AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್ ಆಫೀಸ್​​ನಲ್ಲಿ 4 ಕೋಟಿ ರೂ. ಗಳಿಸಿದ ‘ಲಾಪತಾ ಲೇಡಿಸ್’; ಆಮಿರ್​ಗೆ ಲಾಭವೋ, ನಷ್ಟವೋ?

‘ಲಾಪತಾ ಲೇಡಿಸ್’ ಚಿತ್ರ ಮಾರ್ಚ್ 1ರಂದು 75 ಲಕ್ಷ ರೂಪಾಯಿ ಗಳಿಕೆ ಮಾಡಿತು. ಎರಡನೇ ದಿನ 1.45 ಕೋಟಿ ರೂಪಾಯಿ ಬಾಚಿಕೊಂಡಿತು. ಮೂರನೇ ದಿನದ ಗಳಿಕೆ 1.80 ಕೋಟಿ ರೂ. ಆಗಿದೆ. ಈ ಮೂಲಕ ಸಿನಿಮಾದ ಒಟ್ಟೂ ಗಳಿಕೆ 4 ಕೋಟಿ ರೂಪಾಯಿ ಆಗಿದೆ. ಕಡಿಮೆ ಬಜೆಟ್​ನ ಸಿನಿಮಾ ಆಗಿರುವುದರಿಂದ ನಿರ್ಮಾಪಕರಿಗೆ ಇದರಿಂದ ಲಾಭವೇ ಆಗಿರುತ್ತದೆ.

ಬಾಕ್ಸ್ ಆಫೀಸ್​​ನಲ್ಲಿ 4 ಕೋಟಿ ರೂ. ಗಳಿಸಿದ ‘ಲಾಪತಾ ಲೇಡಿಸ್’; ಆಮಿರ್​ಗೆ ಲಾಭವೋ, ನಷ್ಟವೋ?
ಕಿರಣ್-ಆಮಿರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 04, 2024 | 1:03 PM

Share

ಆಮಿರ್ ಖಾನ್ (Aamir Khan) ಅವರು ನಟನೆಗಿಂತ ನಿರ್ಮಾಣದತ್ತ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ‘ಲಾಪತಾ ಲೇಡಿಸ್’ ಸಿನಿಮಾ ನಿರ್ಮಾಣ ಮಾಡಿದ್ದು, ಮಾರ್ಚ್ 1ರಂದು ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಅವರ ಮಾಜಿ ಪತ್ನಿ ಕಿರಣ್ ರಾವ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ನಾಲ್ಕು ದಿನಕ್ಕೆ  ಸುಮಾರು ನಾಲ್ಕು ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಚಿತ್ರದಲ್ಲಿ ಒಳ್ಳೆಯ ಮೆಸೇಜ್ ಇದೆ. ಈ ಚಿತ್ರ ನಿಧಾನವಾಗಿ ಜನರಿಗೆ ಇಷ್ಟ ಆಗುತ್ತಿದೆ.

‘ಲಾಪತಾ ಲೇಡಿಸ್’ ಸಿನಿಮಾ ಮಾರ್ಚ್ 1ರಂದು 75 ಲಕ್ಷ ರೂಪಾಯಿ ಗಳಿಕೆ ಮಾಡಿತು. ಎರಡನೇ ದಿನ 1.45 ಕೋಟಿ ರೂಪಾಯಿ ಬಾಚಿಕೊಂಡಿತು. ಮೂರನೇ ದಿನದ ಗಳಿಕೆ 1.80 ಕೋಟಿ ರೂಪಾಯಿ ಆಗಿದೆ. ಈ ಮೂಲಕ ಸಿನಿಮಾದ ಒಟ್ಟೂ ಗಳಿಕೆ 4 ಕೋಟಿ ರೂಪಾಯಿ ಆಗಿದೆ. ಕಡಿಮೆ ಬಜೆಟ್​ನ ಸಿನಿಮಾ ಆಗಿರುವುದರಿಂದ ನಿರ್ಮಾಪಕರಿಗೆ ಇದರಿಂದ ಲಾಭವೇ ಆಗಿರುತ್ತದೆ.

ಆಮಿರ್ ಖಾನ್ ಅವರು ಕೇವಲ ಲಾಭದ ಉದ್ದೇಶ ಇಟ್ಟುಕೊಂಡು ಸಿನಿಮಾ ಮಾಡುವುದಿಲ್ಲ. ಒಳ್ಳೆಯ ಕಥೆ ಸಿಕ್ಕರೆ ಅದನ್ನು ನಿರ್ಮಿಸಲು ಆಸಕ್ತಿ ತೋರಿಸುತ್ತಾರೆ. ‘ಲಾಪತಾ ಲೇಡಿಸ್’ ಚಿತ್ರದ ಕಥೆ ಇಷ್ಟವಾಗಿ ಆಮಿರ್ ಅದನ್ನು ಕಿರಣ್ ರಾವ್ ಬಳಿ ಚರ್ಚಿಸಿದರು. ಅವರು ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಖರ್ಚಾಗಿದ್ದು ಕೇವಲ 5 ಕೋಟಿ ರೂಪಾಯಿ. ಬಾಕ್ಸ್ ಆಫೀಸ್ ಜೊತೆ ಟಿವಿ ಹಕ್ಕು ಹಾಗೂ ಒಟಿಟಿ ಹಕ್ಕಿನಿಂದ ಸಿನಿಮಾಗೆ ಹಣ ಬಂದಿರುತ್ತದೆ. ಹೀಗಾಗಿ, ಈ ಚಿತ್ರದಿಂದ ನಿರ್ಮಾಪಕರಿಗೆ ಹಣ ಸಿಗುತ್ತದೆ.

‘ಲಾಪತಾ ಲೇಡಿಸ್’ ಸಿನಿಮಾದ ಕಥೆ ಕಾಲ್ಪನಿಕ ರಾಜ್ಯ ನಿರ್ಮಲ್ ಪ್ರದೇಶ್ ಎಂಬಲ್ಲಿ ನಡೆಯುತ್ತದೆ. ಎರಡು ವಧುಗಳು ರೈಲಿನಲ್ಲಿ ಎಕ್ಸ್​ಚೇಂಜ್ ಆಗಿ ಬಿಡುತ್ತಾರೆ. ಇಲ್ಲಿಂದ ಕಥೆ ಶುರುವಾಗುತ್ತದೆ. ಪ್ರತಿಭಾ ರತ್ನ, ನಿತಾಂಶಿ ಗೋಯಲ್, ಸ್ಪರ್ಷ ಶ್ರೀವಾತ್ಸವ್, ರವಿ ಕಿಶನ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ವಿಮರ್ಶಕರಿಂದ ಮೆಚ್ಚುಗೆ ಪಡೆದಿದೆ. ‘ಧೋಬಿ ಘಾಟ್’ ಬಳಿಕ ಕಿರಣ್ ನಿರ್ದೇಶನ ಮಾಡಿದ ಎರಡನೇ ಸಿನಿಮಾ ಇದಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಬಗ್ಗೆ ನಟ ಆಮಿರ್ ಖಾನ್ ಮಾತು, ವಿದ್ಯಾರ್ಥಿಗಳು ಫುಲ್ ಖುಷ್

ಆಮಿರ್ ಖಾನ್ ಹಾಗೂ ಕಿರಣ್ ರಾವ್ ಹಲವು ವರ್ಷಗಳ ಕಾಲ ಒಟ್ಟಿಗೆ ಸಂಸಾರ ನಡೆಸಿದ್ದರು. ಆದರೆ, ಇವರು ಕೆಲವು ವರ್ಷಗಳ ಹಿಂದೆ ವಿಚ್ಛೇದನದ ನಿರ್ಧಾರ ತೆಗೆದುಕೊಂಡರು. ಆದರೆ ಸಿನಿಮಾ ವಿಚಾರ ಎಂಬುದು ಬಂದಾಗ ಇಬ್ಬರೂ ಒಟ್ಟಾಗಿ ಕೆಲಸ ಮಾಡುತ್ತಾರೆ. ಈ ಕಾರಣಕ್ಕೆ ಇವರು ಉಳಿದವರಿಗಿಂತ ಭಿನ್ನ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಇರಾ ಖಾನ್ ಮದುವೆಯಲ್ಲಿ ಆಮಿರ್ ಹಾಗೂ ಕಿರಣ್ ಒಟ್ಟಾಗಿ ಕಾಣಿಸಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು