AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Javed Khan Amrohi: ‘ಲಗಾನ್​’ ಚಿತ್ರದಲ್ಲಿ ನಟಿಸಿದ್ದ ಹಿರಿಯ ಕಲಾವಿದ ಜಾವೇದ್​ ಖಾನ್​ ಅಮ್ರೋಹಿ ನಿಧನ

Javed Khan Amrohi Death: ಜಾವೇದ್​ ಖಾನ್​ ಅಮ್ರೋಹಿ ಅವರಿಗೆ 60 ವರ್ಷ ವಯಸ್ಸಾಗಿತ್ತು. ಶ್ವಾಸಕೋಶದ ವೈಫಲ್ಯದಿಂದ ಅವರಿಗೆ ಉಸಿರಾಟದ ಸಮಸ್ಯೆ ಉಂಟಾಗಿತ್ತು. ಮುಂಬೈನಲ್ಲಿ ಅವರ ನಿಧನವಾಗಿದೆ.

Javed Khan Amrohi: ‘ಲಗಾನ್​’ ಚಿತ್ರದಲ್ಲಿ ನಟಿಸಿದ್ದ ಹಿರಿಯ ಕಲಾವಿದ ಜಾವೇದ್​ ಖಾನ್​ ಅಮ್ರೋಹಿ ನಿಧನ
ಜಾವೇದ್ ಖಾನ್ ಅಮ್ರೋಹಿ
ಮದನ್​ ಕುಮಾರ್​
|

Updated on:Feb 14, 2023 | 8:33 PM

Share

ಬಾಲಿವುಡ್​ನ ಖ್ಯಾತ ನಟ ಜಾವೇದ್​ ಖಾನ್​ ಅಮ್ರೋಹಿ (Javed Khan Amrohi) ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು (ಫೆಬ್ರವರಿ 14) ಮಧ್ಯಾಹ್ನ 1 ಗಂಟೆ ಸುಮಾರಿಗೆ ಮುಂಬೈನಲ್ಲಿ ಕೊನೆಯುಸಿರು ಎಳೆದಿದ್ದಾರೆ. ನೂರಾರು ಸಿನಿಮಾಗಳಲ್ಲಿ ನಟಿಸಿ ಮನೆಮಾತಾಗಿದ್ದ ಜಾವೇದ್​ ಖಾನ್​ ಅಮ್ರೋಹಿ ಅವರ ನಿಧನಕ್ಕೆ (Javed Khan Amrohi Death) ಸೆಲೆಬ್ರಿಟಿಗಳು, ಅಭಿಮಾನಿಗಳು ಹಾಗೂ ಆಪ್ತರು ಕಂಬನಿ ಮಿಡಿದಿದ್ದಾರೆ. ಚಿತ್ರರಂಗದಲ್ಲಿ ಅವರು ಅಪಾರ ಅನುಭವ ಹೊಂದಿದ್ದರು. ರಂಗಭೂಮಿಯಲ್ಲೂ ಸಕ್ರಿಯರಾಗಿದ್ದರು. ‘ಲಗಾನ್​’ (Lagaan Movie) ಸಿನಿಮಾದಲ್ಲಿ ಅಭಿನಯಿಸಿ ಹೆಸರು ಗಳಿಸಿದ್ದರು. ಓಶಿವರದಲ್ಲಿನ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ.

ಜಾವೇದ್​ ಖಾನ್ ಅಮ್ರೋಹಿ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದೊಂದು ವರ್ಷದಿಂದ ಅವರ ಆರೋಗ್ಯ ಸಂಪೂರ್ಣ ಹದಗೆಟ್ಟಿತ್ತು. ಅದರ ಪರಿಣಾಮವಾಗಿ ಅವರು ಹಾಸಿಗೆ ಹಿಡಿದಿದ್ದರು. ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಜಾವೇದ್​ ಖಾನ್​ ಅಮ್ರೋಹಿ ಕೊನೆಯುಸಿರು ಎಳೆದಿದ್ದಾರೆ.

ಇದನ್ನೂ ಓದಿ
Image
Rahul Koli Death: ಆಸ್ಕರ್​ಗೆ ಭಾರತದಿಂದ ಆಯ್ಕೆ ಆದ ‘ಚೆಲ್ಲೋ ಶೋ’ ಚಿತ್ರದ ಬಾಲ ನಟ ಕ್ಯಾನ್ಸರ್​ನಿಂದ ನಿಧನ
Image
Breaking News: ಖ್ಯಾತ ನಟ ಅರುಣ್​ ಬಾಲಿ ನಿಧನ; ಹಿರಿಯ ಕಲಾವಿದನ ಅಗಲಿಕೆಗೆ ಕಂಬನಿ ಮಿಡಿದ ಚಿತ್ರರಂಗ
Image
Raju Srivastava Death: ಹಾಸ್ಯ ನಟ ರಾಜು ಶ್ರೀವಾಸ್ತವ​ ನಿಧನ; ಕಡೆಗೂ ಫಲಿಸಲಿಲ್ಲ ಅಭಿಮಾನಿಗಳ ಪ್ರಾರ್ಥನೆ
Image
Pradeep Patwardhan: ಹೃದಯಾಘಾತದಿಂದ ನಟ ಪ್ರದೀಪ್​ ಪಟವರ್ಧನ್​ ನಿಧನ; ಸಂತಾಪ ಸೂಚಿಸಿದ ಮಹಾರಾಷ್ಟ್ರ ಸಿಎಂ

ಇದನ್ನೂ ಓದಿ: ನಟಿ ಸುಮನ್​ ರಂಗನಾಥ್​ ತಾಯಿ ಜ್ಯೋತಿ ಇನ್ನಿಲ್ಲ; ಬಿಪಿ, ಉಸಿರಾಟದ ತೊಂದರೆಯಿಂದ ನಿಧನ

‘ಹಮ್​ ಹೈ ರಾಹೀ ಪ್ಯಾರ್​ ಕೇ’, ‘ಅಂದಾಜ್​ ಅಪ್ನಾ ಅಪ್ನಾ’, ‘ಇಷ್ಕ್​’, ‘ಲಗಾನ್​’, ‘ಚಕ್ದೇ ಇಂಡಿಯಾ’, ‘ಒನ್ಸ್​ ಅಪಾನ್​ ಎ ಟೈಮ್​ ಇನ್​ ಮುಂಬೈ’ ಮುಂತಾದ ಜನಪ್ರಿಯ ಸಿನಿಮಾಗಳಲ್ಲಿ ಜಾವೇದ್​ ಖಾನ್​ ಅಮ್ರೋಹಿ ನಟಿಸಿದ್ದರು. ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ಆಲಿಯಾ ಭಟ್​ ಅಭಿನಯದ ‘ಸಡಕ್​ 2’ ಸಿನಿಮಾದಲ್ಲಿ. ಆ ಚಿತ್ರ 2020ರಲ್ಲಿ ಬಿಡುಗಡೆ ಆಯಿತು. ಸಿನಿಮಾ ಮಾತ್ರವಲ್ಲದೇ ಕಿರುತೆರೆಯ ಅನೇಕ ಧಾರಾವಾಹಿಗಳಲ್ಲೂ ಜಾವೇದ್​ ಖಾನ್​ ಅಮ್ರೋಹಿ ನಟಿಸಿದ್ದರು. ಆ ಮೂಲಕವೂ ಅವರು ಅಭಿಮಾನಿಗಳಿಗೆ ಹತ್ತಿರವಾಗಿದ್ದರು.

ಇದನ್ನೂ ಓದಿ: ಕನ್ನಡ ಚಿತ್ರ ರಂಗದ ಹಿರಿಯ ನಟ ಮನ್​ದೀಪ್ ರಾಯ್ ನಿಧನ

ಜಾವೇದ್​ ಖಾನ್​ ಅಮ್ರೋಹಿ ಅವರಿಗೆ 60 ವರ್ಷ ವಯಸ್ಸಾಗಿತ್ತು. ಶ್ವಾಸಕೋಶದ ವೈಫಲ್ಯದಿಂದ ಅವರಿಗೆ ಉಸಿರಾಟದ ಸಮಸ್ಯೆ ಉಂಟಾಗಿತ್ತು. ಆರೋಗ್ಯ ಕೈ ಕೊಟ್ಟ ಬಳಿಕ ಅವರು ನಟನೆಯಿಂದ ದೂರ ಉಳಿಯಬೇಕಾಯಿತು. 150ಕ್ಕೂ ಅಧಿಕ ಸಿನಿಮಾಗಳಲ್ಲಿ ಜಾವೇದ್​ ಖಾನ್ ಅಮ್ರೋಹಿ ನಟಿಸಿದ್ದರು. ಮಾಡಿದ್ದೆಲ್ಲವೂ ಚಿಕ್ಕ ಪಾತ್ರಗಳೇ ಆದರೂ ಅವು ಮಹತ್ವಪೂರ್ಣವಾಗಿದ್ದವು.

‘ಫಿಲ್ಮ್​ ಆ್ಯಂಡ್​ ಟೆಲಿವಿಷನ್​ ಇನ್ಸ್​ಟಿಟ್ಯೂಟ್​ ಆಫ್​ ಇಂಡಿಯಾ’ದಿಂದ ಜಾವೇದ್​ ಖಾನ್​ ಅಮ್ರೋಹಿ ಅವರು ಪದವಿ ಪಡೆದಿದ್ದರು. ಬಳಿಕ ಅವರು ರಂಗಭೂಮಿಯಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ನಂತರ ಅವರಿಗೆ ಸಿನಿಮಾ ಮತ್ತು ಕಿರುತೆರೆಯಲ್ಲಿ ಅವಕಾಶಗಳು ಸಿಕ್ಕವು. ಜಾವೇದ್​ ಖಾನ್​ ಅಮ್ರೋಹಿ ನಿಧನಕ್ಕೆ ಹಲವು ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:33 pm, Tue, 14 February 23

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ