AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ಎಂಟ್ರಿ ಬಳಿಕ ‘ಲಾಪತಾ ಲೇಡೀಸ್​’ ನಿರ್ದೇಶಕಿ ಕಿರಣ್ ರಾವ್​ ಮೊದಲ ಪ್ರತಿಕ್ರಿಯೆ ಏನು?

ಆಮಿರ್​ ಖಾನ್​ ನಿರ್ಮಾಣ ಮಾಡಿದ ‘ಲಾಪತಾ ಲೇಡೀಸ್​’ ಸಿನಿಮಾಗೆ ಕಿರಣ್​ ರಾವ್​ ನಿರ್ದೇಶನ ಮಾಡಿದ್ದಾರೆ. ಭಾರತದಲ್ಲಿ ಹಲವರ ಮೆಚ್ಚುಗೆಗೆ ಪಾತ್ರವಾದ ಈ ಸಿನಿಮಾ ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ. 2025ನೇ ಸಾಲಿನ ಆಸ್ಕರ್​ ಪ್ರಶಸ್ತಿ (ಅಕಾಡೆಮಿ ಅವಾರ್ಡ್ಸ್​) ಸ್ಪರ್ಧೆಗೆ ಈ ಸಿನಿಮಾ ಭಾರತದಿಂದ ಅಧಿಕೃತವಾಗಿ ಆಯ್ಕೆಯಾಗಿದೆ.

ಆಸ್ಕರ್ ಎಂಟ್ರಿ ಬಳಿಕ ‘ಲಾಪತಾ ಲೇಡೀಸ್​’ ನಿರ್ದೇಶಕಿ ಕಿರಣ್ ರಾವ್​ ಮೊದಲ ಪ್ರತಿಕ್ರಿಯೆ ಏನು?
‘ಲಾಪತಾ ಲೇಡೀಸ್​’ ಸಿನಿಮಾ ಪೋಸ್ಟರ್​, ಕಿರಣ್​ ರಾವ್​
ಮದನ್​ ಕುಮಾರ್​
|

Updated on: Sep 23, 2024 | 3:15 PM

Share

2025ರ ಸಾಲಿನ ಆಸ್ಕರ್ ಪ್ರಶಸ್ತಿ ಸ್ಪರ್ಧೆಗೆ ಭಾರತದಿಂದ ‘ಲಾಪತಾ ಲೇಡೀಸ್​’ ಸಿನಿಮಾ ಅಧಿಕೃತವಾಗಿ ಆಯ್ಕೆ ಆಗಿದೆ. ಈ ಸಿನಿಮಾಗೆ ನಿರ್ದೇಶಕಿ ಕಿರಣ್ ರಾವ್​ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಆಮಿರ್​ ಖಾನ್​ ನಿರ್ಮಾಣ ಮಾಡಿದ್ದು, ಪ್ರೇಕ್ಷಕರಿಂ ಮೆಚ್ಚುಗೆ ಗಳಿಸಿದೆ. ಈ ವರ್ಷ ಮಾರ್ಚ್​ 1ರಂದು ತೆರೆಕಂಡ ಈ ಚಿತ್ರದಲ್ಲಿ ಸ್ಪರ್ಶ್​ ಶ್ರೀವಾಸ್ತವ್, ನಿತಾಂಶಿ ಗೋಯಲ್​, ಪ್ರತಿಭಾ ರಂಟಾ, ರವಿ ಕಿಶನ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಆಸ್ಕರ್​ ಸ್ಪರ್ಧೆಗೆ ಆಯ್ಕೆ ಆಗಿರುವುದಕ್ಕೆ ‘ಲಾಪತಾ ಲೇಡೀಸ್​’ ನಿರ್ದೇಶಕಿ ಕಿರಣ್​ ರಾವ್​ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಕಿರಣ್​ ರಾವ್​ ನಿರ್ದೇಶಿಸಿದ ಎರಡನೇ ಸಿನಿಮಾ ‘ಲಾಪತಾ ಲೇಡೀಸ್​’. ಅದಕ್ಕೂ ಮುನ್ನ ಅವರು ‘ಗೋಬಿ ಘಾಟ್’ ಸಿನಿಮಾವನ್ನು ನಿರ್ದೇಶಿಸಿದ್ದರು. ‘ಲಾಪತಾ ಲೇಡೀಸ್​’ ಸಿನಿಮಾಗೆ ಪ್ರೇಕ್ಷಕರು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಭೇಷ್​ ಎಂದಿದ್ದಾರೆ. ಈಗ ಆಸ್ಕರ್​ಗೂ ಆಯ್ಕೆ ಆಗಿರುವುದರಿಂದ ಚಿತ್ರತಂಡಕ್ಕೆ ಸಖತ್​ ಖುಷಿ ಆಗಿದೆ. ಈ ಹಿನ್ನೆಲೆಯಲ್ಲಿ ಅನೇಕರಿಗೆ ಕಿರಣ್ ರಾವ್​ ಧನ್ಯವಾದ ಸಲ್ಲಿಸಿದ್ದಾರೆ.

‘ನಮ್ಮ ಸಿನಿಮಾ ಆಸ್ಕರ್​ ಸ್ಪರ್ಧೆಗೆ ಆಯ್ಕೆ ಆಗಿರುವುದು ಇಡೀ ತಂಡದ ಪರಿಶ್ರಮ ಮತ್ತು ಪ್ಯಾಷನ್​ಗೆ ಸಾಕ್ಷಿಯಾಗಿದೆ. ಸಿನಿಮಾ ಎಂಬುದು ಯಾವಾಗಲೂ ಹೃದಯಗಳನ್ನು ಬೆಸೆಯುವ, ಅರ್ಥಪೂರ್ಣ ಸಂವಹನ ನೆಡೆಸುವ ಹಾಗೂ ಗಡಿಗಳನ್ನು ಮೀರುವ ಮಾಧ್ಯಮವಾಗಿದೆ. ಭಾರತೀಯರಿಗೆ ಇಷ್ಟ ಆದ ರೀತಿಯೇ ಜಗತ್ತಿನಾದ್ಯಂತ ಇರುವ ಪ್ರೇಕ್ಷಕರಿಗೆ ಈ ಸಿನಿಮಾ ಇಷ್ಟ ಆಗಲಿದೆ ಅಂತ ನಾನು ನಂಬಿದ್ದೇನೆ’ ಎಂದಿದ್ದಾರೆ ಕಿರಣ್​ ರಾವ್​.

‘ಲಾಪತಾ ಲೇಡೀಸ್​ ಸಿನಿಮಾ ಮೇಲೆ ನಂಬಿಕೆ ಇಟ್ಟ ಎಲ್ಲರಿಗೂ ಮತ್ತು ಆಯ್ಕೆ ಸಮಿತಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಈ ವರ್ಷದ ಹಲವು ಅತ್ಯುತ್ತಮ ಸಿನಿಮಾಗಳ ನಡುವೆ ನಮ್ಮ ಸಿನಿಮಾ ಆಯ್ಕೆ ಆಗಿದ್ದು ಅತ್ಯಂತ ಹೆಮ್ಮೆಯ ವಿಷಯ. ಉಳಿದ ಸಿನಿಮಾಗಳು ಕೂಡ ಅಷ್ಟೇ ಸಮರ್ಥವಾಗಿವೆ’ ಎಂದು ಕಿರಣ್ ರಾವ್​ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Laapataa Ladies Review: ಈ ಕಾಲಕ್ಕೆ ಬೇಕಾದ ಮಹತ್ವಪೂರ್ಣ ಸಿನಿಮಾ ‘ಲಾಪತಾ ಲೇಡೀಸ್’

‘ನಮಗೆ ಬೆಂಬಲ ನೀಡಿದ ಆಮಿರ್​ ಖಾನ್​ ಪ್ರೊಡಕ್ಷನ್ಸ್ ಮತ್ತು ಜಿಯೋ ಸ್ಟುಡಿಯೋಸ್​ ಸಂಸ್ಥೆಗಳಿಗೆ ಧನ್ಯವಾದಗಳು. ಪ್ರತಿಭಾವಂತ ತಂತ್ರಜ್ಞರ ಜೊತೆ ಕೆಲಸ ಮಾಡಿದ್ದು ನಮ್ಮ ಪಾಲಿನ ಹಿರಿಮೆ. ಈ ಸಿನಿಮಾ ನಿರ್ಮಾಣವಾಗಲು ಕಾರಣರಾದ ಎಲ್ಲ ಕಲಾವಿದರು ಮತ್ತು ತಂತ್ರಜ್ಞರ ತಂಡಕ್ಕೆ ಕೂಡ ನಾನು ಧನ್ಯವಾದ ತಿಳಿಸುತ್ತೇನೆ. ಇದು ಮರೆಯಲಾಗದ ಜರ್ನಿ ಆಗಿತ್ತು’ ಎಂದು ಕಿರಣ್ ರಾವ್​ ಹೇಳಿದ್ದಾರೆ. ಅಲ್ಲದೇ, ಸಿನಿಮಾಗೆ ಪ್ರೀತಿ ಮತ್ತು ಬೆಂಬಲ ತೋರಿದ ಪ್ರೇಕ್ಷಕರಿಗೂ ಅವರು ಧನ್ಯವಾದ ಅರ್ಪಿಸಿದ್ದಾರೆ. ‘ನೆಟ್​ಫ್ಲಿಕ್ಸ್​’ ಒಟಿಟಿಯಲ್ಲಿ ಈ ಸಿನಿಮಾ ಲಭ್ಯವಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ