AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಕೋರ್ಟ್​ನಲ್ಲಿ ‘ಲಾಪತಾ ಲೇಡೀಸ್​’ ಪ್ರದರ್ಶನ; ಆಮಿರ್​ ಖಾನ್​, ಕಿರಣ್​ ರಾವ್​ಗೆ ಗೌರವ

ಆಮಿರ್​ ಖಾನ್​ ನಿರ್ಮಿಸಿ, ಕಿರಣ್ ರಾವ್​ ನಿರ್ದೇಶನ ಮಾಡಿದ ‘ಲಾಪತಾ ಲೇಡೀಸ್’ ಸಿನಿಮಾ ಈಗ ಸುಪ್ರೀಂ ಕೋರ್ಟ್​ ಗಮನವನ್ನು ಸೆಳೆದಿದೆ. ಜಡ್ಜ್​ಗಳಿಗಾಗಿ ಈ ಸಿನಿಮಾ ಪ್ರದರ್ಶನ ಮಾಡಲಾಗುತ್ತಿದೆ. ಅವರ ಕುಟುಂಬದವರು ಕೂಡ ಸಿನಿಮಾ ವೀಕ್ಷಿಸಲಿದ್ದಾರೆ. ಸುಪ್ರೀಂ ಕೋರ್ಟ್​ನಲ್ಲಿ ಆಯೋಜನೆಗೊಂಡ ಸಿನಿಮಾ ಪ್ರದರ್ಶನಕ್ಕೆ ಆಮಿರ್​ ಖಾನ್​ ಹಾಜರಾಗಿದ್ದಾರೆ.

ಸುಪ್ರೀಂ ಕೋರ್ಟ್​ನಲ್ಲಿ ‘ಲಾಪತಾ ಲೇಡೀಸ್​’ ಪ್ರದರ್ಶನ; ಆಮಿರ್​ ಖಾನ್​, ಕಿರಣ್​ ರಾವ್​ಗೆ ಗೌರವ
ಲಾಪತಾ ಲೇಡೀಸ್​, ಸುಪ್ರೀಂ ಕೋರ್ಟ್​, ಆಮಿರ್​ ಖಾನ್​
ಮದನ್​ ಕುಮಾರ್​
|

Updated on: Aug 09, 2024 | 4:24 PM

Share

ನಟ ಆಮಿರ್​ ಖಾನ್​ ಅವರು ನಿರ್ಮಾಪಕನಾಗಿ ಸಾಮಾಜಿಕ ಕಳಜಳಿ ಇರುವಂತಹ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಈ ವರ್ಷ ಅವರು ನಿರ್ಮಾಣ ಮಾಡಿದ ‘ಲಾಪತಾ ಲೇಡೀಸ್​’ ಸಿನಿಮಾ ಉತ್ತಮ ವಿಮರ್ಶೆ ಪಡೆದುಕೊಂಡಿತು. ಈ ಸಿನಿಮಾಗೆ ಆಮಿರ್​ ಖಾನ್​ ಅವರ ಮಾಜಿ ಪತ್ನಿ ಕಿರಣ್​ ರಾವ್​ ನಿರ್ದೇಶನ ಮಾಡಿದ್ದಾರೆ. ಹೊಸ ಕಲಾವಿದರು ಮುಖ್ಯಭೂಮಿಕೆ ನಿಭಾಯಿಸಿರುವ ‘ಲಾಪತಾ ಲೇಡೀಸ್​’ ಸಿನಿಮಾಗೆ ಈಗ ಇನ್ನೊಂದು ವಿಶೇಷ ಗೌರವ ಸಿಗುತ್ತಿದೆ. ಸುಪ್ರೀಂ ಕೋರ್ಟ್​ನಲ್ಲಿ ಇಂದು (ಆಗಸ್ಟ್​ 9) ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ!

ಲಿಂಗ ಸಮಾನತೆ ಬಗ್ಗೆ ‘ಲಾಪತಾ ಲೇಡೀಸ್​’ ಸಿನಿಮಾದಲ್ಲಿ ಹೇಳಲಾಗಿದೆ. ವಿಮರ್ಶಕರು ಈ ಸಿನಿಮಾಗೆ ಫುಲ್​ ಮಾರ್ಕ್ಸ್​ ನೀಡಿದ್ದಾರೆ. ಚಿತ್ರಮಂದಿರದಲ್ಲಿ ತೆರೆಕಂಡ ಬಳಿಕ ಒಟಿಟಿಯಲ್ಲಿ ಬಿಡುಗಡೆಯಾಗಿಯೂ ಈ ಸಿನಿಮಾ ಹೆಚ್ಚು ಜನರನ್ನು ತಲುಪಿತು. ಅನೇಕ ಸೆಲೆಬ್ರಿಟಿಗಳು ‘ಲಾಪತಾ ಲೇಡೀಸ್​’ ಚಿತ್ರದ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ. ಈಗ ಸುಪ್ರೀಂ ಕೋರ್ಟ್​ನಲ್ಲಿ ಪ್ರದರ್ಶನ ಕಾಣುತ್ತಿರುವುದು ವಿಶೇಷ.

ಸುಪ್ರೀಂ ಕೋರ್ಟ್​ ಜಡ್ಜ್​ಗಳಿಗಾಗಿ, ಅವರ ಕುಟುಂಬದವರಿಗಾಗಿ, ಅಧಿಕಾರಿಗಳಿಗಾಗಿ ‘ಲಾಪತಾ ಲೇಡೀಸ್​’ ಸಿನಿಮಾವನ್ನು ಪ್ರದರ್ಶನ ಮಾಡಲಾಗುತ್ತಿದೆ. ಇದರಲ್ಲಿ ಆಮಿರ್ ಖಾನ್​ ಮತ್ತು ಕಿರಣ್​ ರಾವ್​ ಅವರು ಭಾಗಿ ಆಗಿದ್ದಾರೆ. ಸುಪ್ರೀಂ ಕೋರ್ಟ್​ನ 75ನೇ ವಾರ್ಷಿಕೋತ್ಸವದ ಸಲುವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ‘ಲಾಪತಾ ಲೇಡೀಸ್​’ ಸಿನಿಮಾ ಪ್ರದರ್ಶನ ಆಗುತ್ತಿದೆ.

ಇದನ್ನೂ ಓದಿ: ನೆಟ್​ಫ್ಲಿಕ್ಸ್​ ಟ್ರೆಂಡಿಂಗ್​ನಲ್ಲಿ ನಂಬರ್​ ಒನ್​ ಆಯ್ತು ‘ಲಾಪತಾ ಲೇಡೀಸ್​’ ಸಿನಿಮಾ

ಶುಕ್ರವಾರ (ಆಗಸ್ಟ್ 9) ಸಂಜೆ 4.15ರಿಂದ 6.20ರ ತನಕ ಸುಪ್ರೀಂ ಕೋರ್ಟ್​ನ ಸಿ-ಬ್ಲಾಕ್​ ಆಡಿಟೋರಿಯಂನಲ್ಲಿ ‘ಲಾಪತಾ ಲೇಡೀಸ್​’ ಸಿನಿಮಾ ಪ್ರದರ್ಶನ ನಡೆಯುತ್ತಿದೆ. ಸಿನಿಮಾ ನೋಡಿದ ಬಳಿಕ ಜಡ್ಜ್​ಗಳು ಯಾವ ರೀತಿ ಅಭಿಪ್ರಾಯ ತಿಳಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಈ ಸಿನಿಮಾವನ್ನು ಆಯ್ಕೆ ಮಾಡಿದ್ದರಿಂದ ಆಮಿರ್​ ಖಾನ್, ಕಿರಣ್​ ರಾವ್​ ಅವರಿಗೆ ದೊಡ್ಡ ಗೌರವ ಸಿಕ್ಕಂತೆ ಆಗಿದೆ. ಈ ಸಿನಿಮಾದಲ್ಲಿ ನಿತಾಂಷಿ ಘೋಯಲ್​, ಸ್ಪರ್ಶ್​ ಶ್ರೀವಾಸ್ತವ್, ಪ್ರತಿಭಾ ರಂಟಾ, ರವಿ ಕಿಶನ್​, ಛಾಯಾ ಕದಂ ಮುಂತಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!