AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಣ್ಣವರಿದ್ದಾಗಲೇ ಮದುವೆ ಆಗುವ ಕನಸು ಕಂಡಿದ್ದ ಲತಾ ಮಂಗೇಶ್ಕರ್; ಆ ವ್ಯಕ್ತಿ ಯಾರು?

ಅದು 1930ರ ಸಂದರ್ಭ. ಲತಾ ಕುಟುಂಬಕ್ಕೆ ಕೆ.ಎಲ್. ಸೈಗಲ್ ಮಾದರಿ ಆಗಿದ್ದರು. ಅವರ ಕುಟುಂಬದಲ್ಲಿ ಸೈಗಲ್ ಹಾಡುಗಳು ಸಖತ್ ಫೇಮಸ್ ಆಗಿದ್ದವು. ಲತಾ ಮನೆಯಲ್ಲಿ ಸೈಗಲ್ ಹಾಡುಗಳನ್ನು ಮಾತ್ರ ಕೇಳಲು, ಹಾಡಲು ಅವಕಾಶ ಇತ್ತು. ಈ ಕಾರಣಕ್ಕೆ ಲತಾಗೆ ಸೈಗಲ್ ಮೇಲೆ ಪ್ರೀತಿ ಹುಟ್ಟಿತು.

ಸಣ್ಣವರಿದ್ದಾಗಲೇ ಮದುವೆ ಆಗುವ ಕನಸು ಕಂಡಿದ್ದ ಲತಾ ಮಂಗೇಶ್ಕರ್; ಆ ವ್ಯಕ್ತಿ ಯಾರು?
ಲತಾ ಮಂಗೇಶ್ಕರ್
ರಾಜೇಶ್ ದುಗ್ಗುಮನೆ
|

Updated on: Sep 28, 2023 | 11:46 AM

Share

ಲತಾ ಮಂಗೇಶ್ಕರ್ (Lata Mangeshkar) ಅವರಿಗೆ ಇಂದು (ಸೆಪ್ಟೆಂಬರ್ 28) ಜನ್ಮದಿನ. ಅವರನ್ನು ಎಲ್ಲರೂ ನೆನಪಿಸಿಕೊಳ್ಳುತ್ತಿದ್ದಾರೆ. ಅವರು ನಮ್ಮನ್ನು ಅಗಲಿದರೂ ಅವರ ಧ್ವನಿ ಸದಾ ನಮ್ಮೊಂದಿಗೆ ಇರುತ್ತದೆ ಎನ್ನುವ ಭಾವನೆ ಅನೇಕರದ್ದು. ಅವರ ಜೀವನದಲ್ಲಿ ಅನೇಕ ರೋಚಕ, ವಿಚಿತ್ರ ಘಟನೆಗಳು ನಡೆದಿವೆ. ಆ ಪೈಕಿ ಕೆಎಲ್ ಸೈಗಲ್ ವಿಚಾರವೂ ಒಂದು. ಲತಾ ಮಂಗೇಶ್ಕರ್ ಅವರು ಈ ಬಗ್ಗೆ ಕೆಲವು ಬಾರಿ ಹೇಳಿಕೊಂಡಿದ್ದರು. ಏನಿದು ಘಟನೆ? ಕೆಎಲ್ ಸೈಗಲ್​ನ ಮದುವೆ ಆಗಬೇಕು ಎಂದು ಲತಾ ಕನಸು ಕಂಡಿದ್ದೇಕೆ? ಇಲ್ಲಿದೆ ಮಾಹಿತಿ.

ಅದು 1930ರ ಸಂದರ್ಭ. ಲತಾ ಕುಟುಂಬಕ್ಕೆ ಕೆ.ಎಲ್. ಸೈಗಲ್ ಮಾದರಿ ಆಗಿದ್ದರು. ಅವರ ಕುಟುಂಬದಲ್ಲಿ ಸೈಗಲ್ ಹಾಡುಗಳು ಸಖತ್ ಫೇಮಸ್ ಆಗಿದ್ದವು. ಲತಾ ಮನೆಯಲ್ಲಿ ಸೈಗಲ್ ಹಾಡುಗಳನ್ನು ಮಾತ್ರ ಕೇಳಲು, ಹಾಡಲು ಅವಕಾಶ ಇತ್ತು. ಈ ಕಾರಣಕ್ಕೆ ಲತಾಗೆ ಸೈಗಲ್ ಮೇಲೆ ಪ್ರೀತಿ ಹುಟ್ಟಿತು. ಅವರನ್ನು ಮದುವೆ ಆಗುವ ಕನಸು ಕಂಡರು ಲತಾ.

‘ನನಗೆ ಸೈಗಲ್ ಅವರನ್ನು ಭೇಟಿ ಮಾಡಬೇಕು ಎಂದಿತ್ತು. ನಾನು ಅವರನ್ನೇ ಮದುವೆ ಆಗುತ್ತೇನೆ ಎಂದು ಸಣ್ಣವಳಿದ್ದಾಗ ಹೇಳುತ್ತಿದ್ದೆ. ನನ್ನ ಮದುವೆ ವಯಸ್ಸು ಬರುವ ವೇಳೆಗೆ ಅವರಿಗೆ ವಯಸ್ಸಾಗಿರುತ್ತದೆ ಎಂದು ಅಪ್ಪ ತಿಳಿ ಹೇಳಲು ಪ್ರಯತ್ನಿಸುತ್ತಿದ್ದರು’ ಎಂದಿದ್ದರು ಲತಾ.

ಸೈಗಲ್ ಅವರನ್ನು ಭೇಟಿ ಮಾಡಲು ಲತಾಗೆ ಸಾಧ್ಯವೇ ಆಗಿಲ್ಲ. ‘ನಾನು ಸೈಗಲ್​ ಅವರನ್ನು ಭೇಟಿ ಮಾಡಿಲ್ಲ ಎನ್ನುವ ಬೇಸರ ಯಾವಾಗಲೂ ಇರುತ್ತದೆ. ಅವರ ಪತ್ನಿ ಆಶಾ ಅವರನ್ನು ಭೇಟಿ ಮಾಡಲು ಅವಕಾಶ ಸಿಕ್ಕಿತ್ತು. ಅವರ ಮಕ್ಕಳು ಸೈಗಲ್ ಧರಿಸುತ್ತಿದ್ದ ಉಂಗುರವನ್ನು ಉಡುಗೊರೆಯಾಗಿ ನೀಡಿದ್ದರು’ ಎಂದು ವಿವರಿಸಿದ್ದರು ಲತಾ.

ಇದನ್ನೂ ಓದಿ: ತಮ್ಮದೇ ಹಾಡನ್ನೂ ಎಂದಿಗೂ ಕೇಳುತ್ತಿರಲಿಲ್ಲ ಲತಾ ಮಂಗೇಶ್ಕರ್; ಇಲ್ಲಿದೆ ಅಪರೂಪದ ವಿಚಾರ

18 ವರ್ಷ ಇದ್ದಾಗ ಲತಾ ಟ್ರಾನ್ಸಿಸ್ಟರ್ ರೇಡಿಯೋ ಖರೀದಿ ಮಾಡಿ ತಂದರು. ಅವರು ಅದನ್ನು ಆನ್ ಮಾಡಿದಾಗ ಕೆಎಲ್ ಸೈಗಲ್ ಮೃತಪಟ್ಟ ಸುದ್ದಿ ಪ್ರಸಾರ ಆಯಿತು. ಆಬಳಿಕ ಅವರು ರೆಡಿಯೋನ ಮರಳಿ ಅಂಗಡಿಗೆ ನೀಡಿ ಬಂದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​