AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಕೋರ್ಟ್​ನಲ್ಲಿ ‘ಲಾಪತಾ ಲೇಡೀಸ್​’ ಪ್ರದರ್ಶನ; ಆಮಿರ್​ ಖಾನ್​, ಕಿರಣ್​ ರಾವ್​ಗೆ ಗೌರವ

ಆಮಿರ್​ ಖಾನ್​ ನಿರ್ಮಿಸಿ, ಕಿರಣ್ ರಾವ್​ ನಿರ್ದೇಶನ ಮಾಡಿದ ‘ಲಾಪತಾ ಲೇಡೀಸ್’ ಸಿನಿಮಾ ಈಗ ಸುಪ್ರೀಂ ಕೋರ್ಟ್​ ಗಮನವನ್ನು ಸೆಳೆದಿದೆ. ಜಡ್ಜ್​ಗಳಿಗಾಗಿ ಈ ಸಿನಿಮಾ ಪ್ರದರ್ಶನ ಮಾಡಲಾಗುತ್ತಿದೆ. ಅವರ ಕುಟುಂಬದವರು ಕೂಡ ಸಿನಿಮಾ ವೀಕ್ಷಿಸಲಿದ್ದಾರೆ. ಸುಪ್ರೀಂ ಕೋರ್ಟ್​ನಲ್ಲಿ ಆಯೋಜನೆಗೊಂಡ ಸಿನಿಮಾ ಪ್ರದರ್ಶನಕ್ಕೆ ಆಮಿರ್​ ಖಾನ್​ ಹಾಜರಾಗಿದ್ದಾರೆ.

ಸುಪ್ರೀಂ ಕೋರ್ಟ್​ನಲ್ಲಿ ‘ಲಾಪತಾ ಲೇಡೀಸ್​’ ಪ್ರದರ್ಶನ; ಆಮಿರ್​ ಖಾನ್​, ಕಿರಣ್​ ರಾವ್​ಗೆ ಗೌರವ
ಲಾಪತಾ ಲೇಡೀಸ್​, ಸುಪ್ರೀಂ ಕೋರ್ಟ್​, ಆಮಿರ್​ ಖಾನ್​
ಮದನ್​ ಕುಮಾರ್​
|

Updated on: Aug 09, 2024 | 4:24 PM

Share

ನಟ ಆಮಿರ್​ ಖಾನ್​ ಅವರು ನಿರ್ಮಾಪಕನಾಗಿ ಸಾಮಾಜಿಕ ಕಳಜಳಿ ಇರುವಂತಹ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಈ ವರ್ಷ ಅವರು ನಿರ್ಮಾಣ ಮಾಡಿದ ‘ಲಾಪತಾ ಲೇಡೀಸ್​’ ಸಿನಿಮಾ ಉತ್ತಮ ವಿಮರ್ಶೆ ಪಡೆದುಕೊಂಡಿತು. ಈ ಸಿನಿಮಾಗೆ ಆಮಿರ್​ ಖಾನ್​ ಅವರ ಮಾಜಿ ಪತ್ನಿ ಕಿರಣ್​ ರಾವ್​ ನಿರ್ದೇಶನ ಮಾಡಿದ್ದಾರೆ. ಹೊಸ ಕಲಾವಿದರು ಮುಖ್ಯಭೂಮಿಕೆ ನಿಭಾಯಿಸಿರುವ ‘ಲಾಪತಾ ಲೇಡೀಸ್​’ ಸಿನಿಮಾಗೆ ಈಗ ಇನ್ನೊಂದು ವಿಶೇಷ ಗೌರವ ಸಿಗುತ್ತಿದೆ. ಸುಪ್ರೀಂ ಕೋರ್ಟ್​ನಲ್ಲಿ ಇಂದು (ಆಗಸ್ಟ್​ 9) ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ!

ಲಿಂಗ ಸಮಾನತೆ ಬಗ್ಗೆ ‘ಲಾಪತಾ ಲೇಡೀಸ್​’ ಸಿನಿಮಾದಲ್ಲಿ ಹೇಳಲಾಗಿದೆ. ವಿಮರ್ಶಕರು ಈ ಸಿನಿಮಾಗೆ ಫುಲ್​ ಮಾರ್ಕ್ಸ್​ ನೀಡಿದ್ದಾರೆ. ಚಿತ್ರಮಂದಿರದಲ್ಲಿ ತೆರೆಕಂಡ ಬಳಿಕ ಒಟಿಟಿಯಲ್ಲಿ ಬಿಡುಗಡೆಯಾಗಿಯೂ ಈ ಸಿನಿಮಾ ಹೆಚ್ಚು ಜನರನ್ನು ತಲುಪಿತು. ಅನೇಕ ಸೆಲೆಬ್ರಿಟಿಗಳು ‘ಲಾಪತಾ ಲೇಡೀಸ್​’ ಚಿತ್ರದ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ. ಈಗ ಸುಪ್ರೀಂ ಕೋರ್ಟ್​ನಲ್ಲಿ ಪ್ರದರ್ಶನ ಕಾಣುತ್ತಿರುವುದು ವಿಶೇಷ.

ಸುಪ್ರೀಂ ಕೋರ್ಟ್​ ಜಡ್ಜ್​ಗಳಿಗಾಗಿ, ಅವರ ಕುಟುಂಬದವರಿಗಾಗಿ, ಅಧಿಕಾರಿಗಳಿಗಾಗಿ ‘ಲಾಪತಾ ಲೇಡೀಸ್​’ ಸಿನಿಮಾವನ್ನು ಪ್ರದರ್ಶನ ಮಾಡಲಾಗುತ್ತಿದೆ. ಇದರಲ್ಲಿ ಆಮಿರ್ ಖಾನ್​ ಮತ್ತು ಕಿರಣ್​ ರಾವ್​ ಅವರು ಭಾಗಿ ಆಗಿದ್ದಾರೆ. ಸುಪ್ರೀಂ ಕೋರ್ಟ್​ನ 75ನೇ ವಾರ್ಷಿಕೋತ್ಸವದ ಸಲುವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ‘ಲಾಪತಾ ಲೇಡೀಸ್​’ ಸಿನಿಮಾ ಪ್ರದರ್ಶನ ಆಗುತ್ತಿದೆ.

ಇದನ್ನೂ ಓದಿ: ನೆಟ್​ಫ್ಲಿಕ್ಸ್​ ಟ್ರೆಂಡಿಂಗ್​ನಲ್ಲಿ ನಂಬರ್​ ಒನ್​ ಆಯ್ತು ‘ಲಾಪತಾ ಲೇಡೀಸ್​’ ಸಿನಿಮಾ

ಶುಕ್ರವಾರ (ಆಗಸ್ಟ್ 9) ಸಂಜೆ 4.15ರಿಂದ 6.20ರ ತನಕ ಸುಪ್ರೀಂ ಕೋರ್ಟ್​ನ ಸಿ-ಬ್ಲಾಕ್​ ಆಡಿಟೋರಿಯಂನಲ್ಲಿ ‘ಲಾಪತಾ ಲೇಡೀಸ್​’ ಸಿನಿಮಾ ಪ್ರದರ್ಶನ ನಡೆಯುತ್ತಿದೆ. ಸಿನಿಮಾ ನೋಡಿದ ಬಳಿಕ ಜಡ್ಜ್​ಗಳು ಯಾವ ರೀತಿ ಅಭಿಪ್ರಾಯ ತಿಳಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಈ ಸಿನಿಮಾವನ್ನು ಆಯ್ಕೆ ಮಾಡಿದ್ದರಿಂದ ಆಮಿರ್​ ಖಾನ್, ಕಿರಣ್​ ರಾವ್​ ಅವರಿಗೆ ದೊಡ್ಡ ಗೌರವ ಸಿಕ್ಕಂತೆ ಆಗಿದೆ. ಈ ಸಿನಿಮಾದಲ್ಲಿ ನಿತಾಂಷಿ ಘೋಯಲ್​, ಸ್ಪರ್ಶ್​ ಶ್ರೀವಾಸ್ತವ್, ಪ್ರತಿಭಾ ರಂಟಾ, ರವಿ ಕಿಶನ್​, ಛಾಯಾ ಕದಂ ಮುಂತಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ