಲಿಸಿದ ಹಾಲಿವುಡ್​ ದಿಗ್ಗಜ; ಇಲ್ಲಿದೆ ಅಚ್ಚರಿ ವಿಚಾರ
Image
ಬಾಯ್​ಫ್ರೆಂಡ್​ ಜತೆ ಇರಾ ಖಾನ್​ ಬರ್ತ್​​ಡೇ ಆಚರಣೆ​; ಮತ್ತಷ್ಟು ಫೋಟೋ ಹಂಚಿಕೊಂಡ ಆಮಿರ್ ಮಗಳು  
Image
ನಟನೆಗೆ ವಿದಾಯ ಹೇಳಲು ಆಮಿರ್​ ಖಾನ್​ ನಿರ್ಧಾರ ಮಾಡಿದ್ದ ಸಂಗತಿ ಬಯಲು; ಮಾಜಿ ಪತ್ನಿ ಏನು ಹೇಳಿದ್ರು?
Image
‘ಡಿವೋರ್ಸ್​ ಆಗಿರಬಹುದು, ಆದ್ರೆ ಜೊತೆಗಿದ್ದೇವೆ’; ಇಬ್ಬರು ಮಾಜಿ ಪತ್ನಿಯರ ಬಗ್ಗೆ ಮಾತಾಡಿದ ಆಮಿರ್​ ಖಾನ್​

ನಾಗ ಚೈತನ್ಯ, ನಾಗಾರ್ಜುನ, ನಿರ್ದೇಶಕ ಎಸ್​.ಎಸ್.​ ರಾಜಮೌಳಿ, ಚಿರಂಜೀವಿ, ‘ಪುಷ್ಪ’ ನಿರ್ದೇಶಕ ಸುಕುಮಾರ್ ಅವರು ಈ ಸ್ಪೆಷಲ್ ಶೋನಲ್ಲಿ ಪಾಲ್ಗೊಂಡಿದ್ದರು. ಈ ಸಿನಿಮಾ ನೋಡಿದ ನಂತರದಲ್ಲಿ ಚಿರಂಜೀವಿ ಅವರು ಆಮಿರ್ ಖಾನ್ ಅವರನ್ನು ತಬ್ಬಿಕೊಂಡಿದ್ದಾರೆ. ಈ ವೇಳೆ ಆಮಿರ್ ಖಾನ್ ಸಂತೋಷದಿಂದ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಆಮಿರ್ ಖಾನ್ ಮಗಳಿ​ಗೆ ನಿರಂತರವಾಗಿ ಕಾಡುತ್ತಿದೆ ಈ ಸಮಸ್ಯೆ; ಹೊರ ಬರಲು ದಾರಿ ಕಾಣದೆ ಒದ್ದಾಡುತ್ತಿದ್ದಾರೆ ಇರಾ

‘ಲಾಲ್ ಸಿಂಗ್ ಚಡ್ಡಾ’ ಸಿನಿಮಾದ ಕೆಲಸ ಆರಂಭಗೊಂಡು ಹಲವು ವರ್ಷಗಳೇ ಕಳೆದಿವೆ. ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್ ದಿನಾಂಕ ಸಾಕಷ್ಟು ಬಾರಿ ಮುಂದೂಡಲ್ಪಟ್ಟಿದೆ. ಈಗ ಆಗಸ್ಟ್​ 11ರಂದು ಈ ಚಿತ್ರ ಬಿಡುಗಡೆ ಆಗುತ್ತಿದೆ. ಕರೀನಾ ಕಪೂರ್ ಅವರು ಈ ಚಿತ್ರಕ್ಕೆ ನಾಯಕಿ. ಇದೇ ದಿನ ಅಕ್ಷಯ್ ಕುಮಾರ್ ನಟನೆಯ ‘ರಕ್ಷಾ ಬಂಧನ್’ ಸಿನಿಮಾ ತೆರೆಗೆ ಬರುತ್ತಿದೆ. ಹೀಗಾಗಿ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಕ್ಲ್ಯಾಶ್ ಏರ್ಪಡುತ್ತಿದೆ.

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು