AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ನೋಡಿ ಬದಲಾಗಿದೆ ಬಾಲಿವುಡ್ ಪ್ರೇಕ್ಷಕರ ಮನಸ್ಥಿತಿ? ಆಮಿರ್ ಖಾನ್​ಗೆ ಶುರುವಾಗಿದೆ ಭಯ

ಈ ಚಿತ್ರದಲ್ಲಿ ಕೆಲ ಯುದ್ಧದ ದೃಶ್ಯಗಳು ಇರುತ್ತವೆಯಾದರೂ ಮಾಸ್ ಆ್ಯಕ್ಷನ್ ಇಲ್ಲ. ಈ ಕಾರಣಕ್ಕೆ ಬಾಲಿವುಡ್ ಮಂದಿ ಈ ಸಿನಿಮಾವನ್ನು ಒಪ್ಪಿಕೊಳ್ಳುತ್ತಾರೋ ಅಥವಾ ಇಲ್ಲವೋ ಎಂಬ ಭಯ ಆಮಿರ್ ಖಾನ್​ಗೆ ಕಾಡುತ್ತಿದೆ ಎನ್ನಲಾಗುತ್ತಿದೆ.

‘ಕೆಜಿಎಫ್ 2’ ನೋಡಿ ಬದಲಾಗಿದೆ ಬಾಲಿವುಡ್ ಪ್ರೇಕ್ಷಕರ ಮನಸ್ಥಿತಿ? ಆಮಿರ್ ಖಾನ್​ಗೆ ಶುರುವಾಗಿದೆ ಭಯ
ಆಮಿರ್​-ಯಶ್
TV9 Web
| Edited By: |

Updated on: Jul 17, 2022 | 7:00 AM

Share

ಯಶ್ (Yash) ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ  ‘ಕೆಜಿಎಫ್ 2’ ಸಿನಿಮಾ (KGF Chapter 2) ಸೃಷ್ಟಿ ಮಾಡಿದ ದಾಖಲೆಗಳು ಒಂದೆರಡಲ್ಲ. ಈ ಚಿತ್ರ ಬಾಲಿವುಡ್​ ಒಂದರಲ್ಲೇ 430 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಬಾಲಿವುಡ್​ನಲ್ಲೇ ಸಿದ್ಧಗೊಂಡ ಚಿತ್ರಗಳೂ ಇಷ್ಟು ದೊಡ್ಡ ಮೊತ್ತದ ಕಲೆಕ್ಷನ್ ಮಾಡಿಲ್ಲ ಎಂಬುದು ಇಲ್ಲಿ ಗಮನಿಸಬೇಕಾದ ವಿಚಾರ. ಈ ಸಿನಿಮಾದಲ್ಲಿ ಹೀರೋಯಿಸಂ, ತಾಯಿ ಸೆಂಟಿಮೆಂಟ್​ ತೋರಿಸಿದ ರೀತಿ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಈಗ ಬಾಲಿವುಡ್​​ನ ಯಾವುದೇ ದೊಡ್ಡ ಬಜೆಟ್​ ಸಿನಿಮಾ ತೆರೆಕಂಡರೂ ಅದನ್ನು ‘ಕೆಜಿಎಫ್ 2’ಗೆ ಹೋಲಿಕೆ ಮಾಡಲಾಗುತ್ತಿದೆ. ಇದು ಅನೇಕ ದೊಡ್ಡ ಚಿತ್ರಗಳಿಗೆ ಹಿನ್ನಡೆ ಆಗುತ್ತಿದೆ ಎನ್ನಲಾಗುತ್ತಿದೆ. ಆ ಸಾಲಿನಲ್ಲಿ ‘ಲಾಲ್ ಸಿಂಗ್ ಚಡ್ಡಾ’  (Laal Singh Chaddha) ಕೂಡ ಇದೆ ಎನ್ನಲಾಗುತ್ತಿದೆ.

ಹಾಲಿವುಡ್​ನ ‘ಫಾರೆಸ್ಟ್ ಗಂಪ್’ ಚಿತ್ರದ ರಿಮೇಕ್ ‘ಲಾಲ್ ಸಿಂಗ್ ಚಡ್ಡಾ’. ಮೂಲ ಚಿತ್ರವನ್ನು ಬಹುತೇಕ ಯಥಾವತ್ತು ಇಡಲಾಗಿದೆ ಎಂಬುದು ಟ್ರೇಲರ್​ನಲ್ಲಿ ಗಮನಕ್ಕೆ ಬಂದಿದೆ. ಈ ಚಿತ್ರದಲ್ಲಿ ಕೆಲ ಯುದ್ಧದ ದೃಶ್ಯಗಳು ಇರುತ್ತವೆಯಾದರೂ ಮಾಸ್ ಆ್ಯಕ್ಷನ್ ಇಲ್ಲ. ಈ ಕಾರಣಕ್ಕೆ ಬಾಲಿವುಡ್ ಮಂದಿ ಈ ಸಿನಿಮಾವನ್ನು ಒಪ್ಪಿಕೊಳ್ಳುತ್ತಾರೋ ಅಥವಾ ಇಲ್ಲವೋ ಎಂಬ ಭಯ ಆಮಿರ್ ಖಾನ್​ಗೆ ಕಾಡುತ್ತಿದೆ ಎನ್ನಲಾಗುತ್ತಿದೆ.

ಈ ಮೊದಲು ‘ರಾಧೆ ಶ್ಯಾಮ್’ ಸಿನಿಮಾ ಹೀನಾಯ ಸೋಲು ಕಂಡಿತ್ತು. ಈ ಚಿತ್ರದಲ್ಲಿ ಯಾವುದೇ ಮಾಸ್ ಅಂಶ ಇರಲಿಲ್ಲ. ಸಿನಿಮಾ ಸೋಲಲು ಇದು ಪ್ರಮುಖ ಕಾರಣ ಎನ್ನಲಾಗಿತ್ತು. ಈಗ ‘ಲಾಲ್ ಸಿಂಗ್ ಚಡ್ಡಾ’ ಚಿತ್ರ ತಂಡದವರಿಗೂ ಇದೇ ಮಾದರಿಯ ಭಯ ಕಾಡುತ್ತಿದೆ ಎಂದು ವರದಿ ಆಗಿದೆ. ಈ ಕಾರಣಕ್ಕೆ ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲು ತಂಡ ಪ್ಲ್ಯಾನ್ ರೂಪಿಸುತ್ತಿದೆ.

ಇದನ್ನೂ ಓದಿ
Image
ರಾಜಮೌಳಿ, ಚಿರಂಜೀವಿಗೆ ‘ಲಾಲ್ ಸಿಂಗ್ ಚಡ್ಡಾ’ ಸ್ಪೆಷಲ್ ಶೋ; ಸ್ಟಾರ್​ಗಳ ಪ್ರತಿಕ್ರಿಯೆ ನೋಡಿ ಕಣ್ಣೀರಿಟ್ಟ ಆಮಿರ್ ಖಾನ್
Image
RRR: ಹಾಲಿವುಡ್​​ ಜನಪ್ರಿಯ ಬರಹಗಾರನಿಂದ ‘ಆರ್​ಆರ್​ಆರ್​​’ಗೆ ಶಹಬ್ಬಾಸ್​ಗಿರಿ; ಚಿತ್ರ ನೋಡಿ ಹೇಳಿದ್ದೇನು ಗೊತ್ತಾ?
Image
Kabza Movie: 7 ಭಾಷೆಗಳಲ್ಲಿ ಧೂಳೆಬ್ಬಿಸಲಿದೆ ಉಪೇಂದ್ರ ನಟನೆಯ ‘ಕಬ್ಜ’ ಸಿನಿಮಾ; ಭರದಿಂದ ಸಾಗುತ್ತಿದೆ ಡಬ್ಬಿಂಗ್​ ಕೆಲಸ
Image
Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​

ಇದನ್ನೂ ಓದಿ: ರಾಜಮೌಳಿ, ಚಿರಂಜೀವಿಗೆ ‘ಲಾಲ್ ಸಿಂಗ್ ಚಡ್ಡಾ’ ಸ್ಪೆಷಲ್ ಶೋ; ಸ್ಟಾರ್​ಗಳ ಪ್ರತಿಕ್ರಿಯೆ ನೋಡಿ ಕಣ್ಣೀರಿಟ್ಟ ಆಮಿರ್ ಖಾನ್

‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ತೆರೆಗೆ ಬರೋಕೆ ಒಂದು ತಿಂಗಳು ಮಾತ್ರ ಬಾಕಿ ಇದೆ. ಆದಾಗ್ಯೂ ಸಿನಿಮಾಗೆ ಸೋಶಿಯಲ್ ಮೀಡಿಯಾದಲ್ಲಿ ಹೈಪ್ ಸೃಷ್ಟಿ ಆಗಿಲ್ಲ. ಈ ಚಿತ್ರದ ರಿಲೀಸ್ ದಿನಾಂಕ ಪದೇ ಪದೇ ಮುಂದೂಡಲ್ಪಟ್ಟಿರುವುದೂ ಚಿತ್ರದ ಹೈಪ್ ಸೃಷ್ಟಿ ಕುಗ್ಗಲು ಕಾರಣ ಎನ್ನಲಾಗುತ್ತಿದೆ. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಈ ಚಿತ್ರದ ಟ್ರೇಲರ್​ಅನ್ನು ಐಪಿಎಲ್ ಫಿನಾಲೆಯಲ್ಲಿ ರಿಲೀಸ್ ಮಾಡಲಾಯಿತು. ಇದು ಕೂಡ ಚಿತ್ರಕ್ಕೆ ಅಂದುಕೊಂಡ ಮಟ್ಟಿಗೆ ಸಹಕಾರಿ ಆಗಿಲ್ಲ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್