AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lata Mangeshkar Birthday: ಲತಾ ಮಂಗೇಶ್ಕರ್ ಫೇಮಸ್​ ಆಗುವುದಕ್ಕೂ ಮುನ್ನವೇ ಭವಿಷ್ಯ ನುಡಿದಿದ್ದರು ಪಾಕ್​ ಗಾಯಕಿ ನೂರ್​ ಜಹಾನ್

Happy Birthday Lata Mangeshkar: ‘ಬಡೀ ಮಾ’ ಚಿತ್ರದಲ್ಲಿ ಲತಾ ಮಂಗೇಶ್ಕರ್​ ಒಂದು ಚಿಕ್ಕ ಪಾತ್ರ ಮಾಡುವುದರ ಜೊತೆಗೆ ಒಂದು ಗೀತೆಯನ್ನೂ ಹಾಡಿದ್ದರು. ಆಗ ಅವರ ಕಂಠವನ್ನು ಗಮನಿಸಿದ ನೂರ್​ ಜಹಾನ್​ ಅವರು ಲತಾ ಬಗ್ಗೆ ಭವಿಷ್ಯ ನುಡಿದಿದ್ದರು.

Lata Mangeshkar Birthday: ಲತಾ ಮಂಗೇಶ್ಕರ್ ಫೇಮಸ್​ ಆಗುವುದಕ್ಕೂ ಮುನ್ನವೇ ಭವಿಷ್ಯ ನುಡಿದಿದ್ದರು ಪಾಕ್​ ಗಾಯಕಿ ನೂರ್​ ಜಹಾನ್
ಲತಾ ಮಂಗೇಶ್ಕರ್
TV9 Web
| Edited By: |

Updated on: Sep 28, 2021 | 11:56 AM

Share

ಭಾರತೀಯ ಚಿತ್ರರಂಗದ ಲೆಜೆಂಡರಿ ಗಾಯಕಿ ಲತಾ ಮಂಗೇಶ್ಕರ್​ ಅವರು ಇಂದು (ಸೆ.28) 92ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸಿನಿಮಾ ಸಂಗೀತ ಲೋಕದಲ್ಲಿ ಅಪಾರ ಸಾಧನೆ ಮಾಡಿದ ಈ ಮಹಾನ್​ ಸಿಂಗರ್​ಗೆ ಕೋಟ್ಯಂತರ ಅಭಿಮಾನಿಗಳಿಂದ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ. ಸಾವಿರಾರು ಸೂಪರ್​ ಹಿಟ್​ ಹಾಡುಗಳಿಗೆ ಧ್ವನಿಯಾದ ಲತಾ ಮಂಗೇಶ್ಕರ್​ ಅವರಿಗೆ ಸಾಟಿ ಬೇರಾರೂ ಇಲ್ಲ. ಅನೇಕ ಸೆಲೆಬ್ರಿಟಿಗಳು ಕೂಡ ಅವರಿಗೆ ವಿಶ್​ ಮಾಡುತ್ತಿದ್ದಾರೆ. ತಮ್ಮ ಸುಮಧುರ ಕಂಠದ ಬಗ್ಗೆ ಲತಾ ಮಂಗೇಶ್ಕರ್​ ಸ್ವತಃ ಮಾತನಾಡಿದ್ದು ವಿರಳ. ಅಂಥ ಕೆಲವು ಅಪರೂಪದ ಮಾತುಗಳು ಇಲ್ಲಿವೆ.

ಪಾಕಿಸ್ತಾನಿ ಗಾಯಕಿ ನೂರ್​ ಜಹಾನ್​ ಅವರು ಲತಾ ಮಂಗೇಶ್ಕರ್​ ಅವರಿಗೆ ಸ್ಫೂರ್ತಿ ಆಗಿದ್ದರು. ಪಾಕಿಸ್ತಾನಿ ಸಿನಿಮಾದಲ್ಲಿ ಗಾಯಕಿಯಾಗಿ ಫೇಮಸ್​ ಆಗುವುದರ ಜೊತೆಗೆ ಅನೇಕ ಬಾಲಿವುಡ್​ ಸಿನಿಮಾಗಳಲ್ಲಿ ನೂರ್​ ಜಹಾನ್​ ನಟಿಸಿದ್ದಾರೆ. ಅವರ ಅಭಿನಯದ ‘ಬಡೀ ಮಾ’ (1945) ಚಿತ್ರದಲ್ಲಿ ಲತಾ ಮಂಗೇಶ್ಕರ್​ ಒಂದು ಚಿಕ್ಕ ಪಾತ್ರ ಮಾಡುವುದರ ಜೊತೆಗೆ ಒಂದು ಗೀತೆಯನ್ನೂ ಹಾಡಿದ್ದರು. ಆಗ ಅವರ ಕಂಠವನ್ನು ಗಮನಿಸಿದ ನೂರ್​ ಜಹಾನ್​ ಅವರು ಲತಾ ಬಗ್ಗೆ ಭವಿಷ್ಯ ನುಡಿದಿದ್ದರು.

‘ಬಡೀ ಮಾ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ನೂರ್​ ಜಹಾನ್​ ಅವರಿಗೆ ನನ್ನನ್ನು ಪರಿಚಯಿಸಲಾಯಿತು. ತಮ್ಮೆದುರು ಒಂದು ಹಾಡು ಹೇಳುವಂತೆ ಅವರು ನನಗೆ ಸೂಚಿಸಿದರು. ನನ್ನ ಹಾಡು ಕೇಳಿ ಅವರಿಗೆ ಖುಷಿ ಆಯಿತು. ನೀನು ಮುಂದೊಂದು ದಿನ ಒಳ್ಳೆಯ ಗಾಯಕಿ ಆಗೋದು ಖಚಿತ. ಚೆನ್ನಾಗಿ ಅಭ್ಯಾಸ ಮಾಡು ಅಂತ ಹೇಳಿದ್ದರು’ ಎಂಬ ವಿಷಯವನ್ನು ‘ಇನ್​ ಹರ್​ ಓನ್​ ವಾಯ್ಸ್​’ ಪುಸ್ತಕದಲ್ಲಿ ಲತಾ ಮಂಗೇಶ್ಕರ್​ ಉಲ್ಲೇಖಿಸಿದ್ದಾರೆ.

ಗಾಯನವನ್ನು ವೃತ್ತಿಯಾಗಿ ಸ್ವೀಕರಿಸಿದವರು ತಮ್ಮ ಧ್ವನಿಯನ್ನು ಚೆನ್ನಾಗಿ ಇಟ್ಟುಕೊಳ್ಳಲು ಹಲವು ರೀತಿಯಲ್ಲಿ ಎಚ್ಚರಿಕೆ ವಹಿಸುತ್ತಾರೆ. ಧ್ವನಿ ಕೆಡಬಾರದು ಎಂಬ ಕಾಳಜಿಯಿಂದ ತಾವು ಸೇವಿಸುವ ಆಹಾರದಲ್ಲೂ ಕಟ್ಟುನಿಟ್ಟಾಗಿ ಇರುತ್ತಾರೆ. ಆದರೆ ಲತಾ ಮಂಗೇಶ್ಕರ್​ ಆ ರೀತಿ ಅಲ್ಲ. ‘ನಾನು ಊಟದಲ್ಲಿ ಯಾವುದೇ ನಿರ್ಬಂಧಗಳನ್ನು ಹಾಕಿಕೊಂಡಿಲ್ಲ. ಉಪ್ಪಿನಕಾಯಿ, ಮೊಸರು, ಮೆಣಸಿನಕಾಯಿ ತಿನ್ನಬಾರದು ಅಂತ ಕೆಲವರು ಕೇಳುತ್ತಾರೆ. ನಾನು ಎಲ್ಲವನ್ನೂ ತಿನ್ನುತ್ತೇನೆ’ ಎಂದು ಈ ಹಿಂದೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಲತಾ ಮಂಗೇಶ್ಕರ್​ ಹೇಳಿಕೊಂಡಿದ್ದರು.

ಇದನ್ನೂ ಓದಿ:

ಸತತ ಒಂದು ತಿಂಗಳ ಚಿಕಿತ್ಸೆ ವಿಫಲ; ಕೊವಿಡ್​ಗೆ ಬಲಿಯಾದ ಖ್ಯಾತ ಗಾಯಕಿ

ಹಿಂದೂಸ್ಥಾನಿ ಗಾಯಕ, ಪದ್ಮವಿಭೂಷಣ ಪುರಸ್ಕೃತ ಉಸ್ತಾದ್​ ಗುಲಾಮ್​ ಮುಸ್ತಫಾ ಖಾನ್ ನಿಧನ

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!