AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ಎಂಟ್ರಿ ಬಳಿಕ ‘ಲಾಪತಾ ಲೇಡೀಸ್​’ ನಿರ್ದೇಶಕಿ ಕಿರಣ್ ರಾವ್​ ಮೊದಲ ಪ್ರತಿಕ್ರಿಯೆ ಏನು?

ಆಮಿರ್​ ಖಾನ್​ ನಿರ್ಮಾಣ ಮಾಡಿದ ‘ಲಾಪತಾ ಲೇಡೀಸ್​’ ಸಿನಿಮಾಗೆ ಕಿರಣ್​ ರಾವ್​ ನಿರ್ದೇಶನ ಮಾಡಿದ್ದಾರೆ. ಭಾರತದಲ್ಲಿ ಹಲವರ ಮೆಚ್ಚುಗೆಗೆ ಪಾತ್ರವಾದ ಈ ಸಿನಿಮಾ ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ. 2025ನೇ ಸಾಲಿನ ಆಸ್ಕರ್​ ಪ್ರಶಸ್ತಿ (ಅಕಾಡೆಮಿ ಅವಾರ್ಡ್ಸ್​) ಸ್ಪರ್ಧೆಗೆ ಈ ಸಿನಿಮಾ ಭಾರತದಿಂದ ಅಧಿಕೃತವಾಗಿ ಆಯ್ಕೆಯಾಗಿದೆ.

ಆಸ್ಕರ್ ಎಂಟ್ರಿ ಬಳಿಕ ‘ಲಾಪತಾ ಲೇಡೀಸ್​’ ನಿರ್ದೇಶಕಿ ಕಿರಣ್ ರಾವ್​ ಮೊದಲ ಪ್ರತಿಕ್ರಿಯೆ ಏನು?
‘ಲಾಪತಾ ಲೇಡೀಸ್​’ ಸಿನಿಮಾ ಪೋಸ್ಟರ್​, ಕಿರಣ್​ ರಾವ್​
ಮದನ್​ ಕುಮಾರ್​
|

Updated on: Sep 23, 2024 | 3:15 PM

Share

2025ರ ಸಾಲಿನ ಆಸ್ಕರ್ ಪ್ರಶಸ್ತಿ ಸ್ಪರ್ಧೆಗೆ ಭಾರತದಿಂದ ‘ಲಾಪತಾ ಲೇಡೀಸ್​’ ಸಿನಿಮಾ ಅಧಿಕೃತವಾಗಿ ಆಯ್ಕೆ ಆಗಿದೆ. ಈ ಸಿನಿಮಾಗೆ ನಿರ್ದೇಶಕಿ ಕಿರಣ್ ರಾವ್​ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಆಮಿರ್​ ಖಾನ್​ ನಿರ್ಮಾಣ ಮಾಡಿದ್ದು, ಪ್ರೇಕ್ಷಕರಿಂ ಮೆಚ್ಚುಗೆ ಗಳಿಸಿದೆ. ಈ ವರ್ಷ ಮಾರ್ಚ್​ 1ರಂದು ತೆರೆಕಂಡ ಈ ಚಿತ್ರದಲ್ಲಿ ಸ್ಪರ್ಶ್​ ಶ್ರೀವಾಸ್ತವ್, ನಿತಾಂಶಿ ಗೋಯಲ್​, ಪ್ರತಿಭಾ ರಂಟಾ, ರವಿ ಕಿಶನ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಆಸ್ಕರ್​ ಸ್ಪರ್ಧೆಗೆ ಆಯ್ಕೆ ಆಗಿರುವುದಕ್ಕೆ ‘ಲಾಪತಾ ಲೇಡೀಸ್​’ ನಿರ್ದೇಶಕಿ ಕಿರಣ್​ ರಾವ್​ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಕಿರಣ್​ ರಾವ್​ ನಿರ್ದೇಶಿಸಿದ ಎರಡನೇ ಸಿನಿಮಾ ‘ಲಾಪತಾ ಲೇಡೀಸ್​’. ಅದಕ್ಕೂ ಮುನ್ನ ಅವರು ‘ಗೋಬಿ ಘಾಟ್’ ಸಿನಿಮಾವನ್ನು ನಿರ್ದೇಶಿಸಿದ್ದರು. ‘ಲಾಪತಾ ಲೇಡೀಸ್​’ ಸಿನಿಮಾಗೆ ಪ್ರೇಕ್ಷಕರು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಭೇಷ್​ ಎಂದಿದ್ದಾರೆ. ಈಗ ಆಸ್ಕರ್​ಗೂ ಆಯ್ಕೆ ಆಗಿರುವುದರಿಂದ ಚಿತ್ರತಂಡಕ್ಕೆ ಸಖತ್​ ಖುಷಿ ಆಗಿದೆ. ಈ ಹಿನ್ನೆಲೆಯಲ್ಲಿ ಅನೇಕರಿಗೆ ಕಿರಣ್ ರಾವ್​ ಧನ್ಯವಾದ ಸಲ್ಲಿಸಿದ್ದಾರೆ.

‘ನಮ್ಮ ಸಿನಿಮಾ ಆಸ್ಕರ್​ ಸ್ಪರ್ಧೆಗೆ ಆಯ್ಕೆ ಆಗಿರುವುದು ಇಡೀ ತಂಡದ ಪರಿಶ್ರಮ ಮತ್ತು ಪ್ಯಾಷನ್​ಗೆ ಸಾಕ್ಷಿಯಾಗಿದೆ. ಸಿನಿಮಾ ಎಂಬುದು ಯಾವಾಗಲೂ ಹೃದಯಗಳನ್ನು ಬೆಸೆಯುವ, ಅರ್ಥಪೂರ್ಣ ಸಂವಹನ ನೆಡೆಸುವ ಹಾಗೂ ಗಡಿಗಳನ್ನು ಮೀರುವ ಮಾಧ್ಯಮವಾಗಿದೆ. ಭಾರತೀಯರಿಗೆ ಇಷ್ಟ ಆದ ರೀತಿಯೇ ಜಗತ್ತಿನಾದ್ಯಂತ ಇರುವ ಪ್ರೇಕ್ಷಕರಿಗೆ ಈ ಸಿನಿಮಾ ಇಷ್ಟ ಆಗಲಿದೆ ಅಂತ ನಾನು ನಂಬಿದ್ದೇನೆ’ ಎಂದಿದ್ದಾರೆ ಕಿರಣ್​ ರಾವ್​.

‘ಲಾಪತಾ ಲೇಡೀಸ್​ ಸಿನಿಮಾ ಮೇಲೆ ನಂಬಿಕೆ ಇಟ್ಟ ಎಲ್ಲರಿಗೂ ಮತ್ತು ಆಯ್ಕೆ ಸಮಿತಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಈ ವರ್ಷದ ಹಲವು ಅತ್ಯುತ್ತಮ ಸಿನಿಮಾಗಳ ನಡುವೆ ನಮ್ಮ ಸಿನಿಮಾ ಆಯ್ಕೆ ಆಗಿದ್ದು ಅತ್ಯಂತ ಹೆಮ್ಮೆಯ ವಿಷಯ. ಉಳಿದ ಸಿನಿಮಾಗಳು ಕೂಡ ಅಷ್ಟೇ ಸಮರ್ಥವಾಗಿವೆ’ ಎಂದು ಕಿರಣ್ ರಾವ್​ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Laapataa Ladies Review: ಈ ಕಾಲಕ್ಕೆ ಬೇಕಾದ ಮಹತ್ವಪೂರ್ಣ ಸಿನಿಮಾ ‘ಲಾಪತಾ ಲೇಡೀಸ್’

‘ನಮಗೆ ಬೆಂಬಲ ನೀಡಿದ ಆಮಿರ್​ ಖಾನ್​ ಪ್ರೊಡಕ್ಷನ್ಸ್ ಮತ್ತು ಜಿಯೋ ಸ್ಟುಡಿಯೋಸ್​ ಸಂಸ್ಥೆಗಳಿಗೆ ಧನ್ಯವಾದಗಳು. ಪ್ರತಿಭಾವಂತ ತಂತ್ರಜ್ಞರ ಜೊತೆ ಕೆಲಸ ಮಾಡಿದ್ದು ನಮ್ಮ ಪಾಲಿನ ಹಿರಿಮೆ. ಈ ಸಿನಿಮಾ ನಿರ್ಮಾಣವಾಗಲು ಕಾರಣರಾದ ಎಲ್ಲ ಕಲಾವಿದರು ಮತ್ತು ತಂತ್ರಜ್ಞರ ತಂಡಕ್ಕೆ ಕೂಡ ನಾನು ಧನ್ಯವಾದ ತಿಳಿಸುತ್ತೇನೆ. ಇದು ಮರೆಯಲಾಗದ ಜರ್ನಿ ಆಗಿತ್ತು’ ಎಂದು ಕಿರಣ್ ರಾವ್​ ಹೇಳಿದ್ದಾರೆ. ಅಲ್ಲದೇ, ಸಿನಿಮಾಗೆ ಪ್ರೀತಿ ಮತ್ತು ಬೆಂಬಲ ತೋರಿದ ಪ್ರೇಕ್ಷಕರಿಗೂ ಅವರು ಧನ್ಯವಾದ ಅರ್ಪಿಸಿದ್ದಾರೆ. ‘ನೆಟ್​ಫ್ಲಿಕ್ಸ್​’ ಒಟಿಟಿಯಲ್ಲಿ ಈ ಸಿನಿಮಾ ಲಭ್ಯವಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ