AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರಂಭದಲ್ಲೇ ಎಡವಿದ ‘ರಾಮಾಯಣ’ ಚಿತ್ರತಂಡ; ಚಿತ್ರೀಕರಣದ ಫೋಟೋಗಳು ಲೀಕ್​

ಈ ರೀತಿಯ ಹೈ ಬಜೆಟ್​ ಸಿನಿಮಾಗಳನ್ನು ಮಾಡುವಾಗ ಚಿತ್ರತಂಡದವರು ಬಹಳ ಎಚ್ಚರಿಕೆ ವಹಿಸಬೇಕಾಗುತ್ತದೆ. ಆದರೆ ರಾಮಾಯಣ ಸಿನಿಮಾ ತಂಡದವರು ಪ್ರಾರಂಭದಲ್ಲೇ ಎಡವಿದಂತಿದೆ. ಕೈಕೇಯಿ ಪಾತ್ರ ಮಾಡುತ್ತಿರು ಲಾರಾ ದತ್ತ ಅವರ ಫೋಟೋಗಳು ಚಿತ್ರೀಕರಣದ ಸೆಟ್​ನಿಂದ ಲೀಕ್ ಆಗಿವೆ. ‘ಶೂಟಿಂಗ್​ ಜಾಗದಲ್ಲಿ ಮೊಬೈಲ್​ ಫೋನ್​ ನಿಷೇಧಿಸಿ’ ಎಂದು ನೆಟ್ಟಿಗರು ಸಲಹೆ ನೀಡಿದ್ದಾರೆ.

ಆರಂಭದಲ್ಲೇ ಎಡವಿದ ‘ರಾಮಾಯಣ’ ಚಿತ್ರತಂಡ; ಚಿತ್ರೀಕರಣದ ಫೋಟೋಗಳು ಲೀಕ್​
‘ರಾಮಾಯಣ’ ಚಿತ್ರೀಕರಣದ ಫೋಟೋಗಳು ಲೀಕ್​
ಮದನ್​ ಕುಮಾರ್​
|

Updated on: Apr 05, 2024 | 4:28 PM

Share

ಬಾಲಿವುಡ್​ ನಟ ರಣಬೀರ್​ ಕಪೂರ್​ (Ranbir Kapoor) ಅವರು ರಾಮನಾಗಿ ನಟಿಸಲಿರುವ ರಾಮಾಯಣ’ ಸಿನಿಮಾ (Ramayana Movie) ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ. ಅಷ್ಟರಲ್ಲಾಗಲೇ ಶೂಟಿಂಗ್​ ಆರಂಭ ಆಗಿದೆ. ಈ ಸಿನಿಮಾಗೆ ನಿತೇಶ್​ ತಿವಾರಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರ ಶೂಟಿಂಗ್​ ಶುರುವಾಗಿದೆ. ಅದರಲ್ಲಿ ಕೆಲವು ಕಲಾವಿದರು ಭಾಗಿ ಆಗಿದ್ದಾರೆ. ಬೇಸರದ ವಿಷಯ ಏನೆಂದರೆ, ಚಿತ್ರೀಕರಣದ ಸೆಟ್​ನಿಂದ ಕೆಲವು ಫೋಟೋಗಳು ವೈರಲ್​ ಆಗಿವೆ. ನಟಿ ಲಾರಾ ದತ್ತ (Lara Dutta), ನಟ ಅರುಣ್​ ಗೋವಿಲ್​ ಅವರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಇಂಥ ಹೈ ಬಜೆಟ್​ ಸಿನಿಮಾಗಳನ್ನು ಮಾಡುವಾಗ ಚಿತ್ರತಂಡದವರು ಸಾಕಷ್ಟು ಎಚ್ಚರಿಕೆ ವಹಿಸಬೇಕಾಗುತ್ತದೆ. ಆದರೆ ರಾಮಾಯಣ ಸಿನಿಮಾ ತಂಡದವರು ಆರಂಭದಲ್ಲೇ ಎಡವಿದಂತಿದೆ. ಕೈಕೇಯಿ ಪಾತ್ರ ಮಾಡುತ್ತಿರು ಲಾರಾ ದತ್ತ ಅವರ ಫೋಟೋಗಳು ಶೂಟಿಂಗ್​ ಸೆಟ್​ನಿಂದ ಲೀಕ್ ಆಗಿವೆ. ಈ ಫೋಟೋಗಳನ್ನು ‘ಜೂಮ್​’ ವಾಹಿನಿ ಪ್ರಕಟಿಸಿದೆ.

ನಟ ಅರುಣ್​ ಗೋವಿಲ್​ ಅವರು ರಾಮಾಯಣ ಆಧಾರಿತ ಸಿನಿಮಾದಲ್ಲಿ ದಶರಥನ ಪಾತ್ರ ಮಾಡಲಿದ್ದಾರೆ. ರಮಾನಂದ್ ಸಾಗರ್​ ನಿರ್ದೇಶನ ಮಾಡಿದ್ದ ‘ರಾಮಾಯಣ’ ಧಾರಾವಾಹಿಯಲ್ಲಿ ಅರುಣ್​ ಗೋವಿಲ್​ ಅವರು ರಾಮನ ಪಾತ್ರ ಮಾಡಿ ಫೇಮಸ್​ ಆಗಿದ್ದರು. ಈಗ ಅವರಿಗೆ ಸಿನಿಮಾದಲ್ಲಿ ದಶರಥನ ಪಾತ್ರ ನೀಡಲಾಗಿದೆ. ಶೂಟಿಂಗ್​ ಸೆಟ್​ನಲ್ಲಿ ಅವರು ಬಾಲ ಕಲಾವಿದರ ಜೊತೆ ನಟಿಸುತ್ತಿರುವ ಫೋಟೋಗಳು ಸೋರಿಕೆ ಆಗಿವೆ.

ಇದನ್ನೂ ಓದಿ: ಯಶ್ ನಟನೆಯ ‘ರಾಮಾಯಣ’ ಸಿನಿಮಾದ ಸೆಟ್ ಫೋಟೋ ಲೀಕ್; ಸಖತ್ ಅದ್ದೂರಿ

ಇನ್ಮುಂದೆ ಚಿತ್ರತಂಡದವರು ಎಚ್ಚರಿಕೆಯಿಂದ ಇರಬೇಕಾಗಿರುವುದು ಅನಿವಾರ್ಯ. ‘ಚಿತ್ರೀಕರಣದ ಸ್ಥಳದಲ್ಲಿ ಮೊಬೈಲ್​ ಫೋನ್​ ನಿಷೇಧ ಮಾಡಿ’ ಎಂದು ನೆಟ್ಟಿಗರು ಸಲಹೆ ನೀಡುತ್ತಿದ್ದಾರೆ. ಈ ಸಿನಿಮಾದಲ್ಲಿ ಸೀತೆಯಾಗಿ ಸಾಯಿ ಪಲ್ಲವಿ ನಟಿಸುತ್ತಾರೆ ಎನ್ನಲಾಗಿದೆ. ಯಶ್​ ಅವರು ರಾವಣನ ಪಾತ್ರ ಮಾಡುತ್ತಾರೆ ಎಂದು ಕೂಡ ಸುದ್ದಿ ಹಬ್ಬಿದೆ. ಆದರೆ ಯಾವುದರ ಬಗ್ಗೆಯೂ ಚಿತ್ರತಂಡ ಅಧಿಕೃತ ಹೇಳಿಕೆ ನೀಡಿಲ್ಲ. ಮೂರು ಪಾರ್ಟ್​ಗಳಲ್ಲಿ ಈ ಸಿನಿಮಾ ಮೂಡಿಬರಲಿದೆ. 2ನೇ ಪಾರ್ಟ್​ನಲ್ಲಿ ರಾವಣನ ಪಾತ್ರ ಬರಲಿದ್ದು, ಆಗ ಯಶ್​ ಕಾಣಿಸಿಕೊಳ್ಳುತ್ತಾರೆ ಎಂಬ ಮಾಹಿತಿ ಇದೆ. ಸದ್ಯಕ್ಕೆ ಬಾಲ ಕಲಾವಿದರ ದೃಶ್ಯಗಳನ್ನು ಚಿತ್ರಿಸಿಕೊಳ್ಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು