ಸುಪ್ರೀಂ ಕೋರ್ಟ್​ನಲ್ಲಿ ‘ಲಾಪತಾ ಲೇಡೀಸ್​’ ಪ್ರದರ್ಶನ; ಆಮಿರ್​ ಖಾನ್​, ಕಿರಣ್​ ರಾವ್​ಗೆ ಗೌರವ

ಆಮಿರ್​ ಖಾನ್​ ನಿರ್ಮಿಸಿ, ಕಿರಣ್ ರಾವ್​ ನಿರ್ದೇಶನ ಮಾಡಿದ ‘ಲಾಪತಾ ಲೇಡೀಸ್’ ಸಿನಿಮಾ ಈಗ ಸುಪ್ರೀಂ ಕೋರ್ಟ್​ ಗಮನವನ್ನು ಸೆಳೆದಿದೆ. ಜಡ್ಜ್​ಗಳಿಗಾಗಿ ಈ ಸಿನಿಮಾ ಪ್ರದರ್ಶನ ಮಾಡಲಾಗುತ್ತಿದೆ. ಅವರ ಕುಟುಂಬದವರು ಕೂಡ ಸಿನಿಮಾ ವೀಕ್ಷಿಸಲಿದ್ದಾರೆ. ಸುಪ್ರೀಂ ಕೋರ್ಟ್​ನಲ್ಲಿ ಆಯೋಜನೆಗೊಂಡ ಸಿನಿಮಾ ಪ್ರದರ್ಶನಕ್ಕೆ ಆಮಿರ್​ ಖಾನ್​ ಹಾಜರಾಗಿದ್ದಾರೆ.

ಸುಪ್ರೀಂ ಕೋರ್ಟ್​ನಲ್ಲಿ ‘ಲಾಪತಾ ಲೇಡೀಸ್​’ ಪ್ರದರ್ಶನ; ಆಮಿರ್​ ಖಾನ್​, ಕಿರಣ್​ ರಾವ್​ಗೆ ಗೌರವ
ಲಾಪತಾ ಲೇಡೀಸ್​, ಸುಪ್ರೀಂ ಕೋರ್ಟ್​, ಆಮಿರ್​ ಖಾನ್​
Follow us
|

Updated on: Aug 09, 2024 | 4:24 PM

ನಟ ಆಮಿರ್​ ಖಾನ್​ ಅವರು ನಿರ್ಮಾಪಕನಾಗಿ ಸಾಮಾಜಿಕ ಕಳಜಳಿ ಇರುವಂತಹ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಈ ವರ್ಷ ಅವರು ನಿರ್ಮಾಣ ಮಾಡಿದ ‘ಲಾಪತಾ ಲೇಡೀಸ್​’ ಸಿನಿಮಾ ಉತ್ತಮ ವಿಮರ್ಶೆ ಪಡೆದುಕೊಂಡಿತು. ಈ ಸಿನಿಮಾಗೆ ಆಮಿರ್​ ಖಾನ್​ ಅವರ ಮಾಜಿ ಪತ್ನಿ ಕಿರಣ್​ ರಾವ್​ ನಿರ್ದೇಶನ ಮಾಡಿದ್ದಾರೆ. ಹೊಸ ಕಲಾವಿದರು ಮುಖ್ಯಭೂಮಿಕೆ ನಿಭಾಯಿಸಿರುವ ‘ಲಾಪತಾ ಲೇಡೀಸ್​’ ಸಿನಿಮಾಗೆ ಈಗ ಇನ್ನೊಂದು ವಿಶೇಷ ಗೌರವ ಸಿಗುತ್ತಿದೆ. ಸುಪ್ರೀಂ ಕೋರ್ಟ್​ನಲ್ಲಿ ಇಂದು (ಆಗಸ್ಟ್​ 9) ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ!

ಲಿಂಗ ಸಮಾನತೆ ಬಗ್ಗೆ ‘ಲಾಪತಾ ಲೇಡೀಸ್​’ ಸಿನಿಮಾದಲ್ಲಿ ಹೇಳಲಾಗಿದೆ. ವಿಮರ್ಶಕರು ಈ ಸಿನಿಮಾಗೆ ಫುಲ್​ ಮಾರ್ಕ್ಸ್​ ನೀಡಿದ್ದಾರೆ. ಚಿತ್ರಮಂದಿರದಲ್ಲಿ ತೆರೆಕಂಡ ಬಳಿಕ ಒಟಿಟಿಯಲ್ಲಿ ಬಿಡುಗಡೆಯಾಗಿಯೂ ಈ ಸಿನಿಮಾ ಹೆಚ್ಚು ಜನರನ್ನು ತಲುಪಿತು. ಅನೇಕ ಸೆಲೆಬ್ರಿಟಿಗಳು ‘ಲಾಪತಾ ಲೇಡೀಸ್​’ ಚಿತ್ರದ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ. ಈಗ ಸುಪ್ರೀಂ ಕೋರ್ಟ್​ನಲ್ಲಿ ಪ್ರದರ್ಶನ ಕಾಣುತ್ತಿರುವುದು ವಿಶೇಷ.

ಸುಪ್ರೀಂ ಕೋರ್ಟ್​ ಜಡ್ಜ್​ಗಳಿಗಾಗಿ, ಅವರ ಕುಟುಂಬದವರಿಗಾಗಿ, ಅಧಿಕಾರಿಗಳಿಗಾಗಿ ‘ಲಾಪತಾ ಲೇಡೀಸ್​’ ಸಿನಿಮಾವನ್ನು ಪ್ರದರ್ಶನ ಮಾಡಲಾಗುತ್ತಿದೆ. ಇದರಲ್ಲಿ ಆಮಿರ್ ಖಾನ್​ ಮತ್ತು ಕಿರಣ್​ ರಾವ್​ ಅವರು ಭಾಗಿ ಆಗಿದ್ದಾರೆ. ಸುಪ್ರೀಂ ಕೋರ್ಟ್​ನ 75ನೇ ವಾರ್ಷಿಕೋತ್ಸವದ ಸಲುವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ‘ಲಾಪತಾ ಲೇಡೀಸ್​’ ಸಿನಿಮಾ ಪ್ರದರ್ಶನ ಆಗುತ್ತಿದೆ.

ಇದನ್ನೂ ಓದಿ: ನೆಟ್​ಫ್ಲಿಕ್ಸ್​ ಟ್ರೆಂಡಿಂಗ್​ನಲ್ಲಿ ನಂಬರ್​ ಒನ್​ ಆಯ್ತು ‘ಲಾಪತಾ ಲೇಡೀಸ್​’ ಸಿನಿಮಾ

ಶುಕ್ರವಾರ (ಆಗಸ್ಟ್ 9) ಸಂಜೆ 4.15ರಿಂದ 6.20ರ ತನಕ ಸುಪ್ರೀಂ ಕೋರ್ಟ್​ನ ಸಿ-ಬ್ಲಾಕ್​ ಆಡಿಟೋರಿಯಂನಲ್ಲಿ ‘ಲಾಪತಾ ಲೇಡೀಸ್​’ ಸಿನಿಮಾ ಪ್ರದರ್ಶನ ನಡೆಯುತ್ತಿದೆ. ಸಿನಿಮಾ ನೋಡಿದ ಬಳಿಕ ಜಡ್ಜ್​ಗಳು ಯಾವ ರೀತಿ ಅಭಿಪ್ರಾಯ ತಿಳಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಈ ಸಿನಿಮಾವನ್ನು ಆಯ್ಕೆ ಮಾಡಿದ್ದರಿಂದ ಆಮಿರ್​ ಖಾನ್, ಕಿರಣ್​ ರಾವ್​ ಅವರಿಗೆ ದೊಡ್ಡ ಗೌರವ ಸಿಕ್ಕಂತೆ ಆಗಿದೆ. ಈ ಸಿನಿಮಾದಲ್ಲಿ ನಿತಾಂಷಿ ಘೋಯಲ್​, ಸ್ಪರ್ಶ್​ ಶ್ರೀವಾಸ್ತವ್, ಪ್ರತಿಭಾ ರಂಟಾ, ರವಿ ಕಿಶನ್​, ಛಾಯಾ ಕದಂ ಮುಂತಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಹಾಸನ: ಕೆರೆಯಲ್ಲಿ ಈಜಾಡಿ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು
ಹಾಸನ: ಕೆರೆಯಲ್ಲಿ ಈಜಾಡಿ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು
ಬಿವಿವಿ ಸಂಘದ ಮೆಡಿಕಲ್ ಕಾಲೇಜ್ ಆವರಣದಲ್ಲಿ ಓಣಂ ಸಂಭ್ರಮ, ವಿಡಿಯೋ ನೋಡಿ
ಬಿವಿವಿ ಸಂಘದ ಮೆಡಿಕಲ್ ಕಾಲೇಜ್ ಆವರಣದಲ್ಲಿ ಓಣಂ ಸಂಭ್ರಮ, ವಿಡಿಯೋ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ