AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

17ನೇ ವಯಸ್ಸಿಗೆ ಮಹತ್ವದ ಸಾಧನೆ; ಕಾನ್ ಚಿತ್ರೋತ್ಸವದಲ್ಲಿ ನಿತಾಂಶಿ ಗೋಯಲ್

‘ಲಾಪತಾ ಲೇಡೀಸ್’ ಸಿನಿಮಾದ ಮೂಲಕ ನಟಿ ನಿತಾಂಶಿ ಗೋಯಲ್ ಅವರಿಗೆ ಹೆಚ್ಚು ಜನಪ್ರಿಯತೆ ಸಿಕ್ಕಿತು. ಈಗ ಅವರು ಪ್ರತಿಷ್ಠಿತ ಕಾನ್ ಫಿಲ್ಮ್ ಫೆಸ್ಟಿವಲ್​ನ ರೆಡ್​ ಕಾರ್ಪೆಟ್​​ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೇವಲ 17ನೇ ವಯಸ್ಸಿಗೆ ಅವರಿಗೆ ಈ ಅವಕಾಶ ಸಿಕ್ಕಿದೆ. ಭಾರತದ ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿಯಾಗುತ್ತಿದ್ದಾರೆ.

17ನೇ ವಯಸ್ಸಿಗೆ ಮಹತ್ವದ ಸಾಧನೆ; ಕಾನ್ ಚಿತ್ರೋತ್ಸವದಲ್ಲಿ ನಿತಾಂಶಿ ಗೋಯಲ್
Nitanshi Goel
ಮದನ್​ ಕುಮಾರ್​
|

Updated on: May 13, 2025 | 6:52 PM

Share

ನಟಿ ನಿತಾಂಶಿ ಗೋಯಲ್ (Nitanshi Goel) ಅವರಿಗೆ ಈಗಿನ್ನೂ 17 ವರ್ಷ ವಯಸ್ಸು. ಈ ಚಿಕ್ಕ ಪ್ರಾಯದಲ್ಲೇ ಅವರಿಗೆ ದೊಡ್ಡ ದೊಡ್ಡ ಅವಕಾಶಗಳು ಸಿಗುತ್ತಿವೆ. ಅದಕ್ಕೆಲ್ಲ ಕಾರಣ ಆಗಿದ್ದು ‘ಲಾಪತಾ ಲೇಡೀಸ್’ (Laapataa Ladies) ಸಿನಿಮಾ. ಕಿರಣ್ ರಾವ್ ನಿರ್ದೇಶನ ಮಾಡಿದ ಆ ಸಿನಿಮಾದಲ್ಲಿ ನಿತಾಂಶಿ ಅವರು ಪ್ರಮುಖ ಪಾತ್ರ ಮಾಡಿದರು. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಯಿತು. ಈಗ ಅವರಿಗೆ ಇನ್ನೊಂದು ಬಂಪರ್ ಚಾನ್ಸ್ ಸಿಕ್ಕಿದೆ. ಕಾನ್ ಚಿತ್ರೋತ್ಸವದ (Cannes Film Festival) ರೆಡ್​ ಕಾರ್ಪೆಟ್​ನಲ್ಲಿ ನಿತಾಂಶಿ ಗೋಯಲ್ ಅವರು ಹೆಜ್ಜೆ ಹಾಕಲಿದ್ದಾರೆ. ಈ ಇವೆಂಟ್​ನಲ್ಲಿ ಭಾಗಿಯಾಗುತ್ತಿರುವ ಭಾರತದ ಅತಿ ಕಿರಿಯ ನಟಿ ಎಂಬ ಖ್ಯಾತಿಗೆ ಅವರು ಪಾತ್ರರಾಗುತ್ತಿದ್ದಾರೆ.

ಮೇ 13ರಿಂದ ಮೇ 24ರ ತನಕ 78ನೇ ಸಾಲಿನ ಕಾನ್ ಫಿಲ್ಮ್ ಫೆಸ್ಟಿವಲ್ ನಡೆಯಲಿದೆ. ಈ ಚಿತ್ರೋತ್ಸವಕ್ಕೆ ವಿಶ್ವಾದ್ಯಂತ ಮನ್ನಣೆ ಇದೆ. ಕಾನ್ ಫಿಲ್ಮ್ ಫೆಸ್ಟಿವಲ್ ರೆಡ್ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕಲು ಕೆಲವೇ ಮಂದಿಗೆ ಅವಕಾಶ ಸಿಗುತ್ತದೆ. ಈ ವರ್ಷ ಭಾರತದಿಂದ ಒಂದಷ್ಟು ಸೆಲೆಬ್ರಿಟಿಗಳು ಭಾಗಿಯಾಗಲಿದ್ದಾರೆ. ಅಂಥವರ ಪೈಕಿ 17ರ ಪ್ರಾಯದ ನಿತಾಂಶಿ ಗೋಯಲ್ ಅವರು ಗಮನ ಸೆಳೆಯುತ್ತಿದ್ದಾರೆ.

‘ಬಹಳ ಮಹತ್ವಾಕಾಂಕ್ಷೆ ಇಟ್ಟುಕೊಂಡು ನಾನು ಚಿತ್ರರಂಗಕ್ಕೆ ಬಂದೆ. ಲಾಪತಾ ಲೇಡೀಸ್ ಸಿನಿಮಾದಿಂದ ಈಗ ಕಾನ್ ಫಿಲ್ಮ್ ಫೆಸ್ಟಿವಲ್ ತನಕ ಬಂದಿದ್ದೇನೆ. ದೊಡ್ಡ ಕನಸು ಇಟ್ಟುಕೊಂಡು ಅದನ್ನು ನನಸಾಗಿಸಲು ಪ್ರಯತ್ನಿಸುವ ಎಲ್ಲ ಭಾರತೀಯ ಹುಡುಗಿಯರನ್ನು ನಾನು ಪ್ರತಿನಿಧಿಸುತ್ತೇನೆ. ಜಾಗತಿಕ ವೇದಿಕೆಯಲ್ಲಿ ಅಂತಹ ಹುಡುಗಿಯರನ್ನು ಪ್ರತಿನಿಧಿಸುವುದು ನನಗೆ ಖುಷಿಯ ವಿಷಯ’ ಎಂದು ನಿತಾಂಶಿ ಗೋಯಲ್ ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
Image
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
Image
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
Image
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

ಈಗಾಗಲೇ ನಿತಾಂಶಿ ಗೋಯಲ್ ಅವರು ಕಾನ್ ನಗರವನ್ನು ತಲುಪಿದ್ದಾರೆ. ಅಲ್ಲಿಂದ ಅವರ ವಿಡಿಯೋಗಳು ಲಭ್ಯವಾಗಿವೆ. ರೆಡ್ ಕಾರ್ಪೆಟ್​ನಲ್ಲಿ ಅವರು ಯಾವ ಕಾಸ್ಟ್ಯೂಮ್ ಧರಿಸಿ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ತಿಳಿಯಲು ಫ್ಯಾನ್ಸ್ ಕಾದಿದ್ದಾರೆ. ಕೇವಲ 17ನೇ ವಯಸ್ಸಿಗೆ ನಿತಾಂಶಿ ಅವರಿಗೆ ಈ ಅವಕಾಶ ಸಿಕ್ಕಿದ್ದಕ್ಕೆ ಅಭಿಮಾನಿಗಳಿಗೆ ಖುಷಿ ಆಗಿದೆ.

ಇದನ್ನೂ ಓದಿ: ‘ಮೆಟ್ ಗಾಲಾ’ದಲ್ಲಿ ‘ಲಾಪತಾ ಲೇಡಿಸ್​’ ಚಿತ್ರದ ಫೂಲ್​ ಕುಮಾರಿ; ಫೋಟೋ ವೈರಲ್

ನಟಿ ಆಲಿಯಾ ಭಟ್ ಕೂಡ ಇದೇ ಮೊದಲ ಬಾರಿಗೆ ಕಾನ್ ಫಿಲ್ಮ್ ಫೆಸ್ಟಿವಲ್​ನಲ್ಲಿ ಪಾಲ್ಗೊಳ್ಳಲಿದ್ದಾರೆ. ಜಾನ್ವಿ ಕಪೂರ್, ಊರ್ವಶಿ ರೌಟೇಲಾ, ಐಶ್ವರ್ಯಾ ರೈ, ಇಶಾನ್ ಖಟ್ಟರ್, ಕರಣ್ ಜೋಹರ್ ಮುಂತಾದವರು ಸಹ ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು